Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Explainer | PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Explainer

PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Public TV
Last updated: February 26, 2023 10:15 am
Public TV
Share
3 Min Read
glacial lakes 1
SHARE

ಜಾಗತಿಕ ತಾಪಮಾನ ಈ ಜಗತ್ತಿಗೆ ಅಂಟಿರೋ ಬಹುದೊಡ್ಡ ಪಿಡುಗು. ವಿಶ್ವಕ್ಕೆ ಕಂಟಕ ಪ್ರಾಯವಾಗಿರುವ ಇದನ್ನು ನಿರ್ವಹಿಸಲು ಎಲ್ಲಾ ರಾಷ್ಟ್ರಗಳು ಕೈಜೋಡಿಸಿವೆ. ಜಾಗತಿಕ ತಾಪಮಾನ ನಿರ್ವಹಿಸುವ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಸಭೆ-ಸಮಾರಂಭಗಳು ನಡೆಯುತ್ತಲೇ ಇವೆ. ವಿಶ್ವ ನಾಯಕರು ಪಾಲ್ಗೊಂಡು ಗಂಭೀರ ಚರ್ಚೆಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ ಈ ಗಂಡಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಪ್ರಾಕೃತಿಕ ವಿಕೋಪಗಳು ಒಂದಲ್ಲಾ ಒಂದು ರೀತಿ ಅನೇಕ ರಾಷ್ಟ್ರಗಳನ್ನು ಕಾಡುತ್ತಲೇ ಇವೆ.

ಜಾಗತಿಕ ತಾಪಮಾನ ಪರಿಣಾಮ ಕುರಿತು ಹೊಸ ಅಧ್ಯಯನವೊಂದು ಬಹಿರಂಗಪಡಿಸಿರುವ ವರದಿಯು ಭಾರತ, ಪಾಕಿಸ್ತಾನ ರಾಷ್ಟ್ರಗಳಿಗೆ ಭೀತಿ ಹುಟ್ಟಿಸಿದೆ. ಈ ಅಧ್ಯಯನದ ಪ್ರಕಾರ, ಹಿಮಗಳು ಕರಗುತ್ತಿರುವುದರಿಂದ ಭಾರತ, ಪಾಕಿಸ್ತಾನ ಸೇರಿದಂತೆ 4 ರಾಷ್ಟ್ರಗಳಲ್ಲಿ 15 ಮಿಲಿಯನ್‌ಗೂ (1.5 ಕೋಟಿ) ಅಧಿಕ ಜನರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

glacial lakes 2

ಹೌದು, ಬ್ರಿಟನ್ ನ್ಯೂಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತಾರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದೆ. ಗ್ಲೇಶಿಯಲ್ ಲೇಕ್ (Glacial Lakes) ಔಟ್‌ಬರ್ಸ್ಟ್ ಫ್ಲಡ್‌ಗಳಿಂದ (GLOFs) ಹೆಚ್ಚಿನ ಅಪಾಯ ಉಂಟಾಗಲಿದೆ. ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿವೆ. ಇದರ ಪರಿಣಾಮವಾಗಿ ಭಾರತ (India), ಚೀನಾ (China), ಪಾಕಿಸ್ತಾನ (Pakistan), ಪೇರು ರಾಷ್ಟ್ರಗಳಲ್ಲಿ ಭೀಕರ ಪ್ರವಾಹ ಉಂಟಾಗಲಿದೆ.

ಹಿಮ ಸರೋವರದ ಪ್ರವಾಹವು ಜನರ ಭೀತಿಗೆ ಕಾರಣವಾಗಿದೆ. ಈ ಗ್ಲೇಶಿಯಲ್ ಸರೋವರದಲ್ಲಿ ಹಿಮ ಕರಗಿದಂತೆ ಅವು ತಗ್ಗು ಪ್ರದೇಶಗಳಲ್ಲಿ ಪ್ರವಾಹವನ್ನು ಉಂಟು ಮಾಡುತ್ತವೆ. ಇದನ್ನು ‘ಹಿಮ ಸರೋವರದ ದಿಢೀರ್ ಪ್ರವಾಹ’ ಎಂದು ಕರೆಯಲಾಗುತ್ತದೆ. ಹವಾಮಾನ ಬದಲಾವಣೆಯಿಂದಾಗಿ ಅಪಾಯವು ಬಹುಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

