Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಪಂಚಮಸಾಲಿ ಹೋರಾಟ ಅನೇಕ ಸಮುದಾಯಗಳಿಗೆ ನ್ಯಾಯ ದೊರಕಿಸಿ ಕೊಟ್ಟಿದೆ – ಜಯ ಮೃತ್ಯುಂಜಯ ಸ್ವಾಮೀಜಿ

Public TV
Last updated: March 30, 2023 6:34 pm
Public TV
Share
3 Min Read
JAYAMRUTFYUNJAYA SWAMIJI
SHARE

ಬೆಂಗಳೂರು: ಲಿಂಗಾಯತ ಪಂಚಮಸಾಲಿ ಹೋರಾಟವು ಅನೇಕ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡುವಲ್ಲಿ ಯಶಸ್ವಿಯಾಗಿದೆ. ಈ ಹೋರಾಟಕ್ಕೆ ಮೊದಲ ಜಯವನ್ನು ತಂದುಕೊಡುವ ಕೆಲಸವನ್ನು ಮುಖ್ಯಮಂತ್ರಿಗಳು ಮಾಡಿದ್ದಾರೆ ಎಂದು ಜಯ ಮೃತ್ಯಂಜಯ ಸ್ವಾಮೀಜಿ (Basava Jaya Mruthyunjaya Swamiji) ಸಂತೋಷ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ (Bengaluru) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು (Basavaraj Bommai) ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ (Reservation) ದೊರಕಿರುವುದು ಈ ನಾಡಿನ ಜನತೆಯಲ್ಲಿ ಮತ್ತು ನಮ್ಮ ಸಮುದಾಯದ ಎಲ್ಲಾ ಬಂಧುಗಳಲ್ಲಿ ಒಂದು ಹರ್ಷ ಮತ್ತು ಸಂತೋಷವನ್ನು ಉಂಟುಮಾಡಿದೆ. ಎಲ್ಲಾ ಲಿಂಗಾಯತ ಪಂಚಮಸಾಲಿ, ದೀಕ್ಷ ಲಿಂಗಾಯತರ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗವನ್ನು ಕಲ್ಪಿಸಬೇಕು. ಎಲ್ಲಾ ಲಿಂಗಾಯತ ಒಳಪಂಗಡಗಳನ್ನು ಒಬಿಸಿ (OBC) ಮೀಸಲಾತಿ ಪಟ್ಟಿಯಲ್ಲಿ ಸೇರಿಸಬೇಕು ಎಂದು ನಾವೆಲ್ಲರೂ ಕೂಡಿ ಕಳೆದ ಎರಡೂವರೆ ವರ್ಷಗಳ ಕಾಲ ಐತಿಹಾಸಿಕವಾದ ಚಳುವಳಿಯನ್ನು ಮಾಡಿದ್ದೇವೆ ಎಂದರು. ಇದನ್ನೂ ಓದಿ: ಬೇಲೂರಿನ ರಥೋತ್ಸವದ ವೇಳೆ ಕುರಾನ್ ಪಠಣ ಮಾಡಬೇಕೆಂದು ಎಲ್ಲೂ ಇಲ್ಲ: ರಾಜ್ಯ ಪುರಾತತ್ವ ಇಲಾಖೆ 

hbl jaya mrutyunjaya swamiji

ಈ ನಿರಂತರ ಹೋರಾಟ ಮತ್ತು ಪಾದಯಾತ್ರೆಯ ಪರಿಣಾಮ ಪ್ರಧಾನ ಮಂತ್ರಿಗಳು ನಮ್ಮ ಹಕ್ಕನ್ನು ಮತ್ತು ನೋವನ್ನು ಕೇಳಿ ಬಸವರಾಜ ಬೊಮ್ಮಾಯಿಯವರಿಗೆ ನಿರ್ದೇಶನ ಮಾಡಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಚಳುವಳಿಗೆ ನ್ಯಾಯವನ್ನು ದೊರಕಿಸಿ ಕೊಟ್ಟಿದ್ದಾರೆ. ನಮಗಾಗಿ ಪ್ರತ್ಯೇಕ 2ಡಿ ಗ್ರೂಪನ್ನು ನಿರ್ಮಾಣ ಮಾಡಿದ್ದಾರೆ. ಈ ಮೀಸಲಾತಿ ಕಾರಣದಿಂದಾಗಿ ದಲಿತ ಸಮುದಾಯದ ಮೀಸಲಾತಿಯೂ ಹೆಚ್ಚಳವಾಗಿದೆ. ಅಲ್ಲದೇ ಅನೇಕ ಸಮುದಾಯಗಳಿಗೆ ಸಾಮಾಜಿಕ ನ್ಯಾಯವನ್ನು ದೊರಕಿಸಿ ಕೊಡಲು ನಮ್ಮ ಹೋರಾಟ ಸಾಕ್ಷಿಯಾಗಿದೆ. ಇದನ್ನೂ ಓದಿ: ಧಮ್ ಇದ್ರೆ ಡಿಕೆಶಿ ಮೀಸಲಾತಿ ನಿರ್ಧಾರವನ್ನು ವಾಪಸ್ ಪಡೆಯಲಿ – ಯತ್ನಾಳ್ ಸವಾಲ್

