Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

Bengaluru City

ಕೆಲಸದಿಂದ ವಜಾ ಮಾಡಲಿ, ನಾವು ಹೆದರುವುದಿಲ್ಲ, ಮುಷ್ಕರ ನಡೆಯುತ್ತೆ: ಷಡಕ್ಷರಿ

Public TV
Last updated: February 28, 2023 4:58 pm
Public TV
Share
3 Min Read
Karnataka Government Employees Association President C S Shadakshari
SHARE

ಬೆಂಗಳೂರು: ನಮ್ಮನ್ನು ಅಮಾನತು ಮಾಡಲಿ, ಕೆಲಸದಿಂದ ವಜಾ ಮಾಡಲಿ, ಎಸ್ಮಾ ಜಾರಿಗೆ ತರಲಿ, ಆದರೆ ನಾವು ಯಾವುದಕ್ಕೂ ಹೆದರುವುದಿಲ್ಲ, ಮುಷ್ಕರ ನಡೆಯುತ್ತದೆ ಎಂದು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ (Shadakshari) ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ನೌಕರರ (Government Employees) ಹೋರಾಟಕ್ಕೆ 40 ಸಂಘಟನೆಗಳ ಬೆಂಬಲ ನೀಡಿದೆ. ಬುಧವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳನ್ನು ಬಂದ್ ಮಾಡಿ ಪ್ರತಿಭಟನೆ ಮಾಡುತ್ತೇವೆ. ಸರ್ಕಾರದ ಯಾವುದೇ ಭರವಸೆಗಳಿಗೆ ಬಗ್ಗಲ್ಲ. ಅಧಿಕೃತ ಆದೇಶದೊಂದಿಗೆ ಬರದ ಹೊರತು ಪ್ರತಿಭಟನೆ ಕೈ ಬಿಡಲ್ಲ. ಸಿಎಂ ನಮ್ಮ ಜೊತೆ ಈಗ ಮಾತನಾಡಿಲ್ಲ. ಆದರೆ ಬಜೆಟ್ ವೇಳೆ ಪದಾಧಿಕಾರಿಗಳು ಹೋದಾಗ ಜಾರಿ ಮಾಡುತ್ತೇವೆ ಎಂದು ಹೇಳಿದ್ದರು ಅಷ್ಟೇ. ಆ ಬಳಿಕ ಅವರು ನಮಗೆ ಮನವರಿಕೆ ಮಾಡಿಕೊಟ್ಟಿಲ್ಲ. ಈ ಹಿನ್ನೆಲೆಯಲ್ಲಿ ಮುಷ್ಕರ ಮಾಡುತ್ತೇವೆ ಎಂದು ತಿಳಿಸಿದರು.

ಸಂಬಳದಲ್ಲಿ ರಾಜ್ಯ 30ನೇ ಸ್ಥಾನ: 2022ರಿಂದ ನೋಡುತ್ತಿದ್ದೇವೆ, ಯಾವುದೇ ಸಮಸ್ಯೆ ಬಗೆಹರಿಸಿಲ್ಲ. ಸಿಎಂ ಗಮನಕ್ಕೂ ತಂದೇ ಹೋರಾಟಕ್ಕೆ ಇಳಿಯುತ್ತಿದ್ದೇವೆ. ಸಮಿತಿ ರಚನೆ ಮಾಡಿ 4 ತಿಂಗಳಾಗಿದೆ. ವೇತನ ಆಯೋಗ ರಚನೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಆದರೆ ಈವರೆಗೂ ಯಾವುದೇ ಕ್ರಮ ಆಗಿಲ್ಲ. ಎಲ್ಲಾ ರೀತಿ ಯೋಚನೆ ಮಾಡಿ ನಿರ್ಧಾರ ಕೈಗೊಂಡಿದ್ದೇವೆ. ಪಾಠ ಮಾಡಿದವರು ಪರೀಕ್ಷೆ ಮಾಡಲ್ವಾ? ಎಲ್ಲಾ ರೀತಿಯ ಕೆಲಸ ಆಗುತ್ತಿದೆ. ವೈದ್ಯರು ಕೂಡ ಜೊತೆಯಲ್ಲಿದ್ದಾರೆ. ಟ್ಯಾಕ್ಸ್ ಸಂಗ್ರಹದಲ್ಲಿ ಎರಡನೇ ಸ್ಥಾನದಲ್ಲಿದ್ದೇವೆ. ಆದರೆ ಸಂಬಳದಲ್ಲಿ 30ನೇ ಸ್ಥಾನದಲ್ಲಿದ್ದೇವೆ. ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಯಾವುದೇ ಇತರೆ ಕೆಲಸ ಇರುವುದಿಲ್ಲ. ಸರ್ಕಾರದ ಬಗ್ಗೆ ನನಗೆ ಗೌರವ ಇದೆ. ಯಡಿಯೂರಪ್ಪ ಅವರ ಬಗ್ಗೆ ಗೌರವ ಇದೆ. ಅವರು 7ನೇ ವೇತನ ಜಾರಿಗೆ ಸರ್ಕಾರವನ್ನು ಒತ್ತಾಯಿಸಿದ್ದರು ಎಂದು ಹೇಳಿದರು.

