ರಜನಿ ಮುಂದೆಯೇ ಧನುಷ್ ಅವರ ದೊಡ್ಡ ಅಭಿಮಾನಿ ಎಂದ ಶಿವರಾಜ್ ಕುಮಾರ್

Public TV
3 Min Read
Shiavarajkumar

ನಿನ್ನೆಯಷ್ಟೇ ಚೆನ್ನೈನಲ್ಲಿ ಜೈಲರ್ ಸಿನಿಮಾದ ಹಾಡುಗಳ ಬಿಡುಗಡೆ ಸಮಾರಂಭ ನಡೆಯಿತು. ಇದೇ ಮೊದಲ ಬಾರಿಗೆ ಶಿವರಾಜ್ ಕುಮಾರ್ ಮತ್ತು ರಜನಿಕಾಂತ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಹಾಡುಗಳು ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಶಿವರಾಜ್ ಕುಮಾರ್, ತಾವು ದೊಡ್ಡ ನಟರಾಗಿದ್ದರೂ, ಮತ್ತೋರ್ವ ನಟನನ್ನು ಹಾಡಿಹೊಗಳಿದರು. ಚೆನ್ನೈನಲ್ಲಿ ಹುಟ್ಟಿದ ಮತ್ತು ಬೆಳೆದ ದಿನಗಳನ್ನು ನೆನಪಿಸಿಕೊಂಡರು.

jailer 1

ನಾನು ಚೆನ್ನೈನಲ್ಲಿದ್ದಾಗ ಒಂದು ಸಲ ರಜನಿಕಾಂತ್ ಅವರ ಕೈ ಹಿಡಿದುಕೊಂಡು ನಾನು ಶಬರಿಮಲೆ ಯಾತ್ರೆ ಮಾಡಿದ್ದೆ. ಅವರು ಅಂದು ಕೈ ಹಿಡಿದು ನಡೆಸಿದರು. ಇಂದು ಹಾಗೆಯೇ ಇದ್ದಾರೆ. ಒಂದು ರೀತಿಯಲ್ಲಿ ನನಗೆ ಚಿಕ್ಕಪ್ಪ ಇದ್ದಹಾಗೆ ಅಂದರು. ತಾವು ಅಷ್ಟು ದೊಡ್ಡ ನಟರಾಗಿದ್ದರೂ ನಾನು ಧನುಷ್ ಅವರ ದೊಡ್ಡ ಅಭಿಮಾನಿ ಎಂದು ಹೊಗಳಿದರು. ಈ ಸಮಾರಂಭದಲ್ಲಿ ಶಿವರಾಜ್ ಕುಮಾರ್ ಕುಟುಂಬವೇ ಭಾಗಿಯಾಗಿತ್ತು. ಚೆನ್ನೈನ (Chennai) ನೆಹರು ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಭಾಗಿಯಾಗಿದ್ದರು.

Jailer Rajinikanth

ಮತ್ತೊಂದು ಖುಷಿ ಸಂಗತಿ ಅಂದರೆ ‘ಜೈಲರ್’ (Jailer) ಸಿನಿಮಾದ ಕರ್ನಾಟಕ ವಿತರಣಾ (Distributed) ಹಕ್ಕು ಕರ್ನಾಟಕದ ಜಯಣ್ಣಗೆ ಸಿಕ್ಕಿದ್ದು, ಹೆಚ್ಚು ಚಿತ್ರಮಂದಿರಗಳಲ್ಲಿ ಈ ಸಿನಿಮಾವನ್ನು ರಿಲೀಸ್ ಮಾಡಲು ಸಿದ್ದತೆ ಮಾಡಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೊಡ್ಡದೊಂದು ಗೆಲುವು ಕಾಣದ ಜಯಣ್ಣಗೆ ಈ ಸಿನಿಮಾ ಕೈ ಹಿಡಿಯಲಿದೆ ಎಂದು ಅಂದಾಜಿಸಲಾಗಿದೆ.

Jailer film 1 1

ಒಂದು ಕಡೆ ಸಿನಿಮಾವನ್ನು ರಿಲೀಸ್ ಮಾಡಲು ದೇಶಾದ್ಯಂತ ಸರ್ವಸಿದ್ದತೆ ನಡೆಸಿದ್ದರೆ, ಮತ್ತೊಂದು ಕಡೆ  ಚಿತ್ರದ ಟೈಟಲ್ (Title) ತಂಡಕ್ಕೆ ಸಂಕಷ್ಟ ತಂದಿದೆ ಈ ಸಿನಿಮಾ ಮೂರು ಭಾಷೆಗಳಲ್ಲಿ ಬಿಡುಗಡೆ ಆಗುತ್ತಿದೆ. ಈ ಸಂದರ್ಭದಲ್ಲಿ ಮಲಯಾಳಂ (Malayalam) ನಿರ್ದೇಶಕರೊಬ್ಬರು ಟೈಟಲ್ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ.

