Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗ್ಯಾರಂಟಿಗಳ ಜಾರಿಯಲ್ಲ, ಕಾಂಗ್ರೆಸ್ ಸರ್ಕಾರದ್ದು ಆರಂಭ ಶೂರತ್ವ ಮಾತ್ರ: ಬೊಮ್ಮಾಯಿ ಟೀಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗ್ಯಾರಂಟಿಗಳ ಜಾರಿಯಲ್ಲ, ಕಾಂಗ್ರೆಸ್ ಸರ್ಕಾರದ್ದು ಆರಂಭ ಶೂರತ್ವ ಮಾತ್ರ: ಬೊಮ್ಮಾಯಿ ಟೀಕೆ

Bengaluru City

ಗ್ಯಾರಂಟಿಗಳ ಜಾರಿಯಲ್ಲ, ಕಾಂಗ್ರೆಸ್ ಸರ್ಕಾರದ್ದು ಆರಂಭ ಶೂರತ್ವ ಮಾತ್ರ: ಬೊಮ್ಮಾಯಿ ಟೀಕೆ

Public TV
Last updated: June 13, 2023 2:50 pm
Public TV
Share
3 Min Read
Basavaraj Bommai 6
SHARE

ಹುಬ್ಬಳ್ಳಿ: ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್ ಸರ್ಕಾರ ಜವಬ್ದಾರಿ ಇಲ್ಲದ ಸರ್ಕಾರ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ (Congress) ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ಮಳೆ ತಡವಾಗಿದ್ದರಿಂದ ಬಿತ್ತನೆ ಕೂಡ ತಡವಾಗಿ ಆಗುತ್ತಿದೆ. ಮಾನ್ಸೂನ್ ಮಳೆ (Mansoon Rain) ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಯಾವುದೇ ರೀತಿ ಸನ್ನದ್ಧವಾಗಿಲ್ಲ ಎಂದರು.

ರಾಜ್ಯದಲ್ಲಿ ಕುಡಿಯುವ ನೀರಿನ (Drinking Water) ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂ ಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಆದರೆ ನಾನು ಇಷ್ಟು ಬೇಗ ರಾಜ್ಯದಲ್ಲಿ ಬರಗಾಲ ಬರಲಿದೆ ಎಂದು ಹೇಳುವುದಿಲ್ಲ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಯೋಜನೆಗಳನ್ನು ಮಾಡಿಕೊಳ್ಳಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಿ ಅದರಲ್ಲಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳನ್ನು ಸೇರಿಸಿ, ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ 100 ಕೋಟಿ ರೂ. ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್‍ಡಿಆರ್‍ಎಫ್ ತಂಡಗಳನ್ನು ಚುರುಕುಗೊಳಿಸಬೇಕು. ನಗರ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಿದೆ. ಈ ಸರ್ಕಾರ ಜನರಿಗೆ ಸಹಾಯಕವಲ್ಲದ ಸರ್ಕಾರ ಎಂದರು.

ಗ್ಯಾರಂಟಿ ಬಗ್ಗೆ ಕಾದುನೋಡುವ ತಂತ್ರ ನಮ್ಮದಾಗಿದೆ. ಉಚಿತ ಬಸ್ ಪಾಸ್ (Free Bus Pass) ಆರಂಭದ ಶೂರತ್ವವನ್ನು ಸರ್ಕಾರ ತೋರಿಸುತ್ತಿದೆ. ಗ್ಯಾರಂಟಿ ರೂಪದಲ್ಲಿ ತಾಯಿಯಂದ್ರಿಗೆ ಉಚಿತ ನೀಡುವ ಸಲುವಾಗಿ ಅವರಿಗೆ ಸಮರ್ಪಕ ಪ್ರಯಾಣ ಇಲ್ಲದಂತೆ ಆಗುತ್ತಿದೆ. ರಾಜ್ಯದಲ್ಲಿ ಬಸ್‍ಗಳ ಸಮಸ್ಯೆ ಆಗುತ್ತಿದೆ. ಈಗಾಗಲೇ ನಾವು ಡೀಸೆಲ್ ಅನುದಾನ ಬಿಡುಗಡೆ ಮಾಡಿದ್ದೇವೆ. ಅದನ್ನು ಮುಂದುವರಿಕೆ ಮಾಡಬೇಕು. ಗ್ಯಾರಂಟಿಗಳಿಗೆ ಹಣಕಾಸಿನ ಹೊಂದಾಣಿಕೆ ಬಗ್ಗೆ ಸರ್ಕಾರ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ವಿಚಾರದಲ್ಲಿ ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಂದು ಕನ್ನಡಿಗನ ಹಕ್ಕು. ಇದು ಒಂದು ಕೈಯಲ್ಲಿ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಕೊಡುವಂತಾಗಿದೆ ಎಂದರು.

