Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನನ್ನಿಂದ 50 ಸಾವಿರ ಸಾಲ ಪಡೆದಿದ್ದ ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು: ಸಂಜಯ್ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Belgaum | ನನ್ನಿಂದ 50 ಸಾವಿರ ಸಾಲ ಪಡೆದಿದ್ದ ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು: ಸಂಜಯ್ ಪಾಟೀಲ್

Belgaum

ನನ್ನಿಂದ 50 ಸಾವಿರ ಸಾಲ ಪಡೆದಿದ್ದ ಹೆಬ್ಬಾಳ್ಕರ್ 500 ಕೋಟಿ ಹೇಗೆ ಸಂಪಾದನೆ ಮಾಡಿದ್ರು: ಸಂಜಯ್ ಪಾಟೀಲ್

Public TV
Last updated: March 3, 2023 10:05 pm
Public TV
Share
3 Min Read
Sanjay Patil
SHARE

ಬೆಳಗಾವಿ: 20 ವರ್ಷಗಳ ಹಿಂದೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ನನ್ನ ಬಳಿ 50 ಸಾವಿರ ರೂ. ಹಣ ಪಡೆದಿದ್ದರು. ಇಂದು ಅವರು 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ (BJP) ಮಾಜಿ ಶಾಸಕ ಸಂಜಯ್ ಪಾಟೀಲ್ (Sanjay Patil) ಪ್ರಶ್ನೆಯಿಟ್ಟಿದ್ದಾರೆ.

ಸಂಜಯ್ ಪಾಟೀಲ್ ರಾಜಹಂಸಗಡ ಕೋಟೆ ಬಳಿಯ ಮಣ್ಣು ಮಾರಿದ್ದಾರೆ ಎಂಬ ಲಕ್ಷ್ಮಿ ಹೆಬ್ಬಾಳ್ಕರ್ ಆರೋಪಕ್ಕೆ ನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಹೆಬ್ಬಾಳ್ಕರ್ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಏನಾದರೂ ದಾಖಲೆ ಕೊಟ್ಟರೆ ನಾನು ರಾಜಕೀಯ ಸನ್ಯಾಸ ತೆಗೆದುಕೊಳ್ಳುತ್ತೇನೆ ಎಂದು ತಿರುಗೇಟು ನೀಡಿದರು,

LAXMI HEBBALKAR SANJAY PATIL

20 ವರ್ಷಗಳ ಹಿಂದೆ ನಾನು ರಾಜಕೀಯದಲ್ಲಿ ಇರಲಿಲ್ಲ. ಅವರೂ ಸಕ್ರಿಯ ರಾಜಕಾರಣದಲ್ಲಿ ಇರಲಿಲ್ಲ. ಅಂದು ಅವರು ಗೋಮಟೇಶ್ ವಿದ್ಯಾಪೀಠದ ನನ್ನ ಕಚೇರಿಗೆ ಬಂದಿದ್ದರು. ಆಗ 50 ಸಾವಿರ ರೂ. ನನಗೆ ಸಹಾಯ ಮಾಡಿ ಎಂದು ಕೇಳಿ ಹೋಗಿದ್ದರು. ಆ ಸಮಯ ನನ್ನಿಂದ 50 ಸಾವಿರ ರೂ. ತೆಗೆದುಕೊಂಡು ಹೋದವರು ವಾಪಾಸ್ ಬರಲೇ ಇಲ್ಲ ಎಂದು ಆರೋಪಿಸಿದರು.

