Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Cinema

ಡಿಕೆಶಿ ಜೊತೆ ಕೊತ್ವಾಲ್ ಮಾತನಾಡುತ್ತಿದ್ದರು: ವೀಕೆಂಡ್ ಶೋನಲ್ಲಿ ಕೊತ್ವಾಲ್ ಮಾತು

Public TV
Last updated: June 11, 2023 1:02 pm
Public TV
Share
3 Min Read
D K Shivakumar
SHARE

ಬೆಂಗಳೂರಿನ ಭೂಗತ ದೊರೆ ಎಂದೇ ಬಿಂಬಿತವಾಗಿದ್ದ ಕೊತ್ವಾಲ್ ರಾಮಚಂದ್ರಪ್ಪ (Kotwal Ramachandrappa)ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (D.K.Shivakumar)ಅವರ ನಡುವೆ ಬಾಂಧವ್ಯವಿತ್ತು. ಡಿಕೆಶಿ ಅವರು ಕೊತ್ವಾಲ್ ಶಿಷ್ಯ ಎಂದು ಹಲವಾರು ಬಾರಿ, ಅನೇಕ ರಾಜಕಾರಣಿಗಳು ಆಡಿದ್ದು ಇದೆ. ಹೀಗಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಕುರಿತು ಪ್ರಸ್ತಾಪ ಆಗಬಹುದೆ? ಎನ್ನುವ ಪ್ರಶ್ನೆ ಉದ್ಭವವಾಗಿತ್ತು. ಕೊತ್ವಾಲ್ ಮತ್ತು ಡಿಕೆಶಿ ನಡುವಿನ ಸಂಬಂಧ ಯಾವ ರೀತಿಯದ್ದು ಎನ್ನುವ ಕುತೂಹಲ ಕೂಡ ವ್ಯಕ್ತವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

D.K. Shivakumar 1 1

ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದ ಪರಮೇಶ್ ಎನ್ನುವವರು ಈ ಕುರಿತು ನೆನಪುಗಳನ್ನು ಹೊರಹಾಕಿದರು. ಡಿ.ಕೆ.ಶಿವಕುಮಾರ್ ಬಗ್ಗೆ ಏನೇನೋ ಮಾತಾಡ್ತಾರೆ. ರೌಡಿ ಎಂದೆಲ್ಲ ಹೇಳುತ್ತಾರೆ. ಅದೆಲ್ಲವೂ ಸುಳ್ಳು. ಜನರಲ್ ಹಾಸ್ಟೇಲ್ ನಲ್ಲಿ ಎಲ್.ಎನ್. ಮೂರ್ತಿ ಅವರು ಇರುತ್ತಿದ್ದರು. ನಾವೆಲ್ಲ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೆವು. ಆಗಾಗ್ಗೆ ಅಲ್ಲಿಗೆ ಕೊತ್ವಾಲ ಕೂಡ ಬರುತ್ತಿದ್ದರು. ಆಗ ಮಾತನಾಡಿಸುತ್ತಿದ್ದರು. ಸ್ವತಃ ಅವರೇ ನಮಗೆ ಹೇಳುವವರು, ನೀವು ನಾಯಕರಾಗುವವರು, ನಮ್ಮಂಥವರೊಟ್ಟಿಗೆ ಕಾಣಿಸಿಕೊಳ್ಳಬೇಡಿ ಎನ್ನುತ್ತಿದ್ದರು’ ಎಂದು ಹೇಳಿದ್ದಾರೆ.

D.K. Shivakumar 2 1

ಡಿ.ಕೆ. ಶಿವಕುಮಾರ್ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ.  ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

D.K. shivakumar

ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

D.K. Shivakumar 3

ಈ ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಯಲಿದೆ.

