ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯ ಆರ್ಭಟ ಜೋರಾಗಿದೆ. ಇಂದು ಕೂಡಾ ರಾಜ್ಯದಲ್ಲಿ ಗುಡುಗು ಮಿಂಚಿನ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರೀ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಒಳನಾಡಿನ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಭಾಗಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಗಾಳಿಯು 40 ರಿಂದ 50 ಕಿಮೀ ವೇಗದಲ್ಲಿ ಬೀಸಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ, ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಮಳೆ ಮುಂದುವರಿಯಲಿದ್ದು ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 18 ಡಿಗ್ರಿ ಸೆಲ್ಸಿಯಸ್ ತಾಪಮಾನ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 32-21
ಮಂಗಳೂರು: 33-27
ಶಿವಮೊಗ್ಗ: 33-23
ಬೆಳಗಾವಿ: 36-21
ಮೈಸೂರು: 33-22
ಮಂಡ್ಯ: 34-22
ಮಡಿಕೇರಿ: 27-18
ರಾಮನಗರ: 33-22
ಹಾಸನ: 33-21
ಚಾಮರಾಜನಗರ: 33-22
ಚಿಕ್ಕಬಳ್ಳಾಪುರ: 32-21
ಕೋಲಾರ: 33-22
ತುಮಕೂರು: 33-22
ಉಡುಪಿ: 33-27
ಕಾರವಾರ: 33-28
ಚಿಕ್ಕಮಗಳೂರು: 30-20
ದಾವಣಗೆರೆ: 36-23
ಹುಬ್ಬಳ್ಳಿ: 37-23
ಚಿತ್ರದುರ್ಗ: 34-22
ಹಾವೇರಿ: 37-23
ಬಳ್ಳಾರಿ: 39-26
ಗದಗ: 37-23
ಕೊಪ್ಪಳ: 38-24
ರಾಯಚೂರು: 41-28
ಯಾದಗಿರಿ: 41-28
ವಿಜಯಪುರ: 39-24
ಬೀದರ್: 39-27
ಕಲಬುರಗಿ: 41-28
ಬಾಗಲಕೋಟೆ: 39-24