glacial lakes 3

ಪ್ರವಾಹ ಉಂಟಾಗುವುದು ಹೇಗೆ?: ಭೂಮಿಯ ಹವಾಮಾನವು ಹೆಚ್ಚು ಬಿಸಿಯಾಗುತ್ತಿರುವ ಕಾರಣದಿಂದ ಹಿಮಗಳು ಕರಗಿ ನೀರಾಗಿ ಸಂಗ್ರಹಗೊಳ್ಳುತ್ತಿದೆ. ಇದರಿಂದ ಸರೋವರಗಳು ಉಂಟಾಗುತ್ತವೆ. ಈ ಸರೋವರಗಳು ಇದ್ದಕ್ಕಿದ್ದಂತೆ ಒಡೆದು ವೇಗವಾಗಿ ಹರಿದು ಪ್ರವಾಹವನ್ನು ಉಂಟುಮಾಡಬಹುದು. ಅದು ಮೂಲಜಾಗದಿಂದ ಹೆಚ್ಚಿನ ದೂರದವರೆಗೆ ಹರಡಬಹುದು. ಇದು ಕೆಲವು ಸಂದರ್ಭಗಳಲ್ಲಿ 120 ಕಿಮೀಗಿಂತ ಹೆಚ್ಚು ದೂರಕ್ಕೂ ಹರಿಯಬಹುದು. ಪ್ರವಾಹಗಳು ಹೆಚ್ಚು ವಿನಾಶಕಾರಿಯಾಗಬಹುದು. ಆಸ್ತಿ, ಮೂಲಸೌಕರ್ಯ ಮತ್ತು ಕೃಷಿ ಭೂಮಿಯನ್ನು ಹಾನಿಗೊಳಿಸಬಹುದು. ಜೊತೆಗೆ ಜೀವಹಾನಿಯೂ ಆಗಬಹುದು.

ಅಧ್ಯಯನ ಹೇಳೋದೇನು?: ಜಿಎಲ್‌ಓಎಫ್‌ಗಳಿಂದ ಹೆಚ್ಚು ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಲು ಸಂಶೋಧಕರು, ಹಿಮನದಿಯ ಸರೋವರಗಳ ವಿವಿಧ ಸ್ಥಳಗಳ ಕುರಿತು ಉಪಗ್ರಹದ ಮೂಲಕ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಹಿಮನದಿ ಸರೋವರದಿಂದ 50 ಕಿ.ಮೀ ಮತ್ತು ಅದು ಹುಟ್ಟುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನರ ಬದುಕಿನ ಮೇಲೆ ಪರಿಣಾಮ ಬೀರಬಹುದು.

glacial lakes

ಭಾರತಕ್ಕೆ ಕಾದಿದ್ಯಾ ಅಪಾಯ?: ಅಧ್ಯಯನದ ಪ್ರಕಾರ, ಭಾರತದಲ್ಲಿನ 3 ಮಿಲಿಯನ್ ಜನರು ಅಂದರೆ ಸುಮಾರು 30 ಲಕ್ಷ ಮಂದಿ ಹಿಮ ಸರೋವರಗಳಿಂದ ಉಂಟಾಗುವ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಪರಿಗಣಿತವಾಗಿದೆ. ಇನ್ನೂ ಪಾಕಿಸ್ತಾನದಲ್ಲಿ 2 ಮಿಲಿಯನ್ ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅಂದಾಜಿಸಿದೆ.

ಗ್ಲೇಶಿಯಲ್ ಸರೋವರದ 50 ಕಿ.ಮೀ ವ್ಯಾಪ್ತಿಯಲ್ಲಿ 15 ಮಿಲಿಯನ್ ಜನರು ವಾಸಿಸುತ್ತಿದ್ದಾರೆ. ಕಿರ್ಗಿಸ್ತಾನ್‌ನಿಂದ ಚೀನಾದವರೆಗೆ ಟಿಬೆಟ್‌ನ್ನು ಆವರಿಸಿರುವ ಹೈಮೌಂಟೇನ್ ಏಷ್ಯಾ, ಅತ್ಯಧಿಕ ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್ ಅಪಾಯ ಸಂಭವಿಸುವ ವಲಯವಾಗಿದೆ. ಇಲ್ಲಿ 9.3 ಮಿಲಿಯನ್ ಜನರು ಅಪಾಯದಲ್ಲಿದ್ದಾರೆ ಎಂದು ಸಂಶೋಧನೆಗಳು ಹೇಳಿವೆ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

