Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ – ಸಹೋದರಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ದ್ವೇಷ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ – ಸಹೋದರಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ದ್ವೇಷ

Crime

ಹಾಡಹಗಲೇ ವ್ಯಕ್ತಿಯ ಬರ್ಬರ ಹತ್ಯೆ – ಸಹೋದರಿ ಪ್ರೀತಿಸಿ ಮದುವೆಯಾಗಿದ್ದಕ್ಕೆ ದ್ವೇಷ

Public TV
Last updated: April 11, 2023 10:50 pm
Public TV
Share
3 Min Read
MURDER copy
SHARE

ರಾಮನಗರ: ಪ್ರೀತಿಸಿ ಮದುವೆಯಾದರು ಎಂಬ ಒಂದೇ ಕಾರಣಕ್ಕೆ ಬಾವನನ್ನೇ ಬಾಮೈದ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆಗೈದಿರುವ (Murder) ಘಟನೆ ರಾಮನಗರ (Ramanagara) ತಾಲೂಕಿನ ಕೆಜಿ ಹೊಸಹಳ್ಳಿ (K.G.Hosahalli) ಗ್ರಾಮದಲ್ಲಿ ನಡೆದಿದೆ.

ಕೆಜಿ ಹೊಸಹಳ್ಳಿ ಗ್ರಾಮದ ಅಶ್ವತ್ಥ್ ಗೌಡ(28) ಕೊಲೆಯಾದ ದುರ್ದೈವಿ. ಕೆಜಿ ಹೊಸಳ್ಳಿ ಗ್ರಾಮದ ಅಶ್ವತ್ಥ್ ಗೌಡ ಹಾಗೂ ಚನ್ನಪಟ್ಟಣ (Channapatna) ನಗರದ ಮಹದೇಶ್ವರ ಬಡಾವಣೆಯ ಸಹನಾ, ದೂರದ ಸಂಬಂಧಿಗಳು. ಅಲ್ಲದೇ ಒಂದೇ ಜಾತಿಯವರಾಗಿದ್ದರು. ಹೀಗಾಗಿ ಕಳೆದ ಏಳು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿಯ (Love) ವಿಚಾರ ಎರಡೂ ಕುಟುಂಬದವರಿಗೂ ಗೊತ್ತಿತ್ತು. ವಿರೋಧದ ನಡುವೆ ಕಳೆದ ಎರಡು ತಿಂಗಳ ಹಿಂದೆ ಅಶ್ವತ್ಥ್ ಹಾಗೂ ಸಹನಾ ಧರ್ಮಸ್ಥಳದಲ್ಲಿ ಮದುವೆಯಾಗಿದ್ದರು. ನಂತರ ಇಬ್ಬರೂ ಕೂಡ ಕೆಜಿ ಹೊಸಹಳ್ಳಿ ಗ್ರಾಮದಲ್ಲಿ ವಾಸವಾಗಿದ್ದರು. ಇದನ್ನೂ ಓದಿ: 4 ವರ್ಷದ ಪ್ರೀತಿಗೆ ಎಳ್ಳುನೀರು- ರೊಚ್ಚಿಗೆದ್ದು ಅಪ್ರಾಪ್ತ ಪ್ರಿಯತಮೆಗೆ ಚಾಕು ಇರಿದ! 

