Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು: ಸಿ.ಎಂ ಇಬ್ರಾಹಿಂ

Public TV
Last updated: July 7, 2023 10:33 am
Public TV
Share
3 Min Read
BNG CM IBRAHIM 2
SHARE

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ (Bengaluru-Mysuru Expressway) ಹೆದ್ದಾರಿಯ ಕ್ರೆಡಿಟ್ ರೇವಣ್ಣ (H.D.Revanna) ಅವರಿಗೆ ಸಲ್ಲಬೇಕು. ಅವರ ಚಿಂತನೆಯಿಂದಲೇ ಈ ಹೆದ್ದಾರಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಕ್ರೆಡಿಟ್ ವಾರ್ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು. ಇದರ ಉದ್ಘಾಟನೆಯನ್ನು ಮೋದಿಯವರು (Narendra Modi) ಮಾಡುತ್ತಿದ್ದಾರೆ. ಇದು ಸಂತೋಷದ ವಿಷಯ. ಆದರೆ ಇದನ್ನು ಚುನಾವಣೆಗೆ ಬಳಸುತ್ತೇವೆ ಎಂದರೆ ಆ ರೋಡಿನಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಸೀಟೂ ಬರುವುದಿಲ್ಲ. ಎಷ್ಟೇ ಶೋಗಳನ್ನು ಮಾಡಿದರೂ ಆಗುವುದಿಲ್ಲ. ಸುಮಲತಾ (Sumalatha Ambareesh) ಬಿಜೆಪಿಗೆ (BJP) ಸೇರಬೇಕು ಎನ್ನುತ್ತಿದ್ದಾರೆ. ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾರಾಯಣ ಗೌಡ (Narayana Gowda) ಕಾಂಗ್ರೆಸ್‌ಗೆ (Congress) ಹೋಗುತ್ತಾರೆ ಎನ್ನುತ್ತಾರೆ. ಹೀಗಾದರೆ ರಾಜಕೀಯದಲ್ಲಿ ನೈತಿಕತೆ ಎಲ್ಲಿ ಉಳಿಯಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬಿಜೆಪಿ ಎಂಎಲ್‌ಸಿ ಪುಟ್ಟಣ್ಣ ಕಾಂಗ್ರೆಸ್‌ ಸೇರ್ಪಡೆ

ಜನತಾ ದಳದ (JDS) ವಿಷನ್ ಕ್ಲಿಯರ್ ಆಗಿದೆ. ಜೈಲು, ಬೇಲ್ ಇಲ್ಲದವರಿಗೆ ಮಾತ್ರ ಜೆಡಿಎಸ್ ಟಿಕೆಟ್ ನೀಡುತ್ತಿದೆ. 17ರಲ್ಲಿ ಎಷ್ಟು ಜನ ಕಾಂಗ್ರೆಸ್ ಗೆ ಹೋಗುತ್ತಿದ್ದಾರೆ. ಇವರಲ್ಲಿ ನಾವು ಯಾರನ್ನೂ ಸೇರಿಸಿಕೊಳ್ಳುವುದಿಲ್ಲ. ಅವರೇ ಬಂದರೂ ನಾವು ಕರೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ತೀರ್ಮಾನ ಮಾಡಿದ್ದೇವೆ. ಇವತ್ತು ನಾವು ಒಬ್ಬೊಬ್ಬರನ್ನು ತೂಕ ಮಾಡಿ, ಅಳತೆ ಮಾಡಿ ತೆಗೆದುಕೊಳ್ಳುತ್ತಿದ್ದೇವೆ. ಇದಕ್ಕೆ ಕಾರಣ ಈ ಪಕ್ಷವನ್ನು ಒಂದು ಬುನಾದಿ ಮೇಲೆ ತೆಗೆದುಕೊಂಡು ಹೋಗಬೇಕು. ನಾವು ಕಾರ್ಯಕ್ರಮದ ಮೇಲೆ ಚುನಾವಣೆಗೆ ಹೋಗುತ್ತಿದ್ದೇವೆ ಹೊರತು ರೋಡ್ ಶೋ (Road Show) ಮೇಲಲ್ಲ ಎಂದರು.

ಬಿಜೆಪಿ ಮೋದಿ ಹೆಸರಿನ ಮೇಲೆ, ಕಾಂಗ್ರೆಸ್ ಸೋನಿಯಾ ಹೆಸರಿನ ಮೇಲೆ ಚುನಾವಣೆಗೆ ಹೋಗುತ್ತಿದೆ. ಆದರೆ ನಾವು ಪಂಚರತ್ನ ಕಾರ್ಯಕ್ರಮದ ಮೇಲೆ ಹೋಗುತ್ತಿದ್ದೇವೆ. ಅವರೆಲ್ಲಾ ಉಚಿತ ಖಚಿತ ಎನ್ನುತ್ತಾರೆ. ಯಾರಿಗೆ ಕೊಡುತ್ತಾರೆ? ಸೊಸೆಗಾ ಅಥವಾ ಅತ್ತೆಗಾ? ಹೀಗಾಗಿ ನಾವು 65 ವರ್ಷ ವಯಸ್ಸಾದವರಿಗೆ ಪೆನ್ಷನ್ ಹಾಗೂ ವಿಧವೆಯರಿಗೆ 500 ರೂ. ನೀಡುತ್ತೇವೆ ಎಂದು ಖಚಿತವಾಗಿ ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಸಿಜೆಐಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ: ವಿವೇಕ್ ರೆಡ್ಡಿ

