Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Explainer

PublicTV Explainer: ಕರಗುತ್ತಿವೆ ಹಿಮಸರೋವರಗಳು – ಭಾರತ, ಪಾಕಿಸ್ತಾನದ ಜನರಿಗೆ ಕಾದಿದೆ ಪ್ರವಾಹದ ಅಪಾಯ!

Public TV
Last updated: February 26, 2023 10:15 am
Public TV
Share
3 Min Read
glacial lakes 1
SHARE

ಜಾಗತಿಕ ತಾಪಮಾನ ಈ ಜಗತ್ತಿಗೆ ಅಂಟಿರೋ ಬಹುದೊಡ್ಡ ಪಿಡುಗು. ವಿಶ್ವಕ್ಕೆ ಕಂಟಕ ಪ್ರಾಯವಾಗಿರುವ ಇದನ್ನು ನಿರ್ವಹಿಸಲು ಎಲ್ಲಾ ರಾಷ್ಟ್ರಗಳು ಕೈಜೋಡಿಸಿವೆ. ಜಾಗತಿಕ ತಾಪಮಾನ ನಿರ್ವಹಿಸುವ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಸಭೆ-ಸಮಾರಂಭಗಳು ನಡೆಯುತ್ತಲೇ ಇವೆ. ವಿಶ್ವ ನಾಯಕರು ಪಾಲ್ಗೊಂಡು ಗಂಭೀರ ಚರ್ಚೆಗಳನ್ನು ನಡೆಸುತ್ತಲೇ ಇದ್ದಾರೆ. ಆದರೆ ಈ ಗಂಡಾಂತರಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಇನ್ನೂ ಸಾಧ್ಯವಾಗಿಲ್ಲ. ಹೀಗಿರುವಾಗಲೇ ಪ್ರಾಕೃತಿಕ ವಿಕೋಪಗಳು ಒಂದಲ್ಲಾ ಒಂದು ರೀತಿ ಅನೇಕ ರಾಷ್ಟ್ರಗಳನ್ನು ಕಾಡುತ್ತಲೇ ಇವೆ.

ಜಾಗತಿಕ ತಾಪಮಾನ ಪರಿಣಾಮ ಕುರಿತು ಹೊಸ ಅಧ್ಯಯನವೊಂದು ಬಹಿರಂಗಪಡಿಸಿರುವ ವರದಿಯು ಭಾರತ, ಪಾಕಿಸ್ತಾನ ರಾಷ್ಟ್ರಗಳಿಗೆ ಭೀತಿ ಹುಟ್ಟಿಸಿದೆ. ಈ ಅಧ್ಯಯನದ ಪ್ರಕಾರ, ಹಿಮಗಳು ಕರಗುತ್ತಿರುವುದರಿಂದ ಭಾರತ, ಪಾಕಿಸ್ತಾನ ಸೇರಿದಂತೆ 4 ರಾಷ್ಟ್ರಗಳಲ್ಲಿ 15 ಮಿಲಿಯನ್‌ಗೂ (1.5 ಕೋಟಿ) ಅಧಿಕ ಜನರು ಅಪಾಯಕ್ಕೆ ಸಿಲುಕುವ ಸಾಧ್ಯತೆಯಿದೆ.

glacial lakes 2

ಹೌದು, ಬ್ರಿಟನ್ ನ್ಯೂಕ್ಯಾಸಲ್ ವಿಶ್ವವಿದ್ಯಾನಿಲಯದ ವಿಜ್ಞಾನಿಗಳ ನೇತೃತ್ವದ ಅಂತಾರಾಷ್ಟ್ರೀಯ ತಂಡವು ಈ ಕುರಿತು ಅಧ್ಯಯನ ನಡೆಸಿದೆ. ಗ್ಲೇಶಿಯಲ್ ಲೇಕ್ (Glacial Lakes) ಔಟ್‌ಬರ್ಸ್ಟ್ ಫ್ಲಡ್‌ಗಳಿಂದ (GLOFs) ಹೆಚ್ಚಿನ ಅಪಾಯ ಉಂಟಾಗಲಿದೆ. ಹಿಮಾಲಯದಲ್ಲಿ 1 ಸಾವಿರಕ್ಕೂ ಅಧಿಕ ಹಿಮ ಸರೋವರಗಳು ಕರಗುತ್ತಿವೆ. ಇದರ ಪರಿಣಾಮವಾಗಿ ಭಾರತ (India), ಚೀನಾ (China), ಪಾಕಿಸ್ತಾನ (Pakistan), ಪೇರು ರಾಷ್ಟ್ರಗಳಲ್ಲಿ ಭೀಕರ ಪ್ರವಾಹ ಉಂಟಾಗಲಿದೆ.

