Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

Bengaluru City

ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ: ಬೊಮ್ಮಾಯಿ

Public TV
Last updated: March 7, 2023 4:38 pm
Public TV
Share
3 Min Read
Basavaraj Bommai 2
SHARE

ಬೆಂಗಳೂರು: ಸಿಲಿಕಾನ್‌ ಸಿಟಿಯ ನಾಗರಿಕರ ಆರೋಗ್ಯ ಮತ್ತು ಶಿಕ್ಷಣದ ಬಗ್ಗೆ ಅತಿ ಹೆಚ್ಚಿನ ಗಮನವನ್ನು ನೀಡಲಾಗಿದ್ದು, ಬೆಂಗಳೂರಿಗೆ ಆರೋಗ್ಯಕ್ಕಾಗಿ ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ತಿಳಿಸಿದರು.

ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಜಯನಗರದಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ-2023 ಮತ್ತು 100ನೇ ಜನೌಷಧಿ ಕೇಂದ್ರವನ್ನು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ (Mansukh Mandaviya) ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಉದ್ಘಾಟಿಸಿ ಮಾತನಾಡಿದರು.

Basavaraj Bommai 1

ಬೆಂಗಳೂರಿನ (Bengaluru) ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದು, ಪ್ರತಿ ವಾರ್ಡಿಗೆ ನಮ್ಮ ಕ್ಲಿನಿಕ್ ಪ್ರಾರಂಭ ಮಾಡಲಾಗಿದೆ. ಈಗಾಗಲೇ 100 ಪ್ರಾರಂಭ ಮಾಡಲಾಗಿದ್ದು, ಇನ್ನೂ ನೂರು ಇದೇ ವಾರದಲ್ಲಿ ಪ್ರಾರಂಭಿಸಲಾಗುತ್ತಿದೆ. 240 ವಾರ್ಡ್‌ಗಳಲ್ಲಿ ನಮ್ಮ ಕ್ಲಿನಿಕ್ ಪ್ರಾರಂಭವಾಗುತ್ತಿದೆ. ಸುಮಾರು 19 ಪಿ.ಹೆಚ್.ಸಿ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. 4 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಎಲ್ಲೆಡೆ ಜನೌಷಧ ಕೇಂದ್ರಗಳನ್ನು ತೆರೆಯಲಾಗಿದೆ. ಇಂದು ಸಂಚಾರಿ ಆಸ್ಪತ್ರೆಯನ್ನೂ ಹಾಗೂ ಡಯಾಲಿಸಿಸ್ ಕೇಂದ್ರವನ್ನೂ ಉದ್ಘಾಟಿಸಲಾಗಿದ್ದು, ರೋಗಿಗಳ ಮುಖದಲ್ಲಿ ಮಂದಹಾಸ ನೋಡಿದಾಗ ಸಾರ್ಥಕ ಭಾವ ಮೂಡುತ್ತದೆ ಎಂದು ತಿಳಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿ ಮತ್ತು ಬಡವರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತದೆ. ಅವರು ಪ್ರಧಾನಿಯಾಗುವ ಮುನ್ನ ಅತ್ಯಂತ ಕಡಿಮೆ ದರದಲ್ಲಿ ಔಷಧಗಳನ್ನು ನೀಡುವ ಕಾರ್ಯಕ್ರಮ ಇರಲಿಲ್ಲ. ಆಡಳಿತಗಾರರಿಗೆ ಸೂಕ್ಷ್ಮಾತಿಸೂಕ್ಷ್ಮ ವಿಷಯಗಳ ಬಗ್ಗೆ ಕಳಕಳಿ ಇರಬೇಕು. ಬಡತನವನ್ನು ಅನುಭವಿಸಿದಾಗ, ಹತ್ತಿರದಿಂದ ನೋಡಿ ಬಡವರ ಸಂಕಷ್ಟವನ್ನು ತಿಳಿದುಕೊಂಡಾಗ ಮಾತ್ರ ಬರುತ್ತದೆ. ನರೇಂದ್ರ ಮೋದಿಯವರಿಗೆ ಬಡತನ ಎಂದರೇನು ಎಂದು ತಿಳಿದಿದೆ. ನೂರು ರೂ.ಗಳೂ ಸಹ ಇಲ್ಲದ ಸ್ಥಿತಿಯಲ್ಲಿರುತ್ತಾರೆ. ಔಷಧಿ ಕಂಪನಿಗಳ ದರ ದಕ್ಕೆ ಹತ್ತುಪಟ್ಟು ಮಾಡಿರುತ್ತಾರೆ. ಬಡವರ ಕಷ್ಟವನ್ನು ಅರ್ಥಮಾಡಿಕೊಂಡಿರುವ ಪ್ರಧಾನಿಗಳು ಬಡವರಿಗಾಗಿ ಸುಲಭ ಮತ್ತು ಕಡಿಮೆ ದರದಲ್ಲಿ ದೊರೆಯಬೇಕೆಂದು, ಗುಣಮುಖರಾಗಿ ಆರೋಗ್ಯವಂತರಾಗಬೇಕು. ಭಾರತ ಸಶಕ್ತವಾಗಬೇಕಾದರೆ, ಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳು ತಲುಪಬೇಕೆಂದು ಇಂಥ ಕಾರ್ಯಕ್ರಮ ರೂಪಿಸಿದ್ದಾರೆ ಎಂದರು.