ಅಂದು ನನ್ನ ಕಡೆಯಿಂದ 50 ಸಾವಿರ ರೂ. ಸಾಲ ತೆಗೆದುಕೊಂಡು ಹೋಗುವಂತಹ ಸ್ಥಿತಿಯಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಈಗ 500 ಕೋಟಿ ರೂ. ಮಾಲೀಕರು ಹೇಗೆ ಆಗ್ತಾರೆ? ಅವತ್ತೇ ಸಂಜಯ್ ಪಾಟೀಲ್ ನಿಮಗೆ 50 ಸಾವಿರ ರೂ. ಸಾಲ ಕೊಟ್ಟಿದ್ದಾನೆ. ಅವನಿಗೆ ದುಡ್ಡಿನ ಅವಶ್ಯಕತೆ ಇಲ್ಲ. ಮಣ್ಣು ಮಾರುವಂತಹ ಬಡತನ ಬಂದಿಲ್ಲ. ಸಂಜಯ್ ಪಾಟೀಲ್‌ಗೆ ಕೊಂಡು ತೆಗೆದುಕೊಳ್ಳೋ, ಎರಡು ನಂಬರ್ ಬ್ಯುಸಿನೆಸ್ ಮಾಡುವಂತಹ ಆಶೀರ್ವಾದ ದೇವರು ನನಗೆ ಮಾಡಿಲ್ಲ. ನಾನು ಲಕ್ಷ್ಮಿ ಪುತ್ರ ಎಂಬುದು ನನಗೆ ಗೊತ್ತಿದೆ. ದುಡ್ಡಿನ ಸಲುವಾಗಿ ಸಗಣಿ ತಿನ್ನುವಂತಹ ಕೆಲಸ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ತಿರುಗೇಟು ನೀಡಿದರು.

SANJAY PATIL

ಆ ಮಣ್ಣು ಮಾರೋಕೆ ನಾನು ರಾಜಹಂಸಗಡ ಕೆಲಸ ಪ್ರಾರಂಭ ಮಾಡಿರಲಿಲ್ಲ. ಶಿವಾಜಿ ಮಹಾರಾಜರನ್ನು ದೇವರು ಎಂದು ಪೂಜೆ ಮಾಡುತ್ತೇನೆ. ಆ ಶಿವಾಜಿ ಮಹಾರಾಜರ ಸ್ಮಾರಕ ಮಾಡಲು ಆ ಕೆಲಸ ಪ್ರಾರಂಭ ಮಾಡಿದ್ದೇನೆ. ನಾನು ಕೊಟ್ಟ 50 ಸಾವಿರ ರೂ. ವಾಪಸ್ ಕೊಟ್ಟಿಲ್ಲ. ಅದಕ್ಕೂ ಆಣೆ ಮಾಡಲಿ ಬರಲಿ ಅವರು. ಮಳೇಕರಣಿ ದೇವಿ ಅಲ್ಲ, ಅವರಿಗೆ ಯಾವ ದೇವರ ಮೇಲೆ ಭಕ್ತಿ ಇದೆ, ಆ ದೇವರ ಕಡೆ ಬರಬೇಕು. ಸಂಜಯ್ ಪಾಟೀಲ್ ಬಳಿ 50 ಸಾವಿರ ರೂ. ಪಡೆದಿಲ್ಲ ಎಂದು ಆಣೆ ಮಾಡಬೇಕು. ನನಗೆ ಅವಶ್ಯಕತೆ ಇದೆ ಸಹಾಯ ಮಾಡಿ ಎಂದು 50 ಸಾವಿರ ರೂ. ಕೊಡಿ ಎಂದಿದ್ದರು. 2 ಗಂಟೆ ನನ್ನ ಕಚೇರಿಯಲ್ಲಿ ಕುಳಿತು ಹಣ ತೆಗೆದುಕೊಂಡು ಹೋಗಿದ್ದಾರೆ ಎಂದು ತಿಳಿಸಿದರು.

