Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಾಕ್ ಇತಿಹಾಸ ಪುಸ್ತಕಗಳಲ್ಲಿ ಭಾರತ, ಹಿಂದೂ ವಿರೋಧಿ ನಿಲುವು – ಪಠ್ಯದಲ್ಲಿ ಗಾಂಧಿ ಹಿಂದೂ ನಾಯಕ ಎಂದು ಪರಿಚಯ

Public TV
Last updated: March 9, 2023 2:07 pm
Public TV
Share
2 Min Read
india pakistan
SHARE

ನವದೆಹಲಿ: ಪಾಕಿಸ್ತಾನದ (Pakistan) ಶಾಲೆಗಳಲ್ಲಿನ 8 ಮತ್ತು 9 ನೇ ತರಗತಿಯ ಇತಿಹಾಸ ಪಠ್ಯಪುಸ್ತಕಗಳಲ್ಲಿ ಭಾರತ (India) ವಿರೋಧಿ ಹಾಗೂ ಹಿಂದೂ ವಿರೋಧಿ ವಿಷಯಗಳು ತುಂಬಿವೆ ಎಂದು ವರದಿಯಾಗಿದೆ.

ತನ್ನ ರಾಷ್ಟ್ರೀಯ ಪಠ್ಯಕ್ರಮಕ್ಕೆ ಅನುಗುಣವಾಗಿ ವಿನ್ಯಾಸಗೊಳಿಸಿರುವ ಪಠ್ಯಪುಸ್ತಕಗಳಲ್ಲಿ ಭಾರತದ ವಿರುದ್ಧ ತಪ್ಪು ಮಾಹಿತಿಗಳನ್ನು ಮಕ್ಕಳಿಗೆ ಕಲಿಸುತ್ತಿದೆ ಎಂದು ತಿಳಿದು ಬಂದಿದೆ.

ನ್ಯಾಷನಲ್ ಬುಕ್ ಫೌಂಡೇಶನ್ 8 ಮತ್ತು 9 ನೇ ತರಗತಿಯ ಪಠ್ಯಪುಸ್ತಕಗಳನ್ನು ಪ್ರಕಟಿಸಿದೆ. ಪುಸ್ತಕದಲ್ಲಿ ಬ್ರಿಟಿಷರ (British) ಕಾಲದಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (Congress) ರಚನೆಗೆ ಅನೇಕ ಭಾರತೀಯರು ಕೈ ಜೋಡಿಸಿದರು. ಧರ್ಮದಲ್ಲಿ ಸಂಪೂರ್ಣವಾಗಿ ಹಿಂದೂವಾಗಿದ್ದರಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಇಡೀ ಭಾರತದ ಧ್ವನಿಗಿಂತ ಹೆಚ್ಚು ಹಿಂದೂ ಧ್ವನಿಯ ರಾಜಕೀಯ ಪಕ್ಷವಾಯಿತು ಎಂದು ಉಲ್ಲೇಖಿಸಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ವಿಚಿತ್ರವಾದ ಎಲೆಕ್ಟ್ರಾನಿಕ್ ಬಲೂನು ಪತ್ತೆ – ಆತಂಕದಲ್ಲಿ ಜನ

