Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Sports | Cricket | IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

Cricket

IPL 2023: ರಾಜಪಕ್ಸ ಫಿಫ್ಟಿ, ಅರ್ಷ್‌ದೀಪ್‌ ಬೆಂಕಿ ಬೌಲಿಂಗ್‌ – ಮಳೆ ನಡುವೆಯೂ ಪಂಜಾಬ್‌ಗೆ 7 ರನ್‌ ರೋಚಕ ಜಯ

Public TV
Last updated: April 1, 2023 10:25 pm
Public TV
Share
4 Min Read
PBKSvsKKR
SHARE

ಮೊಹಾಲಿ: ಭಾನುಕ ರಾಜಪಕ್ಷ ಭರ್ಜರಿ ಬ್ಯಾಟಿಂಗ್‌ ಹಾಗೂ ಅರ್ಷ್‌ದೀಪ್‌ ಸಿಂಗ್‌ ಬೆಂಕಿ ಬೌಲಿಂಗ್‌ ದಾಳಿಯ ಪರಿಣಾಮ ಮಳೆಯ ನಡುವೆಯೂ ಪಂಜಾಬ್‌ ಕಿಂಗ್ಸ್‌ (Punjab Kings), ಕೆಕೆಆರ್‌ (KKR) ವಿರುದ್ಧ 7 ರನ್‍ಗಳ ರೋಚಕ ಜಯ ಸಾಧಿಸಿದೆ.

ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಸುಧಾರಣೆಯಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ಕೊನೆಯ 24 ಎಸೆತಗಳಲ್ಲಿ 55 ರನ್‌ ಗಳ ಅಗತ್ಯವಿತ್ತು. ಆದರೆ ಮಳೆ ಅಡ್ಡಿಯಾದ್ದರಿಂದ ಡಕ್ವರ್ಥ್ ಲೂಯಿಸ್‌ ನಿಯಮ (DLS Method) ಅನ್ವಯಿಸಲಾಯಿತು. ಈ ನಿಯಮದಂತೆ ಪಂಜಾಬ್‌ 7 ರನ್‌ಗಳ ರೋಚಕ ಜಯ ಸಾಧಿಸಿತು.

Andre Russell

ಶನಿವಾರ ಮೊಹಾಲಿಯ ಐಎಸ್ ಬಿಂದ್ರಾ ಸ್ಟೇಡಿಯಂನಲ್ಲಿ ನಡೆದ 2023ರ ಐಪಿಎಲ್‌ನ (IPL 2023) 2ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ 20 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ ಭರ್ಜರಿ 191 ರನ್‌ ಕಲೆಹಾಕಿತ್ತು. 192 ರನ್‌ಗಳ ಬೃಹತ್‌ ಮೊತ್ತದ ಗುರಿ ಬೆನ್ನತ್ತಿದ್ದ ಕೋಲ್ಕತ್ತಾ ನೈಟ್‌ರೈಡರ್ಸ್‌ ಮಳೆಯ ಕಾರಣ ನಿಗದಿತ 16 ಓವರ್‌ಗಳಲ್ಲಿ 146 ರನ್‌ ಗಳಿಸಿ ಸೋಲೊಪ್ಪಿಕೊಂಡಿತು.

ಚೇಸಿಂಗ್‌ ಆರಂಭಿಸಿದ ಕೋಲ್ಕತ್ತಾ ನೈಟ್‌ರೈಡರ್ಸ್‌ ಭರ್ಜರಿ ಆರಂಭದಲ್ಲೇ ಪ್ರಮುಖ ವಿಕೆಟ್‌ ಕಳೆದುಕೊಂಡು ಸಂಕಷ್ಟಕ್ಕೀಡಾಯಿತು. ಅಗ್ರಕ್ರಮಾಂಕದ ಬ್ಯಾಟರ್‌ಗಳು ಪಂಜಾಬ್ ‌ಬೌಲರ್‌ಗಳ ದಾಳಿಗೆ ತತ್ತರಿಸಿದರು. ಇದನ್ನೂ ಓದಿ: ಬಣ್ಣದ ಉಡುಗೆಯಲ್ಲಿ ಮಿರಿಮಿರಿ ಮಿಂಚಿದ ರಶ್ಮಿಕಾ, ತಮನ್ನಾ – ಇಲ್ಲಿದೆ ಕಣ್ಮನ ಸೆಳೆಯುವ Photos