Jailer film 2 1

ಮಲಯಾಳಂನಲ್ಲಿ ಈಗಾಗಲೇ ನಿರ್ದೇಶಕ ಸಕ್ಕಿರ್ ಮಡತ್ತಿಲ್ಲ (Sakkir Madattilla) ‘ಜೈಲರ್’ ಹೆಸರಿನಲ್ಲಿ ಸಿನಿಮಾ ಮಾಡಿದ್ದಾರೆ. ಅದು ಇನ್ನಷ್ಟೇ ಬಿಡುಗಡೆ ಆಗಬೇಕಿದೆ. ಮಲಯಾಳಂನಲ್ಲಿ ರಜನಿ ಜೈಲರ್ ಸಿನಿಮಾ ಕೂಡ ಬಿಡುಗಡೆ ಆಗುತ್ತಿರುವುದರಿಂದ, ಮಲಯಾಳಂನಲ್ಲಿ ಟೈಟಲ್ ಬದಲಾಯಿಸಿ ರಿಲೀಸ್ ಮಾಡುವಂತೆ ಅವರು ಮನವಿ ಮಾಡಿಕೊಂಡಿದ್ದರು. ಆದರೆ, ಅದು ಆಗುವುದಿಲ್ಲ ಎಂದು ಸನ್ ಪಿಕ್ಚರ್ ನಿರ್ಮಾಣ ಸಂಸ್ಥೆ ಉತ್ತರ ಬರದಿತ್ತು.

Jailer

ಈಗ ಸಕ್ಕಿರ್ ಮಡತ್ತಿಲ್ಲ ತಮಿಳಿನ ಜೈಲರ್ ಸಿನಿಮಾದ ವಿರುದ್ಧ ಕೋರ್ಟ್ ಮೆಟ್ಟಿಲು ಏರಿದ್ದಾರೆ. ಮೊದಲು ಜೈಲರ್ ಹೆಸರಿನಲ್ಲಿ ತಾವು ಸಿನಿಮಾ ಮಾಡಿದ್ದರಿಂದ ಮತ್ತು ಮಲಯಾಳಂನಲ್ಲಿ ತಮಗೆ ರಜನಿ ಸಿನಿಮಾದಿಂದ ತೊಂದರೆ ಆಗುವುದರಿಂದ, ಟೈಟಲ್ ಬದಲಾಯಿಸುವಂತೆ ಅವರು ಕೋರ್ಟ್ ಗೆ ಮೊರೆ ಹೋಗಿದ್ದಾರೆ.

jailer film 2

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದು. ತಲೈವ ವೃತ್ತಿ ಬದುಕಿನ ವಿಶೇಷ ಚಿತ್ರ‌ ಇದಾಗಿದ್ದು, ದಕ್ಷಿಣ ಭಾರತ ಹಾಗೂ ಬಾಲಿವುಡ್‌ ದಿಗ್ಗಜರು‌ ಜೈಲರ್ ಸಿನಿಮಾದ ಭಾಗವಾಗಿದ್ದಾರೆ. ಸದ್ಯ ಕಾವಾಲಾಯ್ಯ ಹಾಡಿನ ಮೂಲಕ ಭಾರೀ ಸೆನ್ಸೇಷನ್ ಸೃಷ್ಟಿಸುತ್ತಿರುವ ಈ ಚಿತ್ರ ಆಗಸ್ಟ್ 10ಕ್ಕೆ ಕನ್ನಡ, ತಮಿಳು ಹಾಗೂ ತೆಲುಗು ಭಾಷೆಯಲ್ಲಿ ಬೆಳ್ಳಿತೆರೆಗೆ ಎಂಟ್ರಿ ಕೊಡುತ್ತಿದೆ.

 

ಸನ್ ಪಿಕ್ಚರ್ ನಿರ್ಮಾಣ ಮಾಡಿರುವ ಈ ಸಿನಿಮಾವನ್ನು ನೆಲ್ಸನ್ ದಿಲೀಪ್ ಕುಮಾರ್ (Nelson Dilip Kumar) ನಿರ್ದೇಶಿಸಿದ್ದಾರೆ. ಇದೇ ಮೊದಲ ಬಾರಿಗೆ ರಜನಿಕಾಂತ್ ಜೊತೆ ಶಿವರಾಜ್‌ಕುಮಾರ್ (Shivaraj Kumar) ವಿಶೇಷ ಪಾತ್ರದಲ್ಲಿ ನಟಿಸಿರೋದು ಕುತೂಹಲ ಕೆರಳಿಸಿದೆ. ಇನ್ನು ಬಾಲಿವುಡ್‌ ನಟ ಜಾಕಿ ಶ್ರಾಫ್, ಮಲಯಾಳಂ ಸೂಪರ್‌ಸ್ಟಾರ್ ಮೋಹನ್‌ಲಾಲ್ (Mohanlal), ಟಾಲಿವುಡ್ ನಟ ಸುನಿಲ್, ನಾಗಬಾಬು, ನಟಿ ರಮ್ಯಾ ಕೃಷ್ಣ, ತಮನ್ನಾ ಭಾಟಿಯಾ ನಟಿಸಿದ್ದು, ಸಿನಿಪ್ರಿಯರಿಗೆ ಇವರೆಲ್ಲರನ್ನೂ ಒಂದೇ ಸಿನಿಮಾದಲ್ಲಿ ನೋಡುವ ಭಾಗ್ಯ ಸಿಗಲಿದೆ.

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article