ಸಂಜಯ ಪಾಟೀಲ್ ಗೋಮಟೇಶ್ ವಿದ್ಯಾಪೀಠಕ್ಕೆ ಶಾಸಕರ ಅನುದಾನದ 40 ಲಕ್ಷ ರೂ. ಹಣ ಪಡೆದ ಆರೋಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸ್ವಲ್ಪ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಅದರ ಬಗ್ಗೆ ಅಭ್ಯಾಸ ಮಾಡಿ ಹೇಳಬೇಕು. ಗೋಮಟೇಶ್ ವಿದ್ಯಾಪೀಠಕ್ಕೆ ತೆಗೆದುಕೊಂಡಿದ್ದೇವೋ ಇಲ್ಲವೋ, ಹಣ ವಾಪಾಸ್ ಆಗಿದೆಯೋ ಇಲ್ಲವೋ ಅಂತ. ಗೋಮಟೇಶ್ ವಿದ್ಯಾಪೀಠದ ಹಣ ಉಪಯೋಗ ಆಗಿದೆಯೋ ಇಲ್ಲವೋ ಅದರ ಬಗ್ಗೆ ತಿಳಿದುಕೊಳ್ಳಬೇಕು. ಆ ಬಳಿಕ ನಾನು ಯಾವಾಗ ಬೇಕಾದರೂ ಉತ್ತರಿಸಲು ವೇದಿಕೆ ಮೇಲೆ ಬರುತ್ತೇನೆ ಎಂದರು.

Lakshmi Hebbalkar

ಅವರು ಸುಳ್ಳು ಆರೋಪ ಮಾಡುವುದನ್ನು ಬಿಡಬೇಕು. ಯಾವ ವಿಚಾರ ಬಂದರೂ ದಾಖಲೆ ತೆಗೆದುಕೊಂಡು ಬರಬೇಕು. ನೀವು 10 ವರ್ಷ ಎಂಎಲ್‌ಎ ಆಗಿದ್ದು, 20 ಕೋಟಿ ರೂ. ಶಾಸಕರ ಅನುದಾನ ಬಂದಿತ್ತು. ಶಿವಾಜಿ ಮೂರ್ತಿ ಏಕೆ ಪ್ರತಿಷ್ಠಾಪಿಸಿಲ್ಲ ಎಂದು ಕೇಳಿದ್ರು. ನಾನು ಶಿವಾಜಿ ಮೂರ್ತಿ ಸಲುವಾಗಿ ಎಂಎಲ್‌ಎ ಫಂಡ್ ನೀಡುವಂತೆ ಡಿಸಿಗೆ ಪತ್ರ ಬರೆದಿದ್ದೇನೆ. ಅದಕ್ಕೆ ಅದು ಪ್ರೊವಿಜಿನ್ ಇಲ್ಲ, ಕೊಡೋಕೆ ಆಗಲ್ಲ ಎಂದು ಡಿಸಿ ಉತ್ತರಿಸಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ತೆರೆದ ವಾಹನದಲ್ಲಿ ಎಚ್‌ಡಿಡಿ 100 ಕಿ.ಮೀ. ರೋಡ್ ಶೋ

ಎಂಎಲ್‌ಎ ಫಂಡ್ ಯಾವ್ಯಾವ ಕೆಲಸಕ್ಕೆ ಉಪಯೋಗ ಮಾಡಬೇಕು ಎಂಬ ಜ್ಞಾನ ಲಕ್ಷ್ಮಿ ಹೆಬ್ಬಾಳ್ಕರ್‌ಗೆ ಬೇಕಲ್ಲ. ಎಂಎಲ್‌ಎ ಫಂಡ್ ಯಾವ್ಯಾವ ಕಾಮಗಾರಿಗಳಿಗೆ ಕೊಡಬೇಕು ಅಂತಾ ಕಾನೂನು ಇದೆ. ಆ ಕಾನೂನು ಬಿಟ್ಟು ಮಾಡೋಕೆ ಆಗಲ್ಲ. ಸುಮ್ಮನೆ ಭಾಷಣ ಏನೇನೋ ಮಾಡೋದು, ಜನರಿಗೆ ಸುಳ್ಳು ಹೇಳಿ ಮೋಸ ಮಾಡುವ ಸ್ವಭಾವವನ್ನು ಲಕ್ಷ್ಮಿ ಹೆಬ್ಬಾಳ್ಕರ್ ಹೊಂದಿದ್ದಾರೆ ಎಂದು ಕಿಡಿ ಕಾರಿದರು.

