Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸದನದಲ್ಲಿ ‘ಐಎಎಸ್’ ಕೋಲಾಹಲ – ಸ್ಪೀಕರ್ ಮೇಲೆ ಹರಿದ ಹಾಳೆ ಎಸೆದ ಬಿಜೆಪಿ, ಜೆಡಿಎಸ್ ಸದಸ್ಯರು

Public TV
Last updated: July 19, 2023 3:50 pm
Public TV
Share
4 Min Read
session 5
SHARE

ಬೆಂಗಳೂರು: ಮಹಾಘಟಬಂಧನ್ ಸಭೆಗಾಗಿ ಹೊರ ರಾಜ್ಯಗಳಿಂದ ಬಂದ ನಾಯಕರನ್ನು ಸ್ವಾಗತಿಸಲು ಐಎಎಸ್ ಅಧಿಕಾರಿಗಳನ್ನು ಸರ್ಕಾರ ನಿಯೋಜಿಸಿದ್ದ ವಿಚಾರ ಸದನದಲ್ಲಿ ಕೋಲಾಹಲ ಸೃಷ್ಟಿಸಿತು. ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ವಿಪಕ್ಷಗಳು ಸದನದ ಬಾವಿಗಿಳಿದು ಪ್ರತಿಭಟಿಸಿದರು. ಅಲ್ಲದೇ ವಿಧೇಯಕದ ಪ್ರತಿಗಳನ್ನು ಹರಿದು ಸ್ಪೀಕರ್ ಮುಂದೆ ಎಸೆದರು. ಈ ಒಂದು ಹೈಡ್ರಾಮಾಕ್ಕೆ ಬುಧವಾರದ ಕಲಾಪ ಸಾಕ್ಷಿಯಾಯಿತು.

ಮಹಾಘಟಬಂಧನ್ ಗಣ್ಯರ ಸ್ವಾಗತಕ್ಕೆ ಐಎಎಸ್ ಅಧಿಕಾರಿಗಳ ಬಳಕೆ ವಿಚಾರವನ್ನು ಕಲಾಪದಲ್ಲಿ ಪ್ರಸ್ತಾಪಿಸಿದ ಆರ್. ಅಶೋಕ್, ನಿನ್ನೆ, ಮೊನ್ನೆ ಸಭೆಗಳಲ್ಲಿ ಗಣ್ಯರ ಸ್ವಾಗತಕ್ಕೆ ಹೊಟೇಲ್‌ಗೆ ಕರೆತರಲು ಹಿರಿಯ ಅಧಿಕಾರಿಗಳ ಬಳಕೆ ಮಾಡಲಾಗಿದೆ. ಇದು ಯಾವ ಕಾನೂನಿನಲ್ಲಿ ಬಳಸಿದ್ದೀರಿ? ಇದು ಅಪರಾಧ, ಶಿಷ್ಟಾಚಾರ ಉಲ್ಲಂಘನೆ. ಸರ್ಕಾರ ಇದರ ಬಗ್ಗೆ ಸ್ಪಷ್ಟೀಕರಣ ಕೊಡಬೇಕು ಎಂದು ಆಗ್ರಹಿಸಿದರು.

session 1 1

ಅಶೋಕ್ ವಿರೋಧಕ್ಕೆ ಸಚಿವ ಎಚ್.ಕೆ. ಪಾಟೀಲ್ ಸಮಜಾಯಿಷಿ ನೀಡಿ, ರಾಜ್ಯಕ್ಕೆ ಗಣ್ಯರು ಬಂದಾಗ ಪ್ರೋಟೋಕಾಲ್ ಪ್ರಕಾರ ಅಧಿಕಾರಿಗಳ ನಿಯೋಜನೆ ಮಾಡಲಾಗಿದೆ. ನಮ್ಮಿಂದ ಪ್ರೋಟೋಕಾಲ್ ಉಲ್ಲಂಘನೆ ಆಗಿಲ್ಲ. ಪ್ರೋಟೋಕಾಲ್ ಇಲ್ಲದವರಿಗೆ ನಮ್ಮ ನಾಯಕರು ಸ್ವಾಗತಿಸಿದ್ದಾರೆ. 26 ಪಕ್ಷಗಳು ಒಟ್ಟಾಗಿ ಸೇರಿದ್ದು ಬಿಜೆಪಿಯವರಿಗೆ ಸಹಿಸೋದಕ್ಕೆ ಆಗ್ತಿಲ್ಲ ಎಂದು ಹೇಳಿದರು. ಪಾಟೀಲ್‌ರ ಹೇಳಿಕೆಗೆ ಬಿಜೆಪಿ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.