ಹಿಮ ಸರೋವರದ ಪ್ರವಾಹವು ಜನರ ಭೀತಿಗೆ ಕಾರಣವಾಗಿದೆ. ಈ ಗ್ಲೇಶಿಯಲ್ ಸರೋವರದಲ್ಲಿ ಹಿಮ ಕರಗಿದಂತೆ ಅವು ತಗ್ಗು ಪ್ರದೇಶಗಳಲ್ಲಿ ಪ್ರವಾಹವನ್ನು ಉಂಟು ಮಾಡುತ್ತವೆ. ಇದನ್ನು ‘ಹಿಮ ಸರೋವರದ ದಿಢೀರ್ ಪ್ರವಾಹ’ ಎಂದು ಕರೆಯಲಾಗುತ್ತದೆ. ಹವಾಮಾನ ಬದಲಾವಣೆಯಿಂದಾಗಿ ಅಪಾಯವು ಬಹುಪಟ್ಟು ಹೆಚ್ಚಾಗಿದೆ ಎಂದು ಅಧ್ಯಯನವು ತಿಳಿಸಿದೆ.

glacial lakes 3

ಪ್ರವಾಹ ಉಂಟಾಗುವುದು ಹೇಗೆ?: ಭೂಮಿಯ ಹವಾಮಾನವು ಹೆಚ್ಚು ಬಿಸಿಯಾಗುತ್ತಿರುವ ಕಾರಣದಿಂದ ಹಿಮಗಳು ಕರಗಿ ನೀರಾಗಿ ಸಂಗ್ರಹಗೊಳ್ಳುತ್ತಿದೆ. ಇದರಿಂದ ಸರೋವರಗಳು ಉಂಟಾಗುತ್ತವೆ. ಈ ಸರೋವರಗಳು ಇದ್ದಕ್ಕಿದ್ದಂತೆ ಒಡೆದು ವೇಗವಾಗಿ ಹರಿದು ಪ್ರವಾಹವನ್ನು ಉಂಟುಮಾಡಬಹುದು. ಅದು ಮೂಲಜಾಗದಿಂದ ಹೆಚ್ಚಿನ ದೂರದವರೆಗೆ ಹರಡಬಹುದು. ಇದು ಕೆಲವು ಸಂದರ್ಭಗಳಲ್ಲಿ 120 ಕಿಮೀಗಿಂತ ಹೆಚ್ಚು ದೂರಕ್ಕೂ ಹರಿಯಬಹುದು. ಪ್ರವಾಹಗಳು ಹೆಚ್ಚು ವಿನಾಶಕಾರಿಯಾಗಬಹುದು. ಆಸ್ತಿ, ಮೂಲಸೌಕರ್ಯ ಮತ್ತು ಕೃಷಿ ಭೂಮಿಯನ್ನು ಹಾನಿಗೊಳಿಸಬಹುದು. ಜೊತೆಗೆ ಜೀವಹಾನಿಯೂ ಆಗಬಹುದು.

ಅಧ್ಯಯನ ಹೇಳೋದೇನು?: ಜಿಎಲ್‌ಓಎಫ್‌ಗಳಿಂದ ಹೆಚ್ಚು ಅಪಾಯದಲ್ಲಿರುವ ಪ್ರದೇಶಗಳನ್ನು ಗುರುತಿಸಲು ಸಂಶೋಧಕರು, ಹಿಮನದಿಯ ಸರೋವರಗಳ ವಿವಿಧ ಸ್ಥಳಗಳ ಕುರಿತು ಉಪಗ್ರಹದ ಮೂಲಕ ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಹಿಮನದಿ ಸರೋವರದಿಂದ 50 ಕಿ.ಮೀ ಮತ್ತು ಅದು ಹುಟ್ಟುವ ಒಂದು ಕಿ.ಮೀ ವ್ಯಾಪ್ತಿಯಲ್ಲಿ ವಾಸಿಸುವ ಜನರ ಬದುಕಿನ ಮೇಲೆ ಪರಿಣಾಮ ಬೀರಬಹುದು.