lakshmi hebbalkar 1

ಶಾಸಕಿ ಅಂದ್ರೆ ಏನು? ಶಾಸಕರ ಅಧಿಕಾರ ಏನಿದೆ? ಇದರ ಬಗ್ಗೆ ಅವರು ಅಧ್ಯಯನ ಮಾಡಬೇಕು. ನಾನು ರಾಜಹಂಸಗಡ ಕೋಟೆ ಅಭಿವೃದ್ಧಿ ಕೆಲಸ ಪ್ರಾರಂಭ ಮಾಡಿದ್ದ ದಾಖಲೆಗಳಿವೆ. ಅವರಿಗೆ ಬಹಳ ಸಲ ವಿನಂತಿ ಮಾಡಿದ್ದೇನೆ. ಅವರು ಕೇವಲ ಭಾಷಣ ಮಾಡುತ್ತಿದ್ದಾರೆ. ಸರ್ಕಾರಿ ದಾಖಲಾತಿಗಳೊಂದಿಗೆ ಅವರು ಉತ್ತರಿಸಲು ಪ್ರಾರಂಭ ಮಾಡಬೇಕು. ಅಲ್ಲಿ ಎಲ್ಲಾದರೂ ತಪ್ಪಿದ್ದರೆ ನಾನು ಕ್ಷಮೆ ಕೇಳೋಕೆ ರೆಡಿ ಎಂದು ಸಂಜಯ್ ಪಾಟೀಲ್ ಹೇಳಿದ್ದಾರೆ. ಇದನ್ನೂ ಓದಿ: HDK ಕುಟುಂಬದಿಂದ ದೇವರ ಮೊರೆ – ಚಂಡಿಕಾ ಯಾಗ, ಮಹಾಮೃತ್ಯುಂಜಯ ಜಪ ಆಯೋಜನೆ

TAGGED:belagaviLakshmi HebbalkarloanSanjay Patilಬೆಳಗಾವಿಲಕ್ಷ್ಮಿ ಹೆಬ್ಬಾಳ್ಕರ್ಸಂಜಯ್ ಪಾಟೀಲ್ಸಾಲ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Chikkamagaluru Two Youths Drown In Bhadra River
Chikkamagaluru

ಭದ್ರಾ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಸಾವು

Public TV
By Public TV
4 minutes ago
HAL Techie Murder
Bengaluru City

ಬೆಂಗಳೂರಲ್ಲಿ ಪುತ್ರನಿಂದ ತಂದೆ-ತಾಯಿ ಕೊಲೆ ಕೇಸ್;‌ ಕೊಂದ ಮಗನಿಂದಲೇ ಅಂತ್ಯಸಂಸ್ಕಾರಕ್ಕೆ ಕೋರ್ಟ್ ಅವಕಾಶ

Public TV
By Public TV
5 minutes ago
Basanagouda Patil Yatnal
Bengaluru City

ಚುನಾವಣೆಯಲ್ಲಿ ಅಕ್ರಮ ಆರೋಪ – ಯತ್ನಾಳ್ ವಿರುದ್ಧದ ಅರ್ಜಿ ವಜಾಗೊಳಿಸಿದ ಸುಪ್ರೀಂ

Public TV
By Public TV
1 hour ago
Hampi Utsava
Bellary

ಹಂಪಿ ಉತ್ಸವದಲ್ಲಿ ಫಲಪುಷ್ಪ ಪ್ರದರ್ಶನ – ಹೂವಲ್ಲೇ ವಿಜಯನಗರ ಸಾಮ್ರಾಜ್ಯದ ಗತವೈಭವ ಸೃಷ್ಟಿ

Public TV
By Public TV
1 hour ago
zameer ahmed students
Bellary

ಸ್ವಂತ ಖರ್ಚಿನಲ್ಲಿ ಸರ್ಕಾರಿ ಶಾಲಾ ಮಕ್ಕಳನ್ನ ಹೆಲಿಕಾಪ್ಟರ್‌ನಲ್ಲಿ ಸುತ್ತಾಡಿಸಿದ ಸಚಿವ ಜಮೀರ್

Public TV
By Public TV
1 hour ago
Hassan Lady Missing
Crime

ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ – ಚಿನ್ನಾಭರಣಕ್ಕಾಗಿ ಕೊಲೆ ಶಂಕೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?