ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು – ಖತರ್ನಾಕ್ ರಾಬರ್ ಕಾಲಿಗೆ ಪೊಲೀಸರ ಗುಂಡೇಟು

Public TV
1 Min Read
robber arrest

ಬೆಂಗಳೂರು: ನಗರದ ಸದಾಶಿವನಗರ (Sadashivanagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು ಕೇಳಿದ್ದು, ಸುಲಿಗೆ ಮತ್ತು ರಾಬರಿಯಲ್ಲಿ (Robbery) ನಿಪುಣನಾಗಿದ್ದ ಖತರ್ನಾಕ್ ಆಸಾಮಿಯೊಬ್ಬನ ಕಾಲಿಗೆ ಪೊಲೀಸರು ಗುಂಡೇಟು ಹೊಡೆದಿದ್ದಾರೆ.

ಖತರ್ನಾಕ್ ರಾಬರ್ ಯಾಸರ್ (26) ಎಂಬಾತನ ಕಾಲಿಗೆ ಪೊಲೀಸರು ಗುಂಡು ಹೊಡೆದಿದ್ದು, ಈತ ಏಳಕ್ಕೂ ಹೆಚ್ಚು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಕುಖ್ಯಾತ ಆರೋಪಿಯಾಗಿದ್ದ. ಯಾಸರ್ ಸುಲ್ತಾನ್ ಪಾಳ್ಯದ ಭುವನೇಶ್ವರ್ ನಗರದ ನಿವಾಸಿಯಾಗಿದ್ದು, ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಸುಲಿಗೆ ಮಾಡುತ್ತಿದ್ದ. ಈತ ಅಪ್ರಾಪ್ತನಾಗಿದ್ದಾಗಿನಿಂದಲೇ ಸುಲಿಗೆ ರಾಬರಿಯಲ್ಲಿ ನಿಪುಣನಾಗಿದ್ದು, ಶೇಷಾದ್ರಿಪುರಂ (Sheshadripuram) ಪೋಲೀಸರು ಈತನಿಗಾಗಿ ಹುಡುಕಾಟ ನಡೆಸುತ್ತಿದ್ದರು. ಇದನ್ನೂ ಓದಿ: ಕಳಪೆ ರಸ್ತೆ ಕಾಮಗಾರಿ ಆರೋಪ – ಎಂಜಿನಿಯರ್‌ಗೆ ಕಲ್ಲೇಟು

ಇಂದು (ಮಂಗಳವಾರ) ಬೆಳಗ್ಗೆ ಆರೋಪಿ ಯಾಸರ್‌ನನ್ನು ಹಿಡಿಯಲು ಹೋದ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಪ್ಯಾಲೆಸ್ ರೋಡ್ (Palace Road) ಬಳಿ ಪರಾರಿಗೆ ಯತ್ನಿಸಿದ್ದು, ಹಿಡಿಯಲು ಹೋದ ಪೊಲೀಸರ ಮೇಲೆ ಮಾರಕಾಸ್ತ್ರ ಹಿಡಿದು ಅಟ್ಯಾಕ್ ಮಾಡಲು ಮುಂದಾಗಿದ್ದಾನೆ. ಈ ಸಂದರ್ಭ ತಮ್ಮ ಆತ್ಮರಕ್ಷಣೆಗಾಗಿ ಶೇಷಾದ್ರಿಪುರಂ ಇನ್ಸ್ಪೆಕ್ಟರ್‌ ಆರೋಪಿಯ ಬಲಗಾಲಿಗೆ ಗುಂಡು ಹೊಡೆದು ಆತನನ್ನು ಬಂಧಿಸಿದ್ದಾರೆ. ಈ ಕುರಿತು ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮನಾಲಿ ಪ್ರವಾಸಕ್ಕೆಂದು ತೆರಳಿದ್ದ ಮೈಸೂರಿನ ಪ್ರವಾಸಿಗರು ನಾಪತ್ತೆ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article