Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

Cinema

ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಟ್ರೈಲರ್ ರಿಲೀಸ್

Public TV
Last updated: March 24, 2023 2:24 pm
Public TV
Share
3 Min Read
veeram film 2
SHARE

ನಿರ್ಮಾಪಕ ಕೆ.ಎಂ. ಶಶಿಧರ್ (Shashidhar) ಅವರು ತಮ್ಮ ಶಶಿಧರ್ ಸ್ಟುಡಿಯೋಸ್ ಪ್ರೊಡಕ್ಷನ್‌ನ ಮೂರನೇ ಪ್ರಾಜೆಕ್ಟ್ ಆಗಿ ಎಮೋಷನಲ್, ಆಕ್ಷನ್, ಥ್ರಿಲ್ಲರ್ ಡ್ರಾಮಾ ಸಬ್ಜೆಕ್ಟ್ ಒಳಗೊಂಡ ‘ವೀರಂ’ (Veeram) ಚಿತ್ರವನ್ನು  ನಿರ್ಮಿಸಿದ್ದಾರೆ, ಡಾಟರ್ ಆಫ್ ಪಾರ್ವತಮ್ಮ, ಶುಗರ್‌ಲೆಸ್ ಚಿತ್ರದ ನಂತರ ಈಗ ಆಕ್ಷನ್ ಥ್ರಿಲ್ಲರ್  ಜಾನರ್ ಚಿತ್ರದೊಂದಿಗೆ ಬರುತ್ತಿದ್ದಾರೆ.  ಪ್ರಜ್ವಲ್ ದೇವರಾಜ್, ರಚಿತಾರಾಮ್  ನಾಯಕ, ನಾಯಕಿಯಾಗಿ ಕಾಣಿಸಿಕೊಂಡಿರುವ ಈ ಚಿತ್ರದ ಟ್ರೈಲರ್ ಬಿಡುಗಡೆ ಕಾರ್ಯಕ್ರಮ ಪ್ರಸನ್ನ ಥಿಯೇಟರ್‌ನಲ್ಲಿ ನೆರೆದಿದ್ದ ಸಾವಿರಾರು ಪ್ರೇಕ್ಷಕರ ನಡುವೆ ನೆರವೇರಿತು.  ಖದರ್ ಕುಮಾರ್ ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಿದ್ದು, ಏಪ್ರಿಲ್ 7ಕ್ಕೆ ರಾಜ್ಯಾದ್ಯಂತ  ತೆರೆಕಾಣುತ್ತಿದೆ.  ಹಿರಿಯನಟ ದೇವರಾಜ್ ಅವರು ಚಿತ್ರದ ಟ್ರೈಲರ್ (Trailer) ಬಿಡುಗಡೆಗೊಳಿಸಿ ಶುಭ ಹಾರೈಸಿದರು. ವೀರಂ ಎಂದರೆ ಯಾರಿಗೂ ಹೆದರದ ವ್ಯಕ್ತಿ. ಖದರ್‌ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರದಲ್ಲಿ  ಪ್ರಿನ್ಸ್ ಪ್ರಜ್ವಲ್ ದೇವರಾಜ್ (Prajwal Devaraj) ಹಾಗೂ ಹಿರಿಯನಟಿ ಶೃತಿ (Shruti), ಅಕ್ಕ ತಮ್ಮನಾಗಿ ಅಲ್ಲದೆ ಸಾಹಸಸಿಂಹ ವಿಷ್ಣುವರ್ಧನ್ ಅಭಿಮಾನಿಗಳಾಗಿ ಕಾಣಿಸಿಕೊಂಡಿದ್ದಾರೆ.

