ರಾಯ್ಪುರ: ಛತ್ತೀಸ್ಗಢದಲ್ಲಿ (Chhatisgarh) ಮತ್ತೆ ನಕ್ಸಲರು (Naxals) ಅಟ್ಟಹಾಸ ಮೆರೆದಿದ್ದು, ಚಾಲಕ ಹಾಗೂ 10 ಪೊಲೀಸ್ ಸಿಬ್ಬಂದಿ ಸೇರಿ 11 ಯೋಧರು ಹುತಾತ್ಮರಾದ ಘಟನೆ ಗುರುವಾರದಲ್ಲಿ ದಾಂತೇವಾಡದಲ್ಲಿ (Dantewada) ನಡೆದಿದೆ.
ಛತ್ತೀಸ್ಗಢದ ದಾಂತೇವಾಡ ಜಿಲ್ಲೆಯಲ್ಲಿ ಗುಪ್ತಚರ ಮಾಹಿತಿಯ ಮೇರೆಗೆ ಪ್ರಾರಂಭವಾದ ನಕ್ಸಲ್ ವಿರೋಧಿ ಕಾರ್ಯಾಚರಣೆಯಿಂದ ಪೊಲೀಸರು ಹಿಂತಿರುಗುತ್ತಿದ್ದರು. ಈ ವೇಳೆ ಈ ಘಟನೆ ನಡೆದಿದೆ. ಯೋಧರು ಸಂಚರಿಸುತ್ತಿದ್ದ ವಾಹನವನ್ನು ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ)ಯಿಂದ ದಾಳಿ ನಡೆಸಿ ಸ್ಫೋಟಿಸಿದ್ದಾರೆ. ಇದರ ಪರಿಣಾಮವಾಗಿ 10 ಭದ್ರತಾ ಸಿಬ್ಬಂದಿ ಮತ್ತು ಚಾಲಕ ಮೃತಪಟ್ಟಿದ್ದಾರೆ. ಘಟನೆಗೆ ಸಂಬಂಧಿಸಿ ಸ್ಥಳಕ್ಕೆ ನಕ್ಸಲ್ ನಿಗ್ರಹ ದಳ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
#WATCH | On reports of an IED attack by naxals on security personnel in Dantewada, claiming the lives of 11 personnel, Chhattisgarh CM Bhupesh Baghel says, “There is such information with us. It is very saddening. My condolences to the bereaved families. This fight is in its last… https://t.co/n1YV67sIoi pic.twitter.com/CC8Dj0uAca
— ANI (@ANI) April 26, 2023
ಘಟನೆ ಕುರಿತು ಛತ್ತೀಸ್ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಪ್ರತಿಕ್ರಿಯಿಸಿ, ಹುತಾತ್ಮ ಯೋಧರಿಗೆ ಸಂತಾಪ ಸೂಚಿಸಿದ ಅವರು, ದಾಳಿಯಲ್ಲಿ ಭಾಗಿಯಾಗಿರುವ ನಕ್ಸಲರನ್ನು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಈ ಹೋರಾಟವು ಕೊನೆಯ ಹಂತದಲ್ಲಿದೆ. ನಕ್ಸಲರನ್ನು ಬಿಡಲಾಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಬೆನ್ನಿಗೆ ಚೂರಿ ಹಾಕಿದ ಶೆಟ್ಟರ್, ಸವದಿ ಸೋಲಿಸುವ ಹೊಣೆ ನನ್ನದು- ಯಡಿಯೂರಪ್ಪ
ನಕ್ಸಲರೆಂದು ಕರೆಯಲ್ಪಡುವ ಮಾವೋವಾದಿಗಳು ಕಳೆದ 6 ದಶಕಗಳಿಂದ ನೂರಾರು ಜನರನ್ನು ಹತ್ಯೆಗೈದು ಸರ್ಕಾರದ ವಿರುದ್ಧ ಸಶಸ್ತ್ರ ಬಂಡಾಯವನ್ನು ನಡೆಸುತ್ತಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ `ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಮಾಡ್ಬೇಕು – ನಿರ್ಮಲಾ ಸೀತಾರಾಮನ್ ಕರೆ