ಹುಬ್ಬಳ್ಳಿ: ನಗರದ ಪ್ರತಿಷ್ಠಿತ ಜಿಮ್ (Gym) ಮಾಲೀಕ ನೇಣು ಬಿಗಿದು ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾನಗರದ ಶಿರೂರು ಪಾರ್ಕ್ ಬಳಿ ನಡೆದಿದೆ.
ಪ್ರತಿಷ್ಠಿತ ಆರೆಂಜ್ ಜಿಮ್ ಮಾಲಿಕ ಜಿತೇಂದ್ರ ಶೀಗಿಹಳ್ಳಿ (48) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಜಿತೇಂದ್ರ ತಮ್ಮ ಮನೆಯ ಕೊಠಡಿಯಲ್ಲಿನ ಫ್ಯಾನ್ಗೆ ನೇಣು ಹಾಕಿಕೊಂಡಿದ್ದಾರೆ. ಮೇಲ್ಮನೆಯ ಕೊಠಡಿಗೆ ತೆರಳಿದ್ದ ಅವರು ತಡವಾದರೂ ಹೊರಗೆ ಬಂದಿರಲಿಲ್ಲ. ಬಾಗಿಲು ಬಡಿದರೂ ತೆರೆಯಲು ಬಂದಿಲ್ಲ. ಇದರಿಂದ ಅನುಮಾನಗೊಂಡ ಕುಟುಂಬದವರು ಕಿಟಕಿಯಲ್ಲಿ ನೋಡಿದಾಗ, ನೇಣು ಹಾಕಿಕೊಂಡಿರುವುದು ಗೊತ್ತಾಗಿದೆ.
ಕೂಡಲೇ ಬಾಗಿಲು ಮುರಿದು ಜಿತೇಂದ್ರ ಅವರನ್ನು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟೊತ್ತಿಗಾಗಲೇ ಜೀತ್ರೇಂದ್ರ ಪ್ರಾಣಪಕ್ಷಿ ಹಾರಿ ಹೋಗಿತ್ತು. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ವಿದ್ಯಾನಗರ ಪೊಲೀಸರು ಆತ್ಮಹತ್ಯೆಗೆ ಏನು ಕಾರಣದ ಬಗ್ಗೆ ತನಿಖೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಬಲೂನ್ ಕಟ್ಟಿಕೊಂಡು ಕುಮಾರಧಾರ ನದಿಗೆ ಹಾರಿ ಉದ್ಯಮಿ ಆತ್ಮಹತ್ಯೆ