Veeram 1 1

ಟ್ರೈಲರ್ ನೋಡಿದ ನಂತರ ಮಾತನಾಡಿದ ದೇವರಾಜ್, ಟ್ರೈಲರ್‌ನಲ್ಲಿ ವೀರಾವೇಶ ಕಾಣಿಸ್ತಿದೆ. ಶೃತಿ ಅವರಿದ್ದ ಮೇಲೆ ಎಮೋಷನ್ ಸೀನ್‌ಗಳು ಇದ್ದೇ ಇರುತ್ತದೆ, ಪ್ರಜ್ವಲ್, ಕಿಟ್ಟಿ ಹೀಗೆ ಎಲ್ಲ ಯಂಗ್ ಸ್ಟರ್ಸ್  ಸೇರಿ ಈ ಚಿತ್ರ ಮಾಡಿದ್ದಾರೆ.  ಥೇಟರ್‌ನಲ್ಲಿ ಟ್ರೈಲರ್ ನೋಡಿದ್ದು ನನಗೆ ಮೊದಲ ಅನುಭವ, ಜನರ ಕೂಗಾಟ, ಚಪ್ಪಾಳೆ ಕೇಳಿ ತುಂಬಾ ಖುಷಿಯಾಯ್ತು ಎಂದು ಹೇಳಿದರು. ನಟ ಶೃತಿ ಮಾತನಾಡಿ ಇವರೆಲ್ಲ ಸಿನಿಮಾನ ಪ್ರೀತಿಸುವಂಥ ಜನ, ಚಪ್ಪಾಳೆ ಶಿಳ್ಳೆ ಇದನ್ನೆಲ್ಲ ಬಹಳ ದಿನಗಳ ನಂತರ ನೋಡಿ ಖುಷಿಯಾಯ್ತು. ಸಿನಿಮಾದಲ್ಲಿರುವ ಹೋರಾಟ, ಸಾಹಸ ಜನರಿಗೆ ತಲುಪಬೇಕು, ಈ ಸಿನಿಮಾ ನನಗೆ ತುಂಬಾ ವಿಶೇಷ, ಏಕೆಂದರೆ ನಾನು ವಿಷ್ಣು ಸರ್ ಅಭಿಮಾನಿಯಾಗಿಯೇ ಬಂದವಳು, ಇದರಲ್ಲೂ ಅದೇಥರದ ಪಾತ್ರವಿದೆ, ಫಸ್ಟ್ ಟೈಮ್ ಪ್ರಜ್ವಲ್ ಅವರ ಅಭಿನಯ ನೋಡಿ ಕಣ್ಣಲ್ಲಿ ನೀರುಬಂತು, ಸಾಮಾನ್ಯವಾಗಿ ನಾನು ಡಬ್ಬಿಂಗ್ ಮಾಡುವಾಗ, ನನ್ನ ಪಾತ್ರನೋಡಿ ನಾನೇ ನಗುತ್ತೇನೆ. ಈಗ ಎಲ್ಲಾಕಡೆ ಪ್ಯಾನ್ ಇಂಡಿಯಾ ಬಂದಿದೆ, ಆದರೆ ಫ್ಯಾನ್ಸ್ ಇಂಡಿಯಾ ಸಿನಿಮಾ ಇರುವುದು ಕರ್ನಾಟಕದಲ್ಲಿ ಮಾತ್ರ. ಅವರ ಶಿಳ್ಳೆ, ಕೇಕೆಯೇ ಕಲಾವಿದರಿಗೆ ಖುಷಿ ಎಂದರು.

veeram film 3

ಶ್ರೀನಗರಕಿಟ್ಟಿ ಮಾತನಾಡಿ ವಿಷ್ಣು ದಾದಾ ಅವರ ಸವಿನೆನಪಿನಲ್ಲಿ ಈ ಚಿತ್ರ ರಿಲೀಸಾಗುತ್ತಿದೆ. ಒಂದು ಸಿನಿಮಾನ ತೆರೆಯಮೇಲೆ ತಂದು ನಿಲ್ಲಿಸುವುದರ ಕಷ್ಟ ಆ ನಿರ್ಮಾಪಕನಿಗಷ್ಟೇ ಗೊತ್ತು ಎಂದರು. ನಿರ್ಮಾಪಕ ಶಶಿಧರ್ ಮಾತನಾಡಿ, ಈ ಸಿನಿಮಾ ನಿಂತೋಯ್ತು, ಆಗೋದೇ ಇಲ್ಲ ಎಂದು ಕೆಲವರು ಹೇಳಿದ್ದರು, ಅವರಿಗೆಲ್ಲ ಈ ಸಿನಿಮಾ ತೋರಿಸುತ್ತೇನೆ. ಎಮೋಷನಲ್ ಥ್ರಿಲ್ಲರ್ ಡ್ರಾಮಾ  ಜೊತೆಗೆ ಕಂಪ್ಲೀಟ್ ಪ್ಯಾಕೇಜ್ಡ್ ಮೂವೀ ಇದಾಗಿದ್ದು,  ಸೆಕೆಂಡ್ ಹಾಫ್‌ನಲ್ಲಿ  ಥ್ರಿಲ್ಲರ್ ಕಥೆಯಿದೆ.  ಶಿಷ್ಯ ದೀಪಕ್‌ (Shishya Deepak) ಮೊದಲಬಾರಿಗೆ ಪೂರ್ಣಪ್ರಮಾಣದ ಖಳನಾಯಕನಾಗಿ ನಟಿಸಿದ್ದಾರೆ. ವಿಶೇಷವಾಗಿ ಸಾಹಸಸಿಂಹ ವಿಷ್ಣುವರ್ಧನ್ ಅವರ ಪಾತ್ರವನ್ನಿಟ್ಟುಕೊಂಡು ಕಥೆ ಹೇಳಿದ್ದೇವೆ, ವಿಷ್ಣು  ಫ್ಯಾನ್ಸ್ಗೆ ಚಿತ್ರ ತುಂಬಾನೇ ಇಷ್ಟವಾಗುತ್ತದೆ, ಚಿತ್ರವನ್ನು ವಿಷ್ಣು ಅವರಿಗೇ ಅರ್ಪಣೆ ಮಾಡಿದ್ದೇವೆ ಎಂದರು. ಇದನ್ನೂ ಓದಿ: ಮಗಳ ನಟನೆ ಬಗ್ಗೆ ತಂದೆ-ತಾಯಿಗೆ ಖುಷಿ ಇದ್ಯಾ? ಅಸಲಿ ವಿಚಾರ ಬಿಚ್ಚಿಟ್ಟ ರಶ್ಮಿಕಾ ಮಂದಣ್ಣ

