ನಟ ಪ್ರಮೋದ್ ಶೆಟ್ಟಿಗೆ (Pramod Shetty) ‘ವೈಶಂಪಾಯನ ತೀರ’ (Vaishampayana Theera) ಸಿನಿಮಾ ಡೈರೆಕ್ಟ್ ಮಾಡಿದ್ದ ರಮೇಶ್ ಬೇಗಾರ್ ಸದ್ಯ ‘ಜಲಪಾತ’ (Jalapatha) ಸಿನಿಮಾ ನಿರ್ದೇಶನ ಮಾಡ್ತಿದ್ದಾರೆ. ಇವತ್ತಿನ ಎಲೆಕ್ಟ್ರಾನಿಕ್ ಯುಗದಲ್ಲಿ ಮಾನಸಿಕ ಒತ್ತಡ ಹೆಚ್ಚಿದ್ದು ಈ ಒತ್ತಡಕ್ಕೆ ಪರಿಹಾರ ನಿಸರ್ಗದಲ್ಲಿ ಮಾತ್ರ ಸಾಧ್ಯ. ಪ್ರಕೃತಿ, ಜನರ ಜೀವನ ಶೈಲಿ ಹಾಗೂ ಆಹಾರ ಕ್ರಮದ ಕುರಿತಾದ ಕಥೆಯೇ ಈ ಜಲಪಾತ ಸಿನಿಮಾ.
40 ವರ್ಷಗಳ ಹಿಂದೆ ಭಾರತದ ಆಹಾರ ಪದ್ದತಿ ಜಗತ್ತಿನಲ್ಲಿಯೇ ಅತೀ ಹೆಚ್ಚು ಆರೋಗ್ಯಕರವಾಗಿತ್ತು, ಆದ್ರೆ ಈಗ ಮಣ್ಣಿನಲ್ಲಿ ಸತ್ವ ಇಲ್ಲ, ಆಹಾರದಲ್ಲಿ ಕಲಬೆರಿಕೆ ಹಾಗೂ ರಾಸಾಯನಿಕ ವಸ್ತುಗಳ ವಿಪರೀತ ಬಳಕೆಯಿಂದ ಜನರಲ್ಲಿ ಸಮಸ್ಯೆಗಳು ಹೆಚ್ಚಿವೆ. ಹೀಗಾಗಿ ಪೂರ್ವಿಕರ ಜೀವನ ಶೈಲಿ ಹಾಗೂ ಆಹಾರ ಪದ್ದತಿ ಮತ್ತೆ ಮರುಕಳಿಸಬೇಕು ಅನ್ನೋ ಕಾರಣಕ್ಕೆ ‘ಜಲಪಾತ’ ಸಿನಿಮಾವನ್ನು ನಿರ್ಮಾಣ ಮಾಡ್ತಿದ್ದಾರೆ. ಇದನ್ನೂ ಓದಿ:ಗಂಡು ಮಗುವಿಗೆ ಜನ್ಮ ನೀಡಿದ `ಜೋಶ್’ ನಾಯಕಿ ಪೂರ್ಣಾ
ನೈಸರ್ಗಿಕ ಹಾಗೂ ಸಾವಯವ ಕೃಷಿ ಕಮ್ಯೂನಿಟಿ ಕಲ್ಪನೆಯ ರುವಾರಿಯೂ ಆಗಿರೋ ರವೀಂದ್ರ ತುಂಬರಮನೆ ಅವ್ರು ಮೊನ್ನೆಯಷ್ಟೆ ಬೆಂಗಳೂರಿನಿಂದ 90 ಕಿ.ಲೋ ಮೀಟರ್ ದೂರದಲ್ಲಿರೋ ಮದ್ದೂರಿನ ಮಧುವನದಲ್ಲಿ ವಸಂತೋತ್ಸವ ಕಾರ್ಯಕ್ರಮವನ್ನು ಮಾಡಲಾಗಿದೆ. ಯುಗಾದಿ ಹಾಗೂ ಸುಗ್ಗಿ ಹಬ್ಬದಂತೆ ವಾತಾರಣವನ್ನು ಕ್ರಿಯೇಟ್ ಮಾಡಿದ್ರು. ಈ ಜಾಗದಲ್ಲಿಯೇ ‘ಜಲಪಾತ’ ಸಿನಿಮಾದ ಸಿಕ್ವೆನ್ಸ್ ಶೂಟಿಂಗ್ ಮಾಡಲಾಯ್ತು.
ಬೆಂಗಳೂರಿನ ಟೆನ್ಶನ್ ಹಾಗೂ ಬ್ಯುಸಿ ಬದುಕಿನ ಜಂಜಾಟದಲ್ಲಿದ್ದ ನೂರಾರು ಜನ ಮಧುವನಕ್ಕೆ ಭೇಟಿಕೊಟ್ಟು ಸಂಗೀತ ಹಾಗೂ ಆಟಗಳನ್ನಾಡಿ ಸಂತಸ ವ್ಯಕ್ತಪಡಿಸಿದ್ದಾರೆ. ಈಗಾಗ್ಲೆ ಶೃಂಗೇರಿ ಸುತ್ತಮುತ್ತ 15 ದಿನಗಳ ಕಾಲ ಶೂಟಿಂಗ್ ನಡೆದಿದ್ದು, ಮಧುವನದ ವಸಂತೋತ್ಸವದಲ್ಲಿ ಚಿತ್ರೀಕರಣ ನಡೆಯುತ್ತಿದೆ. ಸದ್ಯದಲ್ಲೇ ಈ ಸಿನಿಮಾ ಬಗ್ಗೆ ಮತ್ತಷ್ಟು ಮಾಹಿತಿ ಸಿಗಲಿದೆ.