Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

Latest

ನೂತನ ಸಂಸತ್ ಭವನದಲ್ಲಿ ಇಡಲಾಗುತ್ತದೆ ಚಿನ್ನದ ರಾಜದಂಡ – ಸೆಂಗೊಲ್ ವಿಶೇಷತೆ ಏನು?

Public TV
Last updated: May 24, 2023 3:12 pm
Public TV
Share
3 Min Read
SENGOL
SHARE

ನವದೆಹಲಿ: ಮೇ 28ರಂದು ಪ್ರಧಾನಿ ನರೇಂದ್ರ ಮೋದಿಯವರಿಂದ (Narendra Modi) ಉದ್ಘಾಟನೆಗೊಳ್ಳಲಿರುವ ಹೊಸ ಸಂಸತ್ತಿನಲ್ಲಿ (Parliment) ಚಿನ್ನದ ರಾಜದಂಡವನ್ನು ಇಡಲಾಗುತ್ತದೆ.

ಗೃಹ ಸಚಿವ ಅಮಿತ್ ಶಾ (Amit Shah) ಸುದ್ದಿಗೋಷ್ಠಿ ನಡೆಸಿ ಹೊಸ ಸಂಸತ್ತಿನಲ್ಲಿ ಸ್ಪೀಕರ್ ಸ್ಥಾನದ ಬಳಿ ನರೇಂದ್ರ ಮೋದಿಯವರು ಐತಿಹಾಸಿಕ ಚಿನ್ನದ ರಾಜದಂಡ ‘ಸೆಂಗೊಲ್’ (Sengol) ಇರಿಸಲಿದ್ದಾರೆ ಎಂದು ಘೋಷಿಸಿದ್ದಾರೆ. ಇದನ್ನೂ ಓದಿ: ಹವಾಲಾ ಹಣದ ಮೇಲೆ ED, IT ನಿಗಾ – ಪೆಟ್ರೋಲ್ ಬಂಕ್ ಮೇಲೆ ಕಣ್ಣು

SENGOL 1

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತೀಯರಿಗೆ ಅಧಿಕಾರದ ಹಸ್ತಾಂತರವನ್ನು ಗುರುತಿಸಲು ಈ ರಾಜದಂಡವನ್ನು ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರು ಅವರಿಗೆ ಬ್ರಿಟಿಷ್ ಆಡಳಿತ ಹಸ್ತಾಂತರಿಸಿತ್ತು. ಈ ರಾಜದಂಡವನ್ನು ‘ಸೆಂಗೊಲ್’ ಎಂದು ಕರೆಯಲಾಗುತ್ತದೆ. ಇದು ತಮಿಳು ಪದ ‘ಸೆಮ್ಮೈʼನಿಂದ ಬಂದಿದೆ ಎಂದರು.

ಸೆಂಗೊಲ್‌ನ ಇತಿಹಾಸ ಮತ್ತು ಮಹತ್ವ ಅನೇಕರಿಗೆ ತಿಳಿದಿಲ್ಲ. ಹೊಸ ಸಂಸತ್ತಿನಲ್ಲಿ ಇದನ್ನು ಸ್ಥಾಪಿಸುವುದರಿಂದ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ನಮ್ಮ ಆಧುನಿಕತೆಯೊಂದಿಗೆ ಜೋಡಿಸುವ ಪ್ರಯತ್ನವಾಗುತ್ತದೆ. ಹೊಸ ಸಂಸತ್ತಿನಲ್ಲಿ ಸೆಂಗೋಲ್ ಅಳವಡಿಸುವ ಯೋಜನೆಯು ಪ್ರಧಾನಿ ಮೋದಿಯವರ ದೂರದೃಷ್ಟಿಯನ್ನು ಪ್ರತಿಬಿಂಬಿಸುತ್ತದೆ. ಸೆಂಗೊಲ್ ಈಗ ಅಲಹಾಬಾದ್‌ನ ವಸ್ತುಸಂಗ್ರಹಾಲಯದಲ್ಲಿದೆ. ಅಲ್ಲಿಂದ ಸಂಸತ್ತಿಗೆ ತಂದು ಪ್ರಧಾನಿ ಮೋದಿಯವರು ಸ್ಪೀಕರ್ ಸ್ಥಾನದ ಬಳಿ ಅದನ್ನು ಸ್ಥಾಪಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಚಿಲ್ಲರೆ ವ್ಯಾಪಾರಿಗಳು ಗ್ರಾಹಕರ ಮೊಬೈಲ್ ನಂಬರ್ ಕೇಳುವಂತಿಲ್ಲ – ಕೇಂದ್ರ ಸರ್ಕಾರ

