Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ

Latest

ಕಾಶ್ಮೀರದ ಗಡಿಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರ ಅಮಿತ್ ಶಾರಿಂದ ಲೋಕಾರ್ಪಣೆ

Public TV
Last updated: March 22, 2023 6:53 pm
Public TV
Share
2 Min Read
AMITSHAH
SHARE

ನವದೆಹಲಿ: ಜಮ್ಮು-ಕಾಶ್ಮೀರ (Jammu Kashmir) ದ ಕುಪ್ವಾರ ಜಿಲ್ಲೆಯಲ್ಲಿ ಪುನರ್ ನಿರ್ಮಾಣಗೊಂಡ ಶಾರದಾ ಮಂದಿರವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (AmitShah) ಅವರು ವರ್ಚುವಲ್ ಕಾರ್ಯಕ್ರಮದ ಮೂಲಕ ಲೋಕಾರ್ಪಣೆಗೊಳಿಸಿದರು. 1948ರಲ್ಲಿ ಪಾಕಿಸ್ತಾನಿ ಮೂಲಭೂತವಾದಿಗಳ ಆಕ್ರಮಣದಿಂದ ಸಂಪೂರ್ಣ ಹಾನಿಗೊಳಗಾಗಿದ್ದ ಶಾರದಾ ಮಂದಿರವನ್ನು ಆರ್ಟಿಕಲ್ 370 ರದ್ದತಿ ನಂತರ ಪುನರ್ ನಿರ್ಮಾಣಗೊಳಿಸಿ ಯುಗಾದಿಯ ಶುಭ ದಿನದಂದು ಲೋಕಾರ್ಪಣೆಗೊಳಿಸಿದ್ದು, ಅತ್ಯಂತ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಬಿಡದಿಯ ಗ್ರಾನೈಟ್ ಬಳಕೆಯಿಂದ ನಿರ್ಮಿತವಾಗಿರುವ ಮಂದಿರದಲ್ಲಿ, ಶೃಂಗೇರಿ ಶಾರದ ಮಠದಿಂದ (Sringeri Sharada Mutt) ಪಂಚಲೋಹದ ಶಾರದಾ ಮೂರ್ತಿ ಪ್ರತಿಷ್ಠಾಪನೆಗೊಂಡಿದ್ದು ಗಮನಾರ್ಹ. ಜನವರಿ 24 ರಿಂದ ದೇಶಾದ್ಯಂತ ಸಂಚರಿಸಿ ತೀತ್ವಾಲ್ ತಲುಪಿರುವ ಮೂರ್ತಿಯು ಇಂದು ಸ್ಥಾಪನೆಗೊಂಡಿದೆ.

AMITSHAH

ಈ ಸಂದರ್ಭದಲ್ಲಿ ಮಾತನಾಡಿದ ಅಮಿತ್ ಶಾ, ಇಂದು ಪುನರ್ನಿರ್ಮಾಣಗೊಂಡಿರುವ ಶಾರದಾ ಮಂದಿರದ ಲೋಕಾರ್ಪಣೆ ಕಾರ್ಯಕ್ರಮವು ಅತ್ಯಂತ ಮಹತ್ವದ್ದಾಗಿದೆ. ಒಂದು ಕಾಲದಲ್ಲಿ ಉತ್ಕೃಷ್ಟ ಜ್ಞಾನದ ಕೇಂದ್ರವೆಂದು ಪರಿಗಣಿಸಲಾಗುತ್ತಿದ್ದ ಶಾರದಾ ಪೀಠಕ್ಕೆ ಭರತ ಖಂಡದ ಸಮಸ್ತ ಭಾಗಗಳಿಂದ ಜ್ಞಾನಾರ್ಜನೆಗಾಗಿ ಪಂಡಿತರು ಆಗಮಿಸುತ್ತಿದ್ದುದರಿಂದ ಮಹಾಶಕ್ತಿ ಪೀಠವೆಂದು ಕೂಡ ಕರೆಯಲ್ಪಡುತ್ತದೆ. ಆದಿ ಶಂಕರರು ಇಲ್ಲಿ ತಾಯಿ ಶಾರದೆ ಕುರಿತಾಗಿ ಅನೇಕ ಸ್ತುತಿಗಳನ್ನು ರಚಿಸಿದ್ದು ಕೂಡ ಉಲ್ಲೇಖನೀಯ. ಆರ್ಟಿಕಲ್ 370 ರದ್ದತಿ ನಂತರ ಇಡೀ ಕಾಶ್ಮೀರ ಪ್ರಗತಿ ಪಥದಲ್ಲಿ ಸಾಗುತ್ತಿದ್ದು, ಸನಾತನ, ಸಾಂಸ್ಕೃತಿಕ ಪುನರುತ್ಥಾನ ಕೂಡ ಇಲ್ಲಿ ನಡೆಯುತ್ತಿರುವುದು ಹೊಸ ಅಧ್ಯಾಯವೊಂದಕ್ಕೆ ಸಾಕ್ಷಿಯಾಗುತ್ತಿರುವುದು ಗಮನಾರ್ಹ. ಶಾರದಾ ಮಂದಿರಕ್ಕೆ ಆದಿ ಶಂಕರರ ಕಾಲದಲ್ಲಿದ್ದ ಭವ್ಯತೆಯನ್ನು ಮತ್ತೊಮ್ಮೆ ಪುನರ್ ಸ್ಥಾಪಿಸುವ ಕಾರ್ಯ ಅತ್ಯಂತ ಮಹತ್ವದ್ದಾಗಿದೆ ಎಂದು ವಿವರಿಸಿದರು. ಇದನ್ನೂ ಓದಿ: ಖರ್ಗೆ ತವರು ಜಿಲ್ಲೆಯಲ್ಲಿ ಆಪರೇಷನ್ ಹಸ್ತ- ಹಾಲಿ ಬಿಜೆಪಿ ಶಾಸಕರಿಗೆ ಗಾಳ

