ರಾಜ್ಯದಲ್ಲಿ ಇನ್ನೂ 5 ದಿನಗಳ ಕಾಲ ವರುಣನ ಆರ್ಭಟ ಸಾಧ್ಯತೆಯಿದೆ. ಮಹಾರಾಷ್ಟ್ರದ ವಿದರ್ಭದ ಪಶ್ಚಿಮ ಭಾಗದಿಂದ ದಕ್ಷಿಣ ಒಳನಾಡಿನತ್ತ ಗಾಳಿ ದಿಕ್ಕು ಚಲಿಸಲಿದ್ದು, 5 ದಿನಗಳು ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 28, 29, 30 ರಂದು ಕೆಲವೆಡೆ ಸಾಧಾರಣ ಮಳೆಯಾಗಲಿದೆ.
ಉತ್ತರ ಒಳನಾಡಿನಲ್ಲಿ 3 ದಿನಕ್ಕೆ ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. 29 ಹಾಗೂ 30 ರಂದು ದಕ್ಷಿಣ ಒಳನಾಡಿಗೂ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಏಪ್ರಿಲ್ 29 ರಂದು ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ, ಮೈಸೂರು, ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಏಪ್ರಿಲ್ 30 ರಂದು ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾಸನ, ಕೋಲಾರ, ಮಂಡ್ಯ ಜಿಲ್ಲೆಗಳಿಗೆ ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್ ಕೊಡಲಾಗಿದೆ. ಈಗಾಗಲೇ ಬೆಂಗಳೂರಲ್ಲಿ ಮೋಡ ಕವಿದ ವಾತಾವರಣವಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ತಿಳಿಸಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-22
ಮಂಗಳೂರು: 33-27
ಶಿವಮೊಗ್ಗ: 33-22
ಬೆಳಗಾವಿ: 33-21
ಮೈಸೂರು: 33-22
ಮಂಡ್ಯ: 34-22
ಮಡಿಕೇರಿ: 27-17
ರಾಮನಗರ: 33-23
ಹಾಸನ: 32-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 33-22
ಉಡುಪಿ: 34-27
ಕಾರವಾರ: 33-27
ಚಿಕ್ಕಮಗಳೂರು: 30-19
ದಾವಣಗೆರೆ: 36-23
ಹುಬ್ಬಳ್ಳಿ: 35-23
ಚಿತ್ರದುರ್ಗ: 34-22
ಹಾವೇರಿ: 36-23
ಬಳ್ಳಾರಿ: 37-25
ಗದಗ: 35-23
ಕೊಪ್ಪಳ: 36-24
ರಾಯಚೂರು: 36-25
ಯಾದಗಿರಿ: 36-25
ವಿಜಯಪುರ: 34-24
ಬೀದರ್: 33-22
ಕಲಬುರಗಿ: 34-24
ಬಾಗಲಕೋಟೆ: 36-24