ಮಂಡ್ಯ: ನರೇಂದ್ರ ಮೋದಿ (Narendra Modi) ಅವರು ಪ್ರಧಾನಿಯಾದ ನಂತರ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ್ದು, ಸಕ್ಕರೆ ನಾಡಿನಲ್ಲಿ ಭಾನುವಾರ ಭರ್ಜರಿ ರೋಡ್ ಶೋ (Road Show) ನಡೆಸಿದರು.
ಮೈಸೂರು – ಬೆಂಗಳೂರು ದಶಪಥ ಹೆದ್ದಾರಿಯನ್ನು (Mysuru Bengaluru Expressway) ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಲಿದ್ದಾರೆ. ಇದಕ್ಕೂ ಮೊದಲು ಮಂಡ್ಯದ ಪ್ರವಾಸಿಮಂದಿರ ವೃತ್ತದಿಂದ ನಂದಾ ಸರ್ಕಲ್ವರೆಗೆ ರೋಡ್ ಶೋ ನಡೆದಿದ್ದು, ಈ ವೇಳೆ ಪ್ರಧಾನಿ ಮೋದಿ ಮೇಲೆ ಹೂವಿನ ಸುರಿಮಳೆಯಾಯಿತು. ಅಷ್ಟೇ ಅಲ್ಲದೇ ಸ್ವಾಗತಿಸಲು ಬಂದಿದ್ದ ಅಭಿಮಾನಿಗಳಿಗೆ ಪ್ರಧಾನಿ ಮೋದಿ ಅವರು ಹೂವುಗಳನ್ನು ಹಾಕಿ ಸಂಭ್ರಮಿಸಿದರು.
ಮಾರ್ಗಮಧ್ಯೆ ಕಾರು ನಿಲ್ಲಿಸಿ ಮೋದಿ ಜನರತ್ತ ಕೈಬೀಸಿದರು. 1.8 ಕಿ.ಮೀ. ದೂರ ಪ್ರಧಾನಮಂತ್ರಿ ನರೇಂದ್ರ ಮೋದಿ ರೋಡ್ ಶೋ ನಡೆಯಿತು. ಮಂಡ್ಯದಲ್ಲಿ (Mandya) ಮೋದಿ ಹವಾ ಜೋರಾಗಿದ್ದು, ಈ ವೇಳೆ ನೆರೆದಿದ್ದ ಜನರು ಮೋದಿ, ಮೋದಿ ಎಂದು ಹಷೋದ್ಘಾರದಿಂದ ಘೋಷಣೆ ಕೂಗಿದರು. ಈ ವೇಳೆ ಸಹಸ್ರಾರು ಜನರು ಸೇರಿದ್ದು, ಅಭಿಮಾನಿಗಳು ಮೋದಿಯನ್ನು ನೋಡಲು ಉತ್ಸುಕರಾಗಿದ್ದು ಕಂಡುಬಂತು.