Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಾಕ್ಷಿ ಕೊಲ್ಲಲು 15 ದಿನಗಳ ಹಿಂದೆಯೇ ಹರಿದ್ವಾರದಿಂದ ಚಾಕು ಖರೀದಿಸಿದ್ದ ಸಾಹಿಲ್!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಸಾಕ್ಷಿ ಕೊಲ್ಲಲು 15 ದಿನಗಳ ಹಿಂದೆಯೇ ಹರಿದ್ವಾರದಿಂದ ಚಾಕು ಖರೀದಿಸಿದ್ದ ಸಾಹಿಲ್!

Crime

ಸಾಕ್ಷಿ ಕೊಲ್ಲಲು 15 ದಿನಗಳ ಹಿಂದೆಯೇ ಹರಿದ್ವಾರದಿಂದ ಚಾಕು ಖರೀದಿಸಿದ್ದ ಸಾಹಿಲ್!

Public TV
Last updated: May 31, 2023 6:45 pm
Public TV
Share
2 Min Read
sahil delhi murder
SHARE

ನವದೆಹಲಿ: ಇಡೀ ದೇಶದಲ್ಲಿಯೇ ಸಂಚಲನ ಸೃಷ್ಟಿಸಿದ್ದ 16 ವರ್ಷದ ಹುಡುಗಿಯ ಕೊಲೆ ಪ್ರಕರಣವು ದಿನೇ ದಿನೇ ಹೊಸ ಕಥೆಗಳನ್ನು ತೆರೆದಿಡುತ್ತಿದೆ. ಪ್ರಕರಣ ಸಂಬಂಧ ಆರೋಪಿ ಸಾಹಿಲ್ (Sahil) ನನ್ನು ಬಂಧಿಸಿರುವ ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ವೇಳೆ 15 ದಿನಗಳ ಹಿಂದೆಯೇ ಸಾಕ್ಷಿ (Sakshi Murder Case) ಯನ್ನು ಕೊಲ್ಲಲೆಂದು ಸಾಹಿಲ್ ಹರಿದ್ವಾರದಿಂದ ಚಾಕು ಖರೀದಿಸಿರುವ ಬಗ್ಗೆ ಬಯಲಾಗಿದೆ. ಈ ಮೂಲಕ ಸಾಕ್ಷಿಯನ್ನು ಕೊಲ್ಲಲು ಅನೇಕ ದಿನಗಳಿಂದ ಪ್ಲಾನ್ ಮಾಡಿದ್ದಾನೆಂಬುದು ಸ್ಪಷ್ಟವಾಗಿದೆ.