GANDHIJI

ಬ್ರಿಟಿಷ್ ಆಳ್ವಿಕೆಯಿಂದ ಸ್ವಾತಂತ್ರ್ಯಕ್ಕಾಗಿ ಭಾರತದ ಹೋರಾಟವನ್ನು ಮುನ್ನಡೆಸಿದ ಮಹಾತ್ಮ ಗಾಂಧಿ (Mahatma Gandhi)ಅವರನ್ನು ಕೇವಲ “ಹಿಂದೂ ನಾಯಕ” ಎಂದು ಪುಸ್ತಕದಲ್ಲಿ ಪರಿಚಯಿಸಲಾಗಿದೆ. ಪಠ್ಯ ಪುಸ್ತಕದಲ್ಲಿ “ಮುಸ್ಲಿಮರನ್ನು ಕಡೆಗಣಿಸುವ” ಆರೋಪವನ್ನು ಹೊರಿಸಲಾಗಿದೆ. ಗಾಂಧಿ ಮತ್ತು ಅವರ ಯುವ ಬೆಂಬಲಿಗರು ಕಾಂಗ್ರೆಸ್‍ನ ಉಸ್ತುವಾರಿಯನ್ನು ವಹಿಸಿಕೊಂಡರು. ಮುಸ್ಲಿಂ ಹಕ್ಕುಗಳನ್ನು ಕಡೆಗಣಿಸಿ ದ್ವೇಷ, ಅಸೂಯೆ ಮತ್ತು ಸಂಕುಚಿತ ಮನೋಭಾವವನ್ನು ಸೃಷ್ಟಿಸಿದರು ಎಂದು ಪಠ್ಯದಲ್ಲಿ ಉಲ್ಲೇಖಿಸಲಾಗಿದೆ.

ಮುಸ್ಲಿಂ (Muslim) ಹಕ್ಕುಗಳ ಹೋರಾಟದಲ್ಲಿ ಹಿಂದೂಗಳನ್ನು (Hindu) ನಂಬಲು ಸಾಧ್ಯವಾಗದಿರುವ ಬಗ್ಗೆ ಪುಸ್ತಕದಲ್ಲಿ ಹಲವಾರು ನಿದರ್ಶನಗಳಿವೆ. ಬಂಗಾಳದ ವಿಭಜನೆಯು ಮುಸ್ಲಿಮರಿಗೆ ಆ ಅರಿವನ್ನು ತಂದಿತು. ಹಿಂದೂ ಬಹುಸಂಖ್ಯಾತರಿಂದ ಯಾವುದೇ ನ್ಯಾಯೋಚಿತ ಮಾರ್ಗವನ್ನು ನಿರೀಕ್ಷಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ನಮ್ಮ ಹಿತಾಸಕ್ತಿಗಳನ್ನು ಕಾಪಾಡಲು ಮುಸ್ಲಿಂ ನಾಯಕರು ತಮ್ಮ ಸಮುದಾಯಕ್ಕೆ ಪ್ರತ್ಯೇಕ ಮತದಾನ ಯೋಜನೆಯನ್ನು ರೂಪಿಸಿದರು ಎಂದು ಹೇಳಲಾಗಿದೆ.

ಮುಸ್ಲಿಮರು ಹಿಂದೂಗಳನ್ನು ಅಥವಾ ಬ್ರಿಟಿಷರನ್ನು ನಂಬಲು ಸಾಧ್ಯವಿಲ್ಲ. ಇದು ಅರಿವಾದ ಬಳಿಕ ಖಿಲಾಫತ್ ಚಳುವಳಿಯು (Khilafat Movement) ಭಾರತದ ಮುಸ್ಲಿಮರಿಗೆ ರಾಷ್ಟ್ರೀಯತೆಯ ಪರಿಕಲ್ಪನೆಯನ್ನು ತಂದಿತು. ಕಾಂಗ್ರೆಸ್ ರಾಷ್ಟ್ರೀಯ ಪಕ್ಷವೆಂದು ಹೇಳಿಕೊಂಡಿತು. ಆದರೆ ವಿಭಜನೆಯ ಪ್ರಶ್ನೆಯಲ್ಲಿ ಅದು ಮತೀಯ ಹಿಂದೂ ಸಂಘಟನೆಯಂತೆ ವರ್ತಿಸಿತು ಎಂದು ಬರೆಯಲಾಗಿದೆ.

