Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಕಾಂಗ್ರೆಸ್ ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ: ಬಿಜೆಪಿ ತೊರೆದ ನಾಯಕರಿಗೆ ಸಿಎಂ ಟಾಂಗ್

Public TV
Last updated: April 17, 2023 1:23 pm
Public TV
Share
3 Min Read
BASAVARAJ BOMMAI 6
SHARE

ಬೆಂಗಳೂರು: ಕಾಂಗ್ರೆಸ್‌ನ (Congress) ಸಂಸ್ಕೃತಿ ಯೂಸ್ ಆ್ಯಂಡ್ ಥ್ರೋ. ಚುನಾವಣೆ ಮುಗಿಯುವವರೆಗೆ ಬಿಜೆಪಿಯಿಂದ (BJP) ಹೋದವರಿಗೆ ಸನ್ಮಾನ ಮಾಡುತ್ತಾರೆ. ಚುನಾವಣೆ ಮುಗಿದ ಮೇಲೆ ಅವರಿಗೆ ಅವಮಾನ ಮಾಡುವುದು ಕಾಂಗ್ರೆಸ್‌ನ ಸಂಸ್ಕೃತಿ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಕಾಂಗ್ರೆಸ್ ಪಕ್ಷವನ್ನು ಲೇವಡಿ ಮಾಡಿದರು.

ಪ್ಲಾನ್ ಮಾಡಿ ನನ್ನನ್ನು ಬಿಜೆಪಿಯಿಂದ ಹೊರದಬ್ಬಿದ್ದಾರೆ ಎಂಬ ಜಗದೀಶ್ ಶೆಟ್ಟರ್ (Jagadish Shettar) ಹೇಳಿಕೆಗೆ ಬೆಂಗಳೂರಿನಲ್ಲಿ (Bengaluru) ಪ್ರತಿಕ್ರಿಯಿಸಿದ ಅವರು, ಯಾರಾದರೂ ಪಕ್ಷ ಬಿಟ್ಟು ಹೋದಾಗ ಏನಾದರು ಒಂದು ಕಾರಣ ಕೊಡಬೇಕು. ಬಿಜೆಪಿ ಜಗದೀಶ್ ಶೆಟ್ಟರ್ ಅವರಿಗೆ ಸ್ಥಾನಮಾನಗಳನ್ನು ಕೊಡುವುದರ ಜೊತೆಗೆ ಅವರನ್ನು ಅತ್ಯಂತ ಗೌರವಯುತವಾಗಿ ಕಂಡಿದೆ. ಇದರಲ್ಲಿ ಎರಡನೇ ಮಾತಿಲ್ಲ. ಕಳೆದ 25 ವರ್ಷದ ಅವರ ಬೆಳವಣಿಗೆಯಲ್ಲಿ ಬಿಜೆಪಿಯೇ ಪ್ರಮುಖವಾದ ಪಾತ್ರವನ್ನು ವಹಿಸಿದೆ. 25 ವರ್ಷ ಅವರನ್ನು ಬೆಳೆಸಿದ ಬಿಜೆಪಿ ಈಗ ಅವರನ್ನು ಕೆಳಗಿಳಿಸುವ ಪ್ರಯತ್ನವನ್ನು ಮಾಡಿಲ್ಲ. ಷಡ್ಯಂತ್ರದ ಪ್ರಶ್ನೆಯೇ ಇಲ್ಲ. ಪಕ್ಷದ ವರಿಷ್ಠರಿಗೂ ಕೂಡಾ ಇದರ ಬಗ್ಗೆ ಮಾಹಿತಿಯಿದೆ. ಪ್ರಮುಖ ನಾಯಕರಲ್ಲಿ ಶೆಟ್ಟರ್ ಕೂಡಾ ಒಬ್ಬರಾಗಿದ್ದರು. ಹೀಗಾಗಿ ಇದರಲ್ಲಿ ಷಡ್ಯಂತ್ರವಿದೆ ಅಥವಾ ಕೇಂದ್ರೀಕೃತವಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಶೆಟ್ಟರ್ ಕಾಂಗ್ರೆಸ್ ಪಕ್ಷಕ್ಕೆ ಹೋಗಿದ್ದಾರೆ. ಹೋಗುವಾಗ ಒಂದು ನೆಪ ಹೇಳಿದ್ದಾರೆ ಅಷ್ಟೇ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಹೆಚ್‍ಡಿಡಿ ಮುಂದೆ ಗಳಗಳನೆ ಅತ್ತ ನಿಖಿಲ್ ಕುಮಾರಸ್ವಾಮಿ 

