– ವಿದ್ಯಾರ್ಥಿಗಳ ದಾಖಲೆಗಳನ್ನು ಬ್ಯಾಂಕ್ನಲ್ಲಿಟ್ಟು ಕೋಟಿ ಕೋಟಿ ಸಾಲ ಪಡೆದಿದ್ದ ಖತರ್ನಾಕ್!
ಬೆಂಗಳೂರು: ಉಚಿತವಾಗಿ ವಿದ್ಯಾರ್ಥಿಗಳಿಗೆ ಶಿಕ್ಷಣ (Free Education) ಕೊಡಿಸುವುದಾಗಿ 18 ಕೋಟಿ ರೂ. ವಂಚಿಸಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಆಂಧ್ರಪ್ರದೇಶ (Andhra Pradesh) ಮೂಲದ ಶ್ರೀನಿವಾಸುಲು ಎಂದು ಗುರುತಿಸಲಾಗಿದೆ. ಆರೋಪಿ ಡಾಟ ಸೈನ್ಸ್ ಕೋರ್ಸ್ ಮಾಡಿಸುವುದಾಗಿ ವಿದ್ಯಾರ್ಥಿಗಳಿಂದ ದಾಖಲೆಗಳನ್ನು ಪಡೆಯುತ್ತಿದ್ದ. ಬಳಿಕ ಅವುಗಳನ್ನು ಬ್ಯಾಂಕ್ನಲ್ಲಿಟ್ಟು ಲಕ್ಷಾಂತರ ರೂ. ಸಾಲ ಪಡೆಯುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಂಥರ್ ಗೌಡ ಗೆಲುವು – 135 ಕಿಮೀ ದೂರದ ಚಾಮುಂಡಿ ಬೆಟ್ಟಕ್ಕೆ ಪಾದಯಾತ್ರೆ
ಆರೋಪಿ ಇದುವರೆಗೂ ಸುಮಾರು ಎರಡು ಸಾವಿರ ವಿದ್ಯಾರ್ಥಿಗಳಿಗೆ ವಂಚಿಸಿದ್ದಾನೆ. ಈ ಪ್ರಕರಣದಲ್ಲಿ ಬ್ಯಾಂಕ್ ಸಿಬ್ಬಂದಿಯೂ ಭಾಗಿಯಾಗಿರುವ ಶಂಕೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಜಯನಗರ (Jayanagar) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭಾರತ, ಚೀನಾ ಗಡಿ ವಿವಾದ – ಮಾತುಕತೆಗೆ ಮುಂದಾದ ಉಭಯ ರಾಷ್ಟ್ರಗಳು