ಪಾಕಿಸ್ತಾನದ ಹುಟ್ಟಿನ ಬಗ್ಗೆ ಮಾತನಾಡುವ ಪ್ರತಿಯೊಂದು ಅಧ್ಯಾಯದಲ್ಲಿ ಬ್ರಿಟಿಷರ ಆಳ್ವಿಕೆಯಲ್ಲಿ ಭಾರತದ ಬಹುಪಾಲು ಭಾಗವಾಗಿದ್ದ ಮುಸ್ಲಿಮರನ್ನು ಹಿಂದೂಗಳಿಂದ ಪ್ರತ್ಯೇಕ ಭಾಗವಾಗಿ ಉಲ್ಲೇಖಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಿದೆ.

ಮುಖ್ಯವಾಗಿ ಬ್ರಿಟಿಷರ ವಿರುದ್ಧದ ಹೋರಾಟದಲ್ಲಿ ಭಾಗವಹಿಸುವಿಕೆ ಕೂಡ “ಮುಸ್ಲಿಂ ರಾಷ್ಟ್ರೀಯತೆ” ಸಲುವಾಗಿ ಎಂದು ಪದೇ ಪದೇ ಪುಸ್ತಕದಲ್ಲಿ ಒತ್ತಿ ಹೇಳಲಾಗಿದೆ. ಪ್ರಶ್ನೋತ್ತರ ವಿಭಾಗದಲ್ಲಿಯೂ ಸಹ ಪುಸ್ತಕವು ವಿದ್ಯಾರ್ಥಿಗಳಿಗೆ “ಭಾರತದಲ್ಲಿ ಮುಸ್ಲಿಂ ರಾಷ್ಟ್ರೀಯತೆಯ ಕಾರಣವನ್ನು ಬೆಂಬಲಿಸಲು ಅಧ್ಯಾಯದಲ್ಲಿ ಉಲ್ಲೇಖಿಸಲಾದ ಎಲ್ಲಾ ನಾಯಕರು ನಿರ್ವಹಿಸಿದ ಪಾತ್ರವನ್ನು ಚರ್ಚಿಸಲು” ಹೇಳಲಾಗಿದೆ.

9 ನೇ ತರಗತಿಯ ಅಧ್ಯಾಯಗಳಲ್ಲಿ ನ್ಯಾಷನಲ್ ಕಾಂಗ್ರೆಸ್ ಉರ್ದುವನ್ನು ಹಿಂದಿಗೆ ಬದಲಿಸಲು ಕ್ರಮ ಕೈಗೊಂಡಿತು. ಮತ್ತು ಅಧಿಕೃತ ಗೀತೆಯಾಗಿ `ಒಂದೇ ಮಾತರಂ’ ಅನ್ನು ಪರಿಚಯಿಸಲು ಪ್ರಯತ್ನಿಸಿತು. ಈ ಹಾಡು ಮುಸ್ಲಿಂ ವಿರೋಧಿ ಹಿನ್ನೆಲೆಯನ್ನು ಹೊಂದಿತ್ತು ಮತ್ತು ದ್ವೇಷವನ್ನು ಕೆರಳಿಸಿತು. ಪಾಕಿಸ್ತಾನದಲ್ಲಿ ವಿಭಜನೆಯ ನಂತರ ಹಿಂದೂಗಳು ಮತ್ತು ಮುಸ್ಲಿಮರಿಗೆ ಪ್ರತ್ಯೇಕ ಗುಣಮಟ್ಟದ ಆಹಾರ ನೀಡಲಾಯಿತು. ಭಾರತದ ಸರ್ಕಾರ ಸಾಮೂಹಿಕ ಹಿಂಸಾಚಾರವನ್ನು ನಡೆಸಿತು. ನೀರಾವರಿ ವಿಚಾರದಲ್ಲೂ ಪಾಕ್ ಗೆ ಭಾರತದಿಂದ ಅನ್ಯಾಯವಾಗಿದೆ ಎಂದು ಪಠ್ಯದಲ್ಲಿ ತಿಳಿಸಿದೆ. ಇದನ್ನೂ ಓದಿ: 1,487 ಗ್ರಾಂ ಚಿನ್ನ ಸಾಗಾಟ ಮಾಡ್ತಿದ್ದ ಏರ್ ಇಂಡಿಯಾ ಸಿಬ್ಬಂದಿ ಅರೆಸ್ಟ್

