Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Bengaluru City

ರಾಹುಲ್ ಗಾಂಧಿ ಸಂಸದ ಸ್ಥಾನ ಅನರ್ಹಕ್ಕೆ ಅಮೆರಿಕ, ಜರ್ಮನಿ ಸ್ಪಂದನೆ ಅನಗತ್ಯ: ಕೇಂದ್ರ ಸಚಿವ ಜೈಶಂಕರ್

Public TV
Last updated: April 2, 2023 5:03 pm
Public TV
Share
2 Min Read
Jaishankar 1
SHARE

ಬೆಂಗಳೂರು: ರಾಹುಲ್ ಗಾಂಧಿ (Rahul Gandhi) ಸಂಸದ ಸ್ಥಾನದಿಂದ ಅನರ್ಹಗೊಂಡ ವಿಚಾರಕ್ಕೆ ಅಮೆರಿಕ (America) ಹಾಗೂ ಜರ್ಮನಿ (Germany) ನೀಡಿರುವ ಪ್ರತಿಕ್ರಿಯೆಗೆ ವಿದೇಶಾಂಗ ಸಚಿವ ಡಾ.ಎಸ್ ಜೈಶಂಕರ್ (S.Jaishankar) ಕಿಡಿಕಾರಿದ್ದಾರೆ.

ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ (Tejasvi Surya) ಹಾಗೂ ಬೆಂಗಳೂರು (Bengaluru) ಕೇಂದ್ರ ಸಂಸದ ಪಿ.ಸಿ ಮೋಹನ್ ನೇತೃತ್ವದಲ್ಲಿ ಕಬ್ಬನ್ ಪಾರ್ಕ್ ನಲ್ಲಿ 500 ಕ್ಕಿಂತಲೂ ಅಧಿಕ ಯುವ ಮತದಾರರು ಹಾಗೂ ಸಾರ್ವಜನಿಕರೊಂದಿಗೆ ಆಯೋಜನೆಗೊಂಡಿದ್ದ Meet and Greet ಸಂವಾದದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದೇ ಸಂದರ್ಭದಲ್ಲಿ ಪಶ್ಚಿಮದ ರಾಷ್ಟ್ರಗಳು ತಮ್ಮ ಹಿತಾಸಕ್ತಿಗೆ ಅನುಗುಣವಾದ ಅಭಿಪ್ರಾಯಗಳನ್ನು ಇತರ ದೇಶಗಳ ಮೇಲೆ ಹೇರುವುದನ್ನು ನಿಲ್ಲಿಸಬೇಕು ಎಂದು ಕಟುವಾಗಿ ಟೀಕಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರೀಯ ಹೆದ್ದಾರಿಯಲ್ಲೇ ಬಿಜೆಪಿ ಮುಖಂಡನ ಗುಂಡಿಕ್ಕಿ ಹತ್ಯೆ

ಪಾಶ್ಚಿಮಾತ್ಯ ರಾಷ್ಟ್ರಗಳು ಹಿಂದಿನಿಂದಲೂ ಬೇರೆ ದೇಶಗಳ ಸಾರ್ವಭೌಮತ್ವ, ಸಾಂವಿಧಾನಿಕ ಅಧಿಕಾರಗಳ ಕುರಿತಾದ ಆಂತರಿಕ ವಿಷಯಗಳ ಮೇಲೆ ತಮ್ಮ ಅಭಿಪ್ರಾಯವೇ ಶ್ರೇಷ್ಠ ಎಂಬ ಮನಸ್ಥಿತಿಯಿಂದ ಹೊರಬಂದಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಬೇರೆ ರಾಷ್ಟ್ರಗಳೂ ಕೂಡ ಪಶ್ಚಿಮದ ದೇಶಗಳ ಕುರಿತಾಗಿ ಸಮಾನ ದೃಷ್ಟಿಕೋನದಿಂದ ಪ್ರತಿಕ್ರಿಯೆ ನೀಡಲು ಆರಂಭಿಸುವುದು ಸಾಮಾನ್ಯ. ಹಿಂದೆಂದಿಗಿಂತಲೂ ಪ್ರಸ್ತುತ ಸಂದರ್ಭದಲ್ಲಿ ಇಂತಹ ಮನಸ್ಥಿತಿಯನ್ನು ವಿಶ್ವದಾದ್ಯಂತ ನಾವು ಕಾಣಬಹುದು ಎಂದಿದ್ದಾರೆ.