BJP Congress

ಬಿಜೆಪಿ ಜನ ಸಮುದಾಯದಿಂದ ಹಾಗೂ ಕಾರ್ಯಕರ್ತರಿಂದ ಬೆಳೆದಿರುವ ಪಕ್ಷ. ಇಂತಹ ಘಟನೆಗಳನ್ನು ಸಂಪೂರ್ಣವಾಗಿ ನಿಭಾಯಿಸುವ ಶಕ್ತಿ ಬಿಜೆಪಿಗಿದೆ. ನಾವು ಖಂಡಿತವಾಗಿಯೂ ನಮ್ಮ ಕ್ಷೇತ್ರವನ್ನು ಗಟ್ಟಿಯಾಗಿ ಇಟ್ಟುಕೊಳ್ಳುತ್ತೇವೆ. ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕ ಸೇರಿದಂತೆ ಎಲ್ಲಾ ಕಡೆ ನಮ್ಮ ಹಿಡಿತವನ್ನು ಸಾಧಿಸುವುದಕ್ಕೆ ಬೇಕಾಗಿರುವ ಎಲ್ಲಾ ಕ್ರಮಗಳನ್ನು ನಾವು ತೆಗೆದುಕೊಳ್ಳತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಜಗದೀಶ್ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ – ಪೊಲಿಟಿಕಲ್ ಸೂಸೈಡ್ ಎಂದ ಸುಧಾಕರ್

ಕಳೆದ 50 ವರ್ಷಗಳಿಂದ ಲಿಂಗಾಯತ ನಾಯಕರನ್ನು ತುಳಿದಿದ್ದು ಇದೇ ಕಾಂಗ್ರೆಸ್ ಪಕ್ಷ. ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಿಗೆ ಲಿಂಗಾಯತರ ಮೇಲೆ ಯಾಕಿಷ್ಟು ಪ್ರೀತಿ ಬಂತೋ ಗೊತ್ತಿಲ್ಲ. ಲಿಂಗಾಯತ ಸಮುದಾಯ ಜಾಗೃತ ಸಮುದಾಯವಾಗಿದ್ದು, ಇದುವರೆಗೂ ಯಾರು ಅವರನ್ನು ಬೆಂಬಲಿಸಿದ್ದಾರೆ ಎಂಬುದು ಅವರಿಗೆ ಗೊತ್ತಿದೆ. ಯಡಿಯೂರಪ್ಪನವರಂತಹ (B.S.Yediyurappa) ಮೇರು ನಾಯಕತ್ವ ಹೊಂದಿರುವ ನಾಯಕರು ನಮ್ಮ ಜೊತೆ ಇರುವವರೆಗೂ ಲಿಂಗಾಯತರು ನಮ್ಮ ಜೊತೆಗೆ ಇರುತ್ತಾರೆ ಎಂದರು. ಇದನ್ನೂ ಓದಿ: ಲಿಂಗಾಯತ ನಾಯಕ ಶೆಟ್ಟರ್‌ಗೆ ಬಿಜೆಪಿಯಿಂದಾದ ಅವಮಾನ ಯಾವ ನಾಯಕನಿಗೂ ಆಗದಿರಲಿ: ಸಿದ್ದು 