Andre Russell Venkatesh Iyer

ಆರಂಭಿಕರಾಗಿ ಕಣಕ್ಕಿಳಿದ ಮಂದೀಪ್‌ ಸಿಂಗ್‌ 4 ಎಸೆತಗಳಲ್ಲಿ ಕೇವಲ 2 ರನ್‌ ಗಳಿಸಿದರೆ, ರಹಮಾನುಲ್ಲಾ ಗುರ್ಬಾಜ್ 16 ಎಸೆತಗಳಲ್ಲಿ 22 ರನ್‌ (3 ಬೌಂಡರಿ, 1 ಸಿಕ್ಸರ್‌) ಬಾರಿಸಿ ಪೆವಿಲಿಯನ್‌ ಸೇರಿದರು. ತಾಳ್ಮೆಯ ಆಟವಾಡಿದ ನಾಯಕ ನಿತೀಶ್‌ ರಾಣಾ (Nitish Rana) 17 ಎಸೆತಗಳಲ್ಲಿ 3 ಬೌಂಡರಿ 1 ಸಿಕ್ಸರ್‌ನೊಂದಿಗೆ 24 ರನ್‌ ಗಳಿಸಿದರು. ರಿಂಕು ಸಿಂಗ್‌, ಅನುಕುಲ್‌ ರಾಯ್‌ ತಲಾ 4 ರನ್‌ ಗಳಿಸಿದರು. ಉಳಿದಂತೆ ಯಾವೊಬ್ಬ ಆಟಗಾರರು ಸ್ಥಿರವಾಗಿ ನಿಲ್ಲದ ಕಾರಣ ಕೆಕೆಆರ್‌ ತಂಡ ಮೊದಲ ಪಂದ್ಯದಲ್ಲೇ ಸೋಲನ್ನು ಎದುರಿಸಬೇಕಾಯಿತು.

IPL 2023 Shikhar Dhawan

ಮಧ್ಯಮ ಕ್ರಮಾಂಕದಲ್ಲಿ ಒಂದಾದ ವೆಂಕಟೇಶ್‌ ಅಯ್ಯರ್ (Venkatesh Iyer) ಹಾಗೂ ಆಂಡ್ರೆ ರಸೆಲ್ (Andre Russell) ಸ್ಫೋಟಕ ಬ್ಯಾಟಿಂಗ್‌ ನಡೆಸುವ ಮೂಲಕ ತಂಡಕ್ಕೆ ನೆರವಾದರು. ಇದರಿಂದ ಕೆಕೆಆರ್‌ಗೆ ಮತ್ತೆ ಗೆಲುವಿನ ಆಸೆ ಚಿಗುರಿತ್ತು. ಆದರೆ, ಸ್ಯಾಮ್‌ ಕರ್ರನ್‌, ಅರ್ಷ್‌ದೀಪ್‌ ಸಿಂಗ್‌ ಇವರಿಬ್ಬರ ಆಟಕ್ಕೆ ಬ್ರೇಕ್‌ ಹಾಕಿ ಪೆವಿಲಿಯನ್‌ಗೆ ದಾರಿ ತೋರಿಸಿದರು. ವೆಂಕಟೇಶ್‌ ಅಯ್ಯರ್‌ 28 ಎಸೆತಗಳಲ್ಲಿ 1 ಸಿಕ್ಸರ್‌, 3 ಬೌಂಡರಿ ಸಹಿತ 34 ರನ್‌ ಗಳಿಸಿದರೆ, ರಸೆಲ್‌ 19 ಎಸೆತಗಳಲ್ಲಿ 2 ಸಿಕ್ಸರ್‌, 3 ಬೌಂಡರಿಯೊಂದಿಗೆ 35 ರನ್‌ ಚಚ್ಚಿ ಔಟಾದರು. ಕೊನೆಯಲ್ಲಿ ಶಾರ್ದೂಲ್‌ ಠಾಕೂರ್‌ 3 ಎಸೆತಗಳಲ್ಲಿ 8 ರನ್‌ ಹಾಗೂ ಸುನೀಲ್‌ ನರೇನ್‌ 2 ಎಸೆತಗಳಲ್ಲಿ 7 ರನ್‌ ಗಳಿಸಿ ಕ್ರೀಸ್‌ನಲ್ಲಿದ್ದರು. ಈ ವೇಳೆ ಮಳೆ ಅಬ್ಬರಿಸಿದ್ದರಿಂದ ಡಕ್ವರ್ಥ್‌ ಲೂಯಿಸ್‌ ನಿಯಮ ಅನ್ವಯಿಸಲಾಯಿತು. ಇದರಿಂದ ಗೆಲುವಿನ ನಿರೀಕ್ಷೆಯಲ್ಲಿದ್ದ ಕೆಕೆಆರ್‌ಗೆ ನಿರಾಸೆಯುಂಟಾಯಿತು.