Jaishankar

ನಮ್ಮಲ್ಲಿಯೇ ಇರುವ ಕೆಲವರು ಪಶ್ಚಿಮದ ರಾಷ್ಟ್ರಗಳಿಗೆ ತೆರಳಿ ಭಾರತದ ಕುರಿತಾಗಿ ಅವಮಾನಕರ ಅಭಿಪ್ರಾಯಗಳನ್ನು ವಿವರಿಸಿ, ಆಹ್ವಾನ ನೀಡಿರುವುದರ ಪರಿಣಾಮದಿಂದ ಮಾತ್ರ ಇಂತಹ ಹೇಳಿಕೆಗಳು ಹೊರಬರಲು ಸಾಧ್ಯ. ಈ ರೀತಿಯ ಮನಸ್ಥಿತಿ ಇರುವ ದೇಶದ ಒಳಗಿನ ಹಾಗೂ ಹೊರಗಿನ ಇಬ್ಬರ ಮೂಲ ಸಮಸ್ಯೆಯನ್ನು ಪರಿಹರಿಸುವ ಕಾರ್ಯ ನಡೆಯಲೇಬೇಕಿದೆ ಎಂದಿದ್ದಾರೆ.

ಉಚಿತ ಕೊಡುಗೆಗಳ ಕುರಿತಾಗಿ, ಇತ್ತೀಚೆಗೆ ಉಚಿತ ಕೊಡುಗೆಗಳನ್ನು ನೀಡುವ ಪರಿಪಾಠ ದೆಹಲಿಯಿಂದ ಶುರುವಾಗಿ ದೇಶದ ಇತರ ಭಾಗಗಳಿಗೂ ಹಬ್ಬುತ್ತಿರುವ ಕ್ರಮ ಆತಂಕಕಾರಿ. ಅಂತಹ ಸರ್ಕಾರಗಳಿಗೆ ಸಂಪನ್ಮೂಲ ಕ್ರೋಢೀಕರಣ ದೊಡ್ಡ ಸಮಸ್ಯೆ ಆಗುತ್ತದೆ. ತಾತ್ಕಾಲಿಕ ರಾಜಕೀಯ ಲಾಭದ ಸಲುವಾಗಿ ಮಾಡುವ ಇಂತಹ ಯೋಜನೆಗಳಿಗೆ ಯಾರೋ ಒಬ್ಬರು ಬೆಲೆ ತೆರಬೇಕಾಗುತ್ತದೆ. ಒಂದೆಡೆ ಉಚಿತ ನೀಡುವಾಗ ಬೇರೆ ಕಡೆಯಿಂದ ಕ್ರೋಢೀಕರಣ ಮಾಡಲೇಬೇಕು. ಜವಾಬ್ದಾರಿ ರಹಿತ ಇಂತಹ ಉಚಿತ ಕೊಡುಗೆಗಳ ಕಾರ್ಯಕ್ರಮಗಳಿಂದ ದೇಶದ ಬೊಕ್ಕಸಕ್ಕೆ ಉಂಟಾಗುವ ಅಪಾರ ಹಾನಿ ಎಂದಿದ್ದಾರೆ.

