Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ಬಿಜೆಪಿ ಪಕ್ಷವು ಜನರಿಗೆ ಟೊಳ್ಳು ಭರವಸೆ ನೀಡಿಲ್ಲ- ಡಾ.ಕೆ.ಸುಧಾಕರ್

Public TV
Last updated: March 27, 2023 5:45 pm
Public TV
Share
2 Min Read
K.SUDHAKAR
SHARE

ಚಿಕ್ಕಬಳ್ಳಾಪುರ: ಬಿಜೆಪಿಯು (BJP) ಜನರಿಗೆ ಯಾವುದೇ ಟೊಳ್ಳು ಭರವಸೆಗಳನ್ನು ನೀಡಿಲ್ಲ. ಆದರೆ ಭರವಸೆಯಲ್ಲಿ ಇಲ್ಲದ ಹೊಸ ಯೋಜನೆಗಳನ್ನು ಕೂಡ ನೀಡಲಾಗಿದೆ. ಬಿಜೆಪಿಯ ಡಬಲ್ ಎಂಜಿನ್ ಸರ್ಕಾರದಿಂದ ನಂದಿ ಮೆಡಿಕಲ್ ಕಾಲೇಜು (Nandi Medical College) ಸೇರಿದಂತೆ ಅನೇಕ ಅಭಿವೃದ್ಧಿಗಳು ನಡೆಯುತ್ತಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ (K. Sudhakar) ಹೇಳಿದರು.

ಚಿಕ್ಕಬಳ್ಳಾಪುರದ (Chikkaballapura) ಅರೂರು ಗ್ರಾಮದಲ್ಲಿ ನಂದಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭವ್ಯ ಕಟ್ಟಡದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರವೇ ಇರುವುದರಿಂದ ಹೆಚ್ಚು ಅನುದಾನ ಬಂದು ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗಿದೆ. ಡಬಲ್ ಎಂಜಿನ್ ಸರ್ಕಾರದಿಂದ ರಾಜ್ಯಕ್ಕೆ ದೊಡ್ಡ ಅಭಿವೃದ್ಧಿಯ ಸ್ಪರ್ಶ ದೊರೆತಿದೆ. ರೈತರ ಮಕ್ಕಳು ಸೇರಿದಂತೆ 11 ಲಕ್ಷ ಮಕ್ಕಳಿಗೆ ಕಾಮನ್ ಮ್ಯಾನ್ ಸಿಎಂ ಬಸವರಾಜ ಬೊಮ್ಮಾಯಿಯವರು (Basavaraj Bommai) ವಿದ್ಯಾನಿಧಿ ನೀಡಿದ್ದಾರೆ ಎಂದರು. ಇದನ್ನೂ ಓದಿ: ಬಿಎಸ್‍ವೈ ಮನೆ ಮೇಲೆ ದಾಳಿ ರಾಜಕೀಯ ಪ್ರೇರಿತವೂ ಇರಬಹುದು: ಸಚಿವ ಜೋಶಿ 

NANDI MEDICAL COLLEGE

ಪ್ರಧಾನಿ ನರೇಂದ್ರ ಮೋದಿ (Narendra Modi) ಶೌಚಾಲಯದ ಬಗ್ಗೆ ಮಾತನಾಡಿದಾಗ ಏನು ಮಹಾ ಎಂದು ಹಲವರು ಟೀಕಿಸಿದ್ದರು. ಆದರೆ 11 ಕೋಟಿ ಶೌಚಾಲಯಗಳನ್ನು ನಿರ್ಮಿಸಿ ಮಹಿಳೆಯರ ಘನತೆ ಎತ್ತಿ ಹಿಡಿಯಲಾಗಿದೆ. ಮಹಿಳೆಯರಿಗೆ ಉಚಿತ ಗ್ಯಾಸ್ ಸಂಪರ್ಕ ನೀಡಿ ಅವರ ಕಷ್ಟವನ್ನು ತಪ್ಪಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಗಾಂಧಿ ಕುಟುಂಬವನ್ನು ರಾಮನ ವಂಶಕ್ಕೆ ಹೋಲಿಸಿರುವುದು ಅಹಂಕಾರ : ಅನುರಾಗ್ ಠಾಕೂರ್

