ಅಕ್ಕಿ ವಿಚಾರದಲ್ಲಿ ದ್ವೇಷದ ರಾಜಕೀಯ ಮಾಡೋದು ಬೇಡ – ಅಮಿತ್ ಶಾಗೆ ಸಿದ್ದರಾಮಯ್ಯ ಮನವಿ

Public TV
2 Min Read
Siddaramaiah 10

ನವದೆಹಲಿ: ಭಾರತೀಯ ಆಹಾರ ನಿಗಮ (FCI) ಕರ್ನಾಟಕಕ್ಕೆ ಮೊದಲು ಅಕ್ಕಿ ಕೊಡುವ ಭರವಸೆ ನೀಡಿತ್ತು, ಆದರೆ ಇದ್ದಕ್ಕಿದ್ದ ಹಾಗೇ ಅಕ್ಕಿ ನೀಡಲು ನಿರಾಕರಿಸಲಾಗುತ್ತಿದೆ.‌ ಅಕ್ಕಿ ವಿಚಾರದಲ್ಲೂ ರಾಜಕೀಯ ಮಾಡಿದ್ದಾರೆ ಅನಿಸುತ್ತೆ, ಈ ರೀತಿಯ ದ್ವೇಷದ ರಾಜಕೀಯ ಮಾಡೋದು ಬೇಡ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗೆ (Amit Shah) ಹೇಳಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ.

siddaramaiah 2 1

ದೆಹಲಿಯಲ್ಲಿ (NewDelhi) ಮಾತನಾಡಿದ ಅವರು, ನಿನ್ನೆ ರಾತ್ರಿ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ, ಸೌಹಾರ್ದಯುತವಾಗಿ ಚರ್ಚೆ ಮಾಡಿದೆ. ರಾಜ್ಯಕ್ಕೆ ಅಕ್ಕಿ ನೀಡುವ ವಿಚಾರವಾಗಿ ಚರ್ಚಿಸಿದ್ದೇನೆ. ರಾಜ್ಯದಲ್ಲಿ ಆಗಿರುವ ಸಮಸ್ಯೆ ಬಗ್ಗೆ ಅವರ ಗಮನಕ್ಕೆ ತಂದಿದ್ದೀನಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕೇಂದ್ರದ ದ್ವೇಷ ರಾಜಕಾರಣದಿಂದ ಜು.1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ: ಸಿಎಂ

ಮೊದಲು FCI ಅಕ್ಕಿ ನೀಡುವ ಭರವಸೆ ನೀಡಲಾಗಿತ್ತು. ಆದರೆ ಕಡೆ ಕ್ಷಣದಲ್ಲಿ ನಿರ್ಧಾರ ಬದಲಿಸಿ ಈಗ ಅಕ್ಕಿ ನೀಡಲು ನಿರಾಕರಿಸುತ್ತಿದೆ. ಈ ರೀತಿ ಮಾಡುವುದು ಸರಿಯಲ್ಲ, ಇದು ಅಕ್ಕಿ ವಿಚಾರದಲ್ಲಿ ರಾಜಕೀಯ ಮಾಡಿದ ಹಾಗೇ ಆಗಲಿದೆ. ಈ ಹಿನ್ನೆಲೆಯಲ್ಲಿ ಅಕ್ಕಿ ನೀಡುವಂತೆ ಸೂಚಿಸಲು ನವಿ ಮಾಡಿದ್ದೇನೆ. ಅದಕ್ಕೆ ಅವರು ಪೂರಕವಾಗಿ ಸ್ಪಂಧಿಸಿದ್ದು, ಕೇಂದ್ರ ಆಹಾರ ಸಚಿವ ಪಿಯೂಷ್ ಗೊಯೇಲ್ ಜೊತೆಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಹೇಳಿದರು.