ಸೋಮಣ್ಣ (V.Somanna) ಕಾಂಗ್ರೆಸ್‌ಗೆ ಸೇರ್ಪಡೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸೋಮಣ್ಣ ಕಾಂಗ್ರೆಸ್‌ಗೆ ಹೋಗುವುದಿಲ್ಲ. ನಾನು ಅವರ ಬಳಿ ಮಾತನಾಡಿದ್ದೇನೆ. ಅವರಿಗೂ, ಬಿ.ಎಸ್.ಯಡಿಯೂರಪ್ಪನವರಿಗೂ (B.S.Yediyurappa) ಭಿನ್ನಾಭಿಪ್ರಾಯವಿದೆ ಅಷ್ಟೇ. ಇದು ಆಂತರಿಕ ಸಮಸ್ಯೆಯಾಗಿದ್ದು ಅವರಿಗೂ, ಇವರಿಗೂ, ವಿಜಯೇಂದ್ರಗೂ ಸರಿ ಹೊಂದುತ್ತಿಲ್ಲ ಅಷ್ಟೇ. ಸೋಮಣ್ಣನವರಿಗೆ ಇದ್ದ ವರ್ಚಸ್ಸು ಅವರಿಗೆ ಇದ್ದೇ ಇದೆ. ಸೋಮಣ್ಣನಿಗೆ ಶಕ್ತಿ ದೊರತಿದ್ದೇ ಜನತಾ ದಳದಿಂದ ಎಂದರು.

BNG CM IBRAHIM 1

ಈಶ್ವರ್ ಖಂಡ್ರೆ ಅವರು ಲೋಕಸಭೆ ಚುನಾವಣೆಯಲ್ಲಿ ನಿಂತಿದ್ದರಲ್ಲಾ, ಒಂದು ಲಿಂಗಾಯತರ ಮತ ಬಂತಾ ಅವರಿಗೆ? ಈಶ್ವರ್ ಖಂಡ್ರೆಗೂ ಶಾಮನೂರು ಅವರಿಗೂ ಲಿಂಗಾಯತರಿಂದ ಒಂದು ಮತ ಬರಲಿಲ್ಲ. ಅವರ ಹೆಂಡತಿಯೇ ಒಂದು ಮತ ಹಾಕಲಿಲ್ವೇನೋ ಗೊತ್ತಿಲ್ಲ. ಮತ ಹಾಕುವುದು ಸಾಬರು. ಆದರೆ ವೀರಶೈವ ಎಂದು ಹೇಳಿಕೊಳ್ಳುತ್ತಾರೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ದಶಪಥ ರಸ್ತೆ ಜೆಡಿಎಸ್ ಸರ್ಕಾರದ ಕೊಡುಗೆ – ಶಾಸಕ ಪುಟ್ಟರಾಜು

ಯಡಿಯೂರಪ್ಪ ರಾಜಕಾರಣದಲ್ಲಿ ಬೆಳೆಯಲು ವೀರೇಂದ್ರ ಪಾಟೀಲ್ ಕಾಂಗ್ರೆಸ್‌ನಿಂದ ಹೊರ ಹೋಗಿದ್ದೇ ಕಾರಣ. ಇದು ಅವರಿಗೆ ವರದಾನವಾಯಿತು. ಇಲ್ಲವೆಂದರೆ ಯಡಿಯೂರಪ್ಪ ರಾಜಕಾರಣದಲ್ಲಿ ಬೆಳೆಯುತ್ತಿರಲಿಲ್ಲ. ಇವರ ಶಕ್ತಿಯೇನು ಎಂದು ನಮಗೆ ಗೊತ್ತಿದೆ ಎಂದು ಹೇಳಿದರು.

