Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Crime

ಮಣಿಪುರದಲ್ಲಿ ಮುಂದುವರೆದ ಹಿಂಸಾಚಾರ – ಪೊಲೀಸರ ಮೇಲೆಯೇ ಗುಂಡಿನ ದಾಳಿ, ಶಸ್ತ್ರಾಸ್ತ್ರ ಧ್ವಂಸ

Public TV
Last updated: June 17, 2023 12:24 pm
Public TV
Share
2 Min Read
manipur violence
SHARE

ಇಂಪಾಲ: ಸಂಘರ್ಷ ಪೀಡಿತ ಪ್ರದೇಶವಾದ ಮಣಿಪುರದಲ್ಲಿ (Manipur) ಶುಕ್ರವಾರ ರಾತ್ರಿ ಶಸ್ತ್ರಾಸ್ತ್ರಗಳನ್ನು ಬಳಸಿಕೊಂಡು ಪೊಲೀಸ್ (Police) ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು, ಶನಿವಾರ ಮುಂಜಾನೆಯವರೆಗೂ ಗುಂಡಿನ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಣಿಪುರದ ಬಿಷ್ಣುಪುರ್ ಜಿಲ್ಲೆಯ ಕ್ವಾಕ್ಟಾ ಮತ್ತು ಚುರಾಚಂದ್‌ಪುರ್ ಜಿಲ್ಲೆಯ ಕಾಂಗ್ವಾಯ್‌ನಲ್ಲಿ ಗುಂಡಿನ ದಾಳಿ ನಡೆಸಿದ್ದು, ಗುಂಪು ಗುಂಪಾಗಿ ಸೇರಿಕೊಂಡು ಅಲ್ಲಲ್ಲಿ ಬೆಂಕಿ ಹಚ್ಚುವ ವಿದ್ವಂಸಕ ಕೃತ್ಯಗಳು ನಡೆದಿವೆ. ಭಾರತೀಯ ಸಶಸ್ತ್ರ ಪಡೆ, ಅಸ್ಸಾಂ ರೈಫಲ್ಸ್, ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAF) ಮತ್ತು ರಾಜ್ಯ ಪೊಲೀಸರ ಜಂಟಿ ಪಡೆಗಳು ಇಂಪಾಲದ ಪೂರ್ವ ಜಿಲ್ಲೆಯಲ್ಲಿ ಮಧ್ಯರಾತ್ರಿಯವರೆಗೆ ಧ್ವಜ ಮೆರವಣಿಗೆ (Flag March) ಕೈಗೊಂಡಿದ್ದ ಸಂದರ್ಭ ಅಡ್ವಾನ್ಸ್ ಆಸ್ಪತ್ರೆ ಬಳಿಯ ಅರಮನೆ ಕಾಂಪೌಂಡ್‌ನಲ್ಲಿ ಬೆಂಕಿ ಹಚ್ಚುವ ಪ್ರಯತ್ನ ನಡೆದಿದೆ. ಇದನ್ನೂ ಓದಿ: Biparjoy ಸೈಕ್ಲೋನ್‌ನಿಂದ ತೊಂದರೆಗೆ ಸಿಲುಕಿದ್ದ ಮಗುವನ್ನು ಸಿಮೆಂಟ್ ಚೀಲದಲ್ಲಿ ಸಾಗಿಸಿದ ಸಿಬ್ಬಂದಿ

manipur violence 1

ಶುಕ್ರವಾರ ಸಂಜೆ ಸುಮಾರು 1,000 ಜನರ ಗುಂಪು ಸೇರಿಕೊಂಡು ಈ ದುಷ್ಕೃತ್ಯ ಎಸಗಿದ್ದಾರೆ. ಈ ಗುಂಪನ್ನು ಚದುರಿಸುವ ಸಲುವಾಗಿ ಆರ್‌ಎಎಫ್ ಆಶ್ರವಾಯು ಮತ್ತು ರಬ್ಬರ್ ಗುಂಡುಗಳನ್ನು ಹಾರಿಸಿದ್ದಾರೆ. ಈ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ವಿಸ್ಕಿ ಬಾಟ್ಲಿಯಲ್ಲಿ 13 ಕೋಟಿ ರೂ. ಮೌಲ್ಯದ ಕೊಕೇನ್- ಕೀನ್ಯಾ ಮಹಿಳೆ ಅರೆಸ್ಟ್

ಮಣಿಪುರ ವಿಶ್ವವಿದ್ಯಾನಿಲಯದ ಬಳಿ ಗುಂಪೊಂದು ನಿರ್ಮಾಣವಾಗಿದ್ದು, ರಾತ್ರಿ 10:40ರ ಸುಮಾರಿಗೆ 200ರಿಂದ 300 ಮಂದಿ ಸೇರಿಕೊಂಡು ಶಾಸಕರ ಮನೆಗೆ ಬೆಂಕಿ ಹಚ್ಚುವ ಪ್ರಯತ್ನ ಮಾಡಿದ್ದಾರೆ. ಆರ್‌ಎಎಫ್ ತಂಡವು ಈ ಗುಂಪನ್ನು ಚದುರಿಸುವಲ್ಲಿ ಯಶಸ್ವಿಯಾಗಿದೆ. ಅದೇ ರಾತ್ರಿ ಮತ್ತೊಂದು ಗುಂಪು ಇಂಪಾಲದ ಪಶ್ಚಿಮ ಜಿಲ್ಲೆಯ ಇರಿಂಗ್‌ಬಾಮ್ (Iringbam) ಪೊಲೀಸ್ ಠಾಣೆಯ ಶಸ್ತ್ರಾಸ್ತ್ರಗಳನ್ನು ಧ್ವಂಸಗೊಳಿಸಲು ಪ್ರಯತ್ನಿಸಿದೆ. ಸುಮಾರು 300ರಿಂದ 400 ಮಂದಿ ಪೊಲೀಸ್ ಠಾಣೆಯ ಒಳಗೆ ನುಗ್ಗಿದ್ದು, ಆರ್‌ಎಎಫ್ ತಂಡ ಗುಂಪನ್ನು ಚದುರಿಸಿದೆ. ಅಲ್ಲದೇ 200ರಿಂದ 300 ಜನರ ಗುಂಪೊಂದು ಬಿಜೆಪಿ ಕಚೇರಿಗೆ ಸುತ್ತುವರೆದಿದ್ದು, ಸೇನಾ ಪಡೆಯು ಅದನ್ನು ಚದುರಿಸಿದೆ ಎಂದು ಸೇನಾ ಮೂಲಗಳು ತಿಳಿಸಿದೆ. ಇದನ್ನೂ ಓದಿ: Cyclone Biparjoy: ಗುಜರಾತ್‍ನಲ್ಲಿ ಅಲ್ಲೋಲಕಲ್ಲೋಲ ಸೃಷ್ಟಿಸಿದ ಸೈಕ್ಲೋನ್

