Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ: ಬಿಜೆಪಿ ವಿರುದ್ಧ ದೇಮ ಕಿಡಿ

Public TV
Last updated: April 25, 2023 1:27 pm
Public TV
Share
2 Min Read
devanoor mahadevaa 1
SHARE

– ಬಿಜೆಪಿ ಸೋಲಿಸೋಣ ಎಂದು ಮತದಾರರಿಗೆ ಸಾಹಿತಿಗಳು, ಚಿಂತಕರು ಕರೆ

ಬೆಂಗಳೂರು: ಸಂಘ ಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಿ. ಮುಂದಿನ ಚುನಾವಣೆಯಲ್ಲಿ ಯಾವ ಪಕ್ಷ ಗೆಲ್ಲುತ್ತೆ ಅನ್ನೋದು ಮುಖ್ಯವಲ್ಲ. ಮೊದಲು ಈ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಬಿಜೆಪಿ ಸರ್ಕಾರದ ವಿರುದ್ಧ ಹಿರಿಯ ಸಾಹಿತಿ ದೇವನೂರ ಮಹಾದೇವ (Devanur Mahadeva) ಕಿಡಿಕಾರಿದರು.

ರಾಜ್ಯದಲ್ಲಿ ಬಿಜೆಪಿ (BJP) ಸರ್ಕಾರದ ಆಡಳಿತದ ವಿರುದ್ಧ ಕೆಲ ಚಿಂತಕರು, ಸಾಹಿತಿಗಳು ಹಾಗೂ ಬುದ್ಧಿಜೀವಿಗಳು ಅಸಮಾಧಾನ ಹೊರಹಾಕಿದ್ದಾರೆ. ಚುನಾವಣೆ ಹೊತ್ತಿನಲ್ಲೇ ಇಂದು ಎದ್ದೇಳು ಕರ್ನಾಟಕ ಸಂಘವು ಸುದ್ದಿಗೋಷ್ಠಿ ನಡೆಸಿ ಸರ್ಕಾರದ ಆಡಳಿತವನ್ನು ಟೀಕಿಸಿದ್ದಾರೆ. ಈ ವೇಳೆ ಮಾತನಾಡಿದ ಸಾಹಿತಿ ದೇವನೂರ ಮಹಾದೇವ, ಮತದಾರರು ಹೆಚ್ಚು ಜಾಗೃತರಾಗಿದ್ದಾರೆ. ಇದುವರೆಗೆ ಇಷ್ಟು ಜಾಗೃತರಾಗಿರಲಿಲ್ಲ. ಸ್ಪರ್ಧಿಗಳಿಗೆ ಬೆವರಿಳಿಸುತ್ತಿದ್ದಾರೆ.‌ ಡಬಲ್ ಎಂಜಿನ್ ಸರ್ಕಾರ ಅಂತಾ ಕೇಳಿ ಕೇಳಿ ಕಿವಿ ತೂತು ಆಗಿದೆ. ಡಬಲ್ ಎಂಜಿನ್ ಸರ್ಕಾರ ಅಂತಾ ಹೇಳಿ ಅಭಿವೃದ್ಧಿಯ ಬುಡ ಅಲ್ಲಾಡಿಸುತ್ತಾರೆ ಎಂದು ಗುಡುಗಿದರು. ಇದನ್ನೂ ಓದಿ: ತಮಿಳುನಾಡಿನ ಮುಂದಿನ ಮುಖ್ಯಮಂತ್ರಿ ಅಣ್ಣಾಮಲೈ ಎಂದ ತೇಜಸ್ವಿ ಸೂರ್ಯ

eddelu karnataka sangha 2

ಬಿಜೆಪಿ ಬಾಯಿ ಬಿಟ್ರೆ ಕಾಂಗ್ರೆಸ್ ಏನ್ ಮಾಡ್ತು ಅಂತಾರೆ. ಆದ್ರೆ ಸಾರ್ವಜನಿಕ ಆಸ್ತಿಗಳನ್ನು ಕಾಂಗ್ರೆಸ್ ರಕ್ಷಣೆ ಮಾಡಿದೆ. ಡಬಲ್ ಎಂಜಿನ್‌ನ ಒಂದು ಎಂಜಿನ್‌ನಲ್ಲಿ ಧರ್ಮದ ದ್ವೇಷ, ಇನ್ನೊಂದು ಎಂಜಿನ್‌ನಲ್ಲಿ 40% ಕಮಿಷನ್‌ ಸೌಂಡ್ ಮಾಡ್ತಿದೆ ಅಷ್ಟೆ. ಬಿಜೆಪಿ ಸರ್ಕಾರವನ್ನು ಗುಜರಿಗೆ ಹಾಕಿ ಎಂದು ಕರೆ ನೀಡಿದರು.