ಲಾಲೂ ಪ್ರಸಾದ್ ಯಾದವ್ ಸಿಎಂ ಆಗಿದ್ದಾರಾ? ಅವರಿಗೆ ರವಿಶಂಕರ್ ಅನ್ನೋ ಐಎಎಸ್ ಅಧಿಕಾರಿ ನಿಯೋಜಿಸಿದ್ದೀರಲ್ಲ? ಸಿಎಸ್ ಅವರು ಅಧಿಕಾರಿಗಳ ನಿಯೋಜಿಸಿ ತಪ್ಪು ಮಾಡಿದ್ದಾರೆ ಎಂದು ಅಶೋಕ್ ಗುಡುಗಿದರು. ಈ ವೇಳೆ ಬಿಜೆಪಿ ಸದಸ್ಯರ ಮೇಲೆ ಸ್ಪೀಕರ್ ಯು.ಟಿ. ಖಾದರ್ ಗರಂ ಆದರು. ಈ ವಿಚಾರದಲ್ಲಿ ಚರ್ಚೆಗೆ ನೋಟಿಸ್ ಕೊಡಿ, ಚರ್ಚೆ ಮಾಡಿ. ನೋಟಿಸ್ ಕೊಡ್ರೀ.. ಇಷ್ಟ ಬಂದಾಗ ಮಾತಾಡೋ ನಿಯಮವಿಲ್ಲ ಎಂದು ಗರಂ ಆದರು.

ಶಿಷ್ಟಾಚಾರ ಉಲ್ಲಂಘನೆ ಆರೋಪ ಮಾಡಿದ ಬಿಜೆಪಿ ನಾಯಕರು ಸದನದ ಬಾವಿಗೆ ಇಳಿದು ಧರಣಿ ನಡೆಸಿದರು. ಸಿಎಂ ಅವರು ಅಧಿಕಾರಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ಬಿಜೆಪಿಯಿಂದ ಧರಣಿ ಹಿನ್ನೆಲೆ ಸದನವನ್ನು ಸ್ಪೀಕರ್ ಸ್ವಲ್ಪ ಕಾಲ ಮುಂದೂಡಿದರು. ನಂತರ ಸ್ಪೀಕರ್ ಕೊಠಡಿಯಲ್ಲಿ ಬಿಜೆಪಿ ಸದಸ್ಯರ ಜತೆ ಸಂಧಾನ ಸಭೆ ನಡೆಯಿತು. ಧರಣಿ ಕೈಬಿಡುವಂತೆ ಕಾಂಗ್ರೆಸ್‌ನವರು ಮನವಿ ಮಾಡಿದರು. ವಿಧಾನಸಭೆ ಕಲಾಪ ಪುನಾರಂಭವಾದಾಗ ಸ್ಪೀಕರ್ ಸಂಧಾನ ವಿಫಲವಾಯಿತು. ಮತ್ತೆ ಸದನದ ಬಾವಿಯಲ್ಲಿ ಬಿಜೆಪಿ ಧರಣಿ ಮುಂದುವರಿಯಿತು. ಸರ್ಕಾರದ ವಿರುದ್ಧ ಧಿಕ್ಕಾರ ಘೋಷಣೆ ಕೂಗಿದರು.

