ಬೆಂಗಳೂರು: ಸಿದ್ದರಾಮಯ್ಯ (Siddaramaiah) ಅವರು ವರುಣಾ (Varuna) ಕ್ಷೇತ್ರದಲ್ಲಿ ನಿಲ್ಲಬೇಕು ಎನ್ನುವುದು ನಮ್ಮಲ್ಲರ ಆಶಯವಾಗಿದ್ದು, ಇದು ನನ್ನ ವೈಯಕ್ತಿಕ ಅಭಿಪ್ರಾಯ ಕೂಡ ಆಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ ಕೋಲಾರ ಟಿಕೆಟ್ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ಪಕ್ಷದ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳುತ್ತದೆ ಎನ್ನುವುದರ ಪ್ರಕಾರ ಹೋಗಬೇಕಾಗುತ್ತದೆ. ಇದೆಲ್ಲ ಊಹಾಪೋಹಾಗಳು, ಇನ್ನೂ ಅಧಿಕೃತವಾಗಿ ಯಾವುದೇ ಪಟ್ಟಿ ಬಿಡುಗಡೆ ಆಗಿಲ್ಲ ಎಂದರು. ಇದನ್ನೂ ಓದಿ: ಶಿವಮೊಗ್ಗ ಡಿಸಿ ಕಚೇರಿ ಮೇಲೆ ನಿಂತು ಆಜಾನ್ ಕೂಗಿದ ಯುವಕ
ಸಿದ್ದರಾಮಯ್ಯ ಅವರು ರಾಜ್ಯದ ಅಗ್ರಗಣ್ಯ ನಾಯಕರಾಗಿದ್ದಾರೆ. ಅವರ ಅಗತ್ಯ ನಮ್ಮ ರಾಜ್ಯಕ್ಕೆ ಇದೆ. ಸಿದ್ದರಾಮಯ್ಯ ಅವರು ವರುಣಾ ಕ್ಷೇತ್ರದಲ್ಲಿ ಸ್ಪರ್ಧಿಸಬೇಕು ಎಂದು ಈ ಹಿಂದೆ ನಾವೆಲ್ಲಾ ಹೇಳಿದ್ದೆವು. ಜೊತೆಗೆ ನನ್ನ ವೈಯಕ್ತಿಕ ಅಭಿಪ್ರಾಯವೂ ಆಗಿದೆ. ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಕೂಡ ತಂದೆ ವರುಣಾದಲ್ಲೇ ಸ್ಪರ್ಧೆಸಲಿ ಎಂದು ಹೇಳಿದ್ದಾರೆ. ಆದರೆ ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಮಾಹಿತಿ ನೀಡಿದರು. ಇದನ್ನೂ ಓದಿ: ಸಿದ್ದು ಪರ ಬ್ಯಾಟ್ ಬೀಸಿದ ಬಿಜೆಪಿ ಶಾಸಕ ರಾಜುಗೌಡ