ಪ್ರಸ್ತುತ ಜಿ 20 ಆತಿಥೇಯ ರಾಷ್ಟ್ರವಾಗಿರುವ ಭಾರತವು, ಇದುವರೆಗೆ ಜಿ 20 ಸದಸ್ಯ ರಾಷ್ಟ್ರವಲ್ಲದ ದೇಶಗಳನ್ನು ಸಂಪರ್ಕಿಸಿ, ಅವುಗಳು ಎದುರಿಸುತ್ತಿರುವ ಸಮಸ್ಯೆಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಕಾರ್ಯಯೋಜನೆ ಹಮ್ಮಿಕೊಂಡಿರುವುದು ಶ್ಲಾಘನೀಯ. ಮುಂಚೆ ಇಂತಹ ಅತೀ ದೊಡ್ಡ ಸಮಾವೇಶಗಳನ್ನು ಆಯ್ದ ಕೇವಲ 2-3 ನಗರಗಳಲ್ಲಿ ಮಾತ್ರ ಹಮ್ಮಿಕೊಳ್ಳಲಾಗಿತ್ತು. ಆದರೆ, ಈ ಬಾರಿ ದೇಶದ 60 ಇತರ ನಗರಗಳಲ್ಲಿ ಸಮಾವೇಶ ಆಯೋಜಿಸಿ ಇತರ ರಾಜ್ಯಗಳಿಗೂ ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಭಾರತದ ಅಭಿವೃದ್ಧಿಗೆ ಪ್ರತೀ ರಾಜ್ಯ, ನಗರಗಳು ಕೂಡ ಗಣನೀಯ ಕೊಡುಗೆ ನೀಡುತ್ತಿವೆ. ಜಾಗತಿಕ ವಿದ್ಯಮಾನಗಳನ್ನು ಇತರ ನಗರಗಳಿಗೂ ಪರಿಚಯಿಸುವ ಉದ್ದೇಶದಿಂದ ಈ ರೀತಿ ಎಲ್ಲೆಡೆ ಜಿ 20 ಸಮಾವೇಶಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಜಿ 20 ಸಮಾವೇಶಕ್ಕೆ ಜಗತ್ತಿನ ವಿವಿಧೆಡೆಯಿಂದ ಆಗಮಿಸುವ 200ಕ್ಕಿಂತಲೂ ಅಧಿಕ ಅಗ್ರಗಣ್ಯ ವ್ಯಕ್ತಿಗಳಿಗೆ ಈ ದೇಶದ ವೈವಿಧ್ಯಮಯ ಸಂಸ್ಕೃತಿ, ಆಚಾರ, ವಿಚಾರ, ಅಡುಗೆ, ತಿನಿಸುಗಳ ಬಗ್ಗೆ ಅರಿವು ಮೂಡಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ಭಾರತ (India) ವಿಶ್ವಕ್ಕೆ ತೆರೆದುಕೊಳ್ಳುವುದು ಹಾಗೂ ವಿಶ್ವವು ಭಾರತವನ್ನು ಅರ್ಥೈಸಿಕೊಳ್ಳುವುದು ಇದರಿಂದ ಸಾಧ್ಯವಾಗಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರನ್ನು ಸೋಲಿಸಲು ಯಾವ ಲೀಡರ್‌ಗಳಿಂದಲೂ ಸಾಧ್ಯವಿಲ್ಲ, ಜನರೇ ಸೋಲಿಸಬೇಕು: ಸತೀಶ್ ಜಾರಕಿಹೊಳಿ

TAGGED:bengaluruMeet and GreetRahul Gandhis.jaishankarTejasvi Suryaಜಿ 20 ಸಮಾವೇಶಜೈಶಂಕರ್ರಾಹುಲ್ ಗಾಂಧಿ
Share This Article
Facebook Whatsapp Whatsapp Telegram

Cinema news

Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema

You Might Also Like

Iranian Crude Oil
Latest

ಭಾರತದತ್ತ ಹೊರಟಿದ್ದ ಇರಾನ್ ಕಚ್ಚಾ ತೈಲ ಹೊತ್ತ ಹಡಗು ಚೀನಾದತ್ತ ಪ್ರಯಾಣ

Public TV
By Public TV
32 minutes ago
Raw Bitumen Karwar
Latest

ಕಾರವಾರ| ಮಧ್ಯಪ್ರಾಚ್ಯದಿಂದ ಬರುತ್ತಿದ್ದ ಕಚ್ಚಾ ಡಾಂಬರ್ ಸಂಪೂರ್ಣ ಬಂದ್

Public TV
By Public TV
52 minutes ago
Induction Stove
Bengaluru City

ಇಂಡಕ್ಷನ್‌ ಸ್ಟವ್‌ ಖರೀದಿ ಮುನ್ನ ಈ ಅಂಶಗಳನ್ನು ತಿಳಿದುಕೊಳ್ಳಿ

Public TV
By Public TV
54 minutes ago
Hubli Love Jihad
Dharwad

ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್‌ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ

Public TV
By Public TV
59 minutes ago
Sameer
Latest

ಹುಬ್ಬಳ್ಳಿ ಲವ್ ಜಿಹಾದ್ ಕೇಸ್‌ | ಸಮೀರ್ ನನ್ನ ಮಗಳ ತಲೆ ಕೆಡಿಸಿದ್ದಾನೆ: ಯುವತಿ ತಾಯಿ ಆಕ್ರೋಶ

Public TV
By Public TV
1 hour ago
pralhad joshi
Latest

ಎಲೆಕ್ಟ್ರಿಕ್ ವಾಹನಗಳ ಮೇಲಿನ ತೆರಿಗೆ ವಿನಾಯಿತಿ ಹಿಂಪಡೆದಿದ್ದು ರಾಜ್ಯ ಸರ್ಕಾರದ ಆರ್ಥಿಕ ದಿವಾಳಿತನದ ಸೂಚಕ: ಜೋಶಿ ಟೀಕೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?