IPL 2023 PBKSvsKKR 4

ಪಂಜಾಬ್‌ ಕಿಂಗ್ಸ್‌ ಪರ ಅರ್ಷ್‌ದೀಪ್‌ ಸಿಂಗ್‌ 3 ವಿಕೆಟ್‌ ಪಡೆದರೆ, ಸ್ಯಾಮ್‌ ಕರ್ರನ್‌, ನಾಥನ್ ಎಲ್ಲಿಸ್, ಸಿಕಂದರ್‌ ರಾಜಾ ಹಾಗೂ ರಾಹುಲ್‌ ಚಹಾರ್‌ ತಲಾ ಒಂದೊಂದು ವಿಕೆಟ್‌ ಪಡೆದರು. ಇದನ್ನೂ ಓದಿ: ಕೊನೆಯಲ್ಲಿ ಸಿಕ್ಸರ್‌, ಬೌಂಡರಿ – ಚೆನ್ನೈಗೆ ಗುನ್ನ ಕೊಟ್ಟ ಗುಜರಾತ್‌; ಹಾಲಿ ಚಾಂಪಿಯನ್ಸ್‌ಗೆ ರೋಚಕ ಜಯ

ಇದಕ್ಕೂ ಮುನ್ನ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ ಕಿಂಗ್ಸ್ ತಂಡ ಭಾನುಕ ರಾಜಪಕ್ಸ (Bhanuka Rajapaksa ಮತ್ತು ನಾಯಕ ಶಿಖರ್ ಧವನ್ ಭರ್ಜರಿ ಬ್ಯಾಟಿಂಗ್‌ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 191 ರನ್‌ ಕಲೆಹಾಕಿತು.

IPL 2023 PBKSvsKKR 2

ಭಾನುಕ ರಾಜಪಕ್ಸ ಕೇವಲ 32 ಎಸೆತಗಳಲ್ಲಿ 50 ರನ್ (5 ಬೌಂಡರಿ, 2 ಸಿಕ್ಸರ್‌) ಬಾರಿಸಿ ವಿಕೆಟ್ ಒಪ್ಪಿಸಿದರು. ಇನ್ನೂ ನಾಯಕ ಶಿಖರ್ ಧವನ್ 29 ಎಸೆತಗಳಲ್ಲಿ 6 ಬೌಂಡರಿ ಸಮೇತ 40 ರನ್ ಗಳಿಸಿ ಔಟಾದರು. ನಂತರ ಬಂದ ಜಿತೇಶ್ ಶರ್ಮಾ 11 ಎಸೆತಗಳಲ್ಲಿ 21 ರನ್‌ಗಳ (1 ಬೌಂಡರಿ, 2 ಸಿಕ್ಸರ್‌) ಕೊಡುಗೆ ನೀಡಿದರು. ಇದೇ ವೇಳೆ ಜಿಂಬಾಬ್ವೆ ಆಲ್‌ರೌಂಡರ್ ಸಿಕಂದರ್ ರಾಜ 13 ಎಸೆತಗಳಲ್ಲಿ 16 ರನ್ ಗಳಿಸಿದರು.

