ಬೆಳೆಗೆರೆ ಲಕ್ಷ್ಮಿರಂಗನಾಥಸ್ವಾಮಿ ದೇಗುಲಕ್ಕೆ ಕನ್ನ – ಬೀಗ ಮುರಿದು ದೇವರ ಆಭರಣ ಕದ್ದ ಖದೀಮರು

Public TV
1 Min Read
Ranganatha Swamy Temple

ಚಿತ್ರದುರ್ಗ: ದೇಗುಲದ ಬೀಗ ಮುರಿದು ದೇವರಿಗೆ ಹಾಕಿದ್ದ ಆಭರಣಗಳನ್ನು ಕಳ್ಳತನ ಮಾಡಿರುವ ಘಟನೆ ಚಳ್ಳಕೆರೆಯ (Challakere) ಬೆಳಗೆರೆ (Belagere) ಲಕ್ಷ್ಮಿರಂಗನಾಥಸ್ವಾಮಿ ದೇವಾಲಯದಲ್ಲಿ (Ranganatha Swamy Temple) ಶನಿವಾರ ತಡರಾತ್ರಿ ನಡೆದಿದೆ.

ವಿಗ್ರಹದ ಮೇಲಿದ್ದ ಬೆಲೆಬಾಳುವ ಆಭರಣಗಳಾದ ಕಿರೀಟ, ಕಣ್ಣು, ಮೀಸೆ ಸೇರಿದಂತೆ ಬೆಳ್ಳಿ ಕುದುರೆಯನ್ನು ಕಳ್ಳರು ಕದ್ದು ಪರಾರಿಯಾಗಿದ್ದಾರೆ. ಊರಿನ ಹೊರ ವಲಯದಲ್ಲಿ ದೇವಾಲಯ ಇರುವುದರಿಂದ ರಾತ್ರಿ ವೇಳೆ ಯಾರು ಅಲ್ಲಿ ಓಡಾಡುವುದಿಲ್ಲ. ಇದನ್ನೇ ಬಳಸಿಕೊಂಡು ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಇದನ್ನೂ ಓದಿ: ಸ್ನೇಹಿತರ ಜೊತೆ ಪಾರ್ಟಿ ವೇಳೆ ಗಲಾಟೆ – ಬೆಂಗಳೂರಲ್ಲಿ ಯುವಕನ ಬರ್ಬರ ಹತ್ಯೆ

ಒಂದು ವರ್ಷದ ಹಿಂದೆ ಈ ದೇವಾಲಯವನ್ನು ಜೀರ್ಣೋದ್ಧಾರ ಮಾಡಲಾಗಿತ್ತು. ಈ ವೇಳೆ ಹಳೆಯ ಆಭರಣಗಳ ಜೊತೆಗೆ ದೇವರಿಗೆ ಹೊಸ ಆಭರಣಗಳನ್ನು ಮಾಡಿಸಿ ಹಾಕಲಾಗಿತ್ತು. ಈಗ ಎಲ್ಲಾ ಕಳ್ಳರ ಪಾಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಈ ಘಟನೆಯಿಂದಾಗಿ ಗ್ರಾಮಸ್ಥರು ಹಾಗೂ ಭಕ್ತರಲ್ಲಿ ಆತಂಕ ಮನೆ ಮಾಡಿದೆ. ದೇಗುಲಕ್ಕೆ ಕನ್ನ ಹಾಕಿರುವ ಕಳ್ಳರ ವಿರುದ್ಧ ಆಕ್ರೋಶ ಹೊರಹಾಕಿರುವ ಗ್ರಾಮಸ್ಥರು ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ರಷ್ಯಾ ದಂಗೆ ಮಾತುಕತೆ ಮೂಲಕ ದಮನ – ಬೆಲಾರಸ್ ಅಧ್ಯಕ್ಷ ಮಧ್ಯಸ್ತಿಕೆಯಿಂದ ಮಾರ್ಗ ಮಧ್ಯೆಯೇ ಹೋರಾಟ ಕೈಬಿಟ್ಟ ಪ್ರಿಗೋಜಿನ್

Share This Article