Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಮಾವು ಬೇವು’ ಮೂಲಕ ದಿಗ್ಗಜರ ಕನಸು ನನಸು ಮಾಡಿದ ನಟ ಸುಚೇಂದ್ರ ಪ್ರಸಾದ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ‘ಮಾವು ಬೇವು’ ಮೂಲಕ ದಿಗ್ಗಜರ ಕನಸು ನನಸು ಮಾಡಿದ ನಟ ಸುಚೇಂದ್ರ ಪ್ರಸಾದ್

Cinema

‘ಮಾವು ಬೇವು’ ಮೂಲಕ ದಿಗ್ಗಜರ ಕನಸು ನನಸು ಮಾಡಿದ ನಟ ಸುಚೇಂದ್ರ ಪ್ರಸಾದ್

Public TV
Last updated: April 13, 2023 1:57 pm
Public TV
Share
3 Min Read
Maavu Bevu 5
SHARE

ವಿಶಿಷ್ಟ ನಟರಾಗಿ ಪ್ರಸಿದ್ಧರಾಗಿ, ತಮ್ಮ ಸ್ಫುಟವಾದ ಕನ್ನಡ ಭಾಷಾ ಪ್ರಯೋಗಗಳ ಮೂಲಕ ಗಮನ ಸೆಳೆದಿರುವವರು ಸುಚೇಂದ್ರ ಪ್ರಸಾದ್ (Suchendra Prasad). ಅವರು `ಮಾವು ಬೇವು’ (Maavu Bevu) ಎಂಬ ಸದಭಿರುಚಿಯ ಸಿನಿಮಾವೊಂದನ್ನು ನಿರ್ದೇಶನ ಮಾಡಿದ್ದು, ಈಗಾಗಲೇ ಅನೇಕ ಬಗೆಗಳಲ್ಲಿ ಸುದ್ದಿಯಾಗಿದೆ. `ಮಾವು ಬೇವು’ ಇದೇ ಏಪ್ರಿಲ್ 21ರಂದು ಬಿಡುಗಡೆಗೊಳ್ಳಲಿದೆ. ಸುಚೇಂದ್ರ ಪ್ರಸಾದ್ ಸಾರಥ್ಯ ವಹಿಸಿದ್ದಾರೆಂದ ಮೇಲೆ ಮಾವು ಬೇವಿನ ಬಗ್ಗೆ ತಾನೇ ತಾನಾಗಿ ಕುತೂಹಲವೊಂದು ಮೂಡಿಕೊಳ್ಳುತ್ತದೆ. ಅದನ್ನು ತಣಿಸುತ್ತಲೇ, ಅಗಾಧ ಪ್ರಮಾಣದಲ್ಲಿ ನಿರೀಕ್ಷೆ ಮೂಡಿಸಬಲ್ಲ ಒಂದಷ್ಟು ವಿಚಾರಗಳೀಗ ಚಿತ್ರತಂಡದ ಕಡೆಯಿಂದ ಹೊರಬಿದ್ದಿವೆ.

Maavu Bevu 1

ಕನ್ನಡ ಚಿತ್ರರಂಗ ಈಗ ಪ್ಯಾನ್ ಇಂಡಿಯಾ ಸಿನಿಮಾಗಳ ಗುಂಗಿಗೆ ಬಿದ್ದಿದೆ. ಇದರ ನಡುವಲ್ಲಿಯೇ ಒಂದಷ್ಟು ಭಿನ್ನವಾದ, ಪ್ರಯೋಗಾತ್ಮಕ ಗುಣಗಳನ್ನು ಹೊಂದಿರುವ ಮೌಲಿಕ ಚಿತ್ರಗಳೂ ಕೂಡಾ ತಯಾರಾಗುತ್ತಿವೆ. ನಿಸ್ಸಂದೇಹವಾಗಿಯೂ ಆ ಸಾಲಿಗೆ ಸೇರ್ಪಡೆಗೊಳ್ಳುವ ಚಿತ್ರ `ಮಾವು ಬೇವು’. ಈ ಚಿತ್ರ ತನ್ನೊಡಲಲ್ಲಿ ಅದೆಷ್ಟೋ ಅಚ್ಚರಿಗಳನ್ನು ಬಚ್ಚಿಟ್ಟುಕೊಂಡಿದೆ. ಆ ವಿವರಗಳೆಲ್ಲವೂ ಈ ಸಿನಿಮಾ ಪ್ರೇಕ್ಷಕರ ಪಾಲಿಗೆ ಭಿನ್ನ ಅನುಭೂತಿಯೊಂದನ್ನು ಧಾರಾಳವಾಗಿ ಕೊಡಮಾಡುವ ಲಕ್ಷಣಗಳನ್ನೇ ಧ್ವನಿಸುವಂತಿವೆ.