ವರುಣಾದಲ್ಲಿ ಪ್ರಚಾರದ ವೇಳೆ ಸಂಸದ ಪ್ರತಾಪ್‌ ಸಿಂಹ ಅವರನ್ನು ಜನ ತರಾಟೆಗೆ ತೆಗೆದುಕೊಂಡ ವಿಷಯದ ಬಗ್ಗೆ ಮಾತನಾಡಿ, ಪ್ರತಾಪ್ ಸಿಂಹಗೆ ಮೊನ್ನೆ ವರುಣಾದಲ್ಲಿ ಜನ ಬೆವರಿಳಿಸಿದ್ರು. ಹಿಗ್ಗಾಮುಗ್ಗಾ ಜಾಡಿಸಿದ್ರು ಎಂದು ತಿಳಿಸಿದರು. ಇದನ್ನೂ ಓದಿ: ನನ್ನ ರೋಡ್ ಶೋ ಮುಂದೆ ಬಿಜೆಪಿ, ಕಾಂಗ್ರೆಸ್‌ನದ್ದು ಏನೇನು ಅಲ್ಲ: ಹೆಚ್‌ಡಿಕೆ ವ್ಯಂಗ್ಯ

eddelu karnataka sangha 1

ಭಾರತ್ ಜೋಡೊ ಯಾತ್ರೆಯ ಬಳಿಕ ಕಾಂಗ್ರೆಸ್ ಚೇತರಿಕೆ ಕಾಣುತ್ತಿದೆ. ಕಾಂಗ್ರೆಸ್ ಬಲವಾಗಿ ಇಲ್ಲದ ಕಡೆ ಜೆಡಿಎಸ್‌ನ್ನು ಗೆಲ್ಲಿಸೋಣ. ಬಿಜೆಪಿಯನ್ನು ಸೋಲಿಸೋಣ‌‌ ಎಂದರು.

ಹಿರಿಯ ಸಾಹಿತಿ ರಹಮತ್ ತರೀಕೆರೆ ಮಾತನಾಡಿ, ಮತೀಯ ರಾಷ್ಟೀಯವಾದಿ ಪಕ್ಷಗಳಿಂದ ಕರ್ನಾಟಕ ಕಳೆದ ನಾಲ್ಕು ವರ್ಷಗಳಿಂದ ಭಗ್ನವಾಗಿದೆ. ಕನ್ನಡಿಗರು ಕಷ್ಟಪಟ್ಟು ಕಟ್ಟಿದ ಬ್ಯಾಂಕ್‌ಗಳು ಲೂಟಿಯಾಯಿತು. ಅಮುಲ್ ವಿಚಾರದಲ್ಲಿಯೂ ಹಿಂದಿ ಹೇರಿಕೆ ಶುರುವಾಯಿತು. ತಮಿಳುನಾಡು ಈ ವಿಚಾರದಲ್ಲಿ ಪ್ರತಿಭಟನೆ ಮಾಡುತ್ತೆ. ಆದರೆ ಕರ್ನಾಟಕದಲ್ಲಿ ಇದರ ವಿರುದ್ಧ ಸಿಡಿದೇಳಬೇಕು ಎಂದು ಹೇಳಿದರು. ಇದನ್ನೂ ಓದಿ: ಬಿಎಸ್‌ವೈ ಭೇಟಿ ಮಾಡಿದ ಬಿಎಲ್ ಸಂತೋಷ್ – ಕುತೂಹಲ ಮೂಡಿಸಿದ ನಾಯಕರ ಭೇಟಿ

ರೈತ ಹೋರಾಟಗಾರ ವೀರಸಂಗಯ್ಯ ಮಾತನಾಡಿ, ಈ ಬಾರಿ ಬಿಜೆಪಿ ಸರ್ಕಾರವನ್ನು ಸೋಲಿಸಬೇಕು. ರೈತ ವಿರೋಧಿ ಪಕ್ಷವಿದು ಎಂದು ಗುಡುಗಿದರು. ಸುದ್ದಿಗೋಷ್ಠಿಯಲ್ಲಿ ಸಂಯುಕ್ತ ಕಿಸಾನ್‌ ಮೋರ್ಚಾ ನಾಯಕ ಯೋಗೇಂದ್ರ ಯಾದವ್ ಭಾಗವಹಿಸಿದ್ದರು.

TAGGED:devanoora mahadevarahamat tarikereಕರ್ನಾಟಕ ಚುನಾವಣೆದೇವನೂರ ಮಹಾದೇವಬಿಜೆಪಿರಹಮತ್‌ ತರೀಕೆರೆ
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
7 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
10 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
15 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
47 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
53 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
1 hour ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
2 hours ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?