ಮಾರ್ಚ್‌ 24ನೇ ತಾರೀಕು ಸಚಿವ ಸಂಪುಟ ಸಭೆಯಾದ ಬಳಿಕ, ನಮಗೆ ರಾಜ್ಯದ ಆದೇಶ ಪತ್ರ ಬಂದ ಮೇಲೆಯೇ ಈ ಹೋರಾಟಕ್ಕೆ ವಿರಾಮವನ್ನು ನೀಡುತ್ತೇವೆ ಎಂದು ಹೇಳಿದ್ದೆವು. ಅದರ ಜವಾಬ್ದಾರಿಯನ್ನು ಹೋರಾಟ ಸಮಿತಿಯ ಅಧ್ಯಕ್ಷರಾಗಿರುವ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ವಹಿಸಿದ್ದರು. ಈ ಹಿನ್ನೆಯಲ್ಲಿ 27ನೇ ತಾರೀಕಿಗೆ ಕರ್ನಾಟಕ ಸರ್ಕಾರ ನಮಗೆ ರಾಜ್ಯದ ಆದೇಶ ಪತ್ರವನ್ನು ನೀಡಿದೆ. ಈ ಮೂಲಕವಾಗಿ ಐತಿಹಾಸಿಕವಾದ ಲಿಂಗಾಯತ ಪಂಚಮಸಾಲಿ ಹೋರಾಟಕ್ಕೆ ಮೊದಲ ಜಯವನ್ನು ತಂದುಕೊಡುವ ಕೆಲಸವನ್ನು ಮುಖ್ಯಂತ್ರಿಗಳು ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದನ್ನೂ ಓದಿ: 4ನೇ ಬಾರಿ ಗೆಲ್ತಾರಾ ಸುಧಾಕರ್‌? – ಬ್ರೇಕ್ ಹಾಕಲು ಜೆಡಿಎಸ್, ಕಾಂಗ್ರೆಸ್ ಪೈಪೋಟಿ 

JAYA MRUTYUNJAYA SWAMIJI 1

12ನೇ ಶತಮಾನದಲ್ಲಿ ಬಸವಣ್ಣನವರು ದುಡಿಯುವವರಿಗಾಗಿ ಧಾರ್ಮಿಕ ಸ್ವತಂತ್ರವನ್ನು ನೀಡಿದ್ದರು. ಅದೇ ರೀತಿ ಮೋದಿ (Narendra Modi) ಹಾಗೂ ಅಮಿತ್ ಶಾ (Amit Shah) ಅವರ ಮಧ್ಯಪ್ರವೇಶದಿಂದ ಈ ಹೋರಾಟ ಮೊದಲ ಜಯವನ್ನು ಸಾಧಿಸಿದೆ. ಈ ಜಯವನ್ನು ನೀಡಲು ಕಾರಣಕರ್ತರಾದ ಪ್ರಧಾನಮಂತ್ರಿಗಳು, ಅಮಿತ್ ಶಾ, ಮುಖ್ಯಮಂತ್ರಿಗಳಿಗೆ, ಕೇಂದ್ರ ಸರ್ಕಾರ ಹಾಗೂ ನಮ್ಮ ನಡುವೆ ಸೇತುವೆಯಾಗಿ ಕೆಲಸ ಮಾಡಿದಂತಹ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಹಾಗೂ ಎಲ್ಲಾ ಜನಪ್ರತಿನಿಧಿಗಳಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಎಂದರು. ಇದನ್ನೂ ಓದಿ: ರಾಕೇಶ್‌ನನ್ನು ಶಾಸಕನಾಗಿ ಕಾಣಲು ಬಯಸಿದ್ದ ಸಿದ್ದು – ಆದರೆ ವಿಧಿ ನಿಯಮವೇ ಬೇರೆ ಇತ್ತು!

ಏಪ್ರಿಲ್ 1ರಂದು ವಿಧಾನಸೌಧದ ಮುಂಭಾಗದಲ್ಲಿರುವ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆ ಮೂಲಕವಾಗಿ ರಾಜ್ಯದ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಈ ಮೀಸಲಾತಿಯ ಅರಿವನ್ನು ಮೂಡಿಸುವ ಕೆಲಸವನ್ನು ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ದೇವೇಗೌಡರ ಮಕ್ಕಳು ಜಗಳ ಆಡ್ತಾರೆ ಅಂದರೆ ನೀವು ಸುಳ್ಳಾಗ್ತೀರಾ: ಸಿ.ಎಂ ಇಬ್ರಾಹಿಂ

ಅಧಿಕಾರಕ್ಕೆ ಬಂದ ಬಳಿಕ ಮೀಸಲಾತಿಯನ್ನು ಕಿತ್ತು ಹಾಕುತ್ತೇವೆ ಎಂಬ ಕಾಂಗ್ರೆಸ್ (Congress) ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಈ ರೀತಿಯಾದ ಹೇಳಿಕೆಯನ್ನು ನೀಡಿರುವುದು ತಪ್ಪು. ಇಂದು ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ನ್ಯಾಯ ದೊರಕಿದೆ. ಈ ರೀತಿಯಾದ ಹೇಳಿಕೆ ಸರಿಯಲ್ಲ ಎಂದರು. ಇದನ್ನೂ ಓದಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ-ಕಾಂಗ್ರೆಸ್ ಫೈಟಾ, ಬಂಟ-ಬಿಲ್ಲವ ಫೈಟಾ?

