ಬಂಟ್ವಾಳದಲ್ಲಿ ಪೊಲೀಸ್‌ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್‌ಗಿರಿ – ಇಬ್ಬರು ಅರೆಸ್ಟ್‌

Public TV
1 Min Read
arrest locker

ಮಂಗಳೂರು: ಸರ್ಕಾರದ ಎಚ್ಚರಿಕೆ ನಡುವೆಯೂ ಕರಾವಳಿ ಭಾಗದಲ್ಲಿ ನೈತಿಕ ಪೊಲೀಸ್‍ಗಿರಿ (Moral Policing) ಪ್ರಕರಣಗಳು ಮೇಲಿಂದ ಮೇಲೆ ವರದಿ ಆಗುತ್ತಿವೆ. ಇದೀಗ ಪೊಲೀಸ್ (Police) ಸಿಬ್ಬಂದಿ ಮೇಲೆ ಹಲ್ಲೆಗೆ ಮುಂದಾಗಿ ನೈತಿಕ ಪೊಲೀಸ್‍ಗಿರಿ ಮಾಡಿರುವ ಪ್ರಕರಣವೊಂದು ಬಂಟ್ವಾಳದ (Bantwal) ಬಿಸಿ ರೋಡ್‍ನಲ್ಲಿ ನಡೆದಿದೆ.

ಮುಸ್ಲಿಂ ಮತ್ತು ಹಿಂದೂ ಹುಡುಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗ್ತಿದ್ದೀಯಾ? ಇಲ್ಲಿನ ವಿಚಾರ ನಿನಗೆ ಗೊತ್ತಲ್ಲ ಎನ್ನುತ್ತಾ ಪೊಲೀಸ್ ಸಿಬ್ಬಂದಿಗೆ ಹಲ್ಲೆ ಮಾಡಿದ ಗುಂಪೊಂದು, ಪೊಲೀಸ್ ಸಿಬ್ಬಂದಿಯ ಪತ್ನಿ ಮೇಲೆ ಮಾನಭಂಗಕ್ಕೂ ಯತ್ನಿಸಿದೆ ಎಂಬ ಆರೋಪ ಕೇಳಿಬಂದಿದೆ.  ಇದನ್ನೂ ಓದಿ: ಓದು ಎಂದು ಬುದ್ಧಿವಾದ ಹೇಳಿದ್ದಕ್ಕೆ ನದಿಗೆ ಹಾರಿ SSLC ವಿದ್ಯಾರ್ಥಿನಿ ಆತ್ಮಹತ್ಯೆ

ಮಾನಭಂಗ ಯತ್ನ, ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಬೆನ್ನಲ್ಲೇ ಕಾರ್ಯಚರಣೆ ನಡೆಸಿದ ಪೊಲೀಸರು, ಆರೋಪಿಗಳಾದ ತುಂಬೆ ನಿವಾಸಿ ಮನೀಶ್ ಪುಜಾರಿ, ಮಂಜುನಾಥ್ ಆಚಾರ್ಯನನ್ನು ಬಂಧಿಸಿದ್ದಾರೆ.

ಬಂಟ್ವಾಳ ಡಿವೈಎಸ್‍ಪಿ ಕಚೇರಿಯ ಸಿಬ್ಬಂದಿ ಪ್ರಸ್ತುತ ಎನ್‍ಐಎ (NIA) ವಿಭಾಗದಲ್ಲಿ ಕರ್ತವ್ಯ ನಿರ್ವಹಿಸ್ತಿರುವ ಕುಮಾರ್ ಮೇಲೆ ಈ ಗುಂಪು ಹಲ್ಲೆ ನಡೆಸಿದೆ. ಜೊತೆಗೆ ಕುಮಾರ್ ಕುಟುಂಬದ ಮೇಲೆ ಮಾನಭಂಗ ಯತ್ನ ನಡೆದಿದೆ ಎಂದು ತಿಳಿದುಬಂದಿದೆ.

 

ಕುಮಾರ್ ಆರೋಪವೇನು?
ಗುರುವಾರ ರಾತ್ರಿ ಪತ್ನಿ ಮತ್ತು ಪತ್ನಿಯ ಸಹೋದರಿ ಜೊತೆ ಬಿಸಿ ರೋಡ್ ವಸತಿ ಗೃಹದಲ್ಲಿ ತಂಗಿದ್ದೆ. ರಾತ್ರಿ ಊಟಕ್ಕೆಂದು ಹೊಟೆಲ್‍ಗೆ ಹೋಗಿ ವಾಪಸ್ ಆಗುವಾಗ ಇಬ್ಬರು ಹಿಂಬಾಲಿಸಿ ಬಂದು ನಮ್ಮನ್ನು ತಡೆದು ನಿಲ್ಲಿಸಿ ಅವಾಚ್ಯವಾಗಿ ನಿಂದಿಸಿದರು. ಮುಸ್ಲಿಂ ಮತ್ತು ಹಿಂದೂ ಹುಡುಗಿಯರನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀಯಾ ಎಂದು ಪ್ರಶ್ನಿಸಿದರು. ಇಲ್ಲಿನ ವಿಚಾರ ನಿನಗೆ ಗೊತ್ತಲ್ಲವೇ ಎಂದು ಬೆದರಿಕೆ ಹಾಕಿ ಹಲ್ಲೆಗೆ ಮುಂದಾದರು. ನನ್ನ ಪತ್ನಿಯ ವಿಡಿಯೋ ಚಿತ್ರೀಕರಣ ಮಾಡಿ ಮಾನಭಂಗಕ್ಕೂ ಯತ್ನಿಸಿದರು.

 

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article