ಲಂಡನ್: ಒಡಿಶಾ ರೈಲು ಅಪಘಾತದಲ್ಲಿ (Odisha Train Tragedy) ಮೃತಪಟ್ಟ ವ್ಯಕ್ತಿಗಳಿಗೆ ಬ್ರಿಟನ್ ಪ್ರಧಾನಿ ರಿಶಿ ಸುನಕ್ (Rishi Sunak) ಸಂತಾಪ ಸೂಚಿಸಿದ್ದಾರೆ.
ಈ ದುರ್ಘಟನೆಯಿಂದ ಸಂಕಟ ಅನುಭವಿಸುತ್ತಿರುವ ಕುಟುಂಬಸ್ಥರೊಂದಿಗೆ ನನ್ನ ಹಾರೈಕೆ ಹಾಗೂ ಪ್ರಾರ್ಥನೆ ಜೊತೆಗಿದೆ. ದುರಂತದಿಂದಾಗಿ ಮನಸ್ಸಿಗೆ ಘಾಸಿಯಾಗಿದೆ. ಮೃತಪಟ್ಟವರ ಕುಟುಂಬಸ್ಥರು ಮತ್ತು ಸ್ನೇಹಿತರಿಗೆ ನನ್ನ ಸಂತಾಪಗಳನ್ನು ತಿಳಿಸುತ್ತೇನೆ ಎಂದು ಸುನಕ್ ಟ್ವೀಟ್ ಮಾಡಿದ್ದಾರೆ.
- Advertisement -
- Advertisement -
ಅಲ್ಲದೆ ಘಟನೆಯಲ್ಲಿ ಬದುಕುಳಿದವರ ರಕ್ಷಣೆಗಾಗಿ ದಣಿವರಿಯದೆ ಶ್ರಮಿಸುತ್ತಿರುವವರಿಗೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ನರೇಂದ್ರ ಮೋದಿಯವರಿಗೆ (arendra Modi) ಟ್ಯಾಗ್ ಮಾಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ- ಗಾಯಾಳುಗಳಿಗೆ ರಕ್ತದಾನ ಮಾಡಲು ಸಾಲುಗಟ್ಟಿ ನಿಂತ ಯುವಜನತೆ
- Advertisement -
- Advertisement -
ಶುಕ್ರವಾರ ರಾತ್ರಿ ಚೆನ್ನೈ-ಕೊರಮಂಡಲ್ ಎಕ್ಸ್ಪ್ರೆಸ್ ರೈಲು, ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲು ಪರಸ್ಪರ ಡಿಕ್ಕಿಯಾಗಿದ್ದವು. ಒಡಿಶಾದ ಬಾಲಾಸೋರ್ ಜಿಲ್ಲೆಯ ಬಹನಗ ರೈಲು ನಿಲ್ದಾಣದ ಬಳಿ ಈ ಅಪಘಾತ ಸಂಭವಿಸಿತ್ತು. ಎಕ್ಸ್ಪ್ರೆಸ್ ರೈಲು ಡಿಕ್ಕಿಯಾದ (Train Accident) ರಭಸಕ್ಕೆ ಪ್ರಯಾಣಿಕರಿದ್ದ ರೈಲಿನ ಹಲವು ಬೋಗಿಗಳು ಹಳಿ ತಪ್ಪಿದ್ದವು. ಭೀಕರ ಅಪಘಾತದಲ್ಲಿ ಹಲವರು ಮೃತಪಟ್ಟಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತಕ್ಕೆ ಸಿಗ್ನಲ್ ಕಾರಣ- ಪ್ರಾಥಮಿಕ ವರದಿ