Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಸೋಮಣ್ಣನನ್ನು ಬಲವಂತವಾಗಿ ವರುಣಾದಲ್ಲಿ ನಿಲ್ಲಿಸಿದ್ದಾರೆ: ಸಿದ್ದರಾಮಯ್ಯ

Public TV
Last updated: April 18, 2023 4:24 pm
Public TV
Share
2 Min Read
SIDDARAMAIAH 1 2
SHARE

ಮೈಸೂರು: ನನ್ನ ಬಗ್ಗೆ ವರುಣಾ (Varuna) ಜನರಿಗೆ ಅಪಾರವಾದ ಪ್ರೀತಿಯಿದೆ. ನನ್ನ ಮತ್ತು ವರುಣಾ ಸಂಬಂಧವನ್ನು ಕಿತ್ತುಹಾಕಲು ಯಾರಿಂದಲೂ ಸಾಧ್ಯವಿಲ್ಲ. ಯಾರೇ ಬರಲಿ, ಯಾರೇ ಅಭ್ಯರ್ಥಿಗಳನ್ನು ಬದಲಾಯಿಸಲಿ ಏನೇ ಆದರೂ ನನ್ನ ಗೆಲುವು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

ಮೈಸೂರಿನಲ್ಲಿ (Mysuru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾದ ಸೋಮಣ್ಣನಿಗೂ (V.Somanna) ವರುಣಾ ಕ್ಷೇತ್ರಕ್ಕೂ ಸಂಬಂಧವಿಲ್ಲ. ಬಿಜೆಪಿಯವರು ಅವರನ್ನು ಬಲವಂತವಾಗಿ ಈ ಕ್ಷೇತ್ರದಲ್ಲಿ ನಿಲ್ಲಿಸಿದ್ದಾರೆ. ಅವನು ನಮ್ಮ ಜಿಲ್ಲೆಯವನೂ ಅಲ್ಲ. ಅವನು ರಾಮನಗರ (Ramanagara) ಜಿಲ್ಲೆಯವನಾಗಿದ್ದು, ಬೆಂಗಳೂರಿನಲ್ಲಿ (Bengaluru) ರಾಜಕಾರಣ ಮಾಡಿದ್ದಾನೆ. ವರುಣಾ ಕ್ಷೇತ್ರಕ್ಕೆ ಒಬ್ಬ ದುಡ್ಡಿರುವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎನ್ನುವ ಸಲುವಾಗಿ ಸೋಮಣ್ಣನನ್ನು ಇಲ್ಲಿ ನಿಲ್ಲಿಸಿದ್ದಾರೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ಅಮವಾಸ್ಯೆ ದಿನದಂದು ಸತೀಶ್‌ ಜಾರಕಿಹೊಳಿ‌ ನಾಮಪತ್ರ ಸಲ್ಲಿಕೆ 

BJP Congress

ವರುಣಾವನ್ನು ತಾಲೂಕು ಕೇಂದ್ರವನ್ನಾಗಿ ಮಾಡುತ್ತೇವೆ ಎಂಬ ಸಿಎಂ ಭರವಸೆಯ ವಿಚಾರವಾಗಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದ 4 ವರ್ಷಗಳ ಆಡಳಿತದಲ್ಲಿ ಯಾಕೆ ಮಾಡಲಿಲ್ಲ? ವರುಣಾ ತಾಲೂಕು ಕೇಂದ್ರ ಎಂಬುದು ಗೊತ್ತಾಗಲಿಲ್ಲ ಎಂದರೆ ಅವರು ರಾಜೀನಾಮೆ ನೀಡಲಿ. ರಾಜ್ಯ ಗೊತ್ತಿಲ್ಲ ಎಂದಮೇಲೆ ಮುಖ್ಯಮಂತ್ರಿ ಯಾಕಾಗಿದ್ದಾರೆ? ಮೊದಲು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಲಿ. ಈಗ ಚುನಾವಣೆ ಬಂದಮೇಲೆ ಗೊತ್ತಾಗಿದೆ ಎಂದರೆ ಅದು ಎಂತಹಾ ಮರೆವಿರಬಹುದು ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಬಿಗ್‌ ಶಾಕ್‌ – ವಿನಯ್‌ ಕುಲಕರ್ಣಿ ಧಾರವಾಡ ಪ್ರವೇಶಿಸುವಂತಿಲ್ಲ 