Jagadish Shettar Hubli National Flag Congress Narendra Modi

ಕಾಂಗ್ರೆಸ್‌ನಲ್ಲಿ ಇದೇ ರೀತಿ ಅವತ್ತಿನ ಜನತಾ ಪಾರ್ಟಿಯಲ್ಲಿದ್ದ ವೀರೇಂದ್ರ ಪಾಟೀಲ್ ಅವರನ್ನು ಕರೆದುಕೊಂಡು ರಾಜ್ಯ ಸುತ್ತಿಸಿ ಅವರ ಮುಖಾಂತರವೇ 180 ಸೀಟ್ ಗೆದ್ದುಕೊಂಡಿದ್ದರು. ಅನಾರೋಗ್ಯಕ್ಕೆ ತುತ್ತಾದಾಗ ಅವರನ್ನು ತೆಗೆದುಹಾಕಿ ಅವಮಾನ ಮಾಡಿರುವಂತಹ ಉದಾಹರಣೆಗಳು ನಮ್ಮ ಕಣ್ಣಮುಂದಿದೆ. ಅಲ್ಲದೇ ಬಂಗಾರಪ್ಪನವರನ್ನು ಉಪಯೋಗಿಸಿಕೊಂಡು ಮುಂದೆ ಅವರನ್ನು ತಿರಸ್ಕಾರ ಮಾಡಿರುವುದೂ ನಮಗೆ ಗೊತ್ತಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ವಿಭಜನೆಯಾದಾಗ ಗಟ್ಟಿಯಾಗಿ ಇಂದಿರಾ ಕಾಂಗ್ರೆಸ್ ಅವರೊಂದಿಗೆ ನಿಂತ ದೇವರಾಜ್ ಅರಸ್ ಅವರನ್ನು ಯೂಸ್ ಆ್ಯಂಡ್ ಥ್ರೋ (Use And Throw) ಮಾಡಿ ಅವಮಾನ ಮಾಡಿದ್ದು ಕಾಂಗ್ರೆಸ್ ಪಕ್ಷ. ಇದೆಲ್ಲವೂ ಗೊತ್ತಿದ್ದು ಜಗದೀಶ್ ಶೆಟ್ಟರ್ ಕಾಂಗ್ರೆಸ್ ಪಕ್ಷ ಯಾಕೆ ಸೇರಿದರು ಎಂಬುದು ನನಗೆ ಇನ್ನೂ ಕೂಡಾ ಆಶ್ಚರ್ಯವಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಇದನ್ನೂ ಓದಿ: ಪ್ರಧಾನಿಯಾಗಲು ಶೆಟ್ಟರ್ ಕಾಂಗ್ರೆಸ್ ಸೇರಿದ್ದಾರೆ: ಬಿ.ಸಿ.ಪಾಟೀಲ್‌ 

ಜಗದೀಶ್ ಶೆಟ್ಟರ್ ಅವರ ಕಾಂಗ್ರೆಸ್ ಸೇರ್ಪಡೆಯಿಂದಾಗಿ ನಮ್ಮ ಪಕ್ಷದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ಸಿಗುತ್ತಿದೆ. ಖಂಡಿತವಾಗಿಯೂ ಸಂಪೂರ್ಣ ಬಹುಮತದೊಂದಿಗೆ ಹೊಸ ನಾಯಕತ್ವ ಆಡಳಿತಕ್ಕೆ ಬರಲಿದೆ. ಎಲ್ಲಾ ಸಮುದಾಯಗಳು ಕೂಡಾ ನಮ್ಮ ಬೆಂಬಲಕ್ಕೆ ನಿಲ್ಲುತ್ತವೆ. ಕಾಂಗ್ರೆಸ್ ಪಕ್ಷದ ಈ ಹುನ್ನಾರ ಕೆಲವೇ ದಿನಗಳಲ್ಲಿ ಬಯಲಾಗುತ್ತದೆ ಎಂದರು. ಇದನ್ನೂ ಓದಿ: ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಪೂರ್ವ ನಿಯೋಜಿತ: ಆರ್.ಅಶೋಕ್ ಟೀಕೆ 