ವಿದ್ಯುತ್ ದರ (Electricity Bill) ಏರಿಕೆ ನಾವು ಮಾಡಿಲ್ಲ: ರಾಜ್ಯದಲ್ಲಿ ಏಕಾಏಕಿ ವಿದ್ಯುತ್ ದರ ಏರಿಕೆ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ, ನಾವು ವಿದ್ಯುತ್ ದರ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ. ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ದರ ಜಾಸ್ತಿ ಆಗಿದೆ ಎಂದು ರಾಜ್ಯ ಸರ್ಕಾರದ ನಡೆಯ ವಿರುದ್ಧ ಅಸಮಾಧಾನ ಹೊರಹಾಕಿದರು.

ಅಧಿವೇಶನದ ವೇಳೆ ವಿಪಕ್ಷ ನಾಯಕನ ಆಯ್ಕೆ: ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ವಿಳಂಬವಾಗ್ತಿಲ್ಲ. ಅಧಿವೇಷನ ಕರೆದ ಕೂಡಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತೆ. ಪ್ರತಿ ಬಾರಿ ನಡೆಯುವ ಸಂಪ್ರದಾಯ ಇದಾಗಿದೆ ಎಂದರು. ಇದನ್ನೂ ಓದಿ: ಟ್ವಿಟ್ಟರ್‌ ಕಾನೂನು ಪಾಲನೆ ಮಾಡದೇ ನಿರಂತರ ಉಲ್ಲಂಘನೆ ಮಾಡುತ್ತಿತ್ತು: ರಾಜೀವ್‌ ಚಂದ್ರಶೇಖರ್‌

ಜನರು ಕೊಟ್ಟ ತೀರ್ಪು ಒಪ್ಪಿಕೊಂಡಿದ್ದೇವೆ: ಸೋಲಿನ ಬಗ್ಗೆ ರಾಷ್ಟ್ರೀಯ ನಾಯಕರು ಬೇಸರ ಮಾಡಿಕೊಳ್ಳುವ ಪ್ರಶ್ನೆಯಿಲ್ಲ. ಜನ ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿದ್ದೇವೆ. ನಾನೇ ಸೋಲಿನ ನೈತಿಕ ಹೊಣೆ ಹೊತ್ತಿದ್ದೇನೆ. ಲೋಕಸಭೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಕುರಿತು ಚರ್ಚೆಗಳು ನಡೆದಿಲ್ಲ. ಎಲ್ಲರ ಸೋಲಿಗೆ ನಾನೇ ಹೊಣೆ ಅಂದ ಮೇಲೆ ಶಾಸಕರ ಸೋಲಿನ ಆರೋಪದ ಬಗ್ಗೆ ಉತ್ತರಿಸುವ ಪ್ರಶ್ನೆಯಿಲ್ಲ. ಇನ್ನು ಇದೇ ವೇಳೆ ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ, ಅವರೇ ಕಾಂಗ್ರೆಸ್ ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಅಂದಿದ್ದಾರೆ. ಹಾಗಿದ್ದಾಗ ಮತ್ತೆ ಬಿಜೆಪಿಗೆ ಬರೋ ಪ್ರಶ್ನೆ ಬರಲ್ಲ. ಪ್ರಹ್ಲಾದ್ ಜೋಶಿಗೆ ಟಿಕೇಟ್ ಕೊಡಬಾರದೆಂಬ ಅಭಿಯಾನದ ಬಗ್ಗೆ, ಪ್ರತಿ ಬಾರಿ ಚುನಾವಣಾ ಪೂರ್ವದಲ್ಲಿ ಇಂತಹದ್ದು ನಡೆಯುತ್ತದೆ ಎಂದರು.