Siddaramaiah 5 1

ಬಿಜೆಪಿ (BJP) ಸರ್ಕಾರ ಅಧಿಕಾರಕ್ಕೆ ಬಂದ ಮೊದಲ ಕ್ಯಾಬಿನೆಟ್‌ನಲ್ಲಿಯೇ ವರುಣಾ ಕ್ಷೇತ್ರವನ್ನು ತಾಲೂಕನ್ನಾಗಿ ಮಾಡುತ್ತೇವೆ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನೂರಕ್ಕೆ ಇನ್ನೂರು ಪರ್ಸೆಂಟ್ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಅವರಿಗೆ ಕೇವಲ 60 ಸೀಟ್ ಒಳಗಡೆ ಅಷ್ಟೇ ಬರುವುದು. ಈ ನಾಲ್ಕು ವರ್ಷದಲ್ಲಿ ಮೈಸೂರಿಗೆ ಹಾಗೂ ವರುಣಾ ಕೇತ್ರಕ್ಕೆ ಏನು ಮಾಡಿದ್ದಾರೆ ಇವರು? ಇದೇ ಸೋಮಣ್ಣ ಉಸ್ತುವಾರಿ ಸಚಿವನಾಗಿದ್ದಾಗ ವರುಣಾ ಕೇತ್ರದ ಜನರಿಗೆ ಒಂದು ಮನೆ ಕೊಟ್ಟಿದ್ದಾನಾ? ಸೂರಿಲ್ಲದವರಿಗೆ ಸೂರು ನೀಡಿದ್ದಾನಾ? ಮನೆ ಕೇಳಲು ಹೋದವರಿಗೆ ಕಪಾಳಕ್ಕೆ ಹೊಡೆದಿದ್ದಾರೆ ಎಂದು ಜನಗಳೇ ಹೇಳುತ್ತಿದ್ದಾರೆ. ಈಗ ಚುನಾವಣೆ ಸಮಯದಲ್ಲಿ ಬಂದು ಅದು ಮಾಡುತ್ತೇವೆ ಇದು ಮಾಡುತ್ತೇವೆ ಎಂದರೆ ಇಲ್ಲಿಯವರೆಗೆ ಅಭಿವೃದ್ಧಿ ಕೆಲಸ ಮಾಡಿದವರು ಯಾರು ಎಂದು ಪ್ರಶ್ನೆಗಳ ಸುರಿಮಳೆಗೈದರು. ಇದನ್ನೂ ಓದಿ: ಅಣ್ಣಾಮಲೈ ವಿರುದ್ಧವೂ ಕಿಡಿಕಾರಿದ ಜಗದೀಶ್ ಶೆಟ್ಟರ್ 

ಬೊಮ್ಮಾಯಿ (Basavaraj Bommai) ಸುಳ್ಳು ಹೇಳುವುದರಲ್ಲಿ ನಿಸ್ಸೀಮರು. ನಂಬರ್ ಒನ್ ಸುಳ್ಳುಗಾರ. ರಾಮದಾಸ್ ಅವರಿಗೆ ಟಿಕೆಟ್ ಕೊಡಲಿಲ್ಲ. ಜಗದೀಶ್ ಶೆಟ್ಟರ್ (Jagadish Shettar) ಅವರಿಗೂ ಟಿಕೆಟ್ ದಕ್ಕಲಿಲ್ಲ. ಈಶ್ವರಪ್ಪನವರಿಗೆ ಸರಿಯಾದ ಪಾಠ ಕಲಿಸಿದ್ದಾರೆ. ಅವರಿಗೆ ಬಾಯಿ ಸರಿ ಇರಲಿಲ್ಲ. ಲಕ್ಷ್ಮಣ ಸವದಿ (Laxman Savadi) ಕೂಡಾ ಹಿರಿಯ ನಾಯಕರು. ಅವರಿಗೂ ಯಾಕೆ ಟಿಕೆಟ್ ತಪ್ಪಿಸಿದರು? ಬಿಜೆಪಿ ಈಗ ಬಿಎಲ್ ಸಂತೋಷ್ (B.L.Santhosh) ಎಂಬ ವ್ಯಕ್ತಿಯ ಕಪಿಮುಷ್ಠಿಯಲ್ಲಿದೆ. ಬಿಜೆಪಿಯ ಈ ಎಲ್ಲಾ ಬೆಳವಣಿಗೆಗಳಿಗೆ ಸಂತೋಷ್ ಕಾರಣ. ಸೋಮಣ್ಣನವರನ್ನು ಹರಕೆ ಕುರಿ ಮಾಡಲು ಇಲ್ಲಿ ನಿಲ್ಲಿಸಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ‘ಟಿಕೆಟ್ ಕೈತಪ್ಪಲು ಸಂತೋಷ್ ಕಾರಣ’ – ಶೆಟ್ಟರ್ ಆರೋಪಕ್ಕೆ ನಾವ್ ತಲೆಕೆಡಿಸಿಕೊಳ್ಳಲ್ಲ: ಬೊಮ್ಮಾಯಿ 

ನಮ್ಮ ಪಕ್ಷಕ್ಕೆ ನಮ್ಮ ಸಿದ್ಧಾಂತವನ್ನು ಒಪ್ಪಿಕೊಂಡು ಯಾರೇ ಬಂದರು ಕೂಡಾ ಸೇರಿಸಿಕೊಳ್ಳುತ್ತೇವೆ. ಇವತ್ತು ನಮ್ಮ ಕಾರ್ಯಕರ್ತರನ್ನು ಭೇಟಿ ಮಾಡಿ ನಾಳೆ ನಾಮಪತ್ರವನ್ನು (Nomination Papers) ಸಲ್ಲಿಸುತ್ತೇನೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಶೆಟ್ಟರ್ ನಮ್ಮ ಸಿದ್ಧಾಂತ ಒಪ್ಪಿಕೊಳ್ಳುತ್ತಾರೆ: ಪರಮೇಶ್ವರ್