MURDER

ಮಂಗಳವಾರ ರಾಮನಗರದಲ್ಲಿ ಬೀಗರ ಔತಣಕೂಟಕ್ಕೆ ಹೋಗಿ ವಾಪಸ್ ಬರುವ ವೇಳೆ ಕೆಜಿ ಹೊಸಹಳ್ಳಿ ಗ್ರಾಮದಲ್ಲಿ ಅಶ್ವತ್ಥ್ ಮನೆಯಿಂದ ಕೂಗಳತೆ ದೂರದಲ್ಲಿ ಹಿಪ್ಪುನೇರಳೆ ಗಿಡಗಳ ಮಧ್ಯದಲ್ಲಿ ಹೊಂಚು ಹಾಕಿ ಕುಳಿತಿದ್ದ ಸಹನಾಳ ಸಹೋದರ ಭರತ್ ಮತ್ತು ಗ್ಯಾಂಗ್ ಏಕಾಏಕಿ ದಾಳಿ (Attack) ನಡೆಸಿದೆ. ರಾಮನಗರದಿಂದ ಬರುವುದನ್ನೇ ಕಾದು ಬೈಕ್‌ನಲ್ಲಿ ಹಿಂದಿನಿಂದ ಬಂದು ಮೊದಲಿಗೆ ಸಹನಾಳನ್ನು ತಳ್ಳಿದ್ದಾರೆ. ಇದರಿಂದಾಗಿ ಆಕೆ ಕೆಳಗೆ ಬಿದ್ದಿದ್ದಾಳೆ. ನಂತರ ಅಶ್ವತ್ಥ್ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ.

ಸ್ವಲ್ಪ ದೂರಕ್ಕೆ ಅಶ್ವತ್ಥ್ ಓಡಿ ಹೋಗಿದ್ದಾನೆ. ನೆಲಕ್ಕೆ ಬೀಳುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿದ್ದಾರೆ. ಅನಂತರ ಅಲ್ಲೇ ಇದ್ದ ಸೈಜ್‌ಗಲ್ಲನ್ನು ಆತನ ತಲೆಮೇಲೆ ಎತ್ತಿ ಹಾಕಿದ್ದಾರೆ. ಹೀಗಾಗಿ ಅಶ್ವತ್ಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಅಲ್ಲದೇ ಬಿಡಿಸಲು ಹೋದ ಸಹನಾ ಮೇಲೂ ಕೂಡ ದಾಳಿ ಮಾಡಿದ್ದಾರೆ. ಗ್ರಾಮಸ್ಥರು ಬರುತ್ತಿದ್ದಂತೆ ಎರಡು ಬೈಕ್‌ಗಳಲ್ಲಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬೀದಿ ನಾಯಿಗಳ ದಾಳಿ – ಅಪ್ರಾಪ್ತ ಬಾಲಕ ಮೃತ್ಯು 

CRIME 1

ಆರೋಪಿ ಭರತ್ ಸಹನಾಳಿಗೆ ಮಲತಾಯಿ ಮಗ. ಭರತ್‌ನ ತಾಯಿ ತೀರಿ ಹೋದ ನಂತರ ಆತನ ತಂದೆ ಸಹನಾಳ ತಾಯಿಯನ್ನು ಮದುವೆಯಾಗಿದ್ದರು. ಇವರು ಸಾಕಷ್ಟು ಸಿರಿವಂತರಾಗಿದ್ದರು. ಚನ್ನಪಟ್ಟಣದಲ್ಲಿ ಕಾರು ವಾಷಿಂಗ್ ಸೆಂಟರ್ ಸಹಾ ಇದೆ. ಆದರೆ ಭರತ್‌ಗೆ ಮೊದಲಿನಿಂದಲೂ ಸಹನಾಳ ಮೇಲೆ ದ್ವೇಷವಿತ್ತು. ಸಹನಾ ಮತ್ತು ಅಶ್ವತ್ಥ್ ಮದುವೆಯಾಗಲು ಕೂಡ ಭರತ್‌ನ ವಿರೋಧವಿತ್ತು. ಹೀಗಾಗಿ ಚನ್ನಪಟ್ಟಣ ಠಾಣೆಯಲ್ಲಿ ದೂರು ಸಹಾ ನೀಡಿದ್ದ. ಪೊಲೀಸರ ಮುಂದೆ ಹೇಳಿಕೆ ಸಹಾ ಕೊಟ್ಟಿದ್ದರು. ರಾಜಿ ಪಂಚಾಯತಿ ಕೂಡ ನಡೆದಿತ್ತು.

