Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

Cinema

ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

Public TV
Last updated: June 10, 2023 1:30 pm
Public TV
Share
2 Min Read
trivikram 1 1
SHARE

ಸಿನಿಮಾರಂಗದಲ್ಲಿ ನಾನಾ ಬಗೆಯ ಪ್ರಯೋಗಗಳು ಮತ್ತು ನವೀನ ಕಥಾನಕದ ಚಿತ್ರಗಳು ವ್ಯಾಪಕವಾಗಿ ರೂಪುಗೊಳ್ಳುತ್ತಿವೆ. ಆ ಸಾಲಿಗೆ ಸೇರ್ಪಡೆಗೊಳ್ಳುವ ಎಲ್ಲಾ ಲಕ್ಷಣಗಳನ್ನೂ ಒಳಗೊಂಡಿರುವ ಚಿತ್ರ ಅಂದರೆ ‘ಕರಿಹೈದ ಕೊರಗಜ್ಜ'(Kari Haida Koragajja). ಸುಧೀರ್ ಅತ್ತಾವರ ನಿರ್ದೇಶನದಲ್ಲಿ ಮೂಡಿ ಬಂದಿರುವ ಈ ಚಿತ್ರ ಸದ್ಯದ ಬಹುನಿರೀಕ್ಷಿತ ಚಿತ್ರಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ. ಇದಕ್ಕೆ ಕಾರಣವಾಗಿರೋದು ಅಂದರೆ ಕಥೆ ಮತ್ತು ಒಟ್ಟಾರೆ ಸಿನಿಮಾ ಸಿದ್ದಗೊಂಡಿರುವ ರೀತಿ.

 

trivikram 1

ತ್ರಿವಿಕ್ರಮ ಸಾಫಲ್ಯ ನಿರ್ಮಾಣ ಮಾಡಿರುವ ಈ ಚಿತ್ರವೀಗ ಎಲ್ಲರ ನಿರೀಕ್ಷೆಗೆ ಕಾರಣವಾಗಿದೆ. ಅಷ್ಟಕ್ಕೂ ಇದೀಗ ಎಲ್ಲೆಡೆ ತುಳುನಾಡ ದೈವವಾದ ಕೊರಗಜ್ಜನ ಕಾರಣೀಕಗಳ ಪ್ರಭೆ ಹಬ್ಬಿಕೊಂಡಿದೆ. ತುಳುನಾಡಿನ ಗಡಿ ದಾಟಿ ಕೊರಗಜ್ಜನ ಪವಾಡಗಳು ಪಸರಿಸಿಕೊಂಡು, ಎಲ್ಲಾ ಭೂ ಭಾಗಗಳಲ್ಲಿ ಯೂ ಕೊರಗಜ್ಜನಿಗೆ ಭಕ್ತಗಣ ಸೃಷ್ಟಿಯಾಗಿದೆ. ಇಂಥಾ ಶಕ್ತಿ ಹೊಂದಿರುವ ಕೊರಗಜ್ಜನ ನಿಖರವಾದ ಕಥೆ ಹೊಂದಿರೋ ಈ ಚಿತ್ರ ತಯಾರುಗೊಂಡಿದ್ದರ ಹಿಂದೆ ನಿರ್ಮಾಪಕ ತ್ರಿವಿಕ್ರಮ ಸಾಫಲ್ಯರ ಶ್ರಮ ದೊಡ್ಡದಿದೆ. ಇದನ್ನೂ ಓದಿ:‘ಪೊನ್ನಿಯನ್ ಸೆಲ್ವನ್ 2’ ಸಕ್ಸಸ್ ಬಳಿಕ ನಯನತಾರಾ ಜೊತೆಯಾದ ಜಯಂರವಿ