ಇಂದು ರಾಸಾಯನಿಕ ಮತ್ತು ರಸಗೊಬ್ಬರಗಳ ಸಚಿವಾಲಯದ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಿದ್ದ ಜನೌಷಧಿ ದಿವಸ್ ಆಚರಣೆ – 2023 ಮತ್ತು 100ನೇ ಜನೌಷಧಿ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿ ಮಾತನಾಡಿದೆನು. pic.twitter.com/6x77SZj4Tb

— Basavaraj S Bommai (@BSBommai) March 7, 2023

ಆರೋಗ್ಯಕ್ಕೆ ಮೊದಲು ಅಗತ್ಯವಿರುವುದು ಶುದ್ಧವಾದ ನೀರು, ದೇಶದ ಗ್ರಾಮಗಳಲ್ಲಿರುವ ಎಲ್ಲರ ಮನೆಗೆ ಮುಂದಿನ 5 ವರ್ಷಗಳಲ್ಲಿ ನೀರು ಕೊಡುವುದಾಗಿ ಘೋಷಿಸಿದ್ದ ಪ್ರಧಾನಿಗಳು, ನಾಯಕನಿಗೆ ಬದ್ಧತೆ, ಛಲ. ಬುದ್ಧಿವಂತಿಕೆ ಹಾಗೂ ಬುದ್ಧಿವಂತಿಕೆಗೆ ಹಣ ಕೊಡುವ ಹೃದಯ ವೈಶಾಲ್ಯವಿದ್ದರೆ ಅದು ಸಾಧ್ಯವಿದೆ. ಜಲ್ ಜೀವನ್ ಮಿಷನ್ ಅಡಿಯಲ್ಲಿ ಅಸಾಧ್ಯವಾದುದ್ದನ್ನು ಸಾಧ್ಯ ಮಾಡಲಾಗುತ್ತಿದೆ. ಅಸಾಧ್ಯವಾದುದನ್ನು ಸಾಧ್ಯ ಮಾಡುವುದೇ ನಿಜವಾದ ನಾಯಕತ್ವ. 10 ಕೋಟಿಗಳಿಂತ ಹೆಚ್ಚು ಮನೆಗಳಿಗೆ ಮೋದಿಯವರು ಶುದ್ಧವಾದ ಕುಡಿಯುವ ನೀರನ್ನು ಕೊಡುತ್ತಿದ್ದಾರೆ. ಕರ್ನಾಟಕ ಒಂದರಲ್ಲಿಯೇ 72 ವರ್ಷ ಕೇವಲ 25 ಲಕ್ಷ ಮನೆಗಳಿಗೆ ನೀರು ಕೊಡಲಾಗಿತ್ತು. ಕಳೆದ ಮೂರು ವರ್ಷಗಳಲ್ಲಿ 40 ಲಕ್ಷ ಮನೆಗಳಿಗೆ ಕುಡಿಯುವ ನೀರನ್ನು ಒದಗಿಸಲಾಗಿದೆ. ಇದು ಬದ್ಧತೆಯ ನಾಯಕತ್ವ, ಹಾಗೂ ಬದ್ಧತೆ ಎಂದರು.

Basavaraj Bommai

ಕೇಂದ್ರ ಸಚಿವ ಮನ್ಸುಖ್ ಮಾಂಡವಿಯಾ ಅವರು ಕೂಡ ಕ್ರಿಯಾಶೀಲ ಸಚಿವರು. ರಾಜ್ಯಕ್ಕೆ ಹೆಚ್ಚುವರಿ ಲಸಿಕೆಯನ್ನು ಒದಗಿಸಿದ್ದಲ್ಲದೇ ಯೂರಿಯಾ ಕೊರತೆಯಾದಾಗಲೂ ಆದೇಶ ಮಾಡಿ ಕೊರತೆ ನೀಗಿಸಿದ್ದರು ಎಂದು ಸ್ಮರಿಸಿದರು.