ನಂದಿ ಮೆಡಿಕಲ್ ಕಾಲೇಜು ನಿರ್ಮಾಣಕ್ಕೆ ಶೇ.60ರಷ್ಟು ಕೇಂದ್ರ, ಶೇ.40ರಷ್ಟು ಅನುದಾನವನ್ನು ರಾಜ್ಯ ಸರ್ಕಾರ ನೀಡಿದೆ. 57 ಎಕರೆ ಪ್ರದೇಶದಲ್ಲಿರುವ ಈ ಕಾಲೇಜಿನಲ್ಲಿ ಸುಸಜ್ಜಿತ ಅಕಾಡೆಮಿಕ್ ಬ್ಲಾಕ್, ಹಾಸ್ಟೆಲ್ ಮೊದಲಾದ ಸೌಲಭ್ಯಗಳಿವೆ. ಚಿಕ್ಕಬಳ್ಳಾಪುರದಲ್ಲಿ ಸತ್ಯ ಸಾಯಿ ಮೆಡಿಕಲ್ ಕಾಲೇಜು ಕೂಡ ಆರಂಭವಾಗಿದೆ. ಎರಡು ಮೆಡಿಕಲ್ ಕಾಲೇಜುಗಳಿರುವ ಈ ಜಿಲ್ಲೆಯ ಜನರು ಅದೃಷ್ಟವಂತರು. ಕೋವಿಡ್ ಸಮಯದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪನವರು (B.S.Yediyurappa) ಉತ್ತಮವಾಗಿ ಆಡಳಿತ ನೀಡಿದ್ದರು. ಹಾಗೆಯೇ ಈ ಕಾಲೇಜು ನಿರ್ಮಾಣಕ್ಕೆ ಎಲ್ಲಾ ಸಹಕಾರ ನೀಡಿದ್ದರು. ಅವರಿಗೆ ಧನ್ಯವಾದಗಳು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: ಮಾಡಾಳ್‌ ವಿರೂಪಾಕ್ಷಪ್ಪ ಜಾಮೀನು ಅರ್ಜಿ ವಜಾ: ಯಾವುದೇ ಕ್ಷಣದಲ್ಲಿ ಬಂಧನ ಸಾಧ್ಯತೆ 

K SUDHAKAR

ಪ್ರತಿ ಕನ್ನಡಿಗರ ದೃಷ್ಟಿ ಸಮಸ್ಯೆ ಬಗೆಹರಿಸಲು ಉಚಿತ ಶಸ್ತ್ರಚಿಕಿತ್ಸೆ ಹಾಗೂ ಕನ್ನಡಕ ವಿತರಣೆ ಮಾಡುವ 360 ಕೋಟಿ ರೂ. ಮೊತ್ತದ ‘ದೃಷ್ಟಿ ಯೋಜನೆ’ ನೀಡಲಾಗಿದೆ. ಈ ಸರ್ಕಾರ ಪ್ರಜೆಗಳ ಸರ್ಕಾರ. ಯಾವುದೇ ಟೊಳ್ಳು ಭರವಸೆಗಳನ್ನು ಬಿಜೆಪಿ ನೀಡಿಲ್ಲ. ಭರವಸೆಯಲ್ಲಿ ಇಲ್ಲದ ಹೊಸ ಯೋಜನೆಗಳನ್ನು ಕೂಡ ನೀಡಲಾಗಿದೆ. ಹಿಂದೆ ನೀರಾವರಿ ಸಚಿವರಾಗಿದ್ದ ಬಸವರಾಜ ಬೊಮ್ಮಾಯಿಯವರು ಎತ್ತಿನಹೊಳೆ ಯೋಜನೆ ರೂಪಿಸಿದ್ದು ಅನೇಕರಿಗೆ ಗೊತ್ತೇ ಇಲ್ಲ. ಈ ಭಾಗದ ಜನರಿಗೆ ಕುಡಿಯುವ ನೀರು ನೀಡಲು ಇಂತಹ ಮಹತ್ವದ ಯೋಜನೆ ನೀಡಲಾಗಿದೆ ಎಂದರು. ಇದನ್ನೂ ಓದಿ: ಹಿಂದಿನ ಸರ್ಕಾರಗಳು ಸದಾಶಿವ ಆಯೋಗದ ವರದಿ ಅನುಷ್ಠಾನ ಮಾಡಿಲ್ಲ ಯಾಕೆ – ಹಾಲಪ್ಪ ಆಚಾರ್ ಪ್ರಶ್ನೆ