ಈ ವೇಳೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಇಡೀ ಎರಡು ದಿನ ರಾಜಕಾರಣಿಗಳ ಕಾವಲು ಕಾದಿದ್ದಾರೆ ಅಧಿಕಾರಿಗಳು. ನಿಮ್ಮ ರಾಜಕೀಯ ತೆವಲಿಗಾಗಿ ರಾಜ್ಯದ ಮಾನ ಮರ್ಯಾದೆ ಹರಾಜು ಮಾಡಿದ್ದೀರಾ. ಪ್ರಧಾನ ಕಾರ್ಯದರ್ಶಿ ಸ್ಥಾನದಲ್ಲಿರೋರು ಐಎಎಸ್ ಅಧಿಕಾರಿಗಳನ್ನು ನಿಯೋಜಿಸಿದ್ದಾರೆ. ಎಂಎಲ್‌ಎ, ಎಂಪಿ ಅಲ್ಲದವರನ್ನೂ ಐಎಎಸ್ ಅಧಿಕಾರಿಗಳು ಸ್ವಾಗತಿಸಿದ್ದಾರೆ. ಪುಡಿ ಪಕ್ಷಗಳ ಮುಖಂಡರನ್ನೆಲ್ಲ ಐಎಎಸ್ ಅಧಿಕಾರಿಗಳು ಸ್ವಾಗತ ಮಾಡಿರೋದು ಸರಿಯಲ್ಲ ಎಂದು ಕೆಂಡ ಕಾರಿದರು. ಬಿಜೆಪಿ ಧರಣಿಗೆ ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. ನಿಮ್ಮ ಬೆದರಿಕೆಗಳಿಗೆ ಹೆದರಲ್ಲ. ಬಿಜೆಪಿ ಧರಣಿ ಮಾಡುತ್ತಿರುವುದು ಸರಿಯಲ್ಲ. ಹೆಚ್.ಡಿ. ಕುಮಾರಸ್ವಾಮಿ ಸಿಎಂ ಆಗಿದ್ದಾಗ ಐಎಎಸ್ ಅಧಿಕಾರಿಗಳನ್ನು ಲೀಗಲ್ ಆಫೀಸರ್ ಮಾಡಿದ್ದರು. ಅಲ್ಲದೇ ತಮ್ಮ ಪ್ರಮಾಣವಚನ ಸಂದರ್ಭದಲ್ಲಿ ಇದೇ ನಿರ್ಧಾರ ತೆಗೆದುಕೊಂಡಿದ್ದರು. ಕುಮಾರಕೃಪಾಗೆ ಹಿರಿಯ ಪೊಲೀಸ್ ಅಧಿಕಾರಿಗಳನ್ನ ನಿಯೋಜಿಸಿದ್ರು. ಇವರ ಧರಣಿಗೆ ಸರ್ಕಾರ ಸೊಪ್ಪು ಹಾಕಲ್ಲ. ಇವರಿಗೆ ಮಾನ ಮರ್ಯಾದೆ ಇಲ್ಲ ಎಂದು ಸಿಎಂ ಸಿದ್ದು ಗರಂ ಆದರು. ಇದನ್ನೂ ಓದಿ: ವಿಧಾನ ಪರಿಷತ್‍ನಲ್ಲಿ ಗುಂಡಿನ ಗಮ್ಮತ್ತಿನ ಬಗ್ಗೆ ಚರ್ಚೆ- ನಗೆಗಡಲಲ್ಲಿ ತೇಲಿದ ಸದನ