Maavu Bevu 7

ನಿಮಗೆಲ್ಲ ಗೊತ್ತಿಲ್ಲದಿರುವುದೇನಲ್ಲ. ಒಂದು ಸಿನಿಮಾ ತಯಾರಾದರೆ, ಆ ಕಥೆಯ, ಸನ್ನಿವೇಶದ ಭಾವಗಳಿಗೆ ತಕ್ಕಂತೆ ಹಾಡುಗಳನ್ನು ಸೃಷ್ಟಿಸಲಾಗುತ್ತದೆ. ಆದರೆ, ಜನಪ್ರಿಯಗೊಂಡು, ಜನರ ಮನಗೆದ್ದ ಹಾಡುಗಳಿಗಾಗಿಯೇ ಕಥೆ ಸೃಷ್ಟಿಯಾದ ಬೆರಗು ಈ ಹಿಂದೆಂದೂ ನಿಮ್ಮನ್ನು ಎದುರುಗೊಂಡಿರಲು ಸಾಧ್ಯವಿಲ್ಲ. 70-80ರ ದಶಕದಲ್ಲಿ ಹಾಡುಗಳೆಂದರೆ ಹುಚ್ಚೇಳುವ, ಮುದಗೊಳ್ಳುವ ಕಾಲಮಾನವೊಂದಿತ್ತು. ಅಂಥಾ ಘಳಿಗೆಯಲ್ಲಿ ಕನ್ನಡದ ಮೇರು ಕವಿ ದೊಡ್ಡರಂಗೇಗೌಡರು (Dodarange Gowda), ಪ್ರಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಮತ್ತು ಜನಪ್ರಿಯ ಸಂಗೀತ ನಿರ್ದೇಶಕರುಗಳಾದ ಅಶ್ವತ್ಥ್-ವೈದಿ ಜೋಡಿಯ ಸಮಾಗಮ ಸಂಭವಿಸಿತ್ತು. ಈ ಪ್ರತಿಭಾನ್ವಿತ ಕನಸುಗಾರರ ಸಮ್ಮಿಲನದಿಂದಲೇ ಮಾವು ಬೇವು ಎಂಬ ಗೀತ ಗುಚ್ಛವೊಂದು ಹೊರ ಬಂದಿತ್ತು. ಅದು ಇತಿಹಾಸದ ಪುಟಗಳಲ್ಲಿ ದಾಖಲಾಗುವಷ್ಟು ದೊಡ್ಡ ಮಟ್ಟದಲ್ಲಿ ಜನಪ್ರಿಯತೆ ಪಡೆದುಕೊಂಡಿತ್ತು.

Maavu Bevu 6

ಅಂತಹ ಗೀತ ಗುಚ್ಛವನ್ನು ಸಿನಿಮಾ ರೂಪಕ್ಕೆ ತರಬೇಕೆಂದು ಸಿ ಅಶ್ವತ್ಥ್, ಬಾಲಸುಬ್ರಮಣ್ಯಂ, ದೊಡ್ಡರಂಗೇಗೌಡರು ನಲವತ್ತು ವರ್ಷಗಳಿಂದಿಚೆಗೆ ಬಹುವಾಗಿ ಪ್ರಯತ್ನಿಸಿದ್ದರು. ಕಡೆಗೂ ಎಲ್ಲ ಕೊಂಡಿಗಳೂ ಕಳಚಿಕೊಂಡು, ಏಕಾಂಗಿಯಾಗಿ ನಿಂತರೂ ಕೂಡಾ ದೊಡ್ಡರಂಗೇಗೌಡರು ಈ ಪ್ರಯತ್ನದಿಂದ ಹಿಂದೆ ಸರಿದಿರಲಿಲ್ಲ. ಈಗ್ಗೆ ಹತ್ತು ವರ್ಷಗಳಿಂದ ಹಿಂದೆ ಈ ವಿಚಾರ ತಲುಪಿದರೂ ಕೂಡಾ ಸುಚೇಂದ್ರ ಪ್ರಸಾದ್ ಗಂಭೀರವಾಗಿ ತೆಗೆದುಕೊಂಡಿರಲಿಲ್ಲ. ಬಹುಶಃ ಅವರಲ್ಲದೇ  ಬೇರಾರೂ ಈ ಸಾಹಸವನ್ನು ಎದುರುಗೊಳ್ಳೋದು ಕಷ್ಟವಿತ್ತು. ಕಡೆಗೂ ಒಂದು ಸುಸಜ್ಜಿತವಾದ ತಂಡದೊಂದಿಗೆ ಅಂದುಕೊಂಡಂತೆಯೇ ಸಿನಿಮಾ ಮಾಡಿದ ಖುಷಿ ಸುಚೇಂದ್ರ ಪ್ರಸಾದ್ ಅವರಲ್ಲಿದೆ.

