Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

Bengaluru City

ಅಧಿಕಾರಿಗಳ ಸಭೆಯಲ್ಲಿ ಸುರ್ಜೇವಾಲ ಭಾಗಿ ವಿವಾದ : ಕಾಂಗ್ರೆಸ್ ವಿರುದ್ಧ ಫೀಲ್ಡಿಗಿಳಿದ ವಿಪಕ್ಷಗಳು

Public TV
Last updated: June 14, 2023 7:16 pm
Public TV
Share
2 Min Read
hd kumaraswamy 7
SHARE

-ಕಾಂಗ್ರೆಸ್ ವಿರುದ್ಧ ರಾಜ್ಯಪಾಲರಿಗೆ ಬಿಜೆಪಿ ದೂರು
-ಹೆಚ್ಡಿಕೆ ತೀಕ್ಷ್ಣ ವಾಗ್ದಾಳಿ

ಬೆಂಗಳೂರು: ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಭೆಯಲ್ಲಿ ಕಾಂಗ್ರೆಸ್ (Congress) ಉಸ್ತುವಾರಿ ರಣದೀಪ್ ಸುರ್ಜೇವಾಲ (Randeep Surjewala) ಪಾಲ್ಗೊಂಡ ವಿಚಾರವಾಗಿ ಬಿಜೆಪಿ (BJP) ರಾಜಭವನದ ಕದ ತಟ್ಟಿದೆ.

ಈ ವಿವಾದ ಸೃಷ್ಟಿಯಾಗುತ್ತಿದ್ದಂತೆ ಕೈ ನಾಯಕರು ಒಬ್ಬೊಬ್ಬರು ಒಂದೊಂದು ಸ್ಪಷ್ಟನೆ ಕೊಡುತ್ತಿದ್ದಾರೆ. ವಿಪಕ್ಷಗಳು ಈ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ. ಅಲ್ಲದೇ ಸಾರ್ವಜನಿಕವಾಗಿಯೂ ಈ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಇದನ್ನೂ ಓದಿ: ಬಿಟ್ ಕಾಯಿನ್ ಹಗರಣ ತನಿಖೆ ಪುನಾರಂಭ ಮಾಡ್ತೀವಿ: ಜಿ.ಪರಮೇಶ್ವರ್

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಒಂದೇ ತಿಂಗಳಲ್ಲಿ ಗಂಭೀರ ವಿವಾದವೊಂದನ್ನು ಈ ಮೂಲಕ ಮೈಮೇಲೆ ಎಳೆದುಕೊಂಡಿದೆ. ಮಂಗಳವಾರ ಸುರ್ಜೇವಾಲಾ ಅಧಿಕಾರಿಗಳ ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ವಿಚಾರ ಬಿಜೆಪಿ, ಜೆಡಿಎಸ್‍ಗೆ ಈಗ ಭರ್ಜರಿ ಆಹಾರವಾಗಿದೆ. ಸರ್ಕಾರದ ಸಭೆಯಲ್ಲಿ ಸುರ್ಜೇವಾಲ ಭಾಗವಹಿಸಿರುವುದೇಕೆ? ಇದು ಹೈಕಮಾಂಡ್ ಹಂಗಿನ ಸರ್ಕಾರವೇ ಎಂದು ಕಾಂಗ್ರೆಸ್‍ನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಸರ್ಕಾರಕ್ಕಾಗಲಿ, ಬಿಬಿಎಂಪಿಗಾಗಲಿ ಯಾವುದೇ ರೀತಿಯ ಅಧಿಕೃತ ಸಂಬಂಧವಿರದ ಸುರ್ಜೇವಾಲ ಅವರಿಗೆ ಬಿಬಿಎಂಪಿ (BBMP) ಉನ್ನತ ಅಧಿಕಾರಿಗಳೊಂದಿಗೆ ಏನು ಕೆಲಸ ಎಂದು ವಿಪಕ್ಷಗಳು ಹರಿಹಾಯ್ದಿವೆ.