ಸರ್ಕಾರದ ವಿರುದ್ಧ ಬಿಜೆಪಿ-ಜೆಡಿಎಸ್ ಜಂಟಿ ಹೋರಾಟ ನಡೆಸಿತು. ಧರಣಿ ಕೈಬಿಡುವಂತೆ ಸ್ಪೀಕರ್ ಮನವಿ ಮಾಡಿದರೂ ಪ್ರಯೋಜನವಾಗಲಿಲ್ಲ. ಈ ವೇಳೆ ಕೆಲವು ವಿಧೇಯಕಗಳ ಅಂಗೀಕಾರಕ್ಕೆ ಸರ್ಕಾರ ಮುಂದಾಯಿತು. ಧರಣಿಯ ನಡುವೆಯೇ ಸಿವಿಲ್ ಪ್ರಕ್ರಿಯೆಗಳ ಕರ್ನಾಟಕ ಸಂಹಿತೆಗಳ ತಿದ್ದುಪಡಿ ವಿಧೇಯಕ ಅಂಗೀಕರಿಸಿತು. ಚರ್ಚೆ ಇಲ್ಲದೇ ಸರ್ಕಾರಿ ವ್ಯಾಜ್ಯಗಳ ನಿರ್ವಹಣೆ ವಿಧೇಯಕಕ್ಕೂ ಅಂಗೀಕಾರ ದೊರೆಯಿತು. ಸ್ವಯಂ ಘೋಷಣೆ ಮೂಲಕ ಕೃಷಿಯೇತರ ಉದ್ದೇಶಕ್ಕೆ ಕೃಷಿ ಭೂಮಿ ಪರಿವರ್ತನೆ ಮಾಡಲು ಅವಕಾಶ ಕೊಡುವ ವಿಧೇಯಕವನ್ನೂ ಅಂಗೀಕರಿಸಲಾಯಿತು. ಈ ವೇಳೆ ದೋಖಾ ದೋಖಾ ಎಂದು ಬಿಜೆಪಿ ನಾಯಕರು ಕೂಗಿದರು. ಪ್ರತಿಪಕ್ಷಗಳ ಧರಣಿ ತೀವ್ರವಾಗಿ ವಿಧೇಯಕಗಳ ಪ್ರತಿಗಳನ್ನು ಹರಿದು ಬಿಸಾಡಿದರು.

ಈ ವೇಳೆ ಭೋಜನ ವಿರಾಮಕ್ಕೆ ಸದನ ಮುಂದೂಡದೇ ಮುಂದುವರೆಸಿದರು. ಊಟಕ್ಕೆ ಹೋಗೋರು ಹೋಗಿ ಮಾಡಿಕೊಂಡು ಬರಬಹುದು. ಸದನ ಮುಂದುವರೆಯಲಿದೆ ಎಂದು ಸ್ಪೀಕರ್ ಹೇಳಿದರು. ಈ ವೇಳೆ ಅವರ ಸ್ಥಾನವನ್ನು ಡೆಪ್ಯೂಟಿ ಸ್ಪೀಕರ್ ರುದ್ರಪ್ಪ ಲಮಾಣಿ ಅಲಂಕರಿಸಿದರು. ಊಟಕ್ಕೆ ಬಿಡದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಧರಣಿ ನಿರತ ಬಿಜೆಪಿ ಸದಸ್ಯರು, ಸ್ಪೀಕರ್ ಪೀಠದ ಬಳಿ ಜಮಾಯಿಸಿ ಹರಿದ ಹಾಳೆ ಎಸೆದ ಆಕ್ರೋಶ ಹೊರಹಾಕಿದರು. ಸ್ಪೀಕರ್ ಪೀಠದಲ್ಲಿ ಕೂತಿದ್ದ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮುಖದ ಮೇಲೆಯೇ ಹರಿದ ಹಾಳೆ ಎಸೆದರು. ಈ ವೇಳೆ ಸ್ಪೀಕರ್ ರಕ್ಷಣೆಗೆ ನಿಂತ ಮಾರ್ಷಲ್‌ಗಳು ಬಂದು ನಿಂತರು. ಕೊನೆಗೂ ಸದನವನ್ನು ಮಧ್ಯಾಹ್ನ 3 ಕ್ಕೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಮುಂದೂಡಿದರು. ಇದನ್ನೂ ಓದಿ: ಹೆಸರು ಬದಲಾವಣೆ ಬಿಟ್ಟು ಇಂಡಿಯಾ ಸಭೆಯಿಂದ‌ ಏನು ಪ್ರಯೋಜನ ಆಗಿಲ್ಲ: ಕುಮಾರಸ್ವಾಮಿ