TAGGED:Amit ShahBasangouda Patil YatnalBasava Jaya Mruthyunjaya SwamijiBasavaraj Bommaibengalurucongressnarendra modireservationshobha karandlajeಅಮಿತ್ ಶಾಕಾಂಗ್ರೆಸ್ಜಯ ಮೃತ್ಯುಂಜಯ ಸ್ವಾಮೀಜಿನರೆಂದ್ರ ಮೋದಿಬಸನಗೌಡ ಪಾಟೀಲ ಯತ್ನಾಳ್ಬಸವರಾಜ ಬೊಮ್ಮಾಯಿಬೆಂಗಳೂರುಮೀಸಲಾತಿಶೋಭಾ ಕರಂದ್ಲಾಜೆ
Share This Article
Facebook Whatsapp Whatsapp Telegram

Cinema Updates

Son of Sardaar
ಸನ್ ಆಫ್ ಸರ್ದಾರ್‌ -2 ರಿಲೀಸ್ ಡೇಟ್ ಮುಂದೂಡಿಕೆ
Bollywood Cinema Latest Top Stories
Darshan Devil 3
ʻಡೆವಿಲ್ʼ ಮೋಷನ್ ಪೋಸ್ಟರ್‌ ರಿಲೀಸ್‌ – ಖದರ್‌ ಲುಕ್‌ನಲ್ಲಿ ದರ್ಶನ್‌, ಡಿಬಾಸ್‌ ಫ್ಯಾನ್ಸ್‌ಗೆ ಹಬ್ಬ
Cinema Latest Main Post Sandalwood
Dalapathi Vijay
ಸಂಕ್ರಾಂತಿಗೆ ವಿಜಯ್ ದಳಪತಿ-ಶಿವಕಾರ್ತಿಕೇಯನ್ ಮುಖಾಮುಖಿ
Cinema Latest South cinema Top Stories
shah rukh khan small
ಶೂಟಿಂಗ್ ವೇಳೆ ನಟ ಶಾರುಖ್ ಖಾನ್‌ಗೆ ಗಾಯ
Bollywood Cinema Latest Main Post
fish venkat
ಕಿಡ್ನಿ ವೈಫಲ್ಯದಿಂದ ಖ್ಯಾತ ಖಳನಟ ಫಿಶ್ ವೆಂಕಟ್‌ ನಿಧನ
Cinema Latest South cinema Top Stories

You Might Also Like

manikrao kokate rummy game
Latest

ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಗೇಮ್‌ ಆಡಿದ ಕೃಷಿ ಸಚಿವ – ವಿಪಕ್ಷಗಳಿಂದ ಭಾರಿ ಟೀಕೆ

Public TV
By Public TV
1 minute ago
Karwar Tree Fall
Districts

ಕಾರವಾರ | ಕಾರಿನ ಮೇಲೆ ಉರುಳಿ ಬಿದ್ದ ಮರ – ಮಹಿಳೆ ಸಾವು

Public TV
By Public TV
27 minutes ago
Dinesh Gundurao
Bengaluru City

ಕೆಲವರು ಉದ್ದೇಶಪೂರ್ವಕವಾಗಿ ಧರ್ಮಸ್ಥಳದ ತೇಜೋವಧೆ ಮಾಡುತ್ತಿರಬಹುದು: ದಿನೇಶ್‌ ಗುಂಡೂರಾವ್‌

Public TV
By Public TV
38 minutes ago
Dharwad Dominos Pizza Fine
Court

ವೆಜ್ ಬದಲು ಚಿಕನ್ ಪಿಜ್ಜಾ ಕಳಿಸಿದ ಡಾಮಿನೋಸ್ – 50,000 ರೂ. ದಂಡ

Public TV
By Public TV
39 minutes ago
prabhu chavan
Bidar

ನನ್ನನ್ನು ಮುಗಿಸಬೇಕು ಅಂತ ಭಗವಂತ್‌ ಖೂಬಾ ಪಿತೂರಿ ಮಾಡಿದ್ದಾರೆ: ಪ್ರಭು ಚೌಹಾಣ್‌ ಗಂಭೀರ ಆರೋಪ

Public TV
By Public TV
53 minutes ago
Ballari Traffic Police arrests young man for drinking beer on bike
Bellary

ಬೈಕ್‌ನಲ್ಲಿ ಬಿಯರ್‌ ಕುಡಿದು ಹುಚ್ಚಾಟ – ಆರೋಪಿ ಅರೆಸ್ಟ್‌

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?