ಸಹನಾ ನನಗೆ ನಿಮ್ಮ ಆಸ್ತಿ ಬೇಡವೆಂದು ಬರೆದುಕೊಟ್ಟಿದ್ದಳು. ಆದರೂ ಸಹಾ ಆಸ್ತಿ (Property) ಎಲ್ಲಿ ಕೈತಪ್ಪುತ್ತದೆಯೋ ಎಂದು ಪ್ಲಾನ್ ಮಾಡಿದ ಭರತ್ ತನ್ನ ಜೊತೆ ಇಬ್ಬರನ್ನು ಕರೆದುಕೊಂಡು ಬಂದು ಅಶ್ವತ್ಥ್ ಮೇಲೆ ದಾಳಿ ಮಾಡಿ ಕೊಲೆಗೈದಿದ್ದಾನೆ. ಅಶ್ವತ್ಥ್‌ನ ಚಲನವಲನಗಳ ಬಗ್ಗೆ ಕಳೆದ ಹಲವು ದಿನಗಳಿಂದ ಮಾಹಿತಿ ಪಡೆದಿದ್ದಾನೆ. ಅಲ್ಲದೇ ಮಂಗಳವಾರ ರಾಮನಗರಕ್ಕೆ ಹೋಗಿರುವುದು ಮತ್ತು ಬರುವ ಸಮಯವನ್ನು ತಿಳಿದುಕೊಂಡು ಅಶ್ವತ್ಥ್‌ನ ಮನೆಯ ಸಮೀಪವೇ ಹತ್ಯೆ ಮಾಡಿದ್ದಾನೆ. ಹತ್ಯೆಗೂ ಕೆಲವೇ ದೂರದಲ್ಲಿ ಅಶ್ವತ್ಥ್‌ನ ತಂದೆ ತಾಯಿ ಸಹಾ ಬರುತ್ತಿದ್ದರು. ಒಟ್ಟಿಗೆ ಬಂದಿದ್ದರೆ ಅಟ್ಯಾಕ್ ಮಾಡುವುದು ಕಷ್ಟವಾಗುತ್ತಿತ್ತು. ಆದರೆ ಇಬ್ಬರು ಎನ್‌ಫೀಲ್ಡ್ ಬೈಕ್‌ನಲ್ಲಿ ಬರುತ್ತಿರುವುದನ್ನು ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿ ಕೊಲೆಗೈದಿದ್ದಾನೆ. ಇದನ್ನೂ ಓದಿ: ಸ್ಕ್ರೂಡ್ರೈವರ್‌ನಲ್ಲಿ ಪತ್ನಿಯ ಕತ್ತು, ಎದೆಗೆ ಚುಚ್ಚಿ ಕೊಲೆಗೆ ಮುಂದಾದ ಪತಿ! 

