Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಜು.3ರಿಂದ 10 ದಿನಗಳ ಕಾಲ ಅಧಿವೇಶನ – ಜೂನ್ 26ರಿಂದ ಮೂರು ದಿನಗಳ ಕಾಲ ನೂತನ ಶಾಸಕರಿಗೆ ತರಬೇತಿ

Public TV
Last updated: June 21, 2023 5:04 pm
Public TV
Share
3 Min Read
ut khader 1
SHARE

ಬೆಂಗಳೂರು: 16ನೇ ವಿಧಾನಸಭೆಗೆ (Assembly) ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ 70 ಶಾಸಕರಿಗೆ 3 ದಿನಗಳ ಕಾಲ ತರಬೇತಿ ಶಿಬಿರ ಏರ್ಪಡಿಸಲಾಗಿದೆ. ಜೂ.26 ರಿಂದ ಜೂ.28ರವರೆಗೆ 3 ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ನೂತನ ಶಾಸಕರಿಗೆ ಆರೋಗ್ಯ ಸುಸ್ಥಿರತೆ ಮತ್ತು ಜ್ಞಾನಾಭಿವೃದ್ಧಿ ಸಂಬಂಧಿಸಿದಂತೆ ತರಬೇತಿ ನೀಡಲಾಗುತ್ತದೆ ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ (U.T Khader) ಅವರು ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಯುವ ಶಾಸಕರು ಹೆಚ್ಚಿನ ಸಂಖ್ಯೆಯಲ್ಲಿ ಸಂಸದೀಯ ಕಲಾಪಗಳಲ್ಲಿ (Session) ಸಕ್ರಿಯವಾಗಿ ಭಾಗವಹಿಸುವ ಉದ್ದೇಶದಿಂದ ಈ ತರಬೇತಿ ಆಯೋಜಿಸಲಾಗಿದೆ. ಯುವಜನರ ಆಲೋಚನೆಗಳು, ದೂರದೃಷ್ಟಿ, ಪ್ರತಿಭೆಯನ್ನು ಬಿಂಬಿಸಲು ಪ್ರಕೃತಿಯ ಜೊತೆಗೆ ತರಬೇತಿ ಆಯೋಜಿಸಲಾಗಿದೆ. ನೆಲಮಂಗಲದ ಸಮೀಪದ ಧರ್ಮಸ್ಥಳ ಕ್ಷೇಮವನದಲ್ಲಿ ಈ ಶಿಬಿರ ನಡೆಯಲಿದೆ. ಈಗಾಗಲೇ ಮೊದಲ ಬಾರಿಗೆ ನೂತನವಾಗಿ ಆಯ್ಕೆಯಾದ ಶಾಸಕರಿಗೆ ಮಾಹಿತಿ ನೀಡಲಾಗಿದೆ. ಸಕ್ರಿಯವಾಗಿ ಈ ತರಬೇತಿ ಶಿಬಿರದಲ್ಲಿ ಭಾಗವಹಿಸುವ ಮೂಲಕ ಈ ತರಬೇತಿ ಶಿಬಿರವನ್ನು ಸದ್ಭಳಕೆ ಮಾಡಿಕೊಳ್ಳಬೆಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಡಿಸಿಸಿ ಬ್ಯಾಂಕ್ ಅಕ್ರಮ ಮುಚ್ಚಲು ಕಾಂಗ್ರೆಸ್‌ನಿಂದಲೇ ಸ್ತ್ರೀ ಶಕ್ತಿ ಸಂಘಗಳ ಪ್ರತಿಭಟನೆ: ಎಚ್‌ಡಿಕೆ ಬಾಂಬ್

