ಧಾರವಾಡ: ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿರುವ ವಿನಯ್ ಕುಲಕರ್ಣಿಯವರಿಗೆ (Vinay Kulkarni) ಉಪಮುಖ್ಯಮಂತ್ರಿ (Deputy Chief Minister) ಸ್ಥಾನ ನೀಡಬೇಕು ಎಂದು ಮುರುಘಾಮಠದ ಡಾ.ಮಲ್ಲಿಕಾರ್ಜುನ ಸ್ವಾಮೀಜಿ ಒತ್ತಾಯಿಸಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿನಯ್ ಕುಲಕರ್ಣಿ ಜನಪ್ರಿಯ ಶಾಸಕರು. ಉತ್ತರ ಕರ್ನಾಟಕದ ಪ್ರಬಲ ನಾಯಕರು. ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿದರೆ ಚೆನ್ನಾಗಿರುತ್ತದೆ. ಇದು ನನ್ನ ಸ್ವಂತ ವಿಚಾರ. ಸಾಮಾಜಿಕವಾಗಿ ನಾನು ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: 135 ಶಾಸಕರು ನಮ್ಮವರೇ, ಹೈಕಮಾಂಡ್ ಪಾದಕ್ಕೆ ಹಾಕಿದ್ದೀವಿ: ಡಿಕೆ ಶಿವಕುಮಾರ್
ವಿನಯ್ ಕುಲಕರ್ಣಿ ಮುರುಘಾಮಠದ (Murugamata) ಕಾರ್ಯಾಧ್ಯಕ್ಷರು. ಅವರ ಜೊತೆ ಉಳಿದ ಲಿಂಗಾಯತ ಶಾಸಕರಿಗೂ ಒಳ್ಳೆಯ ಸ್ಥಾನಮಾನ ಕೊಡಬೇಕು. ವಿನಯ್ ಕುಲಕರ್ಣಿ ಈ ಹಿಂದೆಯೂ ಸಚಿವರಾಗಿ ಕೆಲಸ ಮಾಡಿದ್ದಾರೆ. ಅವರಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದೇ ಆದಲ್ಲಿ ಅವರು ಇನ್ನೂ ಎತ್ತರಕ್ಕೆ ಬೆಳೆಯಲು ಪುಷ್ಠಿ ನೀಡಿದಂತಾಗುತ್ತದೆ. ಅವರು ನಮ್ಮ ಮಠದ ಕಾರ್ಯಾಧ್ಯಕ್ಷರಾಗಿರುವುದರಿಂದ ಇದರಲ್ಲೂ ನಮ್ಮ ಸ್ವಾರ್ಥ ಇದೆ ಎಂದಿದ್ದಾರೆ. ಇದನ್ನೂ ಓದಿ: ಕಜಕಿಸ್ತಾನದಿಂದ ಬೆದರಿಕೆ ಕರೆ – ಪೊಲೀಸರಿಗೆ ದೂರು ನೀಡಿದ ಈಶ್ವರಪ್ಪ