TAGGED:britishcongresshinduindiaKhilafat MovementMahatma Gandhimuslimಕಾಂಗ್ರೆಸ್ಬ್ರಿಟಿಷ್ಭಾರತಮಹಾತ್ಮ ಗಾಂಧಿಹಿಂದೂ
Share This Article
Facebook Whatsapp Whatsapp Telegram

Cinema Updates

kamal haasan thug life
‘ಥಗ್‌ ಲೈಫ್‌’ ಟೀಂ ಉದ್ಧಟತನ ಬಟಾಬಯಲು – ಕನ್ನಡ ಬಿಟ್ಟು 4 ಭಾಷೆಗಳಿಗೆ ಸಿನಿಮಾ ಡಬ್‌
3 hours ago
Trisha
ಥಗ್‌ ಲೈಫ್ ಚಿತ್ರಕ್ಕೆ ʻಶುಗರ್‌ ಬೇಬಿʼ ಪಡೆದ ಸಂಭಾವನೆ ಎಷ್ಟು ಗೊತ್ತಾ?
3 hours ago
pawan kalyan sharmista panoli
ಪುಣೆ ಕಾನೂನು ವಿದ್ಯಾರ್ಥಿನಿ ಪರ ನಿಂತ ಪವನ್‌ ಕಲ್ಯಾಣ್‌ – ದೀದಿ ಹೇಳಿಕೆಗೆ ಖಂಡನೆ
8 hours ago
Mukhyamantri Chandru
ಶಿವಣ್ಣನ ರೀತಿಯಲ್ಲಿ ಇನ್ಯಾರು ಕಮಲ್‌ ಪರವಾಗಿದ್ದಾರೋ ಅವರೆಲ್ಲ ನಾಡದ್ರೋಹಿಗಳು: ಮುಖ್ಯಮಂತ್ರಿ ಚಂದ್ರು
8 hours ago

You Might Also Like

devimane ghat road
Latest

ಕಾರವಾರ-ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

Public TV
By Public TV
23 minutes ago
tilak varma suryakumar yadav
Cricket

ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

Public TV
By Public TV
35 minutes ago
Ukrainian Drones Strike Airbase In Russia At Least 40 Aircraft Hit
Latest

ರಷ್ಯಾದ ವಾಯುನೆಲೆಗಳ ಮೇಲೆ ಉಕ್ರೇನ್‌ ಡ್ರೋನ್‌ ದಾಳಿ – 40 ವಿಮಾನಗಳು ಧ್ವಂಸ

Public TV
By Public TV
51 minutes ago
DK Shivakumar
Bengaluru City

ಬೆಂಗಳೂರು ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆಯೇ ಹೆಚ್ಚು – ಡಿಕೆಶಿ

Public TV
By Public TV
52 minutes ago
Air Force Rescues 14 People Stranded In River On Assam Arunachal Pradesh Border
Latest

ಅಸ್ಸಾಂ | ಹಠಾತ್‌ ಆಗಿ ಹೆಚ್ಚಿದ ಪ್ರವಾಹ – ಸಂಕಷ್ಟದಲ್ಲಿ  ಸಿಲುಕಿದ್ದ 14 ಮಂದಿಯನ್ನು ರಕ್ಷಿಸಿದ ವಾಯುಪಡೆ

Public TV
By Public TV
53 minutes ago
Uttar Pradesh Marriage
Crime

ಕೂಲರ್‌ಗಾಗಿ ಬೀಗರ ಮಧ್ಯೆ ಜಗಳ – ಕುರ್ಚಿ ಎಸೆದು ಅಟ್ಟಾಡಿಸಿದ ವಿಡಿಯೋ ವೈರಲ್

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?