ಪಶ್ಚಿಮ ಇಂಪಾಲದಲ್ಲಿರುವ ಬಿಜೆಪಿ ಅಧ್ಯಕ್ಷ ಅಧಿಕಾರಿಮಯುಮ್ ಶಾರದಾ ದೇವಿಯವರ ನಿವಾಸವನ್ನೂ ಧ್ವಂಸಗೊಳಿಸಲು ಪ್ರಯತ್ನ ಪಟ್ಟಿದ್ದು, ಅದನ್ನು ಸೇನೆ ಮತ್ತು ಆರ್‌ಎಎಫ್ ತಡೆದಿದೆ. 1,200 ಜನರ ಗುಂಪೊಂದು ಕೇಂದ್ರ ಸಚಿವ ಆರ್‌ಕೆ ರಂಜನ್ ಸಿಂಗ್ (R.K.Ranjan Singh) ಅವರ ಮನೆಯನ್ನು ಸುಟ್ಟುಹಾಕಿದ ಬಳಿಕ ಈ ಘಟನೆ ನಡೆದಿದೆ. ಇದನ್ನೂ ಓದಿ: ಟ್ಯೂಷನ್ ಮುಗಿಸಿ ಬರುತ್ತಿದ್ದಾಗ 10ನೇ ಕ್ಲಾಸ್ ವಿದ್ಯಾರ್ಥಿ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ರು

ಕಳೆದ ಕೆಲವು ದಿನಗಳಿಂದ ಮಣಿಪುರ ಕೋಮು ಸಂಘರ್ಷವು ತೀವ್ರ ಸ್ವರೂಪವನ್ನು ಪಡೆದುಕೊಂಡಿದ್ದು, ರಾಜಕಾರಣಿಗಳ ಮನೆ ಹಾಗೂ ಆಸ್ತಿಪಾಸ್ತಿಗಳನ್ನು ಧ್ವಂಸ ಮಾಡುವ ಗುರಿಯನ್ನು ಕೆಲ ಗುಂಪುಗಳು ಹೊಂದಿವೆ. ಈ ಹಿನ್ನೆಲೆ ಅಲ್ಲಲ್ಲಿ ಬೆಂಕಿ ಹಚ್ಚುವ ಕಾರ್ಯಗಳು ನಡೆಯುತ್ತಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಕೇಂದ್ರ ಸರ್ಕಾರ ಶ್ರಮಿಸಬೇಕಿದೆ. ಇದನ್ನೂ ಓದಿ: ವರದಕ್ಷಿಣೆ ಕೇಳಿದ್ದಕ್ಕೆ ವರನನ್ನೇ ಮರಕ್ಕೆ ಕಟ್ಟಿ ಹಾಕಿದ ವಧುವಿನ ಕಡೆಯವ್ರು

TAGGED:attackIRINGBAMManipurpolice forceRAFviolenceಆರ್‌ಎಎಫ್ಇರಿಂಗ್‌ಬಾಮ್ದಾಳಿಪೊಲೀಸ್ ಪಡೆಮಣಿಪುರಹಿಂಸಾಚಾರ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
16 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
18 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
20 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

BMTC bus
Bengaluru City

ಬಸ್ ನಿಲ್ಲಿಸದ್ದಕ್ಕೆ ಬಿಎಂಟಿಸಿ ಡ್ರೈವರ್‌ಗೆ ಚಪ್ಪಲಿಯಿಂದ ಮಹಿಳೆ ಹಲ್ಲೆ- ದೂರು ದಾಖಲು

Public TV
By Public TV
15 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
48 minutes ago
UK gay couple
Latest

ಏರ್‌ ಇಂಡಿಯಾ ಪತನ – ಮದುವೆಯಾಗಿದ್ದ Gay Couple ದುರಂತ ಸಾವು

Public TV
By Public TV
1 hour ago
Bhavik Maheshwari
Crime

ವಿಮಾನ ದುರಂತ – ಮದುವೆಯಾದ ಎರಡೇ ದಿನಕ್ಕೆ ಮಸಣ ಸೇರಿದ ಭವಿಕ್

Public TV
By Public TV
1 hour ago
Ahmedabad Plane Crash Survivor
Latest

ನಾನು ವಿಮಾನದಿಂದ ಜಂಪ್ ಮಾಡ್ಲಿಲ್ಲ – ದೊಡ್ಡ ಆಪತ್ತಿನಿಂದ ರಮೇಶ್ ವಿಶ್ವಾಸ್ ಕುಮಾರ್ ಪಾರಾಗಿದ್ದು ಹೇಗೆ?

Public TV
By Public TV
2 hours ago
Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?