SAHIL 1

ರೋಹಿಣಿ ನಗರದ ಶಹಬಾದ್ ಡೈರಿ (Rohini’s Shahabad Dairy) ಪ್ರದೇಶದಲ್ಲಿ ಸಾಕ್ಷಿಯನ್ನು ಕೊಲೆ ಮಾಡಿದ ಬಳಿಕ ಸುಮಾರು ಅರ್ಧ ಗಂಟೆಗಳ ಕಾಲ ಸಾಹಿಲ್ ತಿರುಗಾಡುತ್ತಿದ್ದ. ಅಲ್ಲದೆ ಅಲ್ಲೇ ಇದ್ದ ಪಾರ್ಕ್ ನಲ್ಲಿಯೂ ಸ್ವಲ್ಪ ಹೊತ್ತು ಕುಳಿತಿದ್ದನು. ನಂತರ ರಿಥಾಲಾ ಎಂಬ ಅರಣ್ಯ ಪ್ರದೇಶಕ್ಕೆ ತೆರಳಿ ಅಲ್ಲಿ ಚಾಕುವನ್ನು ಬಿಸಾಕಿ, ಫೋನ್ ಸ್ವಿಚ್ಛ್ ಆಫ್ ಮಾಡಿಕೊಂಡಿದ್ದಾನೆ. ತದನಂತರ ಇ- ರಿಕ್ಷಾದ ಮೂಲಕ ಸಮಯಪುರ ಬದ್ಲಿಗೆ ತೆರಳಿ ಅಲ್ಲಿ ಮೆಟ್ರೋ ನಿಲ್ದಾಣದಲ್ಲಿ ರಾತ್ರಿ ಕಳೆದಿದ್ದಾನೆ. ಮರುದಿನ ಬೆಳಗ್ಗೆ ಸಮಯಪುರ ಬದ್ಲಿಯಿಂದ ಆನಂದ್ ವಿಹಾರ್‍ಗೆ ಹೋಗಿದ್ದಾನೆ. ಅಲ್ಲಿಂದ ಬುಲಂದ್‍ಶಹರ್‍ಗೆ ಬಸ್‍ನಲ್ಲಿ ತೆರಳಿದ್ದಾನೆ. ದಾರಿ ಮಧ್ಯೆ ಆತನಿಗೆ ಬಂಧನದ ಭೀತಿ ಶುರುವಾಗಿದ್ದು, ಕೂಡಲೇ ಆತ ಬಸ್ ಬದಲಾಯಿಸಿದ್ದಾನೆ. ಇತ್ತ ಸೋಮವಾರ ಉತ್ತರ ಪ್ರದೇಶದ ಬುಲಂದ್‍ಶಹರ್‍ನಲ್ಲಿ ಬಂಧಿಸಲ್ಪಟ್ಟಾಗ ಸಾಹಿಲ್ ಖಾನ್ ಮುಖದಲ್ಲಿ ಯಾವುದೇ ಪಶ್ಚಾತ್ತಾಪ ಕಂಡುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಹಿಲ್ ಸುಮಾರು 15 ದಿನಗಳ ಹಿಂದೆ ಹರಿದ್ವಾರ (Haridwar) ದಿಂದ ಹತ್ಯೆಗೆ ಬಳಸಲು ಚಾಕುವನ್ನು ಖರೀದಿಸಿದ್ದನು. ಅಂತೆಯೇ ಸಾಕ್ಷಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘೋರ ಹತ್ಯೆಯ ದೃಶ್ಯವು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಎದೆ ಝಲ್ಲೆನಿಸುತ್ತದೆ. ಸಾಹಿಲ್, ಪ್ರಿಯತಮೆ ಸಾಕ್ಷಿಯನ್ನು ಕೊಲೆ ಬರ್ಬರವಾಗಿ ಕೊಲೆ ಮಾಡುತ್ತಿದ್ದರೂ ಜನ ಮೂಕ ವಿಸ್ಮಿತರಂತೆ ನಿಂತಿರುವುದು ವೀಡಿಯೋದಲ್ಲಿ ಕಾಣಬಹುದಾಗಿದೆ. ಯಾರಾದರೂ ಸಾಹಿಲ್ ಅನ್ನು ತಡೆಯಲು ಪ್ರಯತ್ನಿಸಿದ್ದರೆ ಅಥವಾ ಪೊಲೀಸರಿಗೆ ಕರೆ ಮಾಡುವಂತೆ ಬೆದರಿಕೆ ಹಾಕಿದ್ದರೆ ಆಕೆಯನ್ನು ಉಳಿಸಬಹುದಿತ್ತು ಎಂದು ಪೊಲೀಸರು ಹೇಳಿದ್ದಾರೆ.

SAHIL

ಆರೋಪಿಯನ್ನು ಸೋಮವಾರ ಉತ್ತರ ಪ್ರದೇಶದ ಬುಲಂದ್‍ಶಹರ್‍ನಲ್ಲಿ ಬಂಧಿಸಲಾಗಿದ್ದು, ಮಂಗಳವಾರ ಎರಡು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ. ದೆಹಲಿ ಪೊಲೀಸರು ಸಾಹಿಲ್‍ನನ್ನು ಗುರುವಾರ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಿದ್ದಾರೆ. ಮೂಲಗಳ ಪ್ರಕಾರ, ಅಧಿಕಾರಿಗಳು ಆತನ ಮೊಬೈಲ್ ಫೋನ್ (Mobile Phone) ಮತ್ತು ಸಾಹಿಲ್ ಕೊಲೆಗೆ ಬಳಸಿದ ಚಾಕುವನ್ನು ಇನ್ನೂ ವಶಪಡಿಸಿಕೊಳ್ಳಬೇಕಾಗಿದೆ. ಇದನ್ನೂ ಓದಿ: ಪಶ್ಚಾತ್ತಾಪವಿಲ್ಲ, ನನ್ನ ತಿರಸ್ಕರಿಸಿದ್ದಕ್ಕೆ ಆಕೆಯನ್ನು ಕೊಂದೆ- ತಪ್ಪೊಪ್ಪಿಕೊಂಡ ಸಾಹಿಲ್