ರಾಜ್ಯದಲ್ಲಿ 10 ಲಕ್ಷ ನೌಕರರು ಒಟ್ಟಾಗಿದ್ದೇವೆ. ಎಲ್ಲರೂ ನನಗೆ ಜವಾಬ್ದಾರಿ ನೀಡಿದ್ದಾರೆ. ಮುಷ್ಕರ ಮಾಡುವುದು ನಿಶ್ಚಿತವಾಗಿದ್ದು, ಎಲ್ಲಾ ಇಲಾಖೆಯ ಸಂಘಟನೆಯೂ ಒಟ್ಟಿಗೆ ಸೇರಿದ್ದೇವೆ. 27 ವರ್ಷದ ಬಳಿಕ ಅನಿರ್ದಿಷ್ಟಾವಧಿ ಪ್ರತಿಭಟನೆ ಮಾಡುತ್ತಿದ್ದೇವೆ. ಎಸ್ಮಾ ಮಾಡಿದರೆ ಸ್ವಾಗತ ಮಾಡುತ್ತೇವೆ. ಶಿಕ್ಷಕರು, ಬಿಬಿಎಂಪಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಆದರೆ ನೌಕರರ ಮನಸ್ಥಿತಿ ವಿರುದ್ಧವಾಗಿ ನಾವು ಹೋಗಲ್ಲ. ಕಡಿಮೆ ವೇತನ ತೆಗೆದುಕೊಳ್ಳುತ್ತಿದ್ದೇವೆ. ಇದರಿಂದಾಗಿ ಯಾವ ತ್ಯಾಗಕ್ಕೂ ಕೂಡ ಸಿದ್ಧರಿದ್ದೇವೆ. ಅಮಾನತು, ವಜಾ ಸೇರಿದಂತೆ ಯಾವುದೇ ಕ್ರಮ ತೆಗೆದುಕೊಂಡರೂ ನಾವು ಸಿದ್ಧರಾಗಿದ್ದೇವೆ ಎಂದು ಎಚ್ಚರಿಕೆ ನೀಡಿದರು.

ಉಪರಾಷ್ಟ್ರಪತಿ ಕಾರ್ಯಕ್ರಮಕ್ಕಷ್ಟೇ ಅವಕಾಶ: 12 ಸಾವಿರ ಕೋಟಿ ಹೆಚ್ಚುವರಿ ಹಣ ಬೇಕಾಗಲಿದೆ. ವೇತನ ಹೆಚ್ಚಳ ಉಳಿತಾಯದ ಹಣದ ಮೂಲಕ ಭರ್ತಿ ಮಾಡಬಹುದು. ನಾಗರಿಕರು ನಮ್ಮ ಹೋರಾಟಕ್ಕೆ ಸಹಕಾರ ನೀಡಬೇಕು ಎಂದ ಅವರು, ನಾಳೆ ಉಪರಾಷ್ಟ್ರಪತಿ ಕಾರ್ಯಕ್ರಮಕ್ಕೆ ಮಾತ್ರ ಚಾಲಕರನ್ನು ನೀಡುತ್ತೇವೆ. ಗ್ರಾಮ ವಾಸ್ತವ್ಯ ಕಾರ್ಯಕ್ರಮಕ್ಕೆ ಯಾವ ನೌಕರರು ಹೋಗಲ್ಲ. ಲಿಖಿತ ಭರವಸೆಗೆ ನಾವು ರಾಜಿಯಾಗುವುದಿಲ್ಲ. ಸರ್ಕಾರಿ ಆದೇಶ ಆದರೆ ಮಾತ್ರ ನಾವು ಕೆಲಸಕ್ಕೆ ಹಾಜರಾಗುತ್ತೇವೆ ಎಂದರು.