ಸೆಂಗೊಲ್ ಅನ್ನು ರಾಜಕೀಯಕ್ಕೆ ಜೋಡಿಸಬಾರದು. ಆಡಳಿತವು ಕಾನೂನಿನ ನಿಯಮದಿಂದ ನಡೆಯಬೇಕೆಂದು ನಾವು ಬಯಸುತ್ತೇವೆ. ಇದು ಯಾವಾಗಲೂ ಅದನ್ನು ನಮಗೆ ನೆನಪಿಸುತ್ತದೆ. ಅಲ್ಲದೇ ಸಂಸತ್ತಿನಲ್ಲಿ ರಾಜದಂಡದ ಸ್ಥಾಪನೆಯು ಮರೆತುಹೋದ ಇತಿಹಾಸವನ್ನು ನಮಗೆ ನೆನಪಿಸುವಂತೆ ಮಾಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ರಾತ್ರೋರಾತ್ರಿ ಟ್ರಕ್‌ನಲ್ಲಿ ಪ್ರಯಾಣ – ಚಾಲಕನ ಸಮಸ್ಯೆ ಆಲಿಸಿದ ರಾಗಾ

ಸೆಂಗೊಲ್ ಮಹತ್ವವೇನು?
ಬ್ರಿಟಿಷ್ ಇಂಡಿಯಾದ ಕೊನೆಯ ವೈಸರಾಯ್ ಲಾರ್ಡ್ ಮೌಂಟ್ ಬ್ಯಾಟನ್ ಅವರು ನೆಹರೂ ಅವರ ಜೊತೆ ಯಾವ ರೀತಿ ಹಸ್ತಾಂತರ ಮಾಡಬೇಕು ಎಂಬುದರ ಬಗ್ಗೆ ಚರ್ಚಿಸುತ್ತಿದ್ದರು. ಈ ಸಂದರ್ಭದಲ್ಲಿ ಚೋಳರ ಇತಿಹಾಸವನ್ನು ತಿಳಿದಿದ್ದ ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ಸೆಂಗೊಲ್ ನೀಡುವ ಮೂಲಕ ಹಸ್ತಾಂತರಿಸಬಹುದು ಎಂದು ಸಲಹೆ ನೀಡಿದ್ದರು. ಈ ಸಲಹೆ ನೆಹರೂ ಅವರಿಗೆ ಇಷ್ಟವಾಯಿತು. ಇದನ್ನೂ ಓದಿ: ಬ್ಯಾಂಕ್‌ಗಳಲ್ಲಿ ಶುರುವಾಯ್ತು ಪಿಂಕ್ ನೋಟ್ ವಿನಿಮಯ – RBI ಆದೇಶದ ವಿರುದ್ಧ ಹೈಕೋರ್ಟ್‌ಗೆ ಅರ್ಜಿ

