Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ ಭರ್ಜರಿ ಪೈಪೋಟಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ ಭರ್ಜರಿ ಪೈಪೋಟಿ

Districts

ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್-ಬಿಜೆಪಿ ಭರ್ಜರಿ ಪೈಪೋಟಿ

Public TV
Last updated: April 27, 2023 4:55 pm
Public TV
Share
3 Min Read
raichur
SHARE

ರಾಯಚೂರು: ಜಿಲ್ಲೆಯ ರಾಯಚೂರು ಗ್ರಾಮೀಣ ಕ್ಷೇತ್ರ (Raichur Rural Constituency) ಪರಿಶಿಷ್ಟ ಪಂಗಡ ಮೀಸಲು ಕ್ಷೇತ್ರವಾಗಿದ್ದು ಹಲವಾರು ವಿಶೇಷತೆಗಳನ್ನು ಹೊಂದಿದೆ. 2008 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಕಲ್ಮಲಾ ಕ್ಷೇತ್ರ ರಾಯಚೂರು ಗ್ರಾಮೀಣ ಕ್ಷೇತ್ರವಾಗಿ ಮರುನಾಮಕರಣವಾಯಿತು. ಮರು ವಿಂಗಡಣೆಗೂ ಮುನ್ನ ಕಲ್ಮಲಾ ಕ್ಷೇತ್ರದಲ್ಲಿ ಗೆದ್ದ ಬಹುತೇಕರು ಮಂತ್ರಿಗಳಾಗಿ ಮೆರೆದದ್ದು ಈ ಕ್ಷೇತ್ರದ ವಿಶೇಷತೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದಲ್ಲಿ ಭರ್ಜರಿ ಪೈಪೋಟಿ ಎದುರಾಗುವ ಸಾಧ್ಯತೆಯಿದ್ದು, ಕಾಂಗ್ರೆಸ್ (Congress) ಹಾಗೂ ಬಿಜೆಪಿ (BJP) ಮಧ್ಯೆ ನೇರ ಹಣಾಹಣಿ ಇದೆ. ಜೆಡಿಎಸ್ ಪಕ್ಷ ಸಹ ಪೈಪೋಟಿಯಲ್ಲಿದೆ. ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವು ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಕಾಂಗ್ರೆಸ್ ಪಕ್ಷದಿಂದ ಹಾಲಿ ಶಾಸಕ ಬಸನಗೌಡ ದದ್ದಲ, ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್, ಜೆಡಿಎಸ್‌ನಿಂದ ಸಣ್ಣ ನರಸಿಂಹ ನಾಯಕ್ ಕಣದಲ್ಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ 2ನೇ ಬಾರಿಗೆ ಗೆಲುವು ಸಾಧಿಸಿ ಕ್ಷೇತ್ರದಲ್ಲಿ ಒಮ್ಮೆ ಗೆದ್ದವರು ಸತವಾಗಿ 2 ಬಾರಿ ಗೆಲ್ಲುವುದು ಸುಲಭವಲ್ಲ ಎನ್ನೋದನ್ನು ಸುಳ್ಳು ಮಾಡಲು ಹೊರಟಿದ್ದಾರೆ. ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ್ ಮತ್ತೊಮ್ಮೆ ಮತದಾರರ ವಿಶ್ವಾಸ ಸಾಧಿಸಲು ಹರಸಾಹಸ ನಡೆಸಿದ್ದಾರೆ. ಜೆಡಿಎಸ್ ಅಭ್ಯರ್ಥಿ ಸಣ್ಣ ನರಸಿಂಹ ನಾಯಕ್ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ.