glacial lakes

ಭಾರತಕ್ಕೆ ಕಾದಿದ್ಯಾ ಅಪಾಯ?: ಅಧ್ಯಯನದ ಪ್ರಕಾರ, ಭಾರತದಲ್ಲಿನ 3 ಮಿಲಿಯನ್ ಜನರು ಅಂದರೆ ಸುಮಾರು 30 ಲಕ್ಷ ಮಂದಿ ಹಿಮ ಸರೋವರಗಳಿಂದ ಉಂಟಾಗುವ ಪ್ರವಾಹಕ್ಕೆ ತುತ್ತಾಗುವ ಸಾಧ್ಯತೆ ಇದೆ. ಇದು ವಿಶ್ವದಲ್ಲೇ ಅತಿ ಹೆಚ್ಚು ಎಂದು ಪರಿಗಣಿತವಾಗಿದೆ. ಇನ್ನೂ ಪಾಕಿಸ್ತಾನದಲ್ಲಿ 2 ಮಿಲಿಯನ್ ಜನರು ಪ್ರವಾಹದ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಅಂದಾಜಿಸಿದೆ.

ಗ್ಲೇಶಿಯಲ್ ಸರೋವರದ 50 ಕಿ.ಮೀ ವ್ಯಾಪ್ತಿಯಲ್ಲಿ 15 ಮಿಲಿಯನ್ ಜನರು ವಾಸಿಸುತ್ತಿದ್ದಾರೆ. ಕಿರ್ಗಿಸ್ತಾನ್‌ನಿಂದ ಚೀನಾದವರೆಗೆ ಟಿಬೆಟ್‌ನ್ನು ಆವರಿಸಿರುವ ಹೈಮೌಂಟೇನ್ ಏಷ್ಯಾ, ಅತ್ಯಧಿಕ ಗ್ಲೇಶಿಯಲ್ ಲೇಕ್ ಔಟ್‌ಬರ್ಸ್ಟ್ ಫ್ಲಡ್ ಅಪಾಯ ಸಂಭವಿಸುವ ವಲಯವಾಗಿದೆ. ಇಲ್ಲಿ 9.3 ಮಿಲಿಯನ್ ಜನರು ಅಪಾಯದಲ್ಲಿದ್ದಾರೆ ಎಂದು ಸಂಶೋಧನೆಗಳು ಹೇಳಿವೆ. ಇದನ್ನೂ ಓದಿ: PublicTV Explainer: ಕ್ಷಣ ಕಾಲ ನಿಂತು ವಿರುದ್ಧ ದಿಕ್ಕಿನಲ್ಲಿ ತಿರುಗುತ್ತಾ ಭೂಮಿ? – ಭೂಗರ್ಭದ ರಹಸ್ಯ ಬಿಚ್ಚಿಟ್ಟ ವಿಜ್ಞಾನಿಗಳು

ಚಮೋಲಿ ಪ್ರವಾಹ ಕರಾಳತೆ: ಫೆ. 2021ರಲ್ಲಿ ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ಉಂಟಾಗಿದ್ದ ಹಠಾತ್ ಪ್ರವಾಹದಿಂದ ಸುಮಾರು 80 ಜನರು ಮೃತಪಟ್ಟಿದ್ದರು. ಈ ಪ್ರವಾಹದಲ್ಲಿ ಅನೇಕರು ಕಾಣೆಯಾದರು. ಹವಾಮಾನ ಬದಲಾವಣೆಯ ಪರಿಣಾಮವಾಗಿ 1990ರಿಂದ ಗ್ಲೇಶಿಯಲ್ ಸರೋವರಗಳ ಸಂಖ್ಯೆಯು ವೇಗವಾಗಿ ಬೆಳೆಯುತ್ತಿದೆ. ಅದೇ ಸಂದರ್ಭದಲ್ಲಿ ಈ ಜಲಾನಯನ ಪ್ರದೇಶಗಳಲ್ಲಿ ವಾಸಿಸುವ ಜನರ ಸಂಖ್ಯೆಯೂ ಗಮನಾರ್ಹವಾಗಿ ಹೆಚ್ಚಾಗಿದೆ.

