Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkaballapur

ನಮ್ಮ ಪಕ್ಷದ ವಿಚಾರ ನಿಮಗ್ಯಾಕೆ – 3 ವರ್ಷ ಕಡಲೆಬೀಜ ತಿಂತಿದ್ರಾ?: ಸುಧಾಕರ್‌ಗೆ ಪ್ರದೀಪ್ ಈಶ್ವರ್ ಟಾಂಗ್

Public TV
Last updated: May 18, 2023 12:05 pm
Public TV
Share
2 Min Read
Pradeep Eshwar
SHARE

– ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ

ಚಿಕ್ಕಬಳ್ಳಾಪುರ: ಸಮ್ಮಿಶ್ರ ಸರ್ಕಾರ ಪತನ ಆಗೋಕೆ ಸಿದ್ದರಾಮಯ್ಯನವರೇ ಪರೋಕ್ಷವಾಗಿ ಕಾರಣ ಎಂಬ ಮಾಜಿ ಸಚಿವ ಸುಧಾಕರ್ (K Sudhakar) ಟ್ವೀಟ್‌ಗೆ ಚಿಕ್ಕಬಳ್ಳಾಪುರ (Chikkaballapur) ನೂತನ ಕಾಂಗ್ರೆಸ್ (Congress) ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸುಧಾಕರ್ ಅವರೇ ಬಾಯಿ ಮುಚ್ಚಿಕೊಂಡು ಇರಿ ಎಂದು ಟಾಂಗ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ತಾಲೂಕು ಮೈಲಪನಹಳ್ಳಿ ಗ್ರಾಮದಲ್ಲಿ ಮಾತನಾಡಿದ ಪ್ರದೀಪ್ ಈಶ್ವರ್, ನಿಮ್ಮದೇ ಪಕ್ಷದ ಎಂಟಿಬಿ ನಾಗರಾಜ್ ಅವರೇ ನಿಮ್ಮ ಟ್ವೀಟ್‌ಗೆ ಕೌಂಟರ್ ಕೊಟ್ಟಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಬಗ್ಗೆ ಮಾತನಾಡಬೇಡಿ, ಬಾಯಿ ಮುಚ್ಚಿಕೊಂಡು ಇರಿ. ನಮ್ಮ ಪಕ್ಷದ ಆತಂರಿಕ ವಿಚಾರ ನಿಮಗ್ಯಾಕೆ? 3 ವರ್ಷ ಕಡಲೆಬೀಜ ತಿಂತಿದ್ರಾ ಎಂದು ಟಾಂಗ್ ಕೊಟ್ಟಿದ್ದಾರೆ.

Pradeep Eshwar 3

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ರಾಜಕೀಯವಾಗಿ ನನ್ನ ತಂದೆ-ತಾಯಿ ಇದ್ದಂತೆ. ಸಿದ್ದರಾಮಯ್ಯ ಹಾಗೂ ಡಿಕೆಶಿ ಯಾರೇ ಸಿಎಂ ಆದದೂ ನನಗೆ ಸಂತೋಷ. ಅವರಿಬ್ಬರು ಎರಡು ಕಣ್ಣುಗಳಿದ್ದಂತೆ ಎಂದರು.

ಗ್ರಾಮದ ಮನೆ ಮನೆಗೂ ಭೇಟಿ:
ಚುನಾವಣಾ ಪ್ರಚಾರದ ವೇಳೆ ಕೊಟ್ಟ ಮಾತಿನಂತೆ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ನೂತನ ಶಾಸಕ ಪ್ರದೀಪ್ ಈಶ್ವರ್ ಗುರುವಾರ ಮನೆ ಮನೆಗೆ ಭೇಟಿ ನೀಡಿ ಜನರ ಕುಂದುಕೊರತೆ ಸಮಸ್ಯೆಗಳನ್ನು ಆಲಿಸಿದರು. ಚಿಕ್ಕಬಳ್ಳಾಪುರ ನಮಸ್ತೆ ಎಂಬ ವಿನೂತನ ಕಾರ್ಯಕ್ರಮ ರೂಪಿಸಿರುವ ಪ್ರದೀಪ್ ಈಶ್ವರ್, ಬೆಳಿಗ್ಗೆ 6 ಗಂಟೆಗೆ, ಸೂರ್ಯೋದಯಕ್ಕೂ ಮುನ್ನ, ಜನ ನಿದ್ದೆಯಿಂದ ಎಚ್ಚರ ಆಗೋಕು ಮುನ್ನವೇ ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