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]


follow icon

TAGGED:assemblybjpIASjdsRudrappa lamaniಐಎಎಸ್ಜೆಡಿಎಸ್ಬಿಜೆಪಿರುದ್ರಪ್ಪ ಲಮಾಣಿವಿಧಾನಸಭೆ
Share This Article
Facebook Whatsapp Whatsapp Telegram

Cinema Updates

Shankar Mahadevan
IPL 2025 ಸಮಾರೋಪ ಸಮಾರಂಭದಲ್ಲಿ ʻಆಪರೇಷನ್ ಸಿಂಧೂರʼ ವಿಜಯೋತ್ಸವ – ಏನೆಲ್ಲಾ ವಿಶೇಷತೆ ಇರಲಿದೆ?
3 hours ago
anant nag
ಹಿರಿಯ ನಟ ಅನಂತ್ ನಾಗ್‌ಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ
15 minutes ago
shine shetty
ಯಶಸ್ಸಿಗಾಗಿ ‘ವಿಲನ್’ ಆದ ‘ಬಿಗ್ ಬಾಸ್’ ಶೈನ್ ಶೆಟ್ಟಿ
5 hours ago
Kamal Haasan
ತಮಿಳಿನಿಂದ ಕನ್ನಡ ಹುಟ್ಟಿದ್ದು- ಕಮಲ್ ಹಾಸನ್ ಹೇಳಿಕೆಗೆ ಕನ್ನಡಿಗರ ಆಕ್ರೋಶ
6 hours ago

You Might Also Like

Amandeep Kaur
Crime

ಮಹಿಂದ್ರಾ ಥಾರ್‌, ರಾಯಲ್‌ ಎನ್‌ಫೀಲ್ಡ್‌, ರೋಲೆಕ್ಸ್ ವಾಚ್‌, 1 ಕೋಟಿ ಮೌಲ್ಯದ ಫ್ಲಾಟ್‌ ಹೊಂದಿದ್ದ ಲೇಡಿ ಕಾನ್‌ಸ್ಟೇಬಲ್‌ ಅರೆಸ್ಟ್‌!

Public TV
By Public TV
59 seconds ago
virat kohli 6
Cricket

9,000 ರನ್‌; ಆರ್‌ಸಿಬಿ ಪರ ಐತಿಹಾಸಿಕ ದಾಖಲೆ ಬರೆದ ಕಿಂಗ್ ಕೊಹ್ಲಿ

Public TV
By Public TV
20 minutes ago
Sharan Pumpwell
Crime

ವಿಹೆಚ್‌ಪಿ ಮುಖಂಡ ಶರಣ್ ಪಂಪ್‌ವೆಲ್ ಬಂಧನ – ಜಾಮೀನು

Public TV
By Public TV
33 minutes ago
income tax returns
Latest

ತೆರಿಗೆದಾರರೇ ಗಮನಿಸಿ: IT Returns ಸಲ್ಲಿಕೆಗೆ ಜುಲೈ 31 ಅಲ್ಲ, ಸೆ.15 ಕೊನೆ ದಿ‌ನ..!

Public TV
By Public TV
43 minutes ago
Rishabh Pant 3
Cricket

7 ವರ್ಷಗಳ ಬಳಿಕ ಶತಕ ಸಿಡಿಸಿ ಪಲ್ಟಿ ಹೊಡೆದ ಪಂತ್‌

Public TV
By Public TV
1 hour ago
Josh Hazlewood 1
Cricket

LSG vs RCB: ಜೋಶ್ ಹ್ಯಾಜಲ್‌ವುಡ್ ಇಂದು ಪಂದ್ಯಕ್ಕೆ ಮಿಸ್‌ ಆಗಿದ್ಯಾಕೆ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?