tejaswi surya 1

ಇದೇ ಸಂದರ್ಭದಲ್ಲಿ ಮಾತನಾಡಿದ ಸಂಸದ ತೇಜಸ್ವಿ ಸೂರ್ಯ (Tejaswi Surya), ಜಮ್ಮು-ಕಾಶ್ಮೀರದ ಕಿಶನ್ ಗಂಗಾ ನದಿಯ ದಡದಲ್ಲಿ ಇಂದು ಶಾರದಾ ಮಂದಿರವು ಲೋಕಾರ್ಪಣೆಗೊಂಡಿದ್ದು, ದಕ್ಷಿಣ ಭಾರತದ ನಮ್ಮ ಶೃಂಗೇರಿ ಶಂಕರಾಚಾರ್ಯರ ಆಶೀರ್ವಾದವಿದೆ. 1 ಸಾವಿರ ವರ್ಷದ ಹಿಂದೆ ಸನಾತನ ಪರಂಪರೆಯ ಪುನರುತ್ಥಾನದ ಉದ್ದೇಶದಿಂದ ದೇಶದ ನಾಲ್ಕೂ ಭಾಗಗಳಲ್ಲಿ ಶಾರದಾ ಪೀಠ ಸ್ಥಾಪನೆ ಮಾಡಿ ಏಕ್ ಭಾರತ್, ಶ್ರೇಷ್ಠ ಭಾರತ್ ಪರಿಕಲ್ಪನೆಗೆ ಬುನಾದಿ ಹಾಕಿದ್ದು, ಇಂದು ಕರ್ನಾಟಕದ ತುಂಗಾ ತೀರದಿಂದ ಕಾಶ್ಮೀರದ ಕಿಶನ್ ಗಂಗಾ ನದಿ ದಡದ ವರೆಗೆ ಮತ್ತೊಮ್ಮೆ ತಾಯಿ ಶಾರದಾಂಬೆಯ ಪುನರುಜ್ಜೀವನ, ಪುನರುತ್ಥಾನ ಕಾರ್ಯ ಶ್ಲಾಘನೀಯ. ಪ್ರಧಾನಿ ನರೇಂದ್ರ ಮೋದಿ (Narendra Modi) & ಗೃಹ ಸಚಿವ ಅಮಿತ್ ಶಾ ರವರ ದಿಟ್ಟ ನಿರ್ಧಾರದಿಂದ ಕಾಶ್ಮೀರದಲ್ಲಿ ವಿಧಿ 370 ರದ್ದುಗೊಂಡ ನಂತರ ಅಲ್ಲಿ ಶಾಂತಿ ಸ್ಥಾಪನೆಯಾಗಿದ್ದು, ದೇಶವಾಸಿಗಳಲ್ಲಿ ಸಂಪೂರ್ಣ ಸುರಕ್ಷತೆಯ ಭಾವ ಮೂಡಿದೆ. ಇಂತಹ ಶ್ಲಾಘನೀಯ, ಪುನರುತ್ಥಾನ ಕಾರ್ಯಗಳಿಗೆ ಇಂದು ಮತ್ತೆ ಬಲ ಬಂದಿದ್ದು, ಇದರಿಂದ ಪ್ರವಾಸೋದ್ಯಮ, ತೀರ್ಥಯಾತ್ರೆಯ ಕಾರಣಗಳಿಗಾಗಿ ಹೆಚ್ಚಿನ ಪ್ರವಾಸಿಗರು ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಗಮನಾರ್ಹ. ಈ ಅಭಿನಂದನಾರ್ಹ ಕಾರ್ಯಕ್ಕೆ ನಾನು ಸಮಸ್ತ ಕನ್ನಡಿಗರ ಪರವಾಗಿ ನರೇಂದ್ರ ಮೋದಿ, ಅಮಿತ್ ಶಾಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ ಎಂದು ತಿಳಿಸಿದರು.

