ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಪ್ರಾರ್ಥಿಸಿ ಶ್ರೀಶೈಲ ಮಲ್ಲಿಕಾರ್ಜುನ ಮೊರೆ

Public TV
1 Min Read
Srisailam fair 1

ಚಿಕ್ಕೋಡಿ: ಪಂಚಮಸಾಲಿ (Panchamasali) ಸಮಾಜದ 2ಎ ಮೀಸಲಾತಿಗಾಗಿ (2A reservation) ಸಮಾಜದ ಯುವಕರು ಶ್ರೀಶೈಲ (Srisaila) ಮಲ್ಲಿಕಾರ್ಜುನನ ಮೊರೆ ಹೋಗಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡಬೇಕು ಎಂಬ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ ಮೀಸಲಾತಿಗಾಗಿ ಯುವಕರು ದೇವರ ಮೊರೆ ಹೋಗಿದ್ದಾರೆ. ಇದನ್ನೂ ಓದಿ: ಯುಗಾದಿಯಂದೇ ಕಳ್ಳತನ – ಬಾಗಿಲು ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Srisailam fair

ಆಂಧ್ರ ಪ್ರದೇಶದ ಶ್ರೀಶೈಲ ಮಲ್ಲಿಕಾರ್ಜುನ ಸನ್ನಿಧಿಯಲ್ಲಿ ನಡೆಯುತ್ತಿರುವ ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಸಿಗಲಿ ಎಂದು ಬರೆದು ರಥದ ಮೇಲಿರಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಬಿಜೆಪಿ (BJP) ಸರ್ಕಾರ ಬಹುಮತದಿಂದ ಅಧಿಕಾರಕ್ಕೆ ಬರಲಿ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಕೊಟ್ಟ ಪಕ್ಷ ಅಧಿಕಾರಕ್ಕೆ ಬರಲಿ ಎಂದು ಬಾಳೆಹಣ್ಣಿನ ಮೇಲೆ ಬರೆಯಲಾಗಿದೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡಿದ್ದ ಆಟೋ ಚಾಲಕನ ಮನೆಗೆ ಬೆಳಕಾದ ಗುರು ಬೆಳದಿಂಗಳು ಟ್ರಸ್ಟ್

Share This Article
Leave a Comment

Leave a Reply

Your email address will not be published. Required fields are marked *