Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ನಮ್ಮ ಪಕ್ಷದ ವಿಚಾರ ನಿಮಗ್ಯಾಕೆ – 3 ವರ್ಷ ಕಡಲೆಬೀಜ ತಿಂತಿದ್ರಾ?: ಸುಧಾಕರ್‌ಗೆ ಪ್ರದೀಪ್ ಈಶ್ವರ್ ಟಾಂಗ್

Public TV
Last updated: May 18, 2023 12:05 pm
Public TV
Share
2 Min Read
Pradeep Eshwar
SHARE

– ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಪತನ ಆಗೋಕೆ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಕಾರಣ ಎಂಬ ಮಾಜಿ ಸಚಿವ ಸುಧಾಕರ್ (K Sudhakar) ಟ್ವೀಟ್‌ಗೆ ಚಿಕ್ಕಬಳ್ಳಾಪುರ (Chikkaballapur) ನೂತನ ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ ಎಂದು ಟಾಂಗ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು ಮೈಲಪನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ನಿಮ್ಮದೇ ಪಕ್ಷದ ಎಂಟಿಬಿ ನಾಗರಾಜ್ ಅವರೇ ನಿಮ್ಮ ಟ್ವೀಟ್‌ಗೆ ಕೌಂಟರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಬೇಡಿ, ಬಾಯಿ ಮುಚ್ಚಿಕೊಂಡು ಇರಿ. ನಮ್ಮ ಪಕ್ಷದ ಆತಂರಿಕ ವಿಚಾರ ನಿಮಗ್ಯಾಕೆ? 3 ವರ್ಷ ಕಡಲೆಬೀಜ ತಿಂತಿದ್ರಾ ಎಂದು ಟಾಂಗ್ ಕೊಟ್ಟಿದ್ದಾರೆ.

Pradeep Eshwar 3

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನ ತಂದೆ-ತಾಯಿ ಇದ್ದಂತೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಯಾರೇ ಸಿಎಂ ಆದದೂ ನನಗೆ ಸಂತೋಷ. ಅವರಿಬ್ಬರು ಎರಡು ಕಣ್ಣುಗಳಿದ್ದಂತೆ ಎಂದರು.

ಗ್ರಾಮದ ಮನೆ ಮನೆಗೂ ಭೇಟಿ:
ಚುನಾವಣಾ ಪ್ರಚಾರದ ವೇಳೆ ಕೊಟ್ಟ ಮಾತಿನಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ಗುರುವಾರ ಮನೆ ಮನೆಗೆ ಭೇಟಿ ನೀಡಿ ಜನರ ಕುಂದುಕೊರತೆ ಸಮಸ್ಯೆಗಳನ್ನು ಆಲಿಸಿದರು. ಚಿಕ್ಕಬಳ್ಳಾಪುರ ನಮಸ್ತೆ ಎಂಬ ವಿನೂತನ ಕಾರ್ಯಕ್ರಮ ರೂಪಿಸಿರುವ ಪ್ರದೀಪ್ ಈಶ್ವರ್, ಬೆಳಿಗ್ಗೆ 6 ಗಂಟೆಗೆ, ಸೂರ್ಯೋದಯಕ್ಕೂ ಮುನ್ನ, ಜನ ನಿದ್ದೆಯಿಂದ ಎಚ್ಚರ ಆಗೋಕು ಮುನ್ನವೇ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

Pradeep Eshwar 1

ಅಧಿಕಾರಿಗಳ ಜೊತೆ ಮನೆ ಮನೆಗೆ ತೆರಳಿ ಖುದ್ದಾಗಿ ಜನರ ಸಮಸ್ಯೆಗಳನ್ನು ಪ್ರದೀಪ್ ಈಶ್ವರ್ ಆಲಿಸಿದ್ದಾರೆ. ಜನ ಪಿಂಚಣಿ ಸಮಸ್ಯೆ, ಮನೆ ನಿವೇಶನ ಸಮಸ್ಯೆ, ವಿದ್ಯುತ್ ಲೈನ್ ಬದಲಾವಣೆಯ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು ಅಧಿಕಾರಿಗಳು ಪರಿಹಾರ ಮಾಡುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ನಾವು ಕರೆಂಟ್ ಬಿಲ್ ಕಟ್ಟಲ್ಲ, ಅದ್ಯಾವ್ ನನ್ಮಗ ಬರ್ತಾನೋ ಬರಲಿ- ಬೆಸ್ಕಾಂ ಸಿಬ್ಬಂದಿಗೆ ವೃದ್ಧೆ ಅವಾಜ್

ಇದೇ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಹ ಶೈಕ್ಷಣಿಕವಾಗಿ ದತ್ತು ಪಡೆದ ಪ್ರದೀಪ್ ಈಶ್ವರ್, ಇಬ್ಬರನ್ನು ಖಾಸಗಿ ಕಾಲೇಜಿಗೆ ತಮ್ಮ ವೈಯಕ್ತಿಕ ಹಣ ಕಟ್ಟಿ ದಾಖಲಾತಿ ಮಾಡಲು ತಮ್ಮ ಆಪ್ತ ಸಿಬ್ಬಂದಿಗೆ ಸೂಚಿಸಿದರು.

Pradeep Eshwar 2

ಈ ವೇಳೆ ಮಾತನಾಡಿದ ಈಶ್ವರ್, ಜನ ನನ್ನ ಬಳಿ ಬರಬಾರದು. ನಾನೇ ಅವರ ಬಳಿ ಹೋಗಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಅನ್ನೋ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಿದ್ದು. ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಜನರ ಕಷ್ಟಗಳನ್ನು ಆಲಿಸುವ ಕೆಲಸ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

TAGGED:chikkaballapurcongressK SudhakarPradeep Eshwarಕಾಂಗ್ರೆಸ್ಕೆ.ಸುಧಾಕರ್ಚಿಕ್ಕಬಳ್ಳಾಪುರಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
12 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
22 hours ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
1 day ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
2 days ago

You Might Also Like

Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
6 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
6 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
7 hours ago
Australia vs South Africa WTC final
Cricket

WTC Final – ಬೌಲರ್‌ಗಳ ಅಬ್ಬರಕ್ಕೆ ಮೊದಲ ದಿನವೇ 14 ವಿಕೆಟ್‌ ಪತನ

Public TV
By Public TV
6 hours ago
DK Shivakumar 7
Latest

ಜಾತಿಗಣತಿ ವಿರೋಧಿಸಿದ್ದ ಬಿಜೆಪಿ, ಈಗ ಮರು ಸಮೀಕ್ಷೆ ವಿರೋಧಿಸುತ್ತಿರುವುದೇಕೆ – ಡಿಕೆಶಿ ಪ್ರಶ್ನೆ

Public TV
By Public TV
6 hours ago
Biligiriranga hills
Bengaluru City

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಆರ್ಭಟ – ಅಲ್ಲಲ್ಲಿ ಅನಾಹುತ ಸೃಷ್ಟಿ

Public TV
By Public TV
7 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?