glacial lakes 4

GLOFs ಅಪಾಯ ನಿಯಂತ್ರಿಸಬಹುದೇ?: GLOFs ಅಪಾಯವನ್ನು ಕಡಿಮೆ ಮಾಡುವುದು ತುಂಬಾ ಕಷ್ಟ. ಯಾವುದೇ ಪರಿಹಾರವು ಕಾರ್ಯನಿರ್ವಹಿಸುವುದಿಲ್ಲ. ಹವಾಮಾನ ಬದಲಾವಣೆಯನ್ನು ಮಿತಿಗೊಳಿಸಬೇಕಷ್ಟೆ. ತಾಪಮಾನವು ಯಾವಾಗಲೂ 1.5 ಡಿಗ್ರಿ ಸೆಲ್ಸಿಯಸ್ ಒಳಗೇ ಇರುವಂತೆ ನೋಡಿಕೊಳ್ಳಬೇಕು. ಇದು ಹಿಮ ಸರೋವರಗಳ ಬೆಳವಣಿಗೆಯನ್ನು ನಿಧಾನಗೊಳಿಸಲು ಸಹಾಯ ಮಾಡುತ್ತದೆ. ಇದನ್ನೂ ಓದಿ: Public TV Explainer: ಭಾರತದಲ್ಲಿ ಲ್ಯಾಬ್‌ನಲ್ಲೇ ತಯಾರಾಗುತ್ತಾ ವಜ್ರ? – ಕೃತಕ ವಜ್ರ ಹೇಗೆ ತಯಾರಿಸ್ತಾರೆ ಗೊತ್ತಾ?

TAGGED:glacial lakesindiapakistanಪಾಕಿಸ್ತಾನಭಾರತಹಿಮಸರೋವರ
Share This Article
Facebook Whatsapp Whatsapp Telegram

Cinema Updates

Kamal Haasan 2
ಕಮಲ್ ಹಾಸನ್ ಬ್ಯಾನರ್‌ಗೆ ಬೆಂಕಿ ಹಚ್ಚಿ ಪ್ರತಿಭಟನೆ
1 hour ago
Shivarajkumar Kamal Haasan
ಕನ್ನಡದ ಬಗ್ಗೆ ಕಮಲ್ ಹಾಸನ್‌ಗೆ ಪ್ರೀತಿಯಿದೆ, ಯಾಕೆ ಅದನ್ನ ದೊಡ್ಡ ವಿಷಯ ಮಾಡ್ತೀರಾ?: ಶಿವಣ್ಣ
9 hours ago
darshan 1
ವಿದೇಶಕ್ಕೆ ಶೂಟಿಂಗ್‌ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ – ಮೇ 30ಕ್ಕೆ ಆದೇಶ ಕಾಯ್ದಿರಿಸಿದ ಕೋರ್ಟ್
12 hours ago
RASHMIKA
ಸೀರೆಯಲ್ಲಿ ಮಿಂಚು ಬಳ್ಳಿಯಂತೆ ಕಂಗೊಳಿಸಿದ ರಶ್ಮಿಕಾ – ವಿಜಯ್‌ ಕ್ಲಿಕ್‌ ಮಾಡಿದ್ದು ಅಂದ್ರು ಫ್ಯಾನ್ಸ್‌!
13 hours ago

You Might Also Like

Bhima River 1
Belgaum

ಭೀಮಾ ನದಿ ತೀರದಲ್ಲಿ ಪ್ರವಾಹದ ಆತಂಕ – ನದಿಗಿಳಿಯದಂತೆ ಜಿಲ್ಲಾಡಳಿತ ಸೂಚನೆ

Public TV
By Public TV
25 minutes ago
Hemavati River
Districts

ಹಾಸನದಲ್ಲಿ ತಗ್ಗಿದ ಮಳೆ ಅಬ್ಬರ – ಹೇಮಾವತಿ ಒಳಹರಿವಿನಲ್ಲಿ ಇಳಿಕೆ

Public TV
By Public TV
36 minutes ago
Snehamayi Krishna 2
Districts

MUDA Scam| ತನಿಖಾಧಿಕಾರಿ ಬದಲಾವಣೆಗೆ ನ್ಯಾಯಾಲಯಕ್ಕೆ ಅರ್ಜಿ

Public TV
By Public TV
47 minutes ago
elon musk and donald trump
Latest

ಟ್ರಂಪ್‌ ನೀತಿಯನ್ನು ಟೀಕಿಸಿದ ಬೆನ್ನಲ್ಲೇ DOGE ಮುಖ್ಯಸ್ಥ ಪಟ್ಟದಿಂದ ಇಳಿದ ಮಸ್ಕ್‌

Public TV
By Public TV
1 hour ago
Chikkamagaluru murder
Chikkamagaluru

ಪತ್ನಿಯನ್ನು ಕೊಂದು ನಾಪತ್ತೆಯಾಗಿದ್ದ ಪತಿ, ಮುಳ್ಳಯ್ಯನಗಿರಿ ಕಾಡಿನಲ್ಲಿ ಬಂಧನ

Public TV
By Public TV
1 hour ago
daily horoscope dina bhavishya
Astrology

ದಿನ ಭವಿಷ್ಯ 29-05-2025

Public TV
By Public TV
16 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?