AMITSHAH 1

ಈ ವೇಳೆ ನಾನ್ ಕನಾ ಸಾಹಿಬ್ ಭೇಟಿಗೆ ಕರ್ತಾರ್ಪುರ ಕಾರಿಡಾರ್ ಆರಂಭಿಸಿದಂತೆ, ಗಡಿಯಾಚೆಗಿನ ಶಾರದಾ ಪೀಠಕ್ಕೆ ಕೂಡ ವಾರ್ಷಿಕ ತೀರ್ಥಯಾತ್ರೆ ಆಯೋಜನೆ ಕುರಿತು ಪರಿಶೀಲನೆ ನಡೆಸುವುದಾಗಿ ಸಚಿವ ಅಮಿತ್ ಶಾ ತಿಳಿಸಿದ್ದು ಗಮನಾರ್ಹ. ಈ ಕಾರ್ಯಕ್ರಮದಲ್ಲಿ ಜಮ್ಮು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ, ರವೀಂದ್ರ ರೈನಾ (ಅಧ್ಯಕ್ಷರು, ಜಮ್ಮು ಕಾಶ್ಮೀರ ಬಿಜೆಪಿ ಘಟಕ) ಮತ್ತು Sಚಿve Shಚಿಡಿಚಿಜಚಿ ಕಮಿಟಿ ಸದಸ್ಯರು ಭಾಗವಹಿಸಿದ್ದರು.

TAGGED:AmitShahnewdelhisringeri muttTejaswi Suryaಅಮಿತ್ ಶಾತೇಜಸ್ವಿ ಸೂರ್ಯನವದೆಹಲಿಶೃಂಗೇರಿ ಮಠ
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

devendra fadnavis
Karnataka

ಮರಾಠಿಗೆ ಆದ್ಯತೆ ನೀಡ್ಬೇಕು, ಆದ್ರೆ ಭಾಷೆಯ ಹೆಸರಲ್ಲಿ ಹಿಂಸಾಚಾರ ಸಹಿಸಲ್ಲ: ದೇವೇಂದ್ರ ಫಡ್ನವೀಸ್

Public TV
By Public TV
24 minutes ago
Election Commission
Latest

ಪ.ಬಂಗಾಳ ಚುನಾವಣೆ ವೇಳೆ ದುರ್ನಡತೆ – ಐವರು ಪೊಲೀಸ್ ಅಧಿಕಾರಿಗಳನ್ನ ಅಮಾನತುಗೊಳಿಸಿ ಶಿಸ್ತು ಕ್ರಮಕ್ಕೆ ನಿರ್ದೇಶಿಸಿದ EC

Public TV
By Public TV
32 minutes ago
a huge tree fell in front of a moving car in aldur chikkamagaluru
Chikkamagaluru

ಚಲಿಸುತ್ತಿದ್ದ ಕಾರಿನ ಮುಂದೆಯೇ ಬಿದ್ದ ಬೃಹತ್‌ ಮರ – ಪ್ರಯಾಣಿಕರು ಜಸ್ಟ್‌ ಮಿಸ್‌

Public TV
By Public TV
55 minutes ago
We are not blackmailing we are demanding our rights Mandya Muslim clerics stern warning to Congress
Districts

ಅಧಿಕಾರಕ್ಕೆ ತಂದ ನಮಗೆ ನಿಮ್ಮನ್ನು ಕೆಳಗಿಳಿಸುವುದು ಗೊತ್ತು- ಕಾಂಗ್ರೆಸ್‌ಗೆ ಮುಸ್ಲಿಂ ಧರ್ಮಗುರುಗಳ ಖಡಕ್ ವಾರ್ನಿಂಗ್

Public TV
By Public TV
1 hour ago
Chalavadi narayanaswamy
Bengaluru City

ಮೀಸಲಾತಿ ಅನ್ವಯವಾಗದ ಹುದ್ದೆಗಳನ್ನು ಜನರಲ್ ಎಸ್‌ಸಿ ಎಂದು ಕರೆದರೆ ಅದು ಒಳಮೀಸಲಾತಿ ಹೇಗೆ ಆಗುತ್ತೆ: ಛಲವಾದಿ ಕಿಡಿ

Public TV
By Public TV
2 hours ago
CET Exam Staff who cut Janavara and threw it dustbin Chikkaballapura
Chikkaballapur

CET Exam| ಜನಿವಾರ ಕತ್ತರಿಸಿ ಕಸದ ಬುಟ್ಟಿಗೆ ಎಸೆದ ಸಿಬ್ಬಂದಿ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?