Pradeep Eshwar 1

ಅಧಿಕಾರಿಗಳ ಜೊತೆ ಮನೆ ಮನೆಗೆ ತೆರಳಿ ಖುದ್ದಾಗಿ ಜನರ ಸಮಸ್ಯೆಗಳನ್ನು ಪ್ರದೀಪ್ ಈಶ್ವರ್ ಆಲಿಸಿದ್ದಾರೆ. ಜನ ಪಿಂಚಣಿ ಸಮಸ್ಯೆ, ಮನೆ ನಿವೇಶನ ಸಮಸ್ಯೆ, ವಿದ್ಯುತ್ ಲೈನ್ ಬದಲಾವಣೆಯ ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದ್ದು ಅಧಿಕಾರಿಗಳು ಪರಿಹಾರ ಮಾಡುವಂತೆ ಸೂಚನೆ ನೀಡಿದರು. ಇದನ್ನೂ ಓದಿ: ನಾವು ಕರೆಂಟ್ ಬಿಲ್ ಕಟ್ಟಲ್ಲ, ಅದ್ಯಾವ್ ನನ್ಮಗ ಬರ್ತಾನೋ ಬರಲಿ- ಬೆಸ್ಕಾಂ ಸಿಬ್ಬಂದಿಗೆ ವೃದ್ಧೆ ಅವಾಜ್

ಇದೇ ಗ್ರಾಮದಲ್ಲಿ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ಬಡ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸಹ ಶೈಕ್ಷಣಿಕವಾಗಿ ದತ್ತು ಪಡೆದ ಪ್ರದೀಪ್ ಈಶ್ವರ್, ಇಬ್ಬರನ್ನು ಖಾಸಗಿ ಕಾಲೇಜಿಗೆ ತಮ್ಮ ವೈಯಕ್ತಿಕ ಹಣ ಕಟ್ಟಿ ದಾಖಲಾತಿ ಮಾಡಲು ತಮ್ಮ ಆಪ್ತ ಸಿಬ್ಬಂದಿಗೆ ಸೂಚಿಸಿದರು.

Pradeep Eshwar 2

ಈ ವೇಳೆ ಮಾತನಾಡಿದ ಈಶ್ವರ್, ಜನ ನನ್ನ ಬಳಿ ಬರಬಾರದು. ನಾನೇ ಅವರ ಬಳಿ ಹೋಗಬೇಕು. ಅವರ ಸಮಸ್ಯೆಗಳನ್ನು ಪರಿಹರಿಸಬೇಕು ಅನ್ನೋ ಉದ್ದೇಶದಿಂದ ಈ ಕಾರ್ಯಕ್ರಮ ರೂಪಿಸಿದ್ದು. ಪ್ರತಿದಿನ ಬೆಳಗ್ಗೆ 6 ರಿಂದ 9 ಗಂಟೆಯವರೆಗೆ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ಭೇಟಿ ನೀಡಿ ಮನೆ ಮನೆಗೆ ತೆರಳಿ ಜನರ ಕಷ್ಟಗಳನ್ನು ಆಲಿಸುವ ಕೆಲಸ ಮಾಡುವುದಾಗಿ ತಿಳಿಸಿದರು. ಇದನ್ನೂ ಓದಿ: ಗಾಂಧಿ ಕುಟುಂಬದವರ ಆದೇಶಕ್ಕೆ ನಾವು ತಲೆ ಬಾಗಲೇಬೇಕು: ಡಿಕೆಶಿ

TAGGED:chikkaballapurcongressK SudhakarPradeep Eshwarಕಾಂಗ್ರೆಸ್ಕೆ.ಸುಧಾಕರ್ಚಿಕ್ಕಬಳ್ಳಾಪುರಪ್ರದೀಪ್ ಈಶ್ವರ್
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
31 minutes ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
46 minutes ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
50 minutes ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
1 hour ago
11A Seat
Latest

ಮೃತ್ಯುಂಜಯ `ವಿಶ್ವಾಸ್ ಎಫೆಕ್ಟ್’ – 11A ಲಕ್ಕಿ ಸೀಟಿಗೆ ಫುಲ್ ಡಿಮ್ಯಾಂಡ್!

Public TV
By Public TV
1 hour ago
Fire Accident Dubai UAE
Latest

ದುಬೈನ 67 ಅಂತಸ್ತಿನ ಕಟ್ಟಡದಲ್ಲಿ ಭಾರೀ ಅಗ್ನಿ ಅವಘಡ – 4,000 ಜನರ ಸ್ಥಳಾಂತರ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?