Maavu Bevu 8

ಸಂಬಂಧಗಳು, ಅದರ ಮೌಲ್ಯಗಳು ಸೇರಿದಂತೆ ಬದುಕಿಗೆ ಹತ್ತಿರಾದ ಅಂಶಗಳೊಂದಿಗೆ ಸುಚೇಂದ್ರ ಪ್ರಸಾದ್ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಹಾಡುಗಳಿಗಾಗಿಯೇ ಕಥೆ ಸೃಷ್ಟಿಸಿ, ಸಿನಿಮಾ ಮಾಡುವಲ್ಲಿ ಗೆದ್ದಿದ್ದಾರೆ. ಈ ಹಂತದಲ್ಲಿ ಲಹರಿ ಸಂಸ್ಥೆಯ ವೇಲು ಅವರು ಅತ್ಯಂತ ಪ್ರೀತಿಯಿಂದ ಆಡಿಯೋ ಹಕ್ಕುಗಳನ್ನು ನೀಡುವ ಮೂಲಕ ಜೊತೆಯಾಗಿದ್ದಾರೆ. ಸುಚೇಂದ್ರ ಪ್ರಸಾದ್ ಅವರನ್ನು ಗುರುವೆಂದೇ ಗೌರವಿಸುವ ಬಾಹುಬಲಿ ಖ್ಯಾತಿಯ ಡ್ಯಾನಿ ಕುಟ್ಟಪ್ಪ ಈ ಸಿನಿಮಾದಲ್ಲಿ ಮುಖ್ಯಪಾತ್ರವನ್ನು ನಿರ್ವಹಿಸಿದ್ದಾರೆ. ಈಗಾಗಲೇ ಈ ಸಿನಿಮಾವನ್ನು ವೀಕ್ಷಿಸಿರುವ ಚಿತ್ರರಂಗದ ಗಣ್ಯರು, ಸಾಹಿತ್ಯ ಲೋಕದ ದಿಗ್ಗಜರೆಲ್ಲ ಮೆಚ್ಚಿ ಕೊಂಡಾಡಿದ್ದಾರೆ.

Maavu Bevu 2

ಹಿರಿಯ ಕವಿ ಬಿ.ಆರ್ ಲಕ್ಷ್ಮಣ ರಾವ್ ಸುದೀರ್ಘವಾದ ಪತ್ರ ಬರೆಯುವ ಮೂಲಕ ತಮ್ಮ ಖುಷಿಯನ್ನು ಹಂಚಿಕೊಂಡಿದ್ದಾರೆ. ಬಹುಶಃ ಎಸ್.ರಾಜಶೇಖರ್ ಅವರು ಮನಸು ಮಾಡದೇ ಹೋಗಿದ್ದರೆ ಇಂಥಾದ್ದೊಂದು ಚಿತ್ರ ಪ್ರೇಕ್ಷಕರ ಪಾಲಿಗೆ ಮರೀಚಿಕೆಯಾಗಿ ಉಳಿಯುತ್ತಿತ್ತು. ರಾಜಶೇಖರ್ ಅವರು ಅತ್ಯಂತ ಆಸ್ಥೆಯಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಸುಚೇಂದ್ರ ಪ್ರಸಾದ್ ಅವರ ಕನಸಿಗೆ ಜೊತೆಯಾಗಿದ್ದಾರೆ. ಒಟ್ಟಾರೆಯಾಗಿ ಮಾವು ಬೇವು ಕನ್ನಡದ ಪ್ರೇಕ್ಷಕರಿಗೆ ಹೊಸಾ ಬಗೆಯ ಅನುಭೂತಿಯನ್ನು ಕೊಡಮಾಡಲಿರುವುದು ನಿಜ. ಹಿರಿಯ ನಟ ಶ್ರೀನಿವಾಸ ಮೂರ್ತಿ , ಸುಂದರಶ್ರೀ, ನೀನಾಸಂ ಸಂದೀಪ್, ಚೈತ್ರ ಎಚ್.ಜಿ, ಡ್ಯಾನಿ ಕುಟ್ಟಪ್ಪ, ಸುಪ್ರಿಯಾ ಎಸ್ ರಾವ್, ರಂಜಿತಾ ಎಚ್, ಸಿತಾರಾ, ಚಕ್ರವರ್ತಿ ದಾವಣಗೆರೆ,  ರಂಜನ್ ಮುಂತಾದವರ ತಾರಾಗಣ ಈ ಚಿತ್ರಕ್ಕಿದೆ.