ಭಾರತದ ಸ್ವಾತಂತ್ರ‍್ಯವನ್ನು ಗುರುತಿಸುವ ರಾಜದಂಡವನ್ನು ತಯಾರಿಸುವ ಹೊಣೆಯನ್ನು ಭಾರತದ ಕೊನೆಯ ಗವರ್ನರ್ ಜನರಲ್ ಸಿ ರಾಜಗೋಪಾಲಚಾರಿ ವಹಿಸಿದ್ದರು. ಇವರು ತಮಿಳುನಾಡಿನ ಪ್ರಮುಖ ಮಠವಾದ ತಿರುವಾಡುತುರೈ ಅಧೀನಂ ಮಠವನ್ನು ಸಂಪರ್ಕಿಸಿದರು. ಆ ಮಠದ ಶ್ರೀಗಳು ಇದರ ಜವಾಬ್ದಾರಿಯನ್ನು ತೆಗೆದುಕೊಂಡರು. ಮದ್ರಾಸಿನ ಆಭರಣ ವ್ಯಾಪಾರಿಯಾಗಿದ್ದ ವುಮ್ಮಿಡಿ ಬಂಗಾರು ಚೆಟ್ಟಿ ಅವರು ಸೆಂಗೋಲನ್ನು ತಯಾರಿಸಿದ್ದು, ಇದು ಐದು ಅಡಿ ಉದ್ದ ಮತ್ತು ನ್ಯಾಯವನ್ನು ಸಂಕೇತಿಸುವ ‘ನಂದಿ’ಯನ್ನು ಹೊಂದಿದೆ. ಇದನ್ನೂ ಓದಿ: ಜನನ, ಮರಣ ಮಾಹಿತಿ ಮತದಾರರ ಪಟ್ಟಿಗೆ ಜೋಡಣೆ – ಶೀಘ್ರವೇ ಮಸೂದೆ ಮಂಡನೆ

ವರದಿಗಳ ಪ್ರಕಾರ, ಮಠದ ಹಿರಿಯ ಅರ್ಚಕರು ಮೊದಲು ರಾಜದಂಡವನ್ನು ಮೌಂಟ್‌ಬ್ಯಾಟನ್‌ಗೆ ನೀಡಿದ್ದರು. ನಂತರ ರಾಜದಂಡವನ್ನು ಪಡೆದ ಗಂಗಾಜಲವನ್ನು ಸಿಂಪಡಿಸಿದರು. 1947ರ ಆಗಸ್ಟ್ 14 ರಂದು ಪಂಡಿತ್ ಜವಾಹರಲಾಲ್ ನೆಹರು ಅವರು ಹಲವಾರು ನಾಯಕರು ಮತ್ತು ಉನ್ನತ ಗಣ್ಯರ ಸಮ್ಮುಖದಲ್ಲಿ ಸೆಂಗೊಲ್ ಅನ್ನು ಸ್ವೀಕರಿಸಿದರು. ಇದು ಬ್ರಿಟಿಷರಿಂದ ಸ್ವತಂತ್ರ ಭಾರತದ ಜನರಿಗೆ ಅಧಿಕಾರದ ವರ್ಗಾವಣೆಯನ್ನು ಸಂಕೇತಿಸುತ್ತದೆ. ಭಾರತ ಸ್ವಾತಂತ್ರ‍್ಯ ಗಳಿಸಿದ ಮಧ್ಯರಾತ್ರಿಯ 15 ನಿಮಿಷಗಳ ಮೊದಲು ಈ ಸ್ಮರಣೀಯ ಘಟನೆಗಳು ನಡೆದಿತ್ತು. ಪ್ರಧಾನಿ ನೆಹರೂ ರಾಜದಂಡವನ್ನು ಸ್ವೀಕರಿಸುತ್ತಿದ್ದಂತೆ ವಿಶೇಷ ಗೀತೆಯನ್ನು ಮೊಳಗಿಸಲಾಯಿತು. ಇದನ್ನೂ ಓದಿ: ಪಾಕಿಸ್ತಾನದಲ್ಲೂ ಜನ ಮೋದಿಯನ್ನು ಇಷ್ಟಪಡುತ್ತಾರೆ: ಅನೂಪ್ ಜಲೋಟಾ