ಜೂ.25ರಂದು ಸಂಜೆ ಕ್ಷೇಮವನದಲ್ಲಿ ನೂತನ ಶಾಸಕರು ಆಗಮಿಸಿ ನೋಂದಣಿ ಮಾಡಿಕೊಳ್ಳಲಿದ್ದಾರೆ. ಜೂ.26ರಿಂದ ಮೂರು ದಿನಗಳ ಕಾಲ ಬೆಳಗ್ಗೆ 6ರಿಂದ ಬೆಳಗ್ಗೆ 9ರವರೆಗೆ ಆರೋಗ್ಯಕ್ಕೆ ಸಂಬಂಧಿಸಿದ ಚಟುವಟಿಕೆಗಳು ನಡೆಯಲಿವೆ. ಬೆಳಗ್ಗೆ 10ರಿಂದ ಸಂಜೆಯವರೆಗೆ ಹಿರಿಯ ಸದಸ್ಯರು ಶಿಬಿರದಲ್ಲಿ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಿದ್ದಾರೆ. ಜೂ.26ರಂದು ಮಧ್ಯಾಹ್ನ 12ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಅವರು ಪಾಲ್ಗೊಳ್ಳಲಿದ್ದಾರೆ. ಮೂರು ದಿನಗಳ ಕಾಲ ಪ್ರತಿದಿನ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ನೂತನ ಶಾಸಕರ ಜೊತೆಗೆ ಸಂವಾದ ಏರ್ಪಡಿಸಲಾಗಿದೆ.

ಶಾಸಕರ ಹಕ್ಕುಗಳು ಮತ್ತು ಕರ್ತವ್ಯಗಳು, ಶಾಸನಗಳ ರಚನೆ ಮತ್ತು ಸದಸ್ಯರ ಭಾಗವಹಿಸುವಿಕೆ, ಶೂನ್ಯವೇಳೆ, ಪ್ರಶ್ನೋತ್ತರ, ಜನಮೆಚ್ಚಿಸುವ ಶಾಸಕನಾಗುವುದು ಹೇಗೆ, ವಿಧಾನಮಂಡಲದ ಸಮಿತಿಗಳು ಮತ್ತು ಸದಸ್ಯರ ಭಾಗವಹಿಸುವಿಕೆ ಕುರಿತಾಗಿ ಚರ್ಚೆ ನಡೆಯಲಿದೆ. ವಿಧಾನಮಂಡಲದ ಕಾರ್ಯ ಕಲಾಪಗಳು ಮತ್ತು ಶಾಸಕರ ಜವಾಬ್ದಾರಿಗಳ ಕುರಿತು ಹಿರಿಯ ಸದಸ್ಯರು ತರಬೇತಿ ಶಿಬಿರದಲ್ಲಿ ತಮ್ಮ ಅನುಭವಗಳನ್ನ ಹಂಚಿಕೊಳ್ಳಲಿದ್ದಾರೆ. ಒಟ್ಟಾರೆಯಾಗಿ ಗುಣಮಟ್ಟದ ಅಧಿವೇಶನ ಮತ್ತು ಸದ್ಭಳಕೆ ಕುರಿತು ಶಾಸಕರಲ್ಲಿ ಜಾಗೃತಿ ಮೂಡಿಸುವುದು ಈ ತರಬೇತಿಯ ಮುಖ್ಯ ಉದ್ದೇಶವಾಗಿದೆ. ದೈಹಿಕ, ಮಾನಸಿಕ ಆರೋಗ್ಯ, ಸದೃಢತೆ ಜೊತೆಗೆ ಅತ್ಯಂತ ಆತ್ಮವಿಶ್ವಾಸದಿಂದ ಸದನದಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಸದಸ್ಯರಿಗೆ ತರಬೇತಿ ಅಗತ್ಯ ಎಂದು ಅವರು ಹೇಳಿದ್ದಾರೆ.

ಜುಲೈ 3ರಿಂದ ಅಧಿವೇಶನ ಆರಂಭ:
16ನೇ ವಿಧಾನಸಭೆಯ 1ನೇ ಅಧಿವೇಶನದ ಮುಂದುವರಿದ ಉಪವೇಶನ ಇದೇ ಜು.3ರಿಂದ ಆರಂಭವಾಗಲಿದೆ. ಜು.14 ರವರೆಗೆ 10 ದಿನಗಳ ಕಾಲ ನಡೆಯಲಿದೆ. ಜು.3ರಂದು ಮಧ್ಯಾಹ್ನ 12ಕ್ಕೆ ರಾಜ್ಯಪಾಲರು ಉಭಯ ಸದನಗಳ ಸದಸ್ಯರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯವಾಗಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಮೇಲಿನ ಚರ್ಚೆ ನಡೆಯಲಿದೆ. ಇದಾದ ನಂತರ ನಿರ್ಣಯ ಅಂಗೀಕಾರವಾಗಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜು.7ರಂದು 2023-24ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಆಯವ್ಯಯದ ಮೇಲೆ ಸಾಮಾನ್ಯ ಚರ್ಚೆ ನಡೆದ ನಂತರ ಅನುದಾನದ ಬೇಡಿಕೆಗಳನ್ನು ಅಂಗೀಕರಿಸಲಾಗುತ್ತದೆ.