ಅಭ್ಯರ್ಥಿಗಳ ಪ್ಲಸ್ ಮತ್ತು ಮೈನಸ್:
ಪರಿಶಿಷ್ಟ ಪಂಗಡಕ್ಕೆ ಮೀಸಲಾಗಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಲಿ ಶಾಸಕ ಬಸನಗೌಡ ದದ್ದಲ ಹೆಸರು ಉಳಿಸಿಕೊಂಡಿದ್ದಾರೆ. ಹೀಗಾಗಿ ಜನರ ಒಲವು ಇನ್ನೂ ಕಾಂಗ್ರೆಸ್ ಕಡೆ ಕಾಣುತ್ತಿದೆ. ಕ್ಷೇತ್ರದ ಜನರ ಜೊತೆ ಸದಾ ಸಂಪರ್ಕದಲ್ಲಿರುವುದು, ಹೆಚ್ಚು ಆಶ್ವಾಸನೆಗಳನ್ನು ಕೊಡದೆ, ಕ್ಷೇತ್ರದ ಜನರ ನಂಬಿಕೆಯನ್ನು ಉಳಿಸಿಕೊಂಡಿರುವುದು ಬಸನಗೌಡ ದದ್ದಲ್‌ಗೆ ಪ್ಲಸ್ ಆಗಲಿದೆ. ಆದರೆ ಕಾಂಗ್ರೆಸ್ ಪಕ್ಷದಲ್ಲಿನ ಒಳರಾಜಕೀಯ, ಪರಿಶಿಷ್ಟ ಪಂಗಡ ಸಮುದಾಯ ಮುಖಂಡರಾಗಿದ್ದ ಮಾಜಿ ಸಂಸದ ಬಿವಿ ನಾಯಕ್ ಬಿಜೆಪಿ ಸೇರ್ಪಡೆಯಾಗಿದ್ದು ಸ್ವಲ್ಪ ಹಿನ್ನಡೆ ಉಂಟು ಮಾಡಬಹುದು.

ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ತಿಪ್ಪರಾಜು ಹವಾಲ್ದಾರ ಕ್ಷೇತ್ರದ ತುಂಬಾ ಓಡಾಟ ನಡಿಸಿದ್ದಾರೆ. ರಾಜ್ಯ ಹಾಗೂ ಕೇಂದ್ರ ಸರ್ಕಾರದ ಯೋಜನೆಗಳು, ನೆರೆ ಸಂದರ್ಭದಲ್ಲಿ ಬಿಎಸ್‌ವೈ ಅಭಿವೃದ್ಧಿ ಕೆಲಸಗಳು ಅಭ್ಯರ್ಥಿಗೆ ಪ್ಲಸ್ ಆಗಬಹುದು. ಶಾಸಕರಾಗಿದ್ದಾಗ ನೀಡಿದ ಭರಪೂರ ಭರವಸೆಗಳು ಭರವಸೆಗಳಾಗೇ ಉಳಿದಿರುವುದು, ಚುನಾವಣೆಯಲ್ಲಿ ಸೋತ ಬಳಿಕ ಕ್ಷೇತ್ರದ ಜನರಿಂದ ದೂರ ಉಳಿದದ್ದು ಮೈನಸ್ ಆಗಬಹುದು. ಇದನ್ನೂ ಓದಿ: ಮಾನ್ವಿ ಕ್ಷೇತ್ರದಲ್ಲಿ ಖಾತೆಯನ್ನೇ ತೆರೆಯದ ಬಿಜೆಪಿ – ಈ ಬಾರಿ ಯಾರ ಕೈ ಹಿಡಿಯಲಿದ್ದಾನೆ ಮತದಾರ?

ಜೆಡಿಎಸ್ ಅಭ್ಯರ್ಥಿ ಸಣ್ಣ ನರಸಿಂಹ ನಾಯಕ್ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯರಾಗಿದ್ದು, ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ತನ್ನದೇ ಆದ ಮತ ಬ್ಯಾಂಕ್ ಇರುವುದು ಪ್ಲಸ್ ಆಗಬಹುದು. ಆದರೆ ಕ್ಷೇತ್ರದ ಎಲ್ಲಾ ಭಾಗಗಳ ಜನರೊಂದಿಗೆ ಉತ್ತಮ ಒಡನಾಟ ಇಲ್ಲದಿರುವುದು ಅಭ್ಯರ್ಥಿಗೆ ಮೈನಸ್ ಆಗಬಹುದು.