ಕೊನೆಯಲ್ಲಿ ಐಪಿಎಲ್‌ನ ದುಬಾರಿ ಆಟಗಾರ ಸ್ಯಾಮ್ ಕರ್ರನ್ (Sam Curran) 17 ಎಸೆತಗಳಲ್ಲಿ 2 ಸಿಕ್ಸರ್ ಸಮೇತ 26 ರನ್ ಬಾರಿಸಿದರೆ, ಶಾರೂಖ್ ಖಾನ್ 11 ರನ್ ಗಳಿಸಿ ತಂಡದ ಮೊತ್ತ 190ರ ಗಡಿ ದಾಟಿಸುವಲ್ಲಿ ಯಶಸ್ವಿಯಾದರು.

Sam Curran

ಬೌಲಿಂಗ್‌ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪರ ಟಿಮ್ ಸೌಥಿ 4 ಓವರ್‌ಗಳಲ್ಲಿ 54 ರನ್ ನೀಡಿ 2 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 4 ಓವರ್‌ಗಳಲ್ಲಿ 26 ರನ್ ನೀಡಿ 1 ವಿಕೆಟ್ ಪಡೆದರು. ಇನ್ನೂ ಉಮೇಶ್ ಯಾದವ್ 4 ಓವರ್‌ಗಳಲ್ಲಿ 27 ರನ್ ನೀಡಿ 1 ವಿಕೆಟ್ ಪಡೆದರೆ, ಸುನಿಲ್ ನರೈನ್ 4 ಓವರ್‌ಗಳಲ್ಲಿ 40 ರನ್ ನೀಡಿ 1 ವಿಕೆಟ್ ಕಿತ್ತರು.

TAGGED:Andre RussellBhanuka RajapaksaIPL 2023Nitish RanaPBKSvsKKRPunjab KingsSam CurranShikhar DhawanVenkatesh Iyerಆಂಡ್ರೆ ರಸೆಲ್‌ಕೆಕೆಆರ್ನಿತೀಶ್ ರಾಣಾಪಂಜಾಬ್ ಕಿಂಗ್ಸ್ಭಾನುಕ ರಾಜಪಕ್ಷಸ್ಯಾಮ್ ಕರ್ರನ್
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
3 seconds ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
19 minutes ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
29 minutes ago
WhatsApp
Court

ಡಿಜಿಟಲ್ ಅರೆಸ್ಟ್ ತೊಡಗಿದ್ದ 9,400 ವಾಟ್ಸಪ್‌ ಖಾತೆಗಳು ಡಿಲೀಟ್‌

Public TV
By Public TV
35 minutes ago
siddaramaiah dk shivakumar car
Bengaluru City

ಒಂದೇ ಕಾರ್‌ನಲ್ಲಿ ಸಿಎಂ-ಡಿಸಿಎಂ ಪ್ರಯಾಣ; ಇಬ್ಬರು ನಾಯಕರಿಂದ ಅಚ್ಚರಿ ನಡೆ

Public TV
By Public TV
56 minutes ago
SN Narayanaswamy Bangarpet MLA
Bengaluru City

ಮೇ 15ರೊಳಗೆ ಸಂಪುಟ ಪುನರ್ ರಚನೆಯ ಸುದ್ದಿ ಸಿಗಲಿದೆ: ಬಂಗಾರಪೇಟೆ ನಾರಾಯಣಸ್ವಾಮಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?