ಚಮೋಲಿ ಪ್ರವಾಹ ಕರಾಳತೆ: ಫೆ. 2021ರಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾಗಿದ್ದ ಹಠಾತ್ ಪ್ರವಾಹದಿಂದ ಸುಮಾರು 80 ಜನರು ಮೃತಪಟ್ಟಿದ್ದರು. ಈ ಪ್ರವಾಹದಲ್ಲಿ ಅನೇಕರು ಕಾಣೆಯಾದರು. ಹವಾಮಾನ ಬದಲಾವಣೆಯ ಪರಿಣಾಮವಾಗಿ 1990ರಿಂದ ಗ್ಲೇಶಿಯಲ್ ಸರೋವರಗಳ ಸಂಖ್ಯೆಯು ವೇಗವಾಗಿ ಬೆಳೆಯುತ್ತಿದೆ. ಅದೇ ಸಂದರ್ಭದಲ್ಲಿ ಈ ಜಲಾನಯನ ಪ್ರದೇಶಗಳಲ್ಲಿ ವಾಸಿಸುವ ಜನರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಾಗಿದೆ.

glacial lakes 4

GLOFs ಅಪಾಯ ನಿಯಂತ್ರಿಸಬಹುದೇ?: GLOFs ಅಪಾಯವನ್ನು ಕಡಿಮೆ ಮಾಡುವುದು ತುಂಬಾ ಕಷ್ಟ. ಯಾವುದೇ ಪರಿಹಾರವು ಕಾರ್ಯನಿರ್ವಹಿಸುವುದಿಲ್ಲ. ಹವಾಮಾನ ಬದಲಾವಣೆಯನ್ನು ಮಿತಿಗೊಳಿಸಬೇಕಷ್ಟೆ. ತಾಪಮಾನವು ಯಾವಾಗಲೂ 1.5 ಡಿಗ್ರಿ ಸೆಲ್ಸಿಯಸ್ ಒಳಗೇ ಇರುವಂತೆ ನೋಡಿಕೊಳ್ಳಬೇಕು. ಇದು ಹಿಮ ಸರೋವರಗಳ ಬೆಳವಣಿಗೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?

TAGGED:glacial lakesindiapakistanಪಾಕಿಸ್ತಾನಭಾರತಹಿಮಸರೋವರ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

Vinay Kulkarni
Bengaluru City

ಯೋಗೇಶ್‌ ಗೌಡ ಹತ್ಯೆ ಕೇಸ್‌ – ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ ದೋಷಿ

Public TV
By Public TV
2 minutes ago
Pawan Khera
Court

ʻಕೈʼ ನಾಯಕ ಪವನ್ ಖೇರಾಗೆ ಸುಪ್ರೀಂಕೋರ್ಟ್ ಶಾಕ್ – ತೆಲಂಗಾಣ ಹೈಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನಿಗೆ ತಡೆ

Public TV
By Public TV
48 minutes ago
Afreen Khan
Bengaluru City

ನಾನು ಏ.4ಕ್ಕೆ ಯುವ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ್ದೇನೆ- ಉಚ್ಚಾಟನೆ ನಿರ್ಧಾರಕ್ಕೆ ಸಿಲ್ಲಿ ಎಂದ ಆಫ್ರೀನ್ ಖಾನ್

Public TV
By Public TV
1 hour ago
vachanananda swamiji 1
Davanagere

ಮಠ ಬಿಡಲ್ಲ ಅಂತ ವಚನಾನಂದ ಶ್ರೀ ಪಟ್ಟು – ಬಿಡದಿದ್ರೆ ಎಳೆದು ಹೊರಗೆ ಹಾಕ್ತೀವಿ ಎಂದ ಟ್ರಸ್ಟಿಗಳು

Public TV
By Public TV
1 hour ago
Cyber Crime
Crime

ಆನ್‌ಲೈನ್ ಹೂಡಿಕೆ ಮೋಸ – ನಿವೃತ್ತ ನೌಕರರಿಂದ 21.76 ಲಕ್ಷ ವಂಚನೆ

Public TV
By Public TV
2 hours ago
Congress MLC Abdul Jabbar
Davanagere

ಯಜಮಾನರು ವೇದಿಕೆ ಮೇಲೆ ಬಿಎಸ್‌ವೈ ಪುತ್ರನನ್ನು ಗೆಲ್ಲಿಸಿ ಅಂದಾಗ ಯಾಕೆ ಕ್ರಮ ಕೈಗೊಂಡಿಲ್ಲ: ಅಮಾನತುಗೊಂಡ ಬೆನ್ನಲ್ಲೇ ಅಬ್ದುಲ್ ಜಬ್ಬರ್ ಆಕ್ರೋಶ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?