trivikram 2

ತ್ರಿವಿಕ್ರಮ ಸಾಫಲ್ಯ (Trivikram Sapalya) ಕನ್ನಡ ಚಿತ್ರರಂಗಕ್ಕೆ ಹೊಸಬರೇನಲ್ಲ. ಯಶಸ್ವಿ ಉದ್ಯಮಿಯಾಗಿದ್ದರೂ ಸಿನಿಮಾ ಪ್ರೇಮವನ್ನು ಸದಾ ಕಾಯ್ದುಕೊಂಡಿದ್ದ ಅವರು ದಶಕಗಳಷ್ಟು ಕಾಲದಿಂದ ನಿರ್ಮಾಪಕರಾಗಿ (Producer) ಗುರುತಿಸಿಕೊಂಡಿದ್ದಾರೆ. 2012ರಲ್ಲಿ ‘ಪರಿ’ ಎಂಬ ಸಿನಿಮಾವನ್ನು ತ್ರಿವಿಕ್ರಮ ನಿರ್ಮಾಣ ಮಾಡಿದ್ದರು. ರಾಕೇಶ್ ಅಡಿಗ, ಹರ್ಷಿಕಾ ಪೂಣಚ್ಚ ಮುಂತಾದವರು ನಟಿಸಿದ್ದ ಆ ಚಿತ್ರ ಒಂದು ಮಟ್ಟಿಗೆ ಗೆಲುವು ದಾಖಲಿಸಿತ್ತು. ಆ ನಂತರದಲ್ಲಿ ಸಾಫಲ್ಯ ನಿರ್ಮಾಣ ಮಾಡಿದ್ದದ್ದು ‘ಸೀಜರ್’ ಎಂಬ ಚಿತ್ರವನ್ನು. ವಿನಯ್ ನಿರ್ದೇಶನ ಮಾಡಿದ್ದ ಈ ಚಿತ್ರದಲ್ಲಿ ಚಿರಂಜೀವಿ ಸರ್ಜಾ (Chiranjeevi Sarja) ನಾಯಕನಾಗಿ ನಟಿಸಿದ್ದರು. ರವಿಚಂದ್ರನ್ ಮತ್ತು ಪ್ರಕಾಶ್ ರಾಜ್ ಮುಖ್ಯ ಪಾತ್ರಗಳಲ್ಲಿ ನಟಿಸಿದ್ದ ಈ ಚಿತ್ರ 200ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂದಿತ್ತು. ಸಂಪೂರ್ಣ ಆಕ್ಷನ್ ಅಂಶಗಳೊಂದಿಗೆ ಮೂಡಿ ಬಂದಿದ್ದ ಈ ಚಿತ್ರ ದೊಡ್ಡ ಮಟ್ಟದಲ್ಲಿ ಗೆಲುವು ದಾಖಲಿಸಿತ್ತು. ಬೆಸ್ಟ್ ಆಕ್ಷನ್ ಚಿತ್ರವಾಗಿ ದೊಡ್ಡ ಮೊತ್ತಕ್ಕೆ ಮಾರಾಟವಾಗಿತ್ತು. ಇದನ್ನೂ ಓದಿ:ಮೆಗಾ ಪ್ರಿನ್ಸ್ ವರುಣ್ ತೇಜ್- ಲಾವಣ್ಯ ತ್ರಿಪಾಠಿ ಗ್ರ್ಯಾಂಡ್‌ ಎಂಗೇಜ್‌ಮೆಂಟ್

trivikram 1 2

ಗ್ಯಾಪ್‌ನ ನಂತರ ಇದೀಗ ತ್ರಿವಿಕ್ರಮ್ ಸಾಫಲ್ಯ ನಿರ್ಮಾಣ ಮಾಡಿರುವ ಚಿತ್ರ ‘ಕರಿಹೈದ ಕೊರಗಜ್ಜ’. ಸುಧೀರ್ ಅತ್ತಾವರ್ ನಿರ್ದೇಶನ ಮಾಡಿರುವ ಈ ಚಿತ್ರ ಕೊರಗಜ್ಜನ ರೋಚಕ ಜೀವನಗಾಥೆಯನ್ನೊಳಗೊಂಡಿದೆ. ಕೊರಗ ಸಮುದಾಯದ ಒಪ್ಪಿಗೆ ಪಡೆದೇ, ಕೊರಗಜ್ಜನ ಅಧಿಕೃತ ಕಥೆಗೆ ಸಿನಿಮಾ ಫ್ರೇಮು ತೊಡಿಸಲಾಗಿದೆಯಂತೆ. ಈ ಚಿತ್ರದಲ್ಲಿ ಘಟನುಘಟಿ ಕಲಾವಿದರ ದಂಡೇ ಇದೆ. ಬಾಲಿವುಡ್ ಖ್ಯಾತ ನಟ ಕಬೀರ್ ಬೇಡಿ ರಾಜನಾಗಿ ನಟಿಸಿದ್ದಾರೆ. ಭವ್ಯ, ಶ್ರುತಿ ಮುಖ್ಯ ಪಾತ್ರಗಳಿಗೆ ಬಣ್ಣ ಹಚ್ಚಿದ್ದಾರೆ. ಪ್ರತಿಭಾವಂತ ಯುವ ನಟ ಭರತ್ ಕೊರಗಜ್ಜನಾಗಿ ಕಾಣಿಸಿಕೊಂಡಿದ್ದಾರೆ. ಬಾಲಿವುಡ್ ನಾ ಖ್ಯಾತ ಕೊರಿಗ್ರಾಫರ್ ಸೋಫಾರ್ಕರ್ ಗುಳಿಗನ ಪಾತ್ರ ಮಾಡಿದ್ದಾರೆ. ಸಿನಿಮಾ ಸದ್ಯದಲ್ಲೇ ತೆರೆಗೆ ಬರಲಿದೆ.