TAGGED:Basavaraj BommaibjpChikkaballapuraK SudhakarNandi Medical Collegenarendra modiಕೆ.ಸುಧಾಕರ್ಚಿಕ್ಕಬಳ್ಳಾಪುರನಂದಿ ವೈದ್ಯಕೀಯ ಕಾಲೇಜುನರೇಂದ್ರ ಮೋದಿಬಸವರಾಜ ಬೊಮ್ಮಾಯಿಬಿಜೆಪಿ
Share This Article
Facebook Whatsapp Whatsapp Telegram

Cinema Updates

India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
37 minutes ago
Mangli 2
ಬರ್ತ್‌ಡೇ ಪಾರ್ಟಿಯಲ್ಲಿ ಇದ್ದಿದ್ದು ಬರೀ ಲೋಕಲ್‌ ಡ್ರಿಂಕ್ಸ್‌ ಮಾತ್ರ – ಮಂಗ್ಲಿ ಸ್ಪಷ್ಟನೆ
3 hours ago
Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
18 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago

You Might Also Like

Dinesh Gundu Rao 4
Bengaluru City

ಇಡಿ ತನ್ನ ಹೆಸರನ್ನು ‘ಕಾಂಗ್ರೆಸ್ ವಿರೋಧಿ ನಿರ್ದೇಶನಾಲಯ’ ಅಂತ ಬದಲಾಯಿಸಿಕೊಳ್ಳುವುದು ಸೂಕ್ತ: ದಿನೇಶ್ ಗುಂಡೂರಾವ್

Public TV
By Public TV
2 minutes ago
Chinnaswamy Stampede 1
Bengaluru City

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ – ಗಾಯಾಳು ಮಕ್ಕಳ ವಿವರ ಕೋರಿ ಸಿಐಡಿಗೆ ಮಕ್ಕಳ ಹಕ್ಕು ಆಯೋಗ ನೋಟಿಸ್

Public TV
By Public TV
4 minutes ago
Dharwad Family Rescue
Dharwad

ಧಾರವಾಡದಲ್ಲಿ ವರುಣನ ಆರ್ಭಟ – ಬೆಣ್ಣಿ ಹಳ್ಳದಲ್ಲಿ ಸಿಲುಕಿ ಕುಟುಂಬ ಪರದಾಟ

Public TV
By Public TV
36 minutes ago
Hubballi Rain Death 1
Crime

ಹುಬ್ಬಳ್ಳಿಯಲ್ಲಿ ಧಾರಾಕಾರ ಮಳೆ – ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ

Public TV
By Public TV
55 minutes ago
Pradeep Eshwar 1 2
Bengaluru City

ಮೋದಿ 11 ವರ್ಷದಲ್ಲಿ ಸಾಧನೆಗಳನ್ನ ಕಡಿದು ಕಟ್ಟೆ ಹಾಕಿದ್ದಾರೆ – ದೇಶದ ಭದ್ರತೆ, ರೈತರ ವಿಚಾರದಲ್ಲಿ ಕೇಂದ್ರ ಫೇಲ್: ಪ್ರದೀಪ್‌ ಈಶ್ವರ್‌

Public TV
By Public TV
1 hour ago
Siddaramaiah and Chandrababu Naidu
Bengaluru City

ರಾಜ್ಯದ ತೋತಾಪುರಿ ಮಾವು ಬೆಲೆ ಕುಸಿತ – ಆಂಧ್ರ ಸಿಎಂಗೆ ಸಿದ್ದರಾಮಯ್ಯ ಪತ್ರ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?