 

ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ.  ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

TAGGED:d k shivakumarD K SivakumarKotwal RamachandrappaRowdyismWeekend with Rameshಕೊತ್ವಾಲ್ ರಾಮಚಂದ್ರಪ್ಪಡಿ.ಕೆ. ಶಿವಕುಮಾರ್‌ರೌಡಿಸಂವೀಕೆಂಡ್ ವಿತ್ ರಮೇಶ್
Share This Article
Facebook Whatsapp Whatsapp Telegram

Cinema Updates

shivarajkumar
ಕಮಲ್ ಹಾಸನ್ ಹೇಳಿಕೆಯನ್ನು ಸಮರ್ಥನೆ ಮಾಡಿಕೊಳ್ಳಲ್ಲ: ಕೊನೆಗೂ ಮೌನ ಮುರಿದ ಶಿವಣ್ಣ
6 hours ago
smriti Irani e1500383222701
ಮತ್ತೆ ಬಣ್ಣ ಹಚ್ಚಿದ ಸ್ಮೃತಿ ಇರಾನಿ – 12 ವರ್ಷಗಳ ನಂತರ ಸೀರಿಯಲ್‌ಗೆ ರೀ ಎಂಟ್ರಿ
7 hours ago
darshan 1
‘ಅಂಬಿ’ ಕನ್ವರ್ ಲಾಲ್ ಲುಕ್‌ನಲ್ಲಿ ಬಂದ ದರ್ಶನ್- ‘ದ ಡೆವಿಲ್’ ಪೋಸ್ಟರ್ ಔಟ್
7 hours ago
disha patani 3
ಹಾಲಿವುಡ್‌ನತ್ತ ಹೊರಟ ಬಾಲಿವುಡ್ ಬೋಲ್ಡ್ ಬ್ಯೂಟಿ ದಿಶಾ ಪಟಾನಿ!
9 hours ago

You Might Also Like

Train
Bengaluru City

ಮಳೆ ಅಬ್ಬರ; 5 ತಿಂಗಳು ಬೆಂಗಳೂರು, ಮಂಗಳೂರು ರೈಲು ಸಂಚಾರ ಸ್ಥಗಿತ

Public TV
By Public TV
3 hours ago
D.K Shivakumar 2
Bengaluru City

ದ್ವೇಷ ಭಾಷಣ ಯಾರೇ ಮಾಡಿದ್ರೂ ಕಠಿಣ ಕ್ರಮ – ಸಿಎಂ ಸಿದ್ದರಾಮಯ್ಯ

Public TV
By Public TV
3 hours ago
mahesh joshi
Bengaluru City

ಮಹೇಶ್ ಜೋಶಿಗೆ ರಾಜ್ಯ ಸಚಿವ ಸ್ಥಾನಮಾನ ಸವಲತ್ತು ಹಿಂಪಡೆದ ಸರ್ಕಾರ

Public TV
By Public TV
3 hours ago
CDS Anil Chauhan
Latest

ಪಾಕ್ ದಾಳಿಯಿಂದ ನಮ್ಮ ಫೈಟರ್ ಜೆಟ್‌ಗಳಿಗೂ ಹಾನಿ? – ಮೊದಲ ಬಾರಿಗೆ ಸಿಡಿಎಸ್ ಪ್ರತಿಕ್ರಿಯೆ ಏನು?

Public TV
By Public TV
4 hours ago
MeghaPramod 2
Bengaluru City

ಅಖಂಡ ರಾಷ್ಟ್ರ ತಪಸ್ವಿನಿ ಅಹಲ್ಯಾಬಾಯಿ ಹೋಳ್ಕರ್: ಮೇಘಾ ಪ್ರಮೋದ್

Public TV
By Public TV
4 hours ago
Saleem DGP KARNATAKA
Bengaluru City

ಮಂಡ್ಯ ಮಗು ಸಾವಿನ ಬಳಿಕ ಎಚ್ಚೆತ್ತ ಪೊಲೀಸ್‌ ಇಲಾಖೆ – ಕದ್ದು ಮುಚ್ಚಿ ಗಾಡಿ ಹಿಡಿಯದಂತೆ ಡಿಜಿ & ಐಜಿಪಿ ಆದೇಶ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?