ಇಂಥದೊಂದು ಅಪರೂಪದ ಸಿನಿಮಾವನ್ನು ಸಾಧ್ಯವಾಗಿಸಿರುವ ತ್ರಿವಿಕ್ರಮ್ ಸಾಫಲ್ಯ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರು. ಅಲ್ಲಿಯೇ ಓದು ಮುಗಿಸಿ, ಆ ನಂತರ ಕಷ್ಟದಿಂದಲೇ ಬದುಕು ಕಟ್ಟಿಕೊಂಡಿರುವ ಸಾಫಲ್ಯ ಯಶಶ್ವಿ ಉದ್ಯಮಿಯಾಗಿ ನೆಲೆ ಕಂದುಕೊಂಡಿದ್ದರ ಹಿಂದೆ ಎಲ್ಲರಿಗೂ ಸ್ಫೂರ್ತಿಯಾಗುವಂಥ ಕಥನವಿದೆ. ಟ್ರಾನ್ಸ್ಫರ್ಮೆರ್ ತಯಾರಿಸುವ ಬಹು ದೊಡ್ಡ ಉದ್ದಿಮೆ ನಡೆಸುವ ತ್ರಿವಿಕ್ರಮ ಅವರು ಇದೀಗ ನಿರ್ಮಾಪಕರಾಗಿಯೂ ನೆಲೆ ಕಂಡುಕೊಂಡಿದ್ದಾರೆ. ಕೊರಗಜ್ಜ ಚಿತ್ರದ ಜೊತೆಗೇ ಮತ್ತೊಂದಷ್ಟು ಸಿನಿಮಾಗಳ ನಿರ್ಮಾಣ ಕಾರ್ಯದಲ್ಲಿಯೂ ಬ್ಯುಸಿಯಾಗಿದ್ದಾರೆ. ರಾಜಕುಮಾರ್, ವಿಷ್ಣುವರ್ಧನ್ ಸಿನಿಮಾಗಳನ್ನು ನೋಡಿಕೊಂಡು ಬೆಳೆದು, ಅಪಾರವಾದ ಸಿನಿಮಾಶಕ್ತಿ ರೂಢಿಸಿಕೊಂಡಿರುವ ತ್ರಿವಿಕ್ರಮ ಸಾಫಲ್ಯ ಕನ್ನಡ ಚಿತ್ರರಂಗದಲ್ಲಿ ಯಶಸ್ವಿ ನಿರ್ಮಾಪಕರಾಗಿ ಮುಂಚೂಣಿಯಲ್ಲಿದ್ದಾರೆ.

TAGGED:kantara filmKari Haida KoragajjasandalwoodTrivikram Sapalyaಕರಿ ಹೈದ ಕೊರಗಜ್ಜತ್ರಿವಿಕ್ರಮ್ ಸಾಫಲ್ಯಸ್ಯಾಂಡಲ್‍ವುಡ್
Share This Article
Facebook Whatsapp Whatsapp Telegram

Cinema news

Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National
Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories

You Might Also Like

Fatal attack on Congress leader Gopalakrishna naik in Ankola
Crime

ಅಂಕೋಲ | ಕಾಂಗ್ರೆಸ್‌ ಮುಖಂಡನ ಮೇಲೆ ಮಾರಣಾಂತಿಕ ಹಲ್ಲೆ – ಹತ್ಯೆಗೆ ಯತ್ನ

Public TV
By Public TV
3 minutes ago
RSS Karnataka State Open University
Latest

ಆರ್‌ಎಸ್‌ಎಸ್ ಶೈಕ್ಷಣಿಕ ಅಧಿವೇಶನಕ್ಕೆ ರಾಜ್ಯ ಮುಕ್ತ ವಿವಿ ಸಹಯೋಗಕ್ಕೆ ಸರ್ಕಾರ ತಕರಾರು – ಕಾರ್ಯಕ್ರಮದಿಂದ ವಿವಿ ಹೊರಕ್ಕೆ

Public TV
By Public TV
13 minutes ago
lpg cylinders
Bengaluru City

LPG ಗ್ಯಾಸ್ ಬುಕ್ಕಿಂಗ್ ಅವಧಿಯಲ್ಲಿ ಯಾವುದೇ ಬದಲಾವಣೆ ಇಲ್ಲ – ಕೇಂದ್ರ ಸ್ಪಷ್ಟನೆ

Public TV
By Public TV
16 minutes ago
Bidar petrol Bunk
Bidar

ಯಾರು ಗಾಬರಿಯಾಗೋದು ಬೇಡ, ಎಂದಿನಂತೆ ಪೆಟ್ರೋಲ್, ಡಿಸೇಲ್ ಸ್ಟಾಕ್ ಇದೆ – ಬಂಕ್ ಮಾಲೀಕರು ಸ್ಪಷ್ಟನೆ

Public TV
By Public TV
46 minutes ago
North Sikkim Landslide
Latest

ಉತ್ತರ ಸಿಕ್ಕಿಂನಲ್ಲಿ ಭಾರೀ ಮಳೆಯಿಂದ ಭೂಕುಸಿತ – ಚುಂಗ್‌ಥಾಂಗ್‌ನಲ್ಲಿ ಸಿಲುಕಿದ 200 ಪ್ರವಾಸಿಗರು

Public TV
By Public TV
47 minutes ago
Congress Party Office
Latest

ಅಕ್ಬರ್‌ ರಸ್ತೆಯಲ್ಲಿರೋ ಕಚೇರಿ ತೆರವುಗೊಳಿಸಿ: ಕಾಂಗ್ರೆಸ್‌ಗೆ ನೋಟಿಸ್‌‌

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?