ಚುನಾವಣೆಯಲ್ಲಿ ಚರ್ಚೆಗೆ ಗ್ರಾಸವಾಗುವ ವಿಷಯಗಳು:
ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಕುಡಿಯುವ ನೀರು, ರಸ್ತೆ ಸಮಸ್ಯೆ, ಕೃಷ್ಣಾ ನದಿ ನಡುಗಡ್ಡೆ ಗ್ರಾಮಗಳಿಗೆ ಸೇತುವೆ ನಿರ್ಮಾಣ ಕಾಮಗಾರಿ ಅಪೂರ್ಣವಾಗಿರುವ ವಿಷಯಗಳು ಚರ್ಚೆಯ ಮುನ್ನೆಲೆಗೆ ಬರುತ್ತಲೇ ಇರುತ್ತವೆ. ಕ್ಷೇತ್ರದ ಬಹುತೇಕ ಗ್ರಾಮಗಳು ಕೃಷ್ಣಾ ನದಿ ದಂಡೆಯಲ್ಲಿ ಬರುವುದರಿಂದ ಪ್ರವಾಹ ಭೀತಿ, ಗ್ರಾಮ ಸ್ಥಳಾಂತರ ವಿಷಯಗಳು ಚರ್ಚೆಯಾಗುತ್ತವೆ.

2023ರ ಚುನಾವಣೆಗೆ ಕ್ಷೇತ್ರದ ಒಟ್ಟು ಮತದಾರರ ಸಂಖ್ಯೆ 2,27,761 ಇದೆ. ಇದರಲ್ಲಿ ಪುರುಷರು 1,12,041, ಮಹಿಳೆಯರು 1,15,665 ಹಾಗೂ 55 ತೃತೀಯ ಲಿಂಗಿ ಮತದಾರರಿದ್ದಾರೆ. ಜಾತಿವಾರು ಅಂದಾಜು ಮತದಾರರ ಸಂಖ್ಯೆ ಈ ರೀತಿ ಇದೆ.
ಪರಿಶಿಷ್ಟ ಜಾತಿ – 45,000
ಪರಿಶಿಷ್ಟ ಪಂಗಡ – 30,000
ಗಂಗಾಮತಸ್ಥರು – 28,000
ಕುರುಬರು – 35,000
ಲಿಂಗಾಯತ – 25,000
ಮುಸ್ಲಿಂ – 20,000 ಹಾಗೂ ಇತರೆ ಜಾತಿಯ ಉಳಿದ ಮತದಾರರಿದ್ದಾರೆ.

ಇದುವರೆಗೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ 8 ಬಾರಿ, ಜನತಾದಳ, ಜೆಡಿಎಸ್, ಜೆಎಸ್‌ಪಿ, ಬಿಜೆಪಿ, ಪಕ್ಷೇತರ ತಲಾ 1 ಬಾರಿ ಗೆದ್ದಿವೆ. 2008 ರಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಬಳಿಕ ಕ್ಷೇತ್ರದಲ್ಲಿ ಒಂದು ಬಾರಿ ಗೆದ್ದವರು ಮತ್ತೊಮ್ಮೆ ಗೆದ್ದಿಲ್ಲ. ಈ ಬಾರಿ ಕಾಂಗ್ರೆಸ್ ಬಿಜೆಪಿ ಮಧ್ಯೆ ಪೈಪೋಟಿಯಿದ್ದು ಜೆಡಿಎಸ್ ಅಭ್ಯರ್ಥಿ ಸಹ ಗೆಲುವಿಗಾಗಿ ಸೆಣೆಸಾಟ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕ ಬಿಜೆಪಿ ಕಾರ್ಯಕರ್ತರಿಗೆ ಮೋದಿ ನೀಡಿದ ಸಂದೇಶ ಏನು?

TAGGED:assembly electionBasanagowda DaddalabjpcongressjdsraichurRaichur Rural ConstituencySanna Narasimha NayakTipparaju Havaldarಕಾಂಗ್ರೆಸ್ಜೆಡಿಎಸ್ತಿಪ್ಪರಾಜು ಹವಾಲ್ದಾರ್ಬಸನಗೌಡ ದದ್ದಲಬಿಜೆಪಿರಾಯಚೂರು ಗ್ರಾಮೀಣ ಕ್ಷೇತ್ರವಿಧಾನಸಭಾ ಚುನಾವಣೆಸಣ್ಣ ನರಸಿಂಹ ನಾಯಕ್
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
1 hour ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
2 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
2 hours ago
Dharwad Suicide
Dharwad

ಧಾರವಾಡ | ಮರ್ಯಾದೆಗೆ ಅಂಜಿ ವಿದ್ಯಾರ್ಥಿ ನೇಣಿಗೆ ಶರಣು

Public TV
By Public TV
2 hours ago
gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
4 hours ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?