ಮೋದಿ ವಿರುದ್ಧ ಮಾತನಾಡಲ್ಲ, ಇಲ್ಲಿಯೇ ಓಣಿ ಓಣಿ ತಿರುಗಿದ್ದು ಸರಿ ಅನಿಸಿಲ್ಲ: ಖರ್ಗೆ

Public TV
1 Min Read
MALLIKARJUN KHARGE 1

ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ (Assembly Election 2023) ಅತೀ ದೊಡ್ಡ ಗೆಲುವಿನ ಪಕ್ಷವಾಗಿ ಕಾಂಗ್ರೆಸ್ (Congress)ಹೊರಹೊಮ್ಮಿದೆ. ಈ ಬಾರಿ ಅಧಿಕಾರದ ಚುಕ್ಕಾಣಿ ಹಿಡಿಯುವಷ್ಟು ಮತದಾರ ಪಕ್ಷವನ್ನು ಕೈ ಹಿಡಿದಿದ್ದಾನೆ. ಈ ಸಂದರ್ಭದಲ್ಲಿ ಮಾತನಾಡಿದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ಕಾಂಗ್ರೆಸ್ ಗೆಲ್ಲಿಸಿದ್ದಕ್ಕೆ ಕರ್ನಾಟಕದ ಜನತೆಗೆ ಧನ್ಯವಾಗಳನ್ನು ತಿಳಿಸಿದ್ದಾರೆ.

MALLIKARJUN KHARGE 3

ಮಾಧ್ಯಮಗಳೊಂದಿಗೆ ಮಾತನಾಡಿದ ಖರ್ಗೆ, ‘ಜನರು ಒಳ್ಳೆ ಕೆಲಸ ಮಾಡಿದರೆ ಒಳ್ಳೆಯವರ ಕೈ ಹಿಡಿತಾರೆ. ಸೋಲಲಿ ಗೆಲ್ಲಲಿ ಜನರ ಮಧ್ಯೆ ಇರಬೇಕು. ಇದು ಕೇವಲ ಒಬ್ಬರ ಗೆಲುವಲ್ಲ, ಎಲ್ಲರೂ ಒಗ್ಗೂಡಿ ಕೆಲಸ ಮಾಡಿದ್ದಾರೆ. ಹಾಗಾಗಿ ಗೆದ್ದಿದ್ದೇವೆ. ಜೊತೆಗೆ ನಮ್ಮ ಗ್ಯಾರಂಟಿ ಕೂಡ ಕೆಲಸ ಮಾಡಿದೆ. ಗ್ಯಾರಂಟಿಗಳಿಗೆ ಜನ ಸ್ಪಂದಿಸಿದ್ದಾರೆ’ ಎಂದರು. ಇದನ್ನೂ ಓದಿ: Karnataka Election 2023 Result – ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ; ಸಿಎಂ ಸ್ಥಾನಕ್ಕೆ ಬೊಮ್ಮಾಯಿ ಇಂದು ರಾಜೀನಾಮೆ LIVE Updates

Mallikarjun Kharge

ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಕುರಿತು ಮಾತನಾಡಿದ ಖರ್ಗೆ, ‘ಯಾವುದಕ್ಕೂ ವ್ಯಕ್ತಿಗತವಾಗಿ ಮೋದಿ ವಿರುದ್ದ ಮಾತನಾಡಲ್ಲ. ಆದರೆ ಮೋದಿಯವರು ಇಲ್ಲಿಯೇ ಓಣಿ ಓಣಿ ತಿರುಗಿದ್ದು ಸರಿ ಅನಿಸಿಲ್ಲ. ಅವರ ಕ್ಯಾಂಪೇನ್ ಮಾಡುವ ಅವರ ಸ್ಟೈಲ್ ಗೆ ನಾನು ಯಾವುದೇ ಟೀಕೆ ಮಾಡುವುದಿಲ್ಲ. ವಿಷ ಸರ್ಪದ ವಿಚಾರಗಳನ್ನೆಲ್ಲ ಈಗ ಬಿಟ್ಟುಬಿಡಿ, ನಾವೂ ಮಾತನಾಡಿದೆವು, ಅವರೂ ಮಾತನಾಡಿದರು. ಗೆದ್ದ ಮೇಲೆ ಎಲ್ಲರನ್ನೂ ತೆಗೆದುಕೊಂಡು ಹೋಗುವುದು ಈಗ ನಮ್ಮ ಕೆಲಸ’ ಎಂದರು.

Share This Article