ರಾಹುಲ್ ಗಾಂಧಿಯವರ (Rahul Gandhi) 40% ಕಮಿಷನ್ ಆರೋಪದ ಕುರಿತು ಪ್ರತಿಕ್ರಿಯಿದ ಅವರು, ರಾಹುಲ್ ಗಾಂಧಿ ಪಾದಯಾತ್ರೆ ಮಾಡುತ್ತಿದ್ದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಹಗರಣದ ಬಗ್ಗೆ ನಾನೇ ಅವರಿಗೆ ಕಳುಹಿಸಿಕೊಟ್ಟಿದ್ದೇನೆ. 40% ಭ್ರಷ್ಟಾಚಾರದ ಚಾರ್ಜ್‌ಶೀಟ್‌ ಅವರ ಮೇಲಿದೆ. ಅದಕ್ಕೆ ಇದುವರೆಗೂ ಉತ್ತರ ಬಂದಿಲ್ಲ. ಮೊದಲು ಅವರ ಸರ್ಕಾರದಲ್ಲಿ ನಡೆದಂತಹ 40% ಭ್ರಷ್ಟಾಚಾರಕ್ಕೆ (Corruption) ಉತ್ತರ ಕೊಡಲಿ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಶೆಟ್ಟರ್‌ನಿಂದ ಉತ್ತರ ಕರ್ನಾಟಕದಲ್ಲೂ ಕಾಂಗ್ರೆಸ್‌ಗೆ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ: ಖರ್ಗೆ

TAGGED:B. S.YediyurappaBasavaraj BommaibengalurubjpcongresscorruptionelectionJagadish ShettarRahul Gandhiಕಾಂಗ್ರೆಸ್ಚುನಾವಣೆಜಗದೀಶ್ ಶೆಟ್ಟರ್ಬಸವರಾಜ ಬೊಮ್ಮಾಯಿಬಿಎಸ್ ಯಡಿಯೂರಪ್ಪಬಿಜೆಪಿಬೆಂಗಳೂರುಭ್ರಷ್ಟಾಚಾರರಾಹುಲ್ ಗಾಂಧಿ
Share This Article
Facebook Whatsapp Whatsapp Telegram

You Might Also Like

Sivaganga custodial torture case Five policemen arrested victims body bore over 30 injury marks
Crime

Custodial Death Case | ದೇಹದ ಮೇಲೆ 44 ಗಾಯದ ಗುರುತು, ಮೆದುಳಿನಲ್ಲಿ ರಕ್ತಸ್ರಾವ – ಮರಣೋತ್ತರ ಪರೀಕ್ಷಾ ವರದಿ ಔಟ್‌

Public TV
By Public TV
10 minutes ago
bhavana ramanna IVF
Cinema

ಮದುವೆಯಾಗದೆ ಅಮ್ಮನಾಗಲಿರುವ ಭಾವನಾ ರಾಮಣ್ಣ

Public TV
By Public TV
17 minutes ago
Nirmala Sitharaman D.Purandeswari
Latest

ಇತಿಹಾಸದಲ್ಲೇ ಮೊದಲ ಬಾರಿಗೆ ಬಿಜೆಪಿಗೆ ಮಹಿಳಾ ಸಾರಥ್ಯ?

Public TV
By Public TV
23 minutes ago
PM Modi dines on traditional Trinidadian Sohari leaf
Bidar

ಟ್ರಿನಿಡಾಡ್‌ನ ಸಾಂಪ್ರದಾಯಿಕ ಸೊಹರಿ ಎಲೆಯಲ್ಲಿ ಭೋಜನ ಸವಿದ ಪ್ರಧಾನಿ ಮೋದಿ

Public TV
By Public TV
29 minutes ago
Rayachoti
Crime

ಬೆಂಗಳೂರು ಸ್ಫೋಟದ ಸೂತ್ರಧಾರಿ ಅರೆಸ್ಟ್‌ – ಶಂಕಿತರ ಮನೆಯಲ್ಲಿ ಭಾರೀ ಪ್ರಮಾಣದ ದೇಶ ವಿನಾಶಕಾರಿ ವಸ್ತುಗಳು ಪತ್ತೆ

Public TV
By Public TV
31 minutes ago
Prajwal Devaraj birthday gift from the Mafia team
Cinema

ಪ್ರಜ್ವಲ್ ಹುಟ್ಟುಹಬ್ಬಕ್ಕೆ `ಮಾಫಿಯಾ’ ಟೀಮ್ ಗಿಫ್ಟ್

Public TV
By Public TV
51 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?