ಸಂಸದ ತೇಜಸ್ವಿ ಸೂರ್ಯ ಅವರ ಕ್ಷೇತ್ರದಲ್ಲಿ ನೂರನೇ ಜನೌಷಧಿ ಕೇಂದ್ರ ಉದ್ಘಾಟನೆಗೊಂಡಿದ್ದು, ಇಡೀ ದೇಶದಲ್ಲಿ ಸಂಸದರೊಬ್ಬರ ಕ್ಷೇತ್ರದಲ್ಲಿ ಇರುವುದು ಒಂದು ದಾಖಲೆ. ಇದು ಜನಪರ ಕಾಳಜಿಯನ್ನು ತೋರಿಸುತ್ತದೆ ಎಂದರು. ವಾಸವಿ ಚಾರಿಟಬಲ್ ಆಸ್ಪತ್ರೆಗೆ ಅಭಿನಂದನೆಗಳನ್ನು ಸಲ್ಲಿಸಿದ ಅವರು ಕೆ.ಎಸ್.ಆರ್.ಟಿ.ಸಿ ಯಲ್ಲಿ ಆಸ್ಪತ್ರೆಯಾಗಿ ಪರಿವರ್ತನೆ ಮಾಡಿರುವುದನ್ನು ದತ್ತು ಪಡೆದು ಡಯಾಲಿಸ್ ಕೇಂದ್ರ ತೆರೆದು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ ಎಂದರು. ಸಚಿವ ಆರ್.ಅಶೋಕ್, ಸಂಸದ ತೇಜಸ್ವಿ ಸೂರ್ಯ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

TAGGED:Basavaraj BommaibjpMansukh Mandaviyaಜನೌಷಧ ಕೇಂದ್ರಬಸವರಾಜ ಬೊಮ್ಮಾಯಿಬಿಜೆಪಿಮನ್‍ಸುಖ್ ಮಾಂಡವಿಯಾ
Share This Article
Facebook Whatsapp Whatsapp Telegram

Cinema news

Shivanna Gilli 1
ಶಿವಣ್ಣನ ಭೇಟಿಯಾದ ಬಿಗ್‌ಬಾಸ್ 12ರ ವಿನ್ನರ್ ಗಿಲ್ಲಿನಟ
Bengaluru City Cinema Districts Karnataka Latest Sandalwood Top Stories
Kavya Shaiva BBK 12
ಬಿಗ್‌ಬಾಸ್ ಮನೆಗೆ ಹೋಗಲು ಕಾವ್ಯ ಖರ್ಚು ಮಾಡಿದ್ದೆಷ್ಟು ಗೊತ್ತಾ?
Cinema Latest Top Stories TV Shows
pavithra gowda 1
ಕಾನೂನು ಎಲ್ಲರಿಗೂ ಒಂದೇ – ಮನೆ ಊಟಕ್ಕೆ ಬೇಡಿದ್ದ ಪವಿತ್ರಾಗೆ ಶಾಕ್‌
Bengaluru City Cinema Court Karnataka Latest Main Post
BBK12 Kavya Shaiva congratulates Bigg Boss winner Gilli Nata
ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ – ಗಿಲ್ಲಿಯನ್ನು ಅಭಿನಂದಿಸಿದ ಕಾವ್ಯ
Cinema Latest Main Post TV Shows

You Might Also Like

Sunita Williams 1
Latest

608 ದಿನ, 3 ಮಿಷನ್‌, 9 ಬಾಹ್ಯಾಕಾಶ ನಡಿಗೆ – 27 ವರ್ಷಗಳ ನಾಸಾ ಜರ್ನಿಗೆ ಸುನಿತಾ ವಿಲಿಯಮ್ಸ್‌ ಗುಡ್‌ಬೈ

Public TV
By Public TV
35 minutes ago
Hebbagodi
Bengaluru City

ಬೆಂಗಳೂರು | ಮಹಿಳೆಯರ ಒಳ ಉಡುಪು ಕದಿಯುತ್ತಿದ್ದ ವಿಕೃತ ಕಾಮಿ ಅರೆಸ್ಟ್!

Public TV
By Public TV
1 hour ago
RTO 3
Bengaluru City

ತೆರಿಗೆ ವಂಚನೆ – ನೂರಾರು ಖಾಸಗಿ ಬಸ್‌ಗಳು ಸೀಜ್

Public TV
By Public TV
1 hour ago
Ramalinga Reddy Meeting
Bengaluru City

ಖಾಸಗಿ ಬಸ್‌ಗಳ ಆಟಾಟೋಪಕ್ಕೆ ಬೀಳುತ್ತಾ ಬ್ರೇಕ್? – ಸುರಕ್ಷತೆ, ಸಾರಿಗೆ ನಿಯಮ ಪಾಲನೆಗೆ ಹೊಸ ರೂಲ್ಸ್

Public TV
By Public TV
1 hour ago
Hindu Student
Latest

ಕಾಣೆಯಾಗಿದ್ದ ಹಿಂದೂ ವಿದ್ಯಾರ್ಥಿ ನದಿಯಲ್ಲಿ ಶವವಾಗಿ ಪತ್ತೆ – ಬಾಂಗ್ಲಾದಲ್ಲಿ ಒಟ್ಟು ಸಾವು 17ಕ್ಕೆ ಏರಿಕೆ

Public TV
By Public TV
2 hours ago
Tanker 2
Belgaum

ಚಿನ್ನದಂತೆ ಗಲ್ಫ್‌ ರಾಷ್ಟ್ರಗಳಿಂದ ಡೀಸೆಲ್‌ ಸ್ಮಗ್ಲಿಂಗ್ – ರಾಜ್ಯದಲ್ಲಿ ಅಕ್ರಮ ತೈಲ ಉತ್ಪನ್ನ ಸಾಗಾಟ!

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?