ಈ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಲಾದ ವಿಧೇಯಕಗಳನ್ನು ಪರ್ಯಾಲೋಚನೆಗೆ ಹಾಗೂ ಅಂಗೀಕಾರಕ್ಕೆ ತೆಗೆದುಕೊಳ್ಳಲಾಗುವುದು. ಒಟ್ಟು 8 ದಿನಗಳ ಕಾಲ ಪ್ರಶ್ನೋತ್ತರ ಕಲಾಪ ನಿಗದಿಪಡಿಸಲಾಗಿದೆ. ಇದರ ಜೊತೆಗೆ ಗಮನಸೆಳೆಯುವ ಸೂಚನೆಗಳು, ಶೂನ್ಯವೇಳೆ, ನಿಲುವಳಿ ಸೂಚನೆ, ನಿಯಮ 69ರ ಸೂಚನೆಗಳು, ಖಾಸಗಿ ಸದಸ್ಯರುಗಳು ಕಾರ್ಯಕಲಾಪಗಳನ್ನು ನಡೆಸಲಾಗುವುದು ಎಂದು ಸ್ಪೀಕರ್ ತಿಳಿಸಿದ್ದಾರೆ. ಇದನ್ನೂ ಓದಿ: ಚುನಾವಣೆಯಲ್ಲಿ ಹೊಂದಾಣಿಕೆ ಮಾಡಿಕೊಂಡಿರುವುದು ಸತ್ಯ, ಈಗ ಮಾತಾಡಿದರೆ ಬೆಂಕಿ ಹಚ್ಚಿದಂತೆ: ಸಿ.ಪಿ ಯೋಗೇಶ್ವರ್

TAGGED:assemblykarnatakasessionUT Khaderಅಧಿವೇಶನಕಲಾಪಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

Gill Jaiswal
Cricket

England vs India, 1st Test: ಇಂಗ್ಲೆಂಡ್‌ ನೆಲದಲ್ಲಿ ಮೊದಲ ಪಂದ್ಯದಲ್ಲೇ ಜೈಸ್ವಾಲ್‌, ಗಿಲ್‌ ಶತಕದ ಸಾಧನೆ

Public TV
By Public TV
2 hours ago
alipur village chikkaballapur
Chikkaballapur

ಇರಾನ್-ಇಸ್ರೇಲ್ ಯುದ್ಧ; ಕರ್ನಾಟಕದ ಅಲೀಪುರದಲ್ಲಿ ಮನೆ ಮಾಡಿದ ಆತಂಕ

Public TV
By Public TV
3 hours ago
yashasvi jaiswal
Cricket

England vs India 1st Test – ಭಾರತಕ್ಕೆ 2 ಬಾರಿ 5 ರನ್‌!

Public TV
By Public TV
4 hours ago
indian students in iran
Latest

ಭಾರತೀಯರ ರಕ್ಷಣೆಗಾಗಿ ತನ್ನ ವಾಯುನೆಲೆ ತೆರೆದ ಇರಾನ್‌

Public TV
By Public TV
4 hours ago
zameer ahmed
Districts

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ – ಕೇಂದ್ರದ ಮಾದರಿ ಅನುಸರಿಸಿದ್ದೇವೆ: ಜಮೀರ್

Public TV
By Public TV
5 hours ago
Father Of 6 Elopes married his sons bride
Crime

ಮಗನಿಗೆ ನಿಶ್ಚಯವಾಗಿದ್ದ ಹೆಣ್ಣಿನ ಜೊತೆ 6 ಮಕ್ಕಳ ತಂದೆ ಚಕ್ಕಂದ – ಮದುವೆ ಬೇಡ ಎಂದಿದ್ದಕ್ಕೆ ಪತ್ನಿ ಮೇಲೆ ಹಲ್ಲೆ

Public TV
By Public TV
5 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?