veeram film 1

ನಿರ್ದೇಶಕ ಖದರ್‌ಕುಮಾರ್ ಮಾತನಾಡಿ ನಾನು ಚಿಕ್ಕವನಿದ್ದಾಗ ವಿಷ್ಣು ಅವರ ದಾದಾ ಚಿತ್ರವನ್ನು 2.75 ರೂಪಾಯಿ ಕೊಟ್ಟು ಇಲ್ಲೇ ನೋಡಿದ್ದೆ. ಈಗ ಇದೇ ಚಿತ್ರಮಂದಿರದಲ್ಲಿ ನನ್ನ ಚಿತ್ರ ಬಿಡುಗಡೆಯಾಗುತ್ತಿದೆ. ಚಿತ್ರದಲ್ಲಿ ಬಲ ರಾಜವಾಡಿ, ಅಚ್ಯುತ್‌ಕುಮಾರ್, ಸ್ವಾತಿ, ಮೈಕೋ ನಾಗರಾಜ್, ಪ್ರಶಾಂತ್ ನಟನಾ, ಹನುಮಂತೇಗೌಡ ಅಲ್ಲದೆ ನಿರ್ದೇಶಕರಾದ ಜೋಸೈಮನ್, ವಿ.ನಾಗೇಂದ್ರಪ್ರಸಾದ್ ಹೀಗೆ ಬಹುದೊಡ್ಡ ತಾರಾಗಣವೇ ಇದೆ ಎಂದು ಹೇಳಿದರು.

Veeram 2

ನಾಯಕ ಪ್ರಜ್ವಲ್ ಮಾತನಾಡಿ ನಾನು ಹೋದ ಜನ್ಮದಲ್ಲಿ ತುಂಬಾ ಪುಣ್ಯ ಮಾಡಿದ್ದೆ ಅಂತ ಕಾಣಿಸುತ್ತೆ, ಇಂಥ ತಂದೆ ತಾಯಿ ಪಡೆದ ನಾನೇ ಧನ್ಯ, ಆರಂಭದಲ್ಲಿ ನಿರ್ಮಾಪಕ, ನಿರ್ದೇಶಕರು ನನ್ನ ಬಳಿ ಬಂದಾಗ ಅವರ ಕಣ್ನಲ್ಲಿ ಒಂದು ಕನಸಿತ್ತು. ಕಿಟ್ಟಣ್ಣ ಕೂಡ ನನ್ನ ಜೊತೆ ಅಂದಕೂಡಲೇ ಕಥೆಕೇಳದೆ ಒಪ್ಪಿಕೊಂಡರು. ದಾದಾ ಅವರ ಅಚ್ಚೆ ಕೈಮೇಲೆ ಹಾಕಿಕೊಂಡು ಆಕ್ಟ್ ಮಾಡಲು ತುಂಬಾ ಖುಷಿಯಾಗಿತ್ತು. ನನ್ನ ದೊಡ್ಡ ಪವರ್ ಅಂದ್ರೆ ನನ್ನ ಅಭಿಮಾನಿಗಳು, ಮತ್ತೊಂದುಕಡೆ ನನ್ನ ಕುಟುಂಬ ಎಂದು ಹೇಳಿದರು.

prajwal devaraj 2

ಖಳನಟನಾಗಿ ಕಾಣಿಸಿಕೊಂಡಿರುವ ಶಿಷ್ಯ ದೀಪಕ್ ಮಾತನಾಡುತ್ತಾ ಈ ಪಾತ್ರವನ್ನು ನಾನು ಅನುಭವಿಸಿ ಮಾಡಿದ್ದೇನೆ. ನಿರ್ಮಾಪಕರು ನನ್ನ ಬಗ್ಗೆ ಬಹಳಷ್ಟು ಜನ ನೆಗೆಟಿವ್ ಮಾತಾಡಿದರೂ ಅದನ್ನು ಲೆಕ್ಕಿಸದೆ ನನಗೆ ಸಪೋರ್ಟ್ ಮಾಡಿದರು. ಶಿಶ್ಯ ದೀಪಕ್‌ನನ್ನು ಜೇಡ ದೀಪಕ್ ಮಾಡಿದ್ದಾರೆ ಎಂದು ಗಗ್ಗದಿತರಾದರು, ಅನೂಪ ಸೀಳನ್ ಅವರ ಸಂಗೀತ ಸಂಯೋಜನೆ, ಲವಿತ್ ಅವರ ಕ್ಯಾಮೆರಾವರ್ಕ್ ಚಿತ್ರಕ್ಕಿದೆ.

TAGGED:Prajwal DevarajShashidharshishya deepakShrutitrailerVeeramಟ್ರೈಲರ್ಪ್ರಜ್ವಲ್ ದೇವರಾಜ್ವೀರಶಶಿಧರ್ಶಿಷ್ಯ ದೀಪಕ್ಶ್ರುತಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
12 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
13 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
22 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?