Randeep Surjewala

ಈ ಬಗ್ಗೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (H.D.Kumaraswamy), ರಾಜ್ಯ ಸರ್ಕಾರ ಹೈಕಮಾಂಡ್ ಹಂಗಿನ ಸರ್ಕಾರವಾಗಿದೆ. ರಾಜ್ಯ ಸರ್ಕಾರಕ್ಕೆ ಸಂಬಂಧವಿಲ್ಲದ ದೆಹಲಿಯ ಪ್ರತಿನಿಧಿ ಅಧಿಕಾರಗಳ ಜೊತೆ ಸಭೆ ಮಾಡಿದ್ದಾರೆ. ಇದನ್ನ ನೋಡಿದರೆ ಉಪಮುಖ್ಯಮಂತ್ರಿಗಳು ಎಷ್ಟು ಸುಳ್ಳು ಹೇಳಿದ್ದಾರೆ ಎಂದು ಗೊತ್ತಾಗುತ್ತದೆ. ನಾಡಿನ ಜನತೆಯ ಮುಂದೆ ಅವರ ನಾಟಕೀಯವಾದ ಮಾತುಗಳಿಗೆ ಇದು ಒಂದು ಸಾಕ್ಷಿಯಾಗಿದೆ. ಎಷ್ಟು ದಿನ ಈ ರೀತಿಯ ಸುಳ್ಳುಗಳನ್ನು ಹೇಳಿಕೊಂಡು ಬದುಕುತ್ತೀರಾ ಎಂದು ಆಕ್ರೋಶ ಹೊರಹಾಕಿದ್ದಾರೆ.

ನಮ್ಮ ರಾಜ್ಯದ ಜನರ ಮತವನ್ನು ನಿಮ್ಮ ದೆಹಲಿ ಹೈಕಮಾಂಡ್‍ಗೆ ಗುಲಾಮರಾಗಿ ಇಟ್ಟುಕೊಂಡಿದ್ದೀರಾ? ಅಧಿಕಾರಿಗಳಿಗೆ, ಮಂತ್ರಿಗಳಿಗೆ ಸುರ್ಜೇವಾಲ ಏನು ಸೂಚನೆ ಕೊಟ್ಟಿದ್ದಾರೆ ಎಂಬುದು ಗೊತ್ತಿದೆ. ಜನ ಮತ ಹಾಕಿರುವುದು ನಿಮಗೋ ಅಥವಾ ಕಾಂಗ್ರೆಸ್ ಹೈಕಮಾಂಡ್‍ಗೋ? ಸರ್ಕಾರದ ತಿರ್ಮಾನಗಳನ್ನ ಯಾರೋ ಬೀದಿಯಲ್ಲಿ ಹೋಗುವವರ ಜೊತೆ ಮೀಟಿಂಗ್ ಮಾಡುವುದನ್ನ ನೋಡಿದರೆ ರಾಜ್ಯ ಎಂತಹ ದುರ್ಗತಿಗೆ ಬಂದಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು ಎಂದು ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದಿಂದ ಅಧಿಕಾರ ದುರ್ಬಳಕೆ ಆಗಿದೆ. ನಾವು ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದೇವೆ. ರಾಜ್ಯಪಾಲರು ಕಾಂಗ್ರೆಸ್ ಕಿವಿ ಹಿಂಡುವ ಕೆಲಸ ಮಾಡಬೇಕು. ಖಾಸಗಿ ಹೋಟೆಲ್‍ನಲ್ಲಿ ಬಿಬಿಎಂಪಿ ಅಧಿಕಾರಿಗಳ ಜೊತೆ ಸುರ್ಜೇವಾಲ ಅವರ ಸಭೆ ಉದ್ದೇಶ ಏನೆಂಬುದು ಗೊತ್ತಿಲ್ಲ. ಸರ್ಕಾರದ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಬಾರದು. ಇದರಲ್ಲಿ ಕಾನೂನು ಉಲ್ಲಂಘನೆಯಾಗಿದೆ. ಕಾಂಗ್ರೆಸ್‍ಗೆ ಕಾನೂನು ಉಲ್ಲಂಘನೆ ಮಾಡುವುದೇ ಕೆಲಸ. ಈ ಬಗ್ಗೆ ಕ್ರಮ ಆಗಬೇಕು ಅಂತ ಒತ್ತಾಯಿಸಿದ್ದಾರೆ.