TAGGED:Basavaraj BommaibjpcongresselectionmysurusiddaramaiahV.Somannavarunaಕಾಂಗ್ರೆಸ್ಚುನಾವಣೆಬಸವರಾಜ ಬೊಮ್ಮಾಯಿಬಿಜೆಪಿಮೈಸೂರುವರುಣಾವಿ.ಸೋಮಣ್ಣಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema News

Vishnuvardhan Memorial 3
ದಾದಾ ಅಂತ್ಯಕ್ರಿಯೆ ಸ್ಥಳದಲ್ಲೇ ಸ್ಮಾರಕ ನಿರ್ಮಿಸಲಿ – ಫಿಲ್ಮ್ ಚೇಂಬರ್‌ಗೆ ವಿಷ್ಣು ಅಭಿಮಾನಿಗಳ ಸಂಘ ಮನವಿ
Cinema Latest Sandalwood Top Stories
Actor Jaggesh at mantralaya 1
ರಾಯರ ಮಧ್ಯಾರಾಧನೆಯಲ್ಲಿ ನಟ ಜಗ್ಗೇಶ್ ಭಾಗಿ
Cinema Districts Latest Raichur Sandalwood Top Stories
rana daggubati
ಆನ್‌ಲೈನ್ ಬೆಟ್ಟಿಂಗ್ – ಇ.ಡಿ ವಿಚಾರಣೆಗೆ ಹಾಜರಾದ ನಟ ರಾಣಾ ದಗ್ಗುಬಾಟಿ
Cinema Latest Top Stories
Dhruva Sarja Raghavendra Hegde
ಧ್ರುವ ಬಳಗದ ಆರೋಪಕ್ಕೆ ನಿರ್ದೇಶಕ ರಾಘವೇಂದ್ರ ಹೆಗಡೆ ಸ್ಪಷ್ಟನೆ
Cinema Latest Sandalwood Top Stories
darshan 28 years cinema journey
ದರ್ಶನ್ ಸಿನಿ ಜರ್ನಿಗೆ 28 ವರ್ಷ: ‘ಡಿ’ ಫ್ಯಾನ್ಸ್ ಸಂಭ್ರಮ
Cinema Latest Sandalwood Top Stories

You Might Also Like

8 Women Die On Way To Temple After Van Falls Off Road On Hilly Terrain In Pune
Crime

30 ಅಡಿ ಕಂದಕಕ್ಕೆ ಉರುಳಿದ ವ್ಯಾನ್ – 8 ಮಹಿಳೆಯರು ಸಾವು, 29 ಮಂದಿಗೆ ಗಾಯ

Public TV
By Public TV
5 hours ago
Dharmasthala Mass Burial Probe NHRC begins work on document collection
Districts

ಧರ್ಮಸ್ಥಳ ಬುರುಡೆ ರಹಸ್ಯ – ದಾಖಲೆ ಸಂಗ್ರಹಿಸುವ ಕೆಲಸ ಆರಂಭಿಸಿದ NHRC

Public TV
By Public TV
5 hours ago
BASAVARAJU FINE
Chamarajanagar

ಸೆಲ್ಫಿ ತೆಗೆಯಲು ಹೋಗಿ ಕಾಡಾನೆ ದಾಳಿಯಿಂದ ಜಸ್ಟ್ ಮಿಸ್ ಆಗಿದ್ದ ವ್ಯಕ್ತಿಗೆ 25 ಸಾವಿರ ದಂಡ!

Public TV
By Public TV
5 hours ago
Basavaraj Bommai 1
Districts

ಗದಗ-ಯಲವಿಗಿ ರೈಲ್ವೆ ಯೋಜನೆ ಆರಂಭಿಸಲು ಕೇಂದ್ರ ರೈಲ್ವೆ ಸಚಿವರಿಗೆ ಬೊಮ್ಮಾಯಿ ಮನವಿ

Public TV
By Public TV
6 hours ago
Mansukh Mandaviya
Latest

ಪ್ರತಿಪಕ್ಷಗಳ ಪ್ರತಿಭಟನೆ ನಡುವೆ ಲೋಕಸಭೆಯಲ್ಲಿ ಐತಿಹಾಸಿಕ ಕ್ರೀಡಾ ಆಡಳಿತ, ಡೋಪಿಂಗ್ ತಡೆ ಮಸೂದೆ ಅಂಗೀಕಾರ

Public TV
By Public TV
6 hours ago
Brijesh Chowta
Latest

ರಾಜ್ಯದಲ್ಲಿ `ಆಯುಷ್ಮಾನ್ ಭಾರತ್’ ಯೋಜನೆ ಜಾರಿಯಾಗದಿರುವುದಕ್ಕೆ ಲೋಕಸಭೆಯಲ್ಲಿ ಕ್ಯಾ.ಚೌಟ ಕಳವಳ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?