ರಾಯಚೂರು: ಇಲ್ಲಿನ ಶಕ್ತಿನಗರದಲ್ಲಿ ನಡೆದಿದ್ದ ಬೆಂಕಿ (Fire) ಅವಘಡದಲ್ಲಿ ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನಗೊಂಡಿದ್ದ ಘಟನೆ ನಡೆದಿತ್ತು. ಈ ಘಟನೆಗೆ ಎಸಿ (AC) ತಾಂತ್ರಿಕ ದೋಷವೇ ಕಾರಣ ಅಂತಾ ಪೊಲೀಸರು (Police) ಇದೀಗ ತಿಳಿಸಿದ್ದಾರೆ.
ಇದೇ ಮಾರ್ಚ್ 6 ರಂದು ಶಕ್ತಿನಗರದ ಕೆಪಿಸಿ ಕ್ವಾಟ್ರಸ್ನಲ್ಲಿ ಬೆಂಕಿ ಹೊತ್ತಿಕೊಂಡು ತಾಯಿ ಹಾಗೂ ಇಬ್ಬರು ಮಕ್ಕಳು ಸಜೀವ ದಹನವಾಗಿದ್ದರು. ಇದನ್ನೂ ಓದಿ: ತಾಯಿ, ಇಬ್ಬರು ಮಕ್ಕಳು ಮನೆಯಲ್ಲೇ ಸಜೀವ ದಹನ – ಎಸಿ ಸ್ಫೋಟ ಶಂಕೆ
ಮಂಡ್ಯ ಮೂಲದ ರಂಜಿತಾ (33), ಮಕ್ಕಳಾದ ಮೃದಲಾ (13), ತಾರುಣ್ಯ(5) ಘಟನೆಯಲ್ಲಿ ಸಾವಿಗೀಡಾಗಿದ್ದರು. ಮನೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದ ಕಾರಣ ತಿಳಿಯದ ಹಿನ್ನೆಲೆಯಲ್ಲಿ ಕೇಸ್ ದಾಖಲಾಗಿರಲಿಲ್ಲ. ಕಾರಣ ತಿಳಿದ ನಂತರ ಮಂಗಳವಾರ ಶಕ್ತಿನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಪತ್ನಿಯನ್ನು ಪೀಸ್ ಪೀಸ್ ಮಾಡಿ ನೀರಿನ ಟ್ಯಾಂಕಿನಲ್ಲಿ ತುಂಬಿಸಿಟ್ಟ!
ಆರ್ಟಿಪಿಎಸ್ ನಲ್ಲಿ ಎಇಇ ಆಗಿರುವ ಸಿದ್ದಲಿಂಗಯ್ಯ ಸ್ವಾಮಿ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳು ದುರ್ಮರಣಕ್ಕೀಡಾಗಿದ್ದರು. ಮರಣೋತ್ತರ ಪರೀಕ್ಷೆ ನಡೆದಿದ್ದು, ಮೃತರ ಮಾದರಿಗಳ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಿಕೊಡಲಾಗಿದೆ.