TAGGED:ChaitraDanny KuttappaDodarange GowdaMaavu BevuSuchendra Prasadಚೈತ್ರಾಡ್ಯಾನಿ ಕುಟ್ಟಪ್ಪದೊಡ್ಡರಂಗೇಗೌಡಮಾವು ಬೇವುಸುಚೇಂದ್ರ ಪ್ರಸಾದ್
Share This Article
Facebook Whatsapp Whatsapp Telegram

Cinema news

again Bigg Boss Rajat controversy photo shoot in villain look while smoking a cigarette Mysuru
ಸಿಗರೇಟ್ ಸೇದುತ್ತಾ ವಿಲನ್ ಲುಕ್‌ನಲ್ಲಿ ಫೋಟೋ ಶೂಟ್ – ಮತ್ತೆ ರಜತ್‌ ವಿವಾದ
Cinema Crime Karnataka Latest Mysuru Top Stories TV Shows
jayant kaikini bengaluru international film festival
ಗೀತರಚನೆಯನ್ನು ಕಲಿಸುವುದಕ್ಕೆ ಸಾಧ್ಯವಿಲ್ಲ, ಅದು ಸುಪ್ತಮನಸ್ಸಿನಿಂದ ಬರಬೇಕು: ಜಯಂತ್‌ ಕಾಯ್ಕಿಣಿ
Cinema Latest Main Post Sandalwood
NK Rajesh Naidu
ʼಸುಖೀಭವ’ ಎನುತ್ತಾ ಸ್ಯಾಂಡಲ್‌ವುಡ್‌ಗೆ ಬಂದ ಡೈರೆಕ್ಟರ್ ಎನ್.ಕೆ ರಾಜೇಶ್ ನಾಯ್ಡು
Cinema Latest Sandalwood Top Stories
Mia Khalifa
Viral | 71 ವರ್ಷದ ʻಮಿಸ್ಟರ್ ಬೀನ್ʼ ಜೊತೆ 32 ರ ಮಿಯಾ ಖಲೀಫಾ ಡೇಟಿಂಗ್‌?
Cinema Latest World

You Might Also Like

Smriti Mandhana t
Cricket

WPL 2026 Final – ದಾಖಲೆಯೊಂದಿಗೆ ಇತಿಹಾಸ ಸೃಷ್ಟಿಸಿದ ಸ್ಮೃತಿ

Public TV
By Public TV
7 minutes ago
Bus Fire
Bengaluru City

ನೆಲಮಂಗಲದಲ್ಲಿ ಹೊತ್ತಿ ಉರಿದ ಖಾಸಗಿ ಬಸ್‌ – ತಪ್ಪಿದ ಭಾರೀ ಅನಾಹುತ

Public TV
By Public TV
10 minutes ago
WPL 2026 final Was Radha Yadav not hit wicket on final ball
Cricket

ರಾಧಾ ಯಾದವ್‌ ಹಿಟ್‌ ವಿಕೆಟ್‌ ಆಗಿದ್ರಾ? ಯಾಕೆ ಇಷ್ಟೊಂದು ಚರ್ಚೆ?

Public TV
By Public TV
45 minutes ago
RCB
Cricket

WPL Champions | ʻಹೆಣ್ಮಕ್ಕಳೇ ಸ್ಟ್ರಾಂಗು ಗುರುʼ – 2ನೇ ಬಾರಿಗೆ ಚಾಂಪಿಯನ್‌ ಕಿರೀಟ; RCB ಹ್ಯಾಟ್ರಿಕ್‌ ಸಾಧನೆ!

Public TV
By Public TV
1 hour ago
h.d.deve gowda ashwini vaishnaw
Latest

ಹೈ-ಸ್ಪೀಡ್ ರೈಲ್ವೆ ಕಾರಿಡಾರ್; ರೈಲ್ವೆ ಸಚಿವರನ್ನ ಅಭಿನಂದಿಸಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ

Public TV
By Public TV
15 hours ago
h.d.kumaraswamy ashwini vaishnaw 1
Latest

ಮಂಡ್ಯ, ಮದ್ದೂರಿನಲ್ಲಿ ಮುರುಡೇಶ್ವರ ರೈಲು ನಿಲುಗಡೆಗೆ ಕೋರಿಕೆ; ಅಶ್ವಿನಿ ವೈಷ್ಣವ್‌ರಿಂದ ಸಕಾರಾತ್ಮಕ ಪ್ರತಿಕ್ರಿಯೆ

Public TV
By Public TV
16 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?