ನಮ್ಮ ಪ್ರತಿನಿಧಿಗಳು ಚುನಾವಣಾ ಆಯೋಗದ ಸಭೆಗೆ ಹೋಗಿದ್ದಾರೆ. ಕುಕ್ಕರ್ ಹಂಚುವಿಕೆ ಹಾಗೂ ಸೀರೆ ಹಂಚುವುದನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಬಹಿರಂಗವಾಗಿ ಮಾಡುತ್ತಿದೆ. ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರು ಗಂಭೀರಗೊಂಡಿದ್ದಾರೆ. ಇದರ ಬಗ್ಗೆ ಪೊಲೀಸರು ಅಥವಾ ಚುನಾವಣಾ ಆಯೋಗ ಇದನ್ನು ಗಮನಕ್ಕೆ ತೆಗೆದುಕೊಂಡಿದೆಯಾ? ಈ ಕುರಿತು ಬೀದರ್ ಡಿಸಿ ಹಾಗೂ ಎಸ್ಪಿ ಕ್ರಮ ಕೈಗೊಳ್ಳದೇ ಇದ್ದರೆ ನಾನು 15ನೇ ತಾರೀಕಿನಂದು ಡಿಸಿ ಕಚೇರಿ (DC Office) ಮುಂದೆ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷ ರಿಲೀಸ್ ಆಗಲಿ ಎಂದು ಹೇಳಿದ್ದೇವೆ. ಚರ್ಚೆ ಇನ್ನೂ ಮುಗಿದಿಲ್ಲ. ಹಾಗಾಗಿ ಪಟ್ಟಿ ರಿಲೀಸ್ ಫೈನಲ್ ಆಗಲಿಲ್ಲ ಎಂದರು. ಅಪ್ಲಿಕೇಷನ್ ಶುಲ್ಕ ಒಂದು ಲಕ್ಷ ರೂ. ಮಾಡಿದ್ದೇವೆ. ದಲಿತ ಅಭ್ಯರ್ಥಿಗಳಿಗೆ 50 ಸಾವಿರ ರೂ. ಮಾಡಿದ್ದೇವೆ. ಕುರುಬ ನಾಯಕರು ಇದ್ದೇ ಇದ್ದಾರೆ. ಜಿಲ್ಲೆಗೊಂದು, ತಾಲೂಕಿಗೊಂದು ಎಂದು ಏನಿಲ್ಲ. ಸಾಮಾಜಿಕ ನ್ಯಾಯ ಮನಸಿನಲ್ಲಿ ಇಟ್ಟುಕೊಂಡು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಹೆಂಡತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲ್ಲ: ಕಟೀಲ್

TAGGED:bengaluruBengaluru-Mysuru ExpresswaybjpC.M Ibrahimcongresselectionh d revannajdsಕಾಂಗ್ರೆಸ್ಚುನಾವಣೆಜೆಡಿಎಸ್ಬಿಜೆಪಿಬೆಂಗಳೂರುಬೆಂಗಳೂರು-ಮೈಸೂರು ದಶಪಥ ಹೆದ್ದಾರಿಸಿ ಎಂ ಇಬ್ರಾಹಿಂಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema Updates

ramya 5
ರಮ್ಯಾ ವಿರುದ್ಧ `ಡಿ’ ಫ್ಯಾನ್ಸ್‌ನಿಂದ ಕೆಟ್ಟ ಕಾಮೆಂಟ್ಸ್; ಕಾನೂನು ಹೋರಾಟಕ್ಕೆ ಮುಂದಾದ ಮೋಹಕ ತಾರೆ
Cinema Latest Main Post Sandalwood
rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories

You Might Also Like

Uttar pradesh police constable wife
Crime

ಪೊಲೀಸಪ್ಪನ ಪತ್ನಿಗೆ ಅತ್ತೆ, ಮಾವನಿಂದ ಕಿರುಕುಳ – ವಿಡಿಯೋ ಹರಿಬಿಟ್ಟು ಮಹಿಳೆ ಆತ್ಮಹತ್ಯೆ

Public TV
By Public TV
2 minutes ago
Mandya Maddur Sadhana Samavesha
Districts

ಇಂದು ಮದ್ದೂರಿನಲ್ಲಿ ಬೃಹತ್ ಸಾಧನಾ ಸಮಾವೇಶ – 1,146.76 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ

Public TV
By Public TV
16 minutes ago
UP Temple Stampede
Latest

UP | ಅವಸಾನೇಶ್ವರ ಮಹಾದೇವ ದೇವಾಲಯದಲ್ಲಿ ಕಾಲ್ತುಳಿತ – ಇಬ್ಬರು ಭಕ್ತರು ಸಾವು, 29 ಮಂದಿಗೆ ಗಾಯ

Public TV
By Public TV
46 minutes ago
Bengaluru Youth Suicide
Bengaluru City

Bengaluru | ರಸ್ತೆಬದಿ ನಿಂತಿದ್ದ ವಾಹನಕ್ಕೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

Public TV
By Public TV
46 minutes ago
Operation Sindoor
Latest

ಆಪರೇಷನ್‌ ಸಿಂಧೂರ | ಲೋಕಸಭೆಯಲ್ಲಿಂದು 16 ಗಂಟೆಗಳ ಮ್ಯಾರಥಾನ್‌ ಚರ್ಚೆ, ಪ್ರಧಾನಿ ಮೋದಿ ಭಾಗಿ

Public TV
By Public TV
1 hour ago
Mallikarjuna Kharge
Bengaluru City

ಮಲ್ಲಿಕಾರ್ಜುನ ಖರ್ಗೆ ಪುತ್ರ ಮಿಲಿಂದ್‌ ಖರ್ಗೆ ಆರೋಗ್ಯ ಸ್ಥಿತಿ ಗಂಭೀರ – ಬೆಂಗಳೂರು ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?