ವಿಚಾರಣೆ ವೇಳೆ ಸಾಹಿಲ್ ತನ್ನ ಹೇಳಿಕೆಗಳನ್ನು ಬದಲಾಯಿಸುತ್ತಿದ್ದಾನೆ. ಸಂತ್ರಸ್ತೆ ಜಬ್ರು ಎಂಬ ಇನ್ನೊಬ್ಬ ಹುಡುಗನೊಂದಿಗೆ ಸ್ನೇಹ ಬೆಳೆಸಿದ್ದರಿಂದ ಸಾಹಿಲ್ ಸಿಟ್ಟಿಗೆದ್ದು ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಒಂದು ದಿನ ಮೊದಲು ಸಾಕ್ಷಿ ತನ್ನ ಸ್ನೇಹಿತೆಯರಾದ ಭಾವನಾ ಮತ್ತು ಜಬ್ರು ಜೊತೆ ಸಾಹಿಲ್‍ನನ್ನು ಭೇಟಿಯಾಗಿದ್ದಳು. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಮೂವರಲ್ಲಿ ವಾಗ್ವಾದ ನಡೆದಿದ್ದು, ಸಾಕ್ಷಿಯಿಂದ ದೂರ ಇರುವಂತೆ ಸಾಹಿಲ್‍ಗೆ ಜಬ್ರು ವಾರ್ನ್ ಮಾಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಒಟ್ಟಿನಲ್ಲಿ ಸದ್ಯ ಸಾಹಿಲ್ ನಲ್ಲಿ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ. ಅಲ್ಲದೆ ಸಿಸಿಟಿವಿಯಲ್ಲಿ ಕೃತ್ಯ ನಡೆದ ಸ್ಥಳದ ಮೂಲಕ ಹಾದುಹೋಗುವ 8 ಮಂದಿ ಪ್ರತ್ಯಕ್ಷದರ್ಶಿಗಳನ್ನು ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ. ಅವರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಿದ್ದಾರೆ. ಇದನ್ನೂ ಓದಿ: 25 ಬಾರಿ ಚಾಕುವಿನಿಂದ ಇರಿದು ಮಗಳನ್ನೇ ಕೊಂದ ಪಾಪಿ ತಂದೆ!

TAGGED:delhinewdelhipoliceSahilsakshiದೆಹಲಿ ಪೊಲೀಸರುನವದೆಹಲಿಸಾಕ್ಷಿಸಾಹಿಲ್
Share This Article
Facebook Whatsapp Whatsapp Telegram

Cinema news

Varanasi movie
ರಾಜಮೌಳಿ ನಿರ್ದೇಶನದ ‘ವಾರಣಾಸಿ’ ರಿಲೀಸ್‌ ಡೇಟ್‌ ಔಟ್‌
Cinema Latest South cinema Top Stories
Bengaluru 17th Film Festival
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಸಿಎಂ ಚಾಲನೆ
Bengaluru City Cinema Districts Karnataka Latest Sandalwood Top Stories
PRAJWAL DEVARAJ 2
ಸಹೋದರನ ಚಿತ್ರಕ್ಕೆ ನಿರ್ಮಾಪಕನಾದ ಪ್ರಜ್ವಲ್ ದೇವರಾಜ್ – ಚಿತ್ರದ ಫಸ್ಟ್ ಲುಕ್ ಲಾಂಚ್
Cinema Latest Sandalwood Top Stories
actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood

You Might Also Like

CJ Roy
Bengaluru City

ಐಟಿ ದಾಳಿಗೆ ಹೆದರಿ ಗನ್‌ನಿಂದ ಶೂಟ್ – ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಸೂಸೈಡ್

Public TV
By Public TV
2 minutes ago
Rajeev Gowda 1
Chikkaballapur

ಶಿಡ್ಲಘಟ್ಟ ಕೇಸ್‌ – ಆರೋಪಿ ರಾಜೀವ್‌ ಗೌಡಗೆ ಜಾಮೀನು

Public TV
By Public TV
14 minutes ago
Plane Crash
Latest

ಇತಿಹಾಸ ಕಂಡ ಘೋರ ವಿಮಾನ ದುರಂತಗಳು – ಎಂದೂ ಮಾಸದ ಗಾಯ!

Public TV
By Public TV
54 minutes ago
Hotel
Bengaluru City

ಹರಿಯಾಣ | ಹೋಟೆಲ್‌ನ ಬಾತ್‌ರೂಮ್‌ನಲ್ಲಿ ಬೆಂಗಳೂರಿನ ಟೆಕ್ಕಿ ಶವವಾಗಿ ಪತ್ತೆ

Public TV
By Public TV
1 hour ago
MLA Vishwanath
Bengaluru City

ಬೆಂಗಳೂರಲ್ಲಿ ಭೂಕಬಳಿಕೆ; ಬಿಜೆಪಿ ಮಾಜಿ ಎಂಎಲ್‌ಸಿಗೆ 1 ವರ್ಷ ಜೈಲು ಶಿಕ್ಷೆ

Public TV
By Public TV
1 hour ago
gold silver 1
Latest

ಚಿನ್ನ – ಬೆಳ್ಳಿ ಬೆಲೆ ದಿಢೀರ್‌ ಕುಸಿತ; ಒಂದೇ ದಿನದಲ್ಲಿ ಬೆಳ್ಳಿ 15%, ಚಿನ್ನ 10% ಬೆಲೆ ಕುಸಿತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?