40% ವೇತನ ಹೆಚ್ಚಳಕ್ಕೆ ಒತ್ತಾಯ: ಇತ್ತೀಚಿನ ಸರ್ಕಾರಿ ನೌಕರರ ಸಂಘದ ಸಮಸ್ಯೆ ನಾಗರಿಕರಿಗೆ ಗೊತ್ತಾಗಿದೆ. ಶೇ. 40ರಷ್ಟು ವೇತನ ಹೆಚ್ಚಳ ಆಗಬೇಕು. ಎನ್‍ಪಿಎಸ್, ಒಪಿಎಸ್ ಆಗಬೇಕು. ಯಾವುದೇ ಕಾರಣಕ್ಕೂ ಹೋರಾಟ ಹಿಂಪಡೆಯಲ್ಲ ಅಂತ ಹೇಳಿದ್ದೇವೆ. 5 ರಾಜ್ಯಗಳ ಮಾದರಿಯಂತೆ ಎನ್‍ಪಿಎಸ್ ರದ್ದು ಮಾಡಿ, ಒಪಿಎಸ್ ಮಾಡಿ ಅಂತಾ ಆ ಬಗ್ಗೆ ಸಿಎಂ ಮಾತೇ ಆಡುತ್ತಿಲ್ಲ. ಈ ಬಗ್ಗೆ ಸರ್ಕಾರದಿಂದ ಸ್ಪಷ್ಟನೆ ನೀಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಪಾನ್‌ಕಾರ್ಡ್ ಅಪ್ಡೇಟ್ ಮಾಡ್ಬೇಕು ಅಂತಾ ಕರೆ – ಲಿಂಕ್ ಒತ್ತಿದ ಪೊಲೀಸಪ್ಪನ 73 ಸಾವಿರ ಗುಳುಂ!

ಪೆಟ್ರೋಲ್, ಡೀಸೆಲ್, ಅಗತ್ಯ ವಸ್ತು ಬಳಕೆ ಬೆಲೆ ಹೆಚ್ಚಳ ಆಗಿದೆ. ಸರ್ಕಾರಿ ನೌಕರರ ಬಗ್ಗೆ ಮೃದು ಧೋರಣೆ ಇದೆಯಾ ಗೊತ್ತಿಲ್ಲ. ರಾಜ್ಯದ ಸರ್ಕಾರಿ ನೌಕರರಿಗೆ 12 ಸಾವಿರ ಕೋಟಿ ಖರ್ಚಾಗಲಿದೆ. ನಮಗೆ ಹೆಚ್ಚುವರಿ 16% ಪರ್ಸೆಂಟ್ ಮಾತ್ರ ವೆಚ್ಚ ಹೆಚ್ಚಾಗಲಿದೆ. ನಮಗೆ ಹೆಚ್ಚುವರಿ ಟ್ಯಾಕ್ಸ್ ಕಲೆಕ್ಟ್ ಮಾಡುವ ಜವಾಬ್ದಾರಿ ನೀಡಲಿ. ದುಡಿಯುವ ಸಮಯ ಹೆಚ್ಚಳ ಮಾಡಲಿ. ಎಲ್ಲದಕ್ಕೂ ನಾವು ಸಿದ್ಧರಾಗಿದ್ದೇವೆ ಎಂದು ಖಡಕ್ಕಾಗಿ ತಿಳಿಸಿದರು. ಇದನ್ನೂ ಓದಿ: ಹೆಚ್ಚುತ್ತಿರುವ ತಾಪಮಾನ, ಮಾರ್ಚ್‌ನಿಂದ ಮೇವರೆಗೂ ಹೈ ಅಲರ್ಟ್ 

TAGGED:c s shadakshariGovernment Employeesprotestನೌಕರರ ಸಂಘಪ್ರತಿಭಟನೆಷಡಕ್ಷರಿ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
2 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
3 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?