CRIME

ಕೊಲೆ ವಿಚಾರ ತಿಳಿಯುತ್ತಿದ್ದಂತೆ ಇಡೀ ಗ್ರಾಮದ ಜನರೇ ಸ್ಥಳದಲ್ಲಿ ನೆರೆದಿದ್ದರು. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಆರೋಪಿಗಳಿಗೆ ಸಹಾಯ ಮಾಡಿದವರನ್ನು ಸ್ಥಳಕ್ಕೆ ಕರೆಸಿ ಎಂದು ಮೃತದೇಹವನ್ನು ಎತ್ತಲು ಬಿಡದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರು ಸಮಾಧಾನ ಪಡಿಸಿ ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ದಾಳಿಯಲ್ಲಿ ಗಾಯಗೊಂಡಿರುವ ಸಹನಾ ರಾಮನಗರ ಜಿಲ್ಲಾಸ್ಪತ್ರೆಯಲ್ಲಿ (Distrcit Hospital) ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ನಂತರ ಕೊಲೆ ಮಾಡಿದ ಭರತ್ ಸೇರಿ ಮೂವರು ಆರೋಪಿಗಳನ್ನು ರಾಮನಗರ ಗ್ರಾಮಾಂತರ ಠಾಣೆ ಪೊಲೀಸರು ವಶಕ್ಕೆ ಪಡೆದು ತನಿಖೆ ಮುಂದುವರೆಸಿದ್ದಾರೆ. ಒಟ್ಟಾರೆಯಾಗಿ ಸಹೋದರಿ ಪ್ರೀತಿಸಿ ಮದುವೆಯಾದಳು. ಆಸ್ತಿ ನನಗೆ ಸಿಗುವುದಿಲ್ಲ ಎಂಬ ಕಾರಣಕ್ಕೆ ತನ್ನ ಬಾವನನ್ನೇ ಭೀಕರವಾಗಿ ಹತ್ಯೆ ಮಾಡಿ ತಂಗಿಯ ಬಾಳನ್ನು ಕತ್ತಲೆಗೆ ನೂಕಿದ್ದಾನೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ ಆರೋಪ- IAS ಅಧಿಕಾರಿ ವಿರುದ್ಧ ಪತ್ನಿಯಿಂದ ದೂರು

TAGGED:lovemarriageMurderpropertyramanagaraಆಸ್ತಿಕೊಲೆಪ್ರೇಮರಾಮನಗರವಿವಾಹ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

container ship
Latest

ಈಗ ಚೀನಾ ಹಡಗುಗಳಿಗೂ ಶಾಕ್‌ – ಅನುಮತಿ ನೀಡದ ಇರಾನ್‌

Public TV
By Public TV
1 hour ago
davanagere south by election local youth express anger against sadiq pailwan
Davanagere

ಕಾಂಗ್ರೆಸ್ ಜೊತೆ ಪೈಲ್ವಾನ್‌ಗೂ ಮಣ್ಣು ಮುಕ್ಕಿಸುತ್ತೇವೆ – ಬೀದಿಗಿಳಿದು ಆಕ್ರೋಶ ಹೊರಹಾಕಿದ ಮುಸ್ಲಿಂ ಯುವಕರು

Public TV
By Public TV
2 hours ago
PM Modi virtual meeting chief ministers and lieutenant governors
Latest

ಕೋವಿಡ್‌ ರೀತಿ ರಾಜ್ಯ, ಕೇಂದ್ರ ಒಗ್ಗಟ್ಟಾಗಿ ಇಂಧನ ಬಿಕ್ಕಟ್ಟನ್ನು ಎದುರಿಸೋಣ: ಮೋದಿ ಕರೆ

Public TV
By Public TV
2 hours ago
karwar demand for firewood increases due to cylinder shortage forest department grants permission to cut 3 lakh trees
Latest

ಸಿಲಿಂಡರ್ ಅಭಾವದಿಂದ ಕಟ್ಟಿಗೆಗೆ ಹೆಚ್ಚಿದ ಬೇಡಿಕೆ – ಅರಣ್ಯ ಇಲಾಖೆಯಿಂದ 3ಲಕ್ಷ ಮರಗಳ ಕಟಾವಿಗೆ ಅನುಮತಿ

Public TV
By Public TV
2 hours ago
man killed pet dog in honnali
Crime

ಸಾಕು ನಾಯಿ ಬೊಗಳಿದ್ದಕ್ಕೆ ಕುಡುಗೋಲಲ್ಲಿ ಕೊಚ್ಚಿ ಕೊಂದ ಪಾಪಿ

Public TV
By Public TV
3 hours ago
Basangouda Patil Yatnal
Kolar

ಐಪಿಎಲ್‌ ಟಿಕೆಟ್‌ ಬೇಕೆನ್ನುವ ಶಾಸಕರಿಗೆ ನಾಚಿಕೆಯಾಗಬೇಕು: ಯತ್ನಾಳ್‌ ಕಿಡಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?