ತಮಿಳು ಸಂಸ್ಕೃತಿಯಲ್ಲಿ ಚೋಳ ಸಾಮ್ರಾಜ್ಯದ ಕಾಲದಿಂದಲೂ ಸೆಂಗೊಲ್‌ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ನೂತನ ಸಂಸತ್ ಭವನದಲ್ಲಿರುವ ಲೋಕಸಭಾ ಸ್ಪೀಕರ್ ಪೀಠದ ಬಳಿ ರಾಜದಂಡ ಇಡುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೆಮ್ಮಿನ ಸಿರಪ್ ರಫ್ತಿಗೂ ಮುನ್ನ ಪರೀಕ್ಷೆ ಕಡ್ಡಾಯಗೊಳಿಸಿದ ಕೇಂದ್ರ

TAGGED:Amit Shahnarendra modiNew DelhiParlimentSengolಅಮಿತ್ ಶಾನರೇಂದ್ರ ಮೋದಿನವದೆಹಲಿಸಂಸತ್ ಭವನಸೆಂಗೊಲ್
Share This Article
Facebook Whatsapp Whatsapp Telegram

Cinema news

Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories
colors kannada New serial rani
ರಾಣಿ – ಅಮ್ಮ ಮಗಳ ಭಾವುಕ ಪಯಣ..!
Cinema Latest Sandalwood Top Stories
Vijay trisha
ಡಿವೋರ್ಸ್ ಕೇಸ್ ಮಧ್ಯೆ ಒಂದೇ ಬಣ್ಣದ ಉಡುಗೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ವಿಜಯ್-ತ್ರಿಶಾ
Cinema Latest National Top Stories

You Might Also Like

S Jaishankar
Latest

ಐರಿಸ್ ಲವನ್‌ಗೆ ಆಶ್ರಯ ನೀಡಿದ್ದನ್ನು ಸಮರ್ಥಿಸಿಕೊಂಡ ಎಸ್.ಜೈಶಂಕರ್

Public TV
By Public TV
41 minutes ago
Mamata Bbanerjee and Droupadi Murmu
Latest

ಅಂತಾರಾಷ್ಟ್ರೀಯ ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ – ಮಮತಾ ಬ್ಯಾನರ್ಜಿ ವಿರುದ್ಧ ಮುರ್ಮು ಗರಂ

Public TV
By Public TV
2 hours ago
TVK Vijay and sangeeta
Latest

ದಳಪತಿ ವಿಜಯ್‌ಗೆ ದಿನಕ್ಕೊಂದು ಶಾಕ್ – ವಸತಿ ರಕ್ಷಣೆ ಕೋರಿ ಪತ್ನಿ ಸಂಗೀತಾ ಅರ್ಜಿ

Public TV
By Public TV
2 hours ago
BDA Officers
Bengaluru City

4 ಪ್ರತ್ಯೇಕ ಕೇಸ್‌ಗಳಲ್ಲಿ ಬಿಡಿಎ ಅಧಿಕಾರಿಗೆ 1 ಲಕ್ಷ, ಮತ್ತೊಬ್ಬ ಅಧಿಕಾರಿಗೆ 25 ಸಾವಿರ ರೂ. ದಂಡ

Public TV
By Public TV
2 hours ago
Ukraines Kharkiv missile hits
Latest

ಉಕ್ರೇನ್‌ನ ಖಾರ್ಕಿವ್ ಮೇಲೆ ರಷ್ಯಾ ಮಿಸೈಲ್ ದಾಳಿ – ಇಬ್ಬರು ಮಕ್ಕಳು ಸೇರಿ 8 ಮಂದಿ ಸಾವು

Public TV
By Public TV
3 hours ago
Vaibhav Sooryavanshi Uncle Abhishek Chauhan
Cricket

UPSC ಪರೀಕ್ಷೆಯಲ್ಲಿ ಕ್ರಿಕೆಟಿಗ ವೈಭವ್ ಸೂರ್ಯವಂಶಿ ಅಂಕಲ್ ಪಾಸ್

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?