ಉದ್ಯಮಿ ಆತ್ಮಹತ್ಯೆ ಪ್ರಕರಣ – ಅರವಿಂದ ಲಿಂಬಾವಳಿಗೆ ಬಿಗ್‌ ರಿಲೀಫ್‌

Public TV
1 Min Read
Aravind Limbavali

ರಾಮನಗರ: ಕಗ್ಗಲೀಪುರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೋರ್ವ ತಲೆಗೆ ಗುಂಡುಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾಜಿ ಸಚಿವ ಅರವಿಂದ ಲಿಂಬಾವಳಿಗೆ (Arvind Limbavali) ಬಿಗ್ ರಿಲೀಫ್ ಸಿಕ್ಕಿದೆ.

ಉದ್ಯಮಿ ಬರೆದಿಟ್ಟಿದ್ದ ಡೆತ್‌ನೋಟ್‌ (Death Note) ಆರೋಪಕ್ಕೆ ಸರಿಯಾದ ಸಾಕ್ಷ್ಯಗಳಿಲ್ಲದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಬಿ ರಿಪೋರ್ಟ್ (B Report) ಸಲ್ಲಿಸಿ ತನಿಖೆ ಮುಕ್ತಾಯಗೊಳಿಸಲಾಗಿದೆ.  ಇದನ್ನೂ ಓದಿ: India GDP – ವಿಶ್ವದಲ್ಲೇ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಯಾಗಿ ಹೊರಹೊಮ್ಮಿದ ಭಾರತ

 

ಕಳೆದ ಜನವರಿ 2ರಂದು ಬೆಂಗಳೂರಿನ ಉದ್ಯಮಿ ಪ್ರದೀಪ್‌ ಕಗ್ಗಲೀಪುರ ಸಮೀಪ ಕಾರಿನಲ್ಲಿಯೇ ಡೆತ್‌ನೋಟ್‌ ಬರೆದಿಟ್ಟು ಶೂಟೌಟ್‌ ಮೂಲಕ ಆತ್ಮಹತ್ಯೆಗೆ ಶರಣಾಗಿದ್ದರು. ಅದರಲ್ಲಿ ಮಾಜಿ ಶಾಸಕ ಅರವಿಂದ ಲಿಂಬಾವಳಿ ಆತ್ಮಹತ್ಯೆಗೆ ಕಾರಣವೆಂದು ಹೆಸರು ಬರೆದಿಟ್ಟಿದ್ದರು.

 

ಪ್ರದೀಪ್ ಪತ್ನಿ ನೀಡಿದ ದೂರಿನ ಅನ್ವಯ 6 ಮಂದಿ ವಿರುದ್ಧ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿತ್ತು. ಡೆತ್ ನೋಟ್ ಆರೋಪಕ್ಕೆ ಸರಿಯಾದ ಸಾಕ್ಷ್ಯಗಳು ಸಿಗದ ಹಿನ್ನಲೆಯಲ್ಲಿ ತನಿಖೆ ಮುಕ್ತಾಯಗೊಳಿಸಲಾಗಿದೆ. ತನಿಖೆ ವೇಳೆ ಕೌಟುಂಬಿಕ ಕಲಹ ಹಾಗೂ ಹಣಕಾಸಿನ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರ ಬೆಳಕಿಗೆ ಬಂದಿದೆ.

Share This Article