Siddaramaiah 9

ಈಗಾಗಲೇ ಜುಲೈ 1 ರಿಂದ ಅನ್ನಭಾಗ್ಯ ಯೋಜನೆ ಜಾರಿ ಅನುಮಾನ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅಕ್ಕಿ ಹೊಂದಿಸಲು ಬೇರೆ ಬೇರೆ ರಾಜ್ಯಗಳ ಜೊತೆಗೆ ಮಾತುಕತೆ ನಡೆಸಲಾಗುತ್ತಿದೆ. ಯಾವ ರಾಜ್ಯಗಳಲ್ಲೂ ಬೇಡಿಕೆ ಇರುವಷ್ಟು ಸಾಮರ್ಥ್ಯದಲ್ಲಿ ಪೂರೈಕೆಯಾಗದ ಹಿನ್ನೆಲೆ ಯೋಜನೆ ಜಾರಿ ಮಾಡುವುದು ಕಷ್ಟವಾಗುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ಪ್ರಧಾನಿ ಮೋದಿ ಕೊಲ್ಲುತ್ತೇನೆ ಎಂದು ಕರೆ ಮಾಡಿದ್ದ ವ್ಯಕ್ತಿ ಬಂಧನ

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ಕೆಟ್ಟ ರಾಜಕೀಯ ಮಾಡುತ್ತಿದೆ. ಈಗಾಗಲೇ ತೆಲಂಗಾಣ, ಪಂಜಾಬ್ ಸೇರಿದಂತೆ ಎಲ್ಲಾ ಕಡೆ ಕೇಳಿದ್ದೇವೆ. ಆಂಧ್ರಪ್ರದೇಶದಿಂದ ಅಕ್ಕಿ ಆಮದು ಮಾಡಿಕೊಂಡರೆ ಪ್ರತಿ ಕೆಜಿಗೆ 42 ರೂ. ಆಗಲಿದೆ. 1 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಇದೆ ಆದರೆ ಅದು ಕೇವಲ ಒಂದು ತಿಂಗಳು ನೀಡಲು ಸಾಧ್ಯ ಎಂದು ಛತ್ತೀಸ್‌ಗಢ ಸರ್ಕಾರ ಹೇಳಿದೆ. ತೆಲಂಗಾಣ ಕೇವಲ ಗೋಧಿ ಮಾತ್ರ ಕೊಡೋಕೆ ಸಾಧ್ಯ ಅಂತ ಹೇಳಿದೆ. ಕರ್ನಾಟಕದಲ್ಲಿ ಬಹಳ ದೊಡ್ಡ ಪ್ರಮಾಣದಲ್ಲಿ ಅಕ್ಕಿ ಲಭ್ಯವಿಲ್ಲ. ಹೀಗಾಗಿ ಓಪನ್ ಮಾರ್ಕೆಟ್‌ಗೆ ಹೋಗಬೇಕು. ಇದಕ್ಕೆ ಟೆಂಡರ್ ಕರೆಯಬೇಕು ಈ ಎಲ್ಲ ಪ್ರಕ್ರಿಯೆಗೆ 2 ತಿಂಗಳು ಸಮಯ ತೆಗೆದುಕೊಳ್ಳಲಿದೆ. ಕೇಂದ್ರೀಯ ಭಂಡಾರ, ಎನ್‌ಸಿಸಿಎಫ್, ನಾಫೆಡ್‌ನಿಂದ ಅಕ್ಕಿ ಖರೀದಿಗೆ ಕೊಟೆಷನ್ ಕೇಳಿದೆ. ನಾಳೆ ಅವರು ದರಪಟ್ಟಿ ನೀಡಿದ ಬಳಿಕ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಇದರಿಂದಾಗಿ ಜುಲೈ 1 ರಿಂದ ಅಕ್ಕಿ ನೀಡುವುದು ಕಷ್ಟ ಆಗಬಹುದು ಎಂದು ಸಿಎಂ ಬುಧವಾರ ಹೇಳಿದ್ದರು.

Share This Article