ವಿಧಾನ ಪರಿಷತ್ (Vidhana Parishad) ನ ಮೂರು ಸ್ಥಾನಗಳಿಗೂ ಸ್ಪರ್ಧೆ: ವಿಧಾನ ಪರಿಷತ್ ಚುನಾವಣೆಯ ಮೂರೂ ಸ್ಥಾನಕ್ಕೆ ನಾವು ಸ್ಪರ್ಧಿಸುತ್ತೇವೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ. ಆದರೂ ಪ್ರತಿಪಕ್ಷವಾಗಿ ಸ್ಪರ್ಧಿಸುತ್ತೇವೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

 

TAGGED:bsavaraj bommaiCongress Governmenthubballiಕಾಂಗ್ರೆಸ್ ಸರ್ಕಾರಬಸವರಾಜ ಬೊಮ್ಮಾಯಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

West Bengala Election bjp manifesto Rs 3000 aid for women unemployed youth Uniform Civil Code in 6 months crackdown on infiltration Amit Shah Sankalp Patra 7th Pay Commission
Latest

ಮಹಿಳೆಯರಿಗೆ, ನಿರೋದ್ಯೋಗಿ ಯುವಕರಿಗೆ ತಿಂಗಳಿಗೆ 3 ಸಾವಿರ – ಬಂಗಾಳ ಗೆಲ್ಲಲು ಬಿಜೆಪಿಯಿಂದ 15 ಭರವಸೆ

Public TV
By Public TV
6 minutes ago
Srinanda
Chikkamagaluru

ದತ್ತಪೀಠದ ತಪ್ಪಲಿನಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶವವಾಗಿ ಪತ್ತೆ

Public TV
By Public TV
26 minutes ago
Red Corner Notice Mangaluru
Crime

ವಿದೇಶದಲ್ಲಿ ತಲೆಮರೆಸಿಕೊಂಡ ಇಬ್ಬರು ಆರೋಪಿಗಳ ವಿರುದ್ಧ ರೆಡ್ ಕಾರ್ನರ್ ನೋಟಿಸ್ ಜಾರಿ

Public TV
By Public TV
28 minutes ago
Siddaramaiah HD Kumaraswamy
Latest

ಹಣ ವಸೂಲಿಗಾಗಿ ಸಿದ್ದರಾಮಯ್ಯ ತಮ್ಮ ಮಗನನ್ನು ನೇಮಕ ಮಾಡಿಕೊಂಡಿದ್ದಾರೆ: ಹೆಚ್‌ಡಿಕೆ ವಾಗ್ದಾಳಿ

Public TV
By Public TV
55 minutes ago
seemanth kumar singh 2
Bengaluru City

ಯುವಕ ಝಾಂಬಿ ಡ್ರಗ್‌ ಸೇವನೆ ಮಾಡಿಲ್ಲ – ದುನಿಯಾ ವಿಜಯ್‌ ಸೇರಿದಂತೆ 25 ಮಂದಿಗೆ ಪೊಲೀಸರ ನೋಟಿಸ್‌

Public TV
By Public TV
1 hour ago
nitish kumar
Latest

ರಾಜ್ಯಸಭಾ ಸಂಸದರಾಗಿ ಪ್ರಮಾಣವಚನ ಸ್ವೀಕರಿಸಿದ ನಿತೀಶ್‌ ಕುಮಾರ್‌ – ಶೀಘ್ರವೇ ಬಿಹಾರಕ್ಕೆ ನೂತನ ಸಿಎಂ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?