ಈ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ನಡೆದಿರುವುದು ಅಧಿಕೃತ ಸಭೆಯಲ್ಲ. ಬೆಂಗಳೂರು ನಗರಕ್ಕೆ ಸಂಬಂಧಿಸಿದಂತೆ ಕರೆದಿದ್ದ ಸಭೆಯಲ್ಲಿ ಬಿಬಿಎಂಪಿ ಚುನಾವಣೆ ಬಗ್ಗೆಯೂ ಮಾತನಾಡಿದ್ದಾರೆ. ಹೆಬ್ಬಾಳ ಫ್ಲೈಓವರ್ ನೋಡಲು ಹೊರಟಿದ್ದ ವೇಳೆ ಅಲ್ಲಿಗೆ ಬಂದಿದ್ದರು. ಈ ವೇಳೆ ಉಪಮುಖ್ಯಮಂತ್ರಿಗಳು ಶಾಸಕರನ್ನು ಭೇಟಿ ಮಾಡಿದ್ದು, ಕಾನೂನು ಅಭಿಪ್ರಾಯ ಪಡೆಯಲು ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದರು. ಕುಮಾರಸ್ವಾಮಿಯವರು ಸುಮ್ಮನೆ ಆರೋಪ ಮಾಡುತ್ತಾರೆ ಎಂದು ಕುಟುಕಿದ್ದಾರೆ.

ಡಿಸಿಎಂ ಡಿ.ಕೆ ಶಿವಕುಮಾರ್ ಅವರು ನಡೆಸಿದ ಸಭೆಗೆ ರಣದೀಪ್ ಸಿಂಗ್ ಸುರ್ಜೇವಾಲ ಬಂದಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಎಳಸು, ರಾಜಕೀಯ ಪ್ರಬುದ್ಧತೆಯಿಲ್ಲ : ಸಿದ್ದರಾಮಯ್ಯ ವಾಗ್ದಾಳಿ

TAGGED:bjpcongressgovernorh d kumaraswamyjdsKarnataka GovernmentRandeep surjewalaಕಾಂಗ್ರೆಸ್ಕುಮಾರಸ್ವಾಮಿಬಿಜೆಪಿರಣದೀಪ್‌ ಸಿಂಗ್‌ ಸುರ್ಜೇವಾಲಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories

You Might Also Like

Vaibhav Sooryavanshi 4
Cricket

ನನ್ನ ಜೊತೆ ಸೆಲ್ಫಿ ಬೇಕಾ? ಹಾಗಾದ್ರೆ 100 ರೂಪಾಯಿ ಕೊಡಿ – ಪುಟಾಣಿಗಳ ಜೊತೆ ವೈಭವ್ ಸೂರ್ಯವಂಶಿ ತುಂಟಾಟ!

Public TV
By Public TV
53 minutes ago
k.h.muniyappa delhi
Latest

ದೆಹಲಿಗೆ ಸಚಿವರ ದಂಡು – ಮುಖ್ಯಮಂತ್ರಿ ಗೊಂದಲ ಇತ್ಯರ್ಥಪಡಿಸಲು ಸಚಿವರ ಒತ್ತಡ

Public TV
By Public TV
1 hour ago
GBA
Bengaluru City

ಜಿಬಿಎ ಚುನಾವಣೆ ನಡೆಸುವಂತೆ ರಾಜ್ಯಪಾಲರಿಗೆ ಜೆಡಿಎಸ್ ನಿಯೋಗ ದೂರು

Public TV
By Public TV
1 hour ago
odisha man
Latest

ಬ್ಯಾಂಕ್ ಖಾತೆಯಲ್ಲಿದ್ದ ಹಣ ಪಡೆಯಲು ಸಾಕ್ಷಿ ಕೇಳಿದ ಬ್ಯಾಂಕ್ – ಮೃತ ತಂಗಿ ಅಸ್ಥಿಪಂಜರವನ್ನೇ ಬ್ಯಾಂಕ್‌ಗೆ ಹೊತ್ತುತಂದ ಅಣ್ಣ

Public TV
By Public TV
1 hour ago
ಸಾಂದರ್ಭಿಕ ಚಿತ್ರ
Districts

ಯಾದಗಿರಿಯಲ್ಲಿ ಸಿಡಿಲು ಬಡಿದು 60 ಕುರಿಗಳು ಸಾವು

Public TV
By Public TV
2 hours ago
Amravati 2.0 In Kolhapur Man 22 Sexually Exploits Women In Maharashtra
Crime

ಮತ್ತೊಂದು `ಮಹಾʼ ಲೈಂಗಿಕ ದೌರ್ಜನ್ಯ ಪ್ರಕರಣ – 350 ಅಶ್ಲೀಲ ವಿಡಿಯೋ ಪತ್ತೆ, ಕಾಮುಕ ಅಂದರ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?