ಶಿವಮೊಗ್ಗ: ಈ ಬಾರಿ ಅತಂತ್ರ ವಿಧಾನಸಭೆ ಬರಲಿದ್ದು, ಹೆಚ್ಡಿ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದುಕೊಂಡಿದ್ದೆವು. ಆದರೆ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಕೈ ಹಿಡಿದಿದ್ದು, ಅವರು ಸಹ ಈ ಫಲಿತಾಂಶ ನಿರೀಕ್ಷೆ ಮಾಡಿರಲಿಲ್ಲ ಎಂದು ಪರಿಷತ್ ಮಾಜಿ ಸದಸ್ಯ ಆಯನೂರು ಮಂಜುನಾಥ್ (Ayanur Manjunath) ತಿಳಿಸಿದ್ದಾರೆ.
ಶಿವಮೊಗ್ಗದ (Shivamogga) ಜೆಡಿಎಸ್ (JDS) ಕಚೇರಿಯಲ್ಲಿ ನಡೆದ ನೂತನ ಶಾಸಕಿ ಶಾರದ ಪೂರ್ಯನಾಯ್ಕ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ ಜೆಡಿಎಸ್ಗೆ ಬಹಳ ಕಡಿಮೆ ಸ್ಥಾನ ದೊರೆತಿದೆ. ಆದರೆ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿ ಕುಮಾರಸ್ವಾಮಿ ಅವರು ವಿಜೃಂಭಿಸುತ್ತಿದ್ದಾರೆ. ಇದೇ ತಿಂಗಳ 28ರ ನಂತರ ಕುಮಾರಸ್ವಾಮಿ ಅವರು ಅಧಿಕೃತ ವಿರೋಧ ಪಕ್ಷದ ನಾಯಕರಾಗಿ ಆಯ್ಕೆ ಆಗುವ ನಿರೀಕ್ಷೆ ಇದೆ ಎಂದಿದ್ದಾರೆ. ಇದನ್ನೂ ಓದಿ: ಈಗ ನಮ್ಮ ಆದ್ಯತೆ 5 ಗ್ಯಾರಂಟಿಗಳನ್ನ ಜಾರಿ ಮಾಡುವುದಷ್ಟೇ – ಸಚಿವ ಕೆ.ಎನ್ ರಾಜಣ್ಣ
28ರ ನಂತರ ಇಡೀ ದೇಶದ ರಾಜಕೀಯ ವಾತಾವರಣ ಬದಲಾಗಲಿದೆ. ನಾನು ಯಾರನ್ನು ಬಿಟ್ಟು ಬಂದೆನೋ, ಅವರನ್ನೇ ಅಪ್ಪಿಕೊಳ್ಳುವ ಸಂದರ್ಭ ಎದುರಿಸುವುದು ಕಷ್ಟ ಎಂದರು. ಇದನ್ನೂ ಓದಿ: ನಾವು ಹೇಳಿದ ಮಾತನ್ನು ನಿಜ ಮಾಡಲು HDK ಹೊರಟಿದ್ದಾರೆ